ರಾಯಚೂರು: ಜಿಲ್ಲೆಯ ಸಿಂಧನೂರಿನ ಕನ್ನಾರಿ ಕ್ರಾಸ್ ಬಳಿ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ಗೆ (Tractor) ಹಿಂಬದಿಯಿಂದ ಬೈಕ್ (Bike) ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಯಚೂರಿನಲ್ಲಿ (Raichur) ನಡೆದಿದೆ.
ದಢೇಸೂಗೂರಿನ ಶಿವರಾಜಸ್ವಾಮಿ (30) ಅಪಘಾತದಲ್ಲಿ ಮೃತಪಟ್ಟಿರುವ ದುರ್ದೈವಿ ಬೈಕ್ ಸವಾರ. ಶಿವನಂದಿ ಟ್ರಾವೆಲ್ಸ್ ಮಾಲೀಕನಾಗಿದ್ದ ಶಿವರಾಜಸ್ವಾಮಿ ಅತೀವೇಗದಲ್ಲಿ ಹಿಂಬದಿಯಿಂದ ಟ್ರಾಕ್ಟರ್ಗೆ ಡಿಕ್ಕಿ ಹೊಡಿದಿದ್ದಾನೆ. ಇದನ್ನೂ ಓದಿ: ಬೆಂಕಿ ಅವಘಡ- ಮಲಗಿದ್ದ 3ರ ಬಾಲಕಿ ಸಜೀವ ದಹನ
ಡಿಕ್ಕಿಯ ರಭಸಕ್ಕೆ ತಲೆಗೆ ಬಲವಾಗಿ ಪೆಟ್ಟು ಬಿದ್ದಿದ್ದು, ಗಂಭೀರ ಗಾಯಗಳಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಗೆ ಸಂಬಂಧಿಸಿ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ರವಾನಿಸಲಾಗಿದೆ. ಇದನ್ನೂ ಓದಿ: Shark Attackː ಸ್ವಿಮ್ಮಿಂಗ್ಗೆ ತೆರಳಿದ್ದ 16ರ ಬಾಲಕಿ ಶಾರ್ಕ್ ದಾಳಿಗೆ ಬಲಿ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k