Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟಿಎಂಸಿ ನಾಯಕನನ್ನು ಅರೆಸ್ಟ್ ಮಾಡುವಂತೆ ಮಮತಾ ಬ್ಯಾನರ್ಜಿ ಆದೇಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಟಿಎಂಸಿ ನಾಯಕನನ್ನು ಅರೆಸ್ಟ್ ಮಾಡುವಂತೆ ಮಮತಾ ಬ್ಯಾನರ್ಜಿ ಆದೇಶ

Crime

ಟಿಎಂಸಿ ನಾಯಕನನ್ನು ಅರೆಸ್ಟ್ ಮಾಡುವಂತೆ ಮಮತಾ ಬ್ಯಾನರ್ಜಿ ಆದೇಶ

Public TV
Last updated: March 24, 2022 4:36 pm
Public TV
Share
3 Min Read
mamata 3
SHARE

ಕೊಲ್ಕತ್ತಾ: ಇತ್ತೀಚೆಗಷ್ಟೇ ಪಶ್ಚಿಮ ಬಂಗಾಳದ ಬೀರ್ಭುಮ್ ಗ್ರಾಮದಲ್ಲಿ ನಡೆದ ಹಿಂಸಾಚಾರವು ಇದೀಗ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ರಾಜ್ಯಪಾಲರೂ ಸೇರಿದಂತೆ ಪ್ರತಿಪಕ್ಷದ ನಾಯಕರು ಘಟನೆಯನ್ನೇ ಪ್ರಮುಖವಾಗಿಟ್ಟುಕೊಂಡು ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮಮತಾ ಬ್ಯಾನರ್ಜಿ ಅವರನ್ನು ಒತ್ತಾಯಿಸುತ್ತಿದ್ದಾರೆ.

birbhum

ಈ ನಡುವೆ ಬೀರ್ಭುಮ್ ಗ್ರಾಮಕ್ಕೆ ಭೇಟಿ ನೀಡಿರುವ ಮಮತಾ ಬ್ಯಾನರ್ಜಿ ಅವರು ಹಿಂಸಾಚಾರ ನಡೆದ ಸ್ಥಳವನ್ನು ಪರಿಶೀಲಿಸಿ ಕಟ್ಟಿನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ ಘಟನೆಯಲ್ಲಿ ಹಾನಿಗೊಳಗಾದ ಮನೆಗಳ ದುರಸ್ತಿಗೆ 2 ಲಕ್ಷ ರೂ. ಹಾಗೂ ಸಂತ್ರಸ್ತ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ಉದ್ಯೋಗಾವಕಾಶ ನೀಡುವ ಭರವಸೆಯನ್ನು ನೀಡಿದ್ದಾರೆ. ಸ್ಥಳದಲ್ಲಿ 10 ಕುಟುಂಬಗಳಿಗೆ ತಲಾ 1 ಲಕ್ಷ ರೂ. ಚೆಕ್ ವಿತರಣೆ ಮಾಡಿದಾರೆ. ಅಲ್ಲದೆ ಬೆಂಕಿ ಅನಾಹುತದಿಂದ ಗಾಯಗೊಂಡವರ ಚಿಕಿತ್ಸೆಗೆ 50 ಸಾವಿರ ರೂ., ತೀವ್ರ ಗಾಯಗೊಂಡವರಿಗೆ 1 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

birbhum 1

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಸ್ಥಳೀಯರು ನೀಡಿದ ದೂರಿನ ಮೇರೆಗೆ ರಾಮ್‍ಪುರಹತ್ ಬ್ಲಾಕ್-1 ಅಧ್ಯಕ್ಷ ಅನಾರುಲ್ ಶೇಖ್ ಅವರನ್ನು ಬಂಧಿಸುವಂತೆ ಪೊಲೀಸರಿಗೆ ಆದೇಶ ನೀಡಿದ್ದಾರೆ. ಘಟನೆಯ ಬಗ್ಗೆ ಬಿಜೆಪಿ ಮುಖಂಡರು ಆರೋಪಿಸುತ್ತಿರುವುದು ಇಲ್ಲಿನ ರಾಜಕೀಯ ಹಿನ್ನಡೆ. ಹಿಂಸಾಚಾರ ಹಾಗೂ ಕಾನೂನು ಬಾಹೀರತೆಗೆ ಅವಕಾಶ ನೀಡಿದಂತಾಗುತ್ತಿದೆ. ಈ ಘಟನೆಯ ಹಿಂದೆ ದೊಡ್ಡ ಶಕ್ತಿಯಿದೆ ಎಂಬುದು ಇದರಿಂದ ಗೋಚರವಾಗುತ್ತದೆ ಎಂದು ಶಂಕಿಸಿದ್ದಾರೆ. ಇದನ್ನೂ ಓದಿ: ಪೆಟ್ರೋಲ್‌, ಡೀಸೆಲ್‌, ಎಲ್‌ಪಿಜಿ ಆಯ್ತು ಈಗ ಸಿಎನ್‌ಜಿ, ಪಿಎನ್‌ಜಿ ದರದಲ್ಲೂ ಏರಿಕೆ

Mamata 1

ಇದೇ ವೇಳೆ ಮಮತಾ ಬ್ಯಾನರ್ಜಿ ಅವರನ್ನು ಸುತ್ತುವರಿದಿದ್ದ ಗ್ರಾಮಸ್ಥರು, ನಮ್ಮ ದೂರುಗಳಿಗೆ ಪೊಲೀಸರು ನಿರ್ಲಕ್ಷ್ಯ ವಹಿಸುತ್ತಿರುವ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಘಟನೆಯ ಕುರಿತು ಮಾಹಿತಿ ನೀಡಿರುವ ಪೊಲೀಸರು, ಮಂಗಳವಾರ ಹಿಂಸಾಚಾರ ಘಟನೆ ನಡೆದಿದ್ದು, ಒಂದು ದಿನದ ನಂತರ ಸುಟ್ಟ ಮೃತದೇಹಗಳನ್ನು ಹೊರತೆಗೆಯಲಾಯಿತು. ಘಟನೆಯ ನಂತರ ಅನೇಕರು ಹಿಂಸಾಚಾರಕ್ಕೆ ಹೆದರಿ ಗ್ರಾಮ ತೊರೆದಿದ್ದಾರೆ. ಈ ಪ್ರಕರಣದಲ್ಲಿ ಟಿಎಂಸಿ ಮುಖಂಡನ ಹತ್ಯೆ ಹಾಗೂ ಗ್ರಾಮಸ್ಥರ ಹತ್ಯೆಗೆ ಸಂಬಂಧಿಸಿದಂತೆ ಎರಡು ಎಫ್‍ಐಆರ್ ಗಳನ್ನು ದಾಖಲಿಸಲಾಗಿದೆ. ಈಗಾಗಲೇ ಸುಮಾರು 20 ಜನರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.

NARENDRA MODI

ಈ ಕುರಿತು ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಆರೋಪಿಗಳನ್ನು ನ್ಯಾಯಾಂಗಕ್ಕೆ ತರಲು ರಾಜ್ಯಕ್ಕೆ ಯಾವುದೇ ರೀತಿಯಲ್ಲಿ ಸಹಾಯ ಮಾಡಲು ನಮ್ಮ ಸರ್ಕಾರ ಸಿದ್ಧವಿದೆ. ಇಂತಹ ಘೋರ ಅಪರಾಧ ಎಸಗಿದವರಿಗೆ ರಾಜ್ಯ ಸರ್ಕಾರ ಕಠಿಣ ಶಿಕ್ಷೆ ವಿಧಿಸಲಿದೆ ಎಂದು ನಾನುಭಾವಿಸುತ್ತೇನೆ. ಇಂತಹ ಅಪರಾಧ, ಅಪರಾಧಿಗಳನ್ನು ಎಂದಿಗೂ ಕ್ಷಮಿಸಬೇಡಿ ಎಂದು ಒತ್ತಾಯಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಮಮತಾ ಬ್ಯಾನರ್ಜಿ, ಇದು ಬಿಜೆಪಿ ನಮ್ಮ ಸರ್ಕಾರದ ಮಾನಹಾನಿಗಾಗಿ ಮಾಡಿರುವ ಪಿತೂರಿ. ಬಿರ್ಭೂಮ್ ಘಟನೆಗೆ ಕಾರಣರಾದ ಎಲ್ಲರ ವಿರುದ್ಧ ಅವರ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು. ಇದನ್ನೂ ಓದಿ: ವಿಸ್ತಾರವಾದ, ಪ್ರತ್ಯೇಕವಾದ ನಿಲ್ಲುವವರೆಗೂ ಮುಸ್ಲಿಮರಿಗೆ ಆರ್ಥಿಕ ಬಹಿಷ್ಕಾರ: ಮುತಾಲಿಕ್

birbhum 2

ಏನಿದು ಪ್ರಕರಣ?
ಇಲ್ಲಿನ ಬಗುಟಿ ಗ್ರಾಮ ಪಂಚಾಯ್ತಿ ಮುಖಂಡ ಭಾದು ಶೇಖ್ ಅವರ ಮೇಲೆ ಸೋಮವಾರ ರಾತ್ರಿ ದಾಳಿ ನಡೆದಿತ್ತು. ರಾಷ್ಟ್ರೀಯ ಹೆದ್ದಾರಿ-60ರ ಅಂಗಡಿಯೊಂದರಲ್ಲಿ ಇರುವಾಗ ಶೇಖ್ ಅವರ ಮೇಲೆ ಬಾಂಬ್ ದಾಳಿ ನಡೆಸಲಾಗಿತ್ತು. ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಅವರು ಮೃತಪಟ್ಟಿದ್ದರು. ಮುಖಂಡನ ಸಾವಿನ ಸುದ್ದಿ ತಿಳಿದು ರೊಚ್ಚಿಗೆದ್ದ ಗುಂಪೊಂದು 10 ರಿಂದ 12 ಮನೆಗೆ ಬೆಂಕಿ ಹಚ್ಚಿದ್ದರು.

birbhum 4

ಇದರಿಂದಾಗಿ 8 ಮಂದಿ ಸಜೀವ ದಹನವಾಗಿದ್ದರು. ಇದರಲ್ಲಿ ಇಬ್ಬರು ಮಕ್ಕಳೂ ಸಹ ಇದ್ದರು ಎಂಬುದಾಗಿ ಬೀರ್ಭುಮ್ ಎಸ್‍ಪಿ ನಾಗೇಂದ್ರ ತ್ರಿಪಾಟಿ ಮಾಹಿತಿ ನೀಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್ ಸ್ವಯಂಪ್ರೇರಿತವಾಗಿಯೇ ವಿಚಾರಣೆ ನಡೆಸಲು ಮುಂದಾಗಿತ್ತು. ಈ ನಡುವೆ ಜಿಲ್ಲೆಯ ಕೆಲ ಕುಟುಂಬಗಳು ಹಿಂಸಾಚಾರಕ್ಕೆ ಬೆಚ್ಚಿಬಿದ್ದಿದ್ದು, ತಮ್ಮ ಮನೆಗಳನ್ನು ತೊರೆದು ಹೋಗಿದ್ದಾರೆ. ಇದನ್ನೂ ಓದಿ: ಜಗನ್ ಸಹೋದರಿ ಭಾಷಣದ ವೇಳೆ ಜೇನು ದಾಳಿ – ಟವೆಲ್ ಬೀಸಿದ ಕಾರ್ಯಕರ್ತರು

TAGGED:Grama Panchayathigh courtkolkattamamta banarjeenarendra modiWest Bengalಕೋಲ್ಕತ್ತಾಗ್ರಾಮ ಪಂಚಾಯ್ತಿನರೇಂದ್ರ ಮೋದಿಪಶ್ಚಿಮ ಬಂಗಾಳಮಮತಾ ಬ್ಯಾನರ್ಜಿಹೈಕೋರ್ಟ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Madhya Pradesh Pickup SUV accident
Crime

ಡಿವೈಡರ್ ಹಾರಿ ಎಸ್‌ಯುವಿಗೆ ಪಿಕಪ್ ಡಿಕ್ಕಿ – 15 ಮಂದಿ ದುರ್ಮರಣ

Public TV
By Public TV
42 minutes ago
Heavy Rain in Bengaluru Fear again at KR Circle Underpass A major tragedy was avoided by a few minutes
Bengaluru City

ಕೆ.ಆರ್. ಸರ್ಕಲ್ ಅಂಡರ್ ಪಾಸ್‌ನಲ್ಲಿ ಮತ್ತೆ ಭೀತಿ – ಕೆಲ ನಿಮಿಷಗಳ ವ್ಯತ್ಯಾಸದಲ್ಲಿ ತಪ್ಪಿತು ಭಾರೀ ದುರಂತ

Public TV
By Public TV
55 minutes ago
Donald Trump sad unhappy
Latest

Iran War| ನಾಳೆಗೆ 60 ದಿನಗಳ ಡೆಡ್‌ಲೈನ್‌ ಅಂತ್ಯ – ಸಂಕಷ್ಟದಲ್ಲಿ ಟ್ರಂಪ್‌!

Public TV
By Public TV
1 hour ago
Shivajinagar Rain Death Sufiyan copy
Bengaluru City

ರಕ್ಕಸ ಮಳೆಗೆ ಬೆಂಗಳೂರಿನಲ್ಲಿ 10 ಬಲಿ – ಅಮ್ಮನ ಮುಂದೆಯೇ ಪ್ರಾಣ ಬಿಟ್ಟ 17 ವರ್ಷದ ಮಗ

Public TV
By Public TV
2 hours ago
West Bengal Election BJP button on EVM taped Perfume on buttons CEO Manoj Kumar Agarwal reports 77 EVM tampering cases hints at repoll on May 2 Diamond harbour falta
Latest

ಬಂಗಾಳದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌, ಸುಗಂಧ ದ್ರವ್ಯ| 77 ಇವಿಎಂನಲ್ಲಿ ಟ್ಯಾಂಪರಿಂಗ್‌ – ಮೇ 2ರ ಒಳಗಡೆ ಮರುಮತದಾನ

Public TV
By Public TV
2 hours ago
DK Shivakumar Bowring Hospital Visit
Bengaluru City

ಕಾಂಪೌಂಡ್ ಕುಸಿದು 7 ಜನರ ಸಾವಿನಿಂದ ಆಘಾತ: ಡಿಕೆಶಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?