Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಓಟಿಟಿಯಲ್ಲಿ ಖ್ಯಾತ ಕ್ರಿಕೆಟರ್ ಮುತ್ತಯ್ಯ ಮುರಳೀಧರನ್ ಜೀವನಗಾಥೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಓಟಿಟಿಯಲ್ಲಿ ಖ್ಯಾತ ಕ್ರಿಕೆಟರ್ ಮುತ್ತಯ್ಯ ಮುರಳೀಧರನ್ ಜೀವನಗಾಥೆ

Cinema

ಓಟಿಟಿಯಲ್ಲಿ ಖ್ಯಾತ ಕ್ರಿಕೆಟರ್ ಮುತ್ತಯ್ಯ ಮುರಳೀಧರನ್ ಜೀವನಗಾಥೆ

Public TV
Last updated: November 21, 2023 4:40 pm
Public TV
Share
3 Min Read
800 3
SHARE

ವೈವಿಧ್ಯಮಯ ಮತ್ತು ಪ್ರಾದೇಶಿಕ ಪ್ರಾತಿನಿಧ್ಯವನ್ನು ಹೊಂದಿರುವ ಕಂಟೆಂಟ್‌ ಅನ್ನು ಜನರಿಗೆ ನೀಡುವಲ್ಲಿ JioCinema ಮುಂಚೂಣಿಯಲ್ಲಿದೆ. ಆ ಪ್ರಯತ್ನದ ಭಾಗವಾಗಿ ಇದೀಗ, ಮುತ್ತಯ್ಯ ಮುರಳೀಧರನ್‌ (Muttiah Muralidharan) ಅವರ ಜೀವನವನ್ನಾಧರಿಸಿದ, ಎಂ.ಎಸ್‌. ಶ್ರೀಪತಿ (MS Sripathy) ನಿರ್ದೇಶಿಸಿರುವ ‘800’ ಸಿನಿಮಾ JioCinemaದಲ್ಲಿ ಬಿಡುಗಡೆಗೊಳ್ಳುತ್ತಿದೆ. ಇದೇ ಡಿಸೆಂಬರ್ 2ರಂದು ಒಟಿಟಿ ವೇದಿಕೆಯಲ್ಲಿ ಬಿಡುಗಡೆಗೊಳ್ಳುತ್ತಿರುವ ಈ ಸಿನಿಮಾ, ಶ್ರೀಲಂಕಾದ ಖ್ಯಾತ ಕ್ರಿಕೆಟ್ ಆಟಗಾರ ಮುತ್ತಯ್ಯ ಮುರಳೀಧರನ್ ಅವರ ಬದುಕು ಮತ್ತು ಸಾಧನೆಗಳನ್ನು ಆಧರಿಸಿದ್ದು. ಟೆಸ್ಟ್‌ ಕ್ರಿಕೆಟ್‌ನಲ್ಲಿ 800 ವಿಕೆಟ್‌ಗಳನ್ನು ಪಡೆದುಕೊಂಡು ದಾಖಲೆ ನಿರ್ಮಿಸಿದ್ದ ಬೌಲರ್‍‌ ಬದುಕಿನ ತೆರೆ-ಮರೆಯ ಕಥೆಯನ್ನು ಹೇಳುವ ಈ ಸಿನಿಮಾ, ಕ್ರಿಕೆಟ್ ಪ್ರಿಯರಿಗಂತೂ ಮನರಂಜನೆಯ ಮೃಷ್ಟಾನ್ನವನ್ನೇ ಉಣಿಸುತ್ತದೆ.

800 1

ವಿವೇಕ್‌ ರಂಗಾಚಾರಿ ನಿರ್ಮಾಣದ ಈ ಸಿನಿಮಾ ತಮಿಳು, ತೆಲುಗು, ಮಲಯಾಳಂ, ಹಿಂದಿ, ಬೆಂಗಾಲಿ ಭಾಷೆಗಳ ಜೊತೆಗೆ ಕನ್ನಡದಲ್ಲಿಯೂ ವೀಕ್ಷಣೆಗೆ ಲಭ್ಯವಿರುವುದು ವಿಶೇಷ. ಖ್ಯಾತ ಸ್ಪಿನ್ನರ್ ಮುತ್ತಯ್ಯ ಮುರಳೀಧರನ್ ಕ್ರಿಕೆಟ್‌ ಬದುಕಿನ ಸಾಧನೆಗಳನ್ನು ಹೇಳುವ ‘800’ ಸಿನಿಮಾ, ಅವರ ಖಾಸಗೀ ಬದುಕಿನ ಸಂಕಷ್ಟಗಳನ್ನೂ ನೋಡುಗರ ಎದುರಿಗೆ ತೆರೆದಿಡುತ್ತದೆ. ಹಲವು ಸಂಕಷ್ಟಗಳು, ವಿವಾದಗಳನ್ನು ಹಾದು ಕ್ರಿಕೆಟ್‌ ಜಗತ್ತಿನ ಲೆಜೆಂಡ್ ಆದ ಸ್ಪೂರ್ತಿಕಥೆಯನ್ನು ಹೇಳುತ್ತದೆ.

800 4

ಬ್ರಿಟಿಷ್ ಆಳ್ವಿಕೆಯ ಅವಧಿಯಲ್ಲಿ, ಎಸ್ಟೆಟ್‌ ಕೆಲಸಗಾರರಾಗಿ ದಕ್ಷಿಣ ಭಾರತದಿಂದ ಶ್ರೀಲಂಕಾಗೆ ವಲಸೆ ಬರುವ ಮುತ್ತಯ್ಯ ಮುರಳೀಧರನ್ ಅವರ ತಾತನ ಕುಟುಂಬ ನಂತರ ಅಲ್ಲಿಯೇ ನೆಲೆಗೊಳ್ಳುತ್ತದೆ. ಬಾಲ್ಯದಿಂದಲೇ ಕ್ರಿಕೆಟ್ ವ್ಯಾಮೋಹ ಬೆಳೆಸಿಕೊಂಡಿದ್ದ ಮುತ್ತಯ್ಯ, ಬದುಕಿನುದ್ದಕ್ಕೂ ತಮ್ಮ ನೆಚ್ಚಿನ ಕ್ರೀಡೆಗೆ ಮತ್ತು ತಮ್ಮ ತಾಯ್ನೆಲಕ್ಕೆ ತೋರಿದ ಬದ್ಧತೆ ಅನನ್ಯವಾದದ್ದು. ವೈಯಕ್ತಿಕ ಬದುಕಿನ ಸಂಕಷ್ಟ-ಸವಾಲುಗಳ ನಡುವೆಯೂ ಕ್ರಿಕೆಟ್‌ ಜಗತ್ತಿನಲ್ಲಿ ಅವರು ನಿರ್ಮಿಸಿದ ದಾಖಲೆಗಳು, ಕ್ರೀಡಾಪ್ರೇಮಿಗಳಿಗಷ್ಟೇ ಅಲ್ಲ,ಸಾಧನೆಯ ಹಾದಿ ಹಿಡಿಯುವ ಹಂಬಲ ಇರುವ ಎಲ್ಲರಿಗೂ ಸ್ಫೂರ್ತಿಯನ್ನು ನೀಡುವಂಥದ್ದು. ‘800’ ಸಿನಿಮಾದಲ್ಲಿ, ತಮಿಳಿನ ಯುವನಟ ಮಧುರ್ ಮಿತ್ತಲ್, ಮುತ್ತಯ್ಯ ಮುರಳೀಧರನ್ ಅವರ ಪಾತ್ರದಲ್ಲಿ ನಟಿಸಿದ್ದಾರೆ. ಉಳಿದಂತೆ ಮಹಿಮಾ ನಂಬಿಯತಾರ್, ನಾಸರ್, ಆರುಲ್‌ದಾಸ್‌ ಮುಖ್ಯಭೂಮಿಕೆಯಲ್ಲಿದ್ದಾರೆ.

800 2

ಮುತ್ತಯ್ಯ ಮುರಳೀಧರನ್ ಪಾತ್ರಕ್ಕೆ ಜೀವತುಂಬುವ ಅವಕಾಶ ಸಿಕ್ಕಿರುವುದು ಮಧುರ್ ಮಿತ್ತಲ್ ಅವರಿಗೆ ಸಾಕಷ್ಟು ಖುಷಿಕೊಟ್ಟಿದೆ. ತಮ್ಮ ಸಿನಿಮಾ JioCinemaದಲ್ಲಿ ಪ್ರೀಮಿಯರ್ ಆಗುತ್ತಿರುವ ಕುರಿತೂ ಅವರು ಅಷ್ಟೇ ಎಕ್ಸೈಟ್ ಆಗಿದ್ದಾರೆ. ‘ನಾನು ಚಿಕ್ಕಂದಿನಿಂದಲೂ ಕ್ರಿಕೆಟ್‌ ಅಭಿಮಾನಿಯಾಗಿದ್ದವನು. ಮುರಳೀಧರನ್ ಅವರ ಅಮೋಘ ಆಟವನ್ನು ನೋಡುತ್ತಲೇ ಬೆಳೆದವನು. ಈಗ ಅವರದ್ದೇ ಪಾತ್ರಕ್ಕೆ ತೆರೆಯ ಮೇಲೆ ಜೀವ ತುಂಬುವ ಅವಕಾಶ ಸಿಕ್ಕಿರುವುದು ನಿಜಕ್ಕೂ ನನಗೆ ಸಂದ ಬಹುದೊಡ್ಡ ಸಮ್ಮಾನ. ಈ ಪಾತ್ರಕ್ಕೆ ಗಟ್ಟಿತನವಿದೆ. ಇದೊಂದು ಸತತ ಪರಿಶ್ರಮ ಮತ್ತು ಬದ್ಧತೆಯ ಬದುಕನ್ನು ಬದುಕಿದ ವ್ಯಕ್ತಿಯ ಪಾತ್ರ. ಒಬ್ಬ ಕ್ರಿಕೆಟರ್ ಆಗಿ ಮುರಳೀಧರನ್ ಕೋಟ್ಯಂತರ ಜನರನ್ನು ಪ್ರಭಾವಿಸಿದ್ದಾರೆ. ಇಂಥ ಸಾಧಕನ ಬದುಕನ್ನು ಜನರಿಗೆ  ಪರಿಚಯಿಸುವುದೂ ಅಷ್ಟೇ ಮುಖ್ಯ. ಈ ಕೆಲಸವನ್ನು ‘800’ ತುಂಬ ಪರಿಣಾಮಕಾರಿಯಾಗಿ ಮಾಡಿದೆ. ಈಗ ಈ ಸಿನಿಮಾ ಜಿಯೋ ಸಿನಿಮಾದಲ್ಲಿ ಬಿಡುಗಡೆಯಾಗುತ್ತಿರುವುದು ನಿಜಕ್ಕೂ ನನಗೆ ತುಂಬ ಖುಷಿಯ ಸಂಗತಿ’ ಎನ್ನುತ್ತಾರೆ ನಟ ಮಧುರ್ ಮಿತ್ತಲ್.

 

JioCinema ಒಟಿಟಿ (OTT) ವೇದಿಕೆಯ ಮೂಲಕ ತಮ್ಮ ಜೀವನವನ್ನಾಧರಿಸಿದ ಸಿನಿಮಾ ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿರುವುದು ಮುತ್ತಯ್ಯ ಮುರಳೀಧರನ್ ಅವರನ್ನೂ ರೋಮಾಂಚಿತಗೊಳಿಸಿದೆ. ‘ನನ್ನ ಬದುಕಿನ ಕಥೆ, ಸ್ಫೂರ್ತಿದಾಯಕ ಸಿನಿಮಾ ಆಗುತ್ತಿರುವುದು ನಿಜಕ್ಕೂ ನನ್ನಲ್ಲಿ ವಿನೀತಭಾವ ಹುಟ್ಟಿಸಿದೆ. ಇದಕ್ಕೆ ಕಾರಣರಾದವರಿಗೆ ನಾನು ಕೃತಜ್ಞನಾಗಿದ್ದೇನೆ. ಈ ಸಿನಿಮಾಗೆ ತುಂಬ ಒಳ್ಳೆಯ ಪ್ರತಿಸ್ಪಂದನ ಸಿಗುತ್ತದೆ ಎಂಬ ನಂಬಿಕೆ ನನಗಿದೆ. ತಮ್ಮ ಕನಸನ್ನು ನನಸಾಗಿಸಿಕೊಳ್ಳುವ ದಾರಿಯಲ್ಲಿರುವ ಅಸಂಖ್ಯ ಯವ ಪ್ರತಿಭಾವಂತರಿಗೆ ಈ ಸಿನಿಮಾ ಸ್ಫೂರ್ತಿ ನೀಡಲಿ ಎಂದು ನಾನು ಹಾರೈಸುತ್ತೇನೆ. ನನ್ನ ಪಾಲಿಗೆ ಕ್ರಿಕೆಟ್‌ ಎನ್ನುವುದು ಬದುಕಿನ ಕ್ರಮವೇ ಆಗಿತ್ತು. ದೇಶಕ್ಕಾಗಿ ಆಡುವ ಅವಕಾಶ ಸಿಕ್ಕಿದ್ದು ನನಗೆ ಸಂದ ದೊಡ್ಡ ಗೌರವ’’ ಎಂದು ಮುರಳೀಧರನ್‌ ಭಾವುಕರಾಗಿ ಪ್ರತಿಕ್ರಿಯಿಸಿದ್ದಾರೆ. ಕ್ರಿಕೆಟ್ ಲೋಕದಲ್ಲಿ ದಂತಕಥೆಯಾದ ಮುತ್ತಯ್ಯ ಮುರಳೀಧರನ್ ಬದುಕಿನ ಕಥೆ, ‘800’ ಸಿನಿಮಾವನ್ನು ಡಿಸೆಂಬರ್ 2ರಿಂದ ಎಕ್ಸ್‌ಕ್ಲ್ಯೂಸಿವ್ ಆಗಿ ವೀಕ್ಷಿಸಬಹುದಾಗಿದೆ.

TAGGED:800MS SripathyMuttiah MuralidharanOTTಎಂ.ಎಸ್.ಶ್ರೀಪತಿಓಟಿಟಿಮುತ್ತಯ್ಯ ಮುರಳೀಧರನ್
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Benjamin Netanyahu 1
Latest

ಪಾಕಿಗೆ ಮುಖಭಂಗ – ಲೆಬನಾನ್‌ ಮೇಲೆ ದಾಳಿ ಮುಂದುವರಿಯಲಿದೆ ಎಂದ ಇಸ್ರೇಲ್‌

Public TV
By Public TV
31 minutes ago
10th student from Kerala Missing In Chikkamagaluru Mullayanagiri
Chikkamagaluru

ಕೇರಳದಿಂದ ಪ್ರವಾಸ ಬಂದಿದ್ದ 10ನೇ ತರಗತಿ ವಿದ್ಯಾರ್ಥಿನಿ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ನಾಪತ್ತೆ

Public TV
By Public TV
1 hour ago
Bengaluru Mallathahalli Wife Kills Husband
Bengaluru City

ಚಾಕುವಿನಿಂದ ಇರಿದು ಹೆಂಡತಿಯಿಂದಲೇ ಗಂಡನ ಕೊಲೆ

Public TV
By Public TV
2 hours ago
Pakistan PM Shehbaz Sharif gets trolled over post on US Iran ceasefire Donald Trump
Latest

ಕದನ ವಿರಾಮ ಘೋಷಣೆಯಲ್ಲೂ ಎಡವಟ್ಟು – ಈಗ ಪಾಕ್‌ ಪ್ರಧಾನಿ ಫುಲ್‌ ಟ್ರೋಲ್‌

Public TV
By Public TV
2 hours ago
Tehran Ceasefire Victory
Latest

ಕದನ ವಿರಾಮ ಘೋಷಣೆ – ಟೆಹ್ರಾನ್‌ನ ಪ್ರಮುಖ ಬೀದಿಗಳಲ್ಲಿ ರಾಷ್ಟ್ರಧ್ವಜ ಹಿಡಿದು ವಿಜಯೋತ್ಸವ ಆಚರಣೆ

Public TV
By Public TV
2 hours ago
oil price fall
Latest

ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಕಚ್ಚಾ ತೈಲ ದರ ದಿಢೀರ್‌ ಭಾರೀ ಕುಸಿತ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?