ಬೆಳ್ಳಂಬೆಳಗ್ಗೆ ನಂದಿಬೆಟ್ಟಕ್ಕೆ ಹೋಗ್ತಿದ್ದಾಗ ಬೈಕ್, ಟಿಪ್ಪರ್ ಡಿಕ್ಕಿ- ಸವಾರ ಸ್ಥಳದಲ್ಲೇ ದುರ್ಮರಣ

Public TV
1 Min Read
CKB ACCIDENT

ಚಿಕ್ಕಬಳ್ಳಾಪುರ: ಪಲ್ಸರ್ ಬೈಕ್ ಹಾಗೂ ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕಾರಹಳ್ಳಿ ಬಳಿ ನಡೆದಿದೆ.

CKB ACCDINET AV 6

ಆಂಧ್ರಪ್ರದೇಶದ ಅನಂತಪುರ ಮೂಲದ ರಾಕೇಶ್(23) ಮೃತ ಯುವಕ. ಇಂದು ಬೆಳಗ್ಗೆ ಒಂದೇ ಬೈಕ್‍ನಲ್ಲಿ ಮೂವರು ನಂದಿಬೆಟ್ಟಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಬೆಳ್ಳಂಬೆಳಗ್ಗೆ ದಟ್ಟ ಮಂಜು ಆವರಿಸಿದ್ದ ಹಿನ್ನೆಲೆಯಲ್ಲಿ ಸರಿಯಾಗಿ ರಸ್ತೆ ಕಾಣದೆ ಈ ಅಪಘಾತ ನಡೆದಿದೆ. ಅಪಘಾತದಲ್ಲಿ ಇನ್ನಿಬ್ಬರು ಗಾಯಗೊಂಡಿದ್ದು, ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಟಿಪ್ಪರ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ.

ಈ ಸಂಬಂಧ ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

CKB ACCDINET AV 10

CKB ACCDINET AV 9

CKB ACCDINET AV 8

CKB ACCDINET AV 7

CKB ACCDINET AV 5

CKB ACCDINET AV 4

CKB ACCDINET AV 3

CKB ACCDINET AV 2

CKB ACCDINET AV 1

Share This Article
Leave a Comment

Leave a Reply

Your email address will not be published. Required fields are marked *