ಮಡಿಕೇರಿ: ಬೈಕ್ ಮತ್ತು ಗೂಡ್ಸ್ ಅಟೋ ನಡುವಿನ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಕೂದಳೆಲೆ ಅಂತರದಲ್ಲಿ ಪಾರಾದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ನೆಲ್ಯಹುದಿಕೇರಿ ಗ್ರಾಮದಲ್ಲಿ ನಡೆದಿದೆ.
ಎರಡು ದಿನಗಳ ಹಿಂದೆ ಮಡಿಕೇರಿ ಮಾರ್ಗವಾಗಿ ಬೈಕ್ ಸವಾರ ಸಿದ್ದಾಪುರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಗೂಡ್ಸ್ ಆಟೋ ಟರ್ನ್ ತೆಗೆದುಕೊಳ್ಳುತ್ತಿದ್ದ ವೇಳೆ ಬೈಕಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಎದುರಿನಿಂದ ಬಂದ ಕ್ಯಾಂಟರ್ ಅಡಿ ಬೈಕ್ ಸವಾರ ಸಿಲುಕಿಕೊಂಡಿದ್ದಾರೆ. ಇದನ್ನು ನೋಡಿ ಸ್ಥಳದಲ್ಲಿದ್ದವರು ಗಾಬರಿಯಿಂದ ಓಡಿಬಂದಿದ್ದು, ಬೈಕ್ ಸವಾರನನ್ನು ಕ್ಯಾಂಟರ್ ಅಡಿಯಿಂದ ರಕ್ಷಿಸಿದ್ದಾರೆ.
ಘಟನೆಯಲ್ಲಿ ಬೈಕ್ ನಜ್ಜುಗುಜ್ಜಾಗಿದೆ. ಆದರೆ ಅದೃಷ್ಟವಶಾತ್ ಬೈಕ್ ಸವಾರ ಬಚಾವ್ ಆಗಿದ್ದಾರೆ. ಅವರಿಗೆ ಸಣ್ಣಪುಟ್ಟ ಗಾಯಗಳಗಿದ್ದು, ಮಂಗಳೂರು ಅಸ್ಪತ್ರೆಗೆ ರಾವಾನೆ ಮಾಡಲಾಗಿದೆ. ಈ ಬಗ್ಗೆ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
https://youtu.be/0bpHLmzFw38