ರಸ್ತೆಯಲ್ಲಿ ಸಂಚರಿಸುವಾಗ ಏಕಾಏಕಿ ಚಿರತೆ ದಾಳಿ- ಮರವೇರಿ ಕುಳಿತ ಬೈಕ್ ಸವಾರರು

Public TV
1 Min Read
blg cheeta attack 2

ಬೆಳಗಾವಿ: ರಸ್ತೆಯಲ್ಲಿ ಸಂಚರಿಸುವಾಗ ಚಿರತೆಯೊಂದು ಏಕಾಏಕಿ ದಾಳಿ ಮಾಡಿದ ಪರಿಣಾಮ ಬೈಕ್ ಸವಾರರು ಮರವೇರಿ ಕುಳಿತಿರುವ ಘಟನೆ ಖಾನಾಪುರ ಬಳಿಯ ಚೋರಲಾ ಘಾಟಿಯಲ್ಲಿ ನಡೆದಿದೆ.

ಬೆಳಗಾವಿಯಿಂದ ಗೋವಾಕ್ಕೆ ತೆರಳುವ ಚೋರಲಾ ಘಾಟಿ ಬಳಿ ರಸ್ತೆಯಲ್ಲಿ ಸಂಚರಿಸುತ್ತಿದ್ದವರ ಮೇಲೆ ಚಿರತೆ ದಾಳಿ ಮಾಡಿದೆ. ವ್ಯಕ್ತಿಯೋರ್ವ ಬೈಕ್‍ನಲ್ಲಿ ಚೋರಲಾ ಘಾಟಿ ಮಾರ್ಗವಾಗಿ ಸಂಚರಿಸುತ್ತಿದ್ದ ವೇಳೆ ಚಿರತೆ ದಾಳಿ ಮಾಡಿದ ಪರಿಣಾಮ ಗಾಯಗೊಂಡಿದ್ದಾನೆ. ಇದನ್ನು ಕಂಡ ಇತರೇ ಬೈಕ್ ಸವಾರರು ಭಯದಿಂದ ಮರವೇರಿ ಕುಳಿತ್ತಿದ್ದಾರೆ.

BLG CHEETA ATTACK

ಬೆಳಗಾವಿ ಮತ್ತು ಗೋವಾ ಮಧ್ಯೆ ಇರುವ ಚೋರಲಾ ಘಾಟಿ ಸುತ್ತಮುತ್ತ ದಟ್ಟವಾದ ಅರಣ್ಯ ಪ್ರದೇಶವಿದೆ. ಹೀಗಾಗಿ ಚಿರತೆ ಈ ಭಾಗದಲ್ಲಿ ಕಾಣಿಸಿಕೊಳ್ಳುತ್ತದೆ. ರಸ್ತೆಯಲ್ಲಿ ಏಕಾಏಕಿ ದಾಳಿ ಮಾಡಿದ ಚಿರತೆಯನ್ನು ಕಂಡು ತಬ್ಬಿಬ್ಬಾದ ಬೈಕ್ ಸವಾರರು, ತಮ್ಮ ವಾಹನಗಳನ್ನು ರಸ್ತೆಯಲ್ಲಿಯೇ ಬಿಟ್ಟು ಪ್ರಾಣ ಉಳಿಕೊಂಡರೆ ಸಾಕು ಅಂತ ಮರಗಳನ್ನು ಹತ್ತಿ ಕುಳಿತಿದ್ದಾರೆ. ಚಿರತೆ ದಾಳಿ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

blg CHEETHA ATTACK

ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಖಾನಾಪುರ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಚಿರತೆ ಸೆರೆ ಹಿಡಿಯಲು ಪ್ರಯತ್ನಿಸುತ್ತಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *