BMTC ಬಸ್ ಗುದ್ದಿ ಗಾಯಗೊಂಡಿದ್ದ ಯೋಧ ಸಾವು

Public TV
1 Min Read
KOLARA ARMY MANjpg

ಕೋಲಾರ: ಬಿಎಂಟಿಸಿ (BMTC) ಬಸ್ (Bus) ಗುದ್ದಿ ಗಾಯಗೊಂಡಿದ್ದ ಯೋಧ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಬೆಂಗಳೂರಿನ (Bengaluru) ಯಲಹಂಕ ಕಮಾಂಡೋ ಆಸ್ಪತ್ರೆಯಲ್ಲಿ ನಡೆದಿದೆ.

bmtc 3

ಚೇತನ್ (22) ಮೃತ ಯೋಧರಾಗಿದ್ದು, ಬೆಂಗಳೂರಿನ ಕಾಮಾಕ್ಷಿ ಪಾಳ್ಯ ಬಳಿ ನವೆಂಬರ್ 7 ರಂದು ನಡೆದಿದ್ದ ಅಪಘಾತದಲ್ಲಿ, ಬಿಎಂಟಿಸಿ ಬಸ್ ಡಿಕ್ಕಿಯಾಗಿ ಗಾಯಗೊಂಡಿದ್ದರು. ಚೇತನ್‌ ಮೂಲತಃ ಕೋಲಾರ (Kolara) ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಚಿನ್ನಕೋಟೆ ಗ್ರಾಮದವರಾಗಿದ್ದು, ಇಂದು ಯಲಹಂಕ ಬಳಿಯ ಕಮಾಂಡೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಸೌದಿ ವೀಸಾಗಾಗಿ ಭಾರತೀಯರಿಗೆ ಇನ್ಮುಂದೆ ಪೊಲೀಸ್ ಕ್ಲಿಯರೆನ್ಸ್ ಪ್ರಮಾಣ ಪತ್ರದ ಬೇಕಾಗಿಲ್ಲ

KOLARA ARMY MAN 1

ಚೇತನ್ ಅವರ ತಂದೆ ಸುರೇಶ್ ಕೂಡ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. 34 ವರ್ಷ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತಿ ಪಡೆದಿದ್ರು, ಚೇತನ್ ಕೂಡ ತಂದೆಯ ಹಾದಿಯಲ್ಲೇ ದೇಶ ಸೇವೆ ಮಾಡಲು ಭಾರತೀಯ ಸೇನೆಗೆ ಸೇರಿದ್ದರು. ಸೇನೆಗೆ ಸೇರಿ ಮೂರು ವರ್ಷ ಪೂರೈಸಿದ್ದ ಚೇತನ್, ಇತ್ತೀಚೆಗೆ ರಜೆ ಮೇಲೆ ಕುಟುಂಬಸ್ಥರ ಜೊತೆಗೆ ಸಮಯ ಕಳೆಯಲು ಬೆಂಗಳೂರಿಗೆ ಬಂದ ಸಂದರ್ಭದಲ್ಲಿ ಅಪಘಾತ ಸಂಭವಿಸಿತ್ತು. ಚೇತನ್ ಅವರು ಚೆನ್ನೈ ರೆಜಿಮೆಂಟ್‍ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇಂದು ಸ್ವಗ್ರಾಮ ಚಿನ್ನಕೋಟೆಯಲ್ಲಿ ಅಂತಿಮ ಸಂಸ್ಕಾರ ನಡೆಯಿತು. ಇದನ್ನೂ ಓದಿ: ವರನ ಕಡೆಯವರು ನೀಡಿದ ಲೆಹೆಂಗಾ ಚೀಪ್ ಕ್ವಾಲಿಟಿ – ಮದುವೆ ಬೇಡವೆಂದ ವಧು

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *