ಹಾಸನ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್ ಹೊತ್ತಿ ಉರಿದ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕು ಸುಂಡಹಳ್ಳಿ ಬಳಿ ನಡೆದಿದೆ.
ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದರಿಂದ ಪೆಟ್ರೋಲ್ ಟ್ಯಾಂಕ್ ಗೆ ಹಾನಿಯಾಗಿದೆ. ಪರಿಣಾಮ ಪೆಟ್ರೋಲ್ ಸೋರಿಕೆಯಿಂದ ಬೈಕ್ ಬೆಂಕಿಗಾಹುತಿಯಾಗಿದೆ. ಅಪಘಾತದ ರಭಸಕ್ಕೆ ಬೈಕ್ ಹೊತ್ತಿ ಉರಿದಿದ್ದು, ಈ ಘಟನೆ ಕಂಡು ಸ್ಥಳೀಯರು ಬೆಚ್ಚಿ ಬಿದಿದ್ದಾರೆ.
ಅದೃಷ್ಟವಶಾತ್ ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಶ್ರವಣಬೆಳಗೊಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv