ಬೆಂಗಳೂರು: ನಡು ರಸ್ತೆಯಲ್ಲಿಯೇ ಹುಟ್ಟುಹಬ್ಬದ ಪಾರ್ಟಿ ಮಾಡುತ್ತಿದ್ದ ಲೋಕಲ್ ಚಾನೆಲ್ ಮಾಲೀಕನೊಬ್ಬನನ್ನು ಪೊಲೀಸರು ಪ್ರಶ್ನೆ ಮಾಡಿದ್ದಕ್ಕೆ ಅವಾಜ್ ಹಾಕಿರುವ ಘಟನೆ ನಗರದ ಅಂದ್ರಹಳ್ಳಿಯಲ್ಲಿ ನಡೆದಿದೆ.
ಲೋಕಲ್ ಚಾನೆಲ್ ಮಾಲೀಕ ಮುರಳಿ ಎಂಬಾತ ರಸ್ತೆಯಲ್ಲಿ ಪಾರ್ಟಿ ಮಾಡಿರುವುದನ್ನು ಪೊಲೀಸರು ಪ್ರಶ್ನೇ ಮಾಡಿದ್ದಾರೆ. ಅದಕ್ಕೆ ನಾನು ಮೀಡಿಯಾದವನು ಎಲ್ಲಿ ಬೇಕಾದರೂ ಪಾರ್ಟಿ ಮಾಡುತ್ತೇನೆ. ಅದನ್ನ ಕೇಳೋಕೆ ನಿವ್ಯಾರು ಅಂತ ಪೊಲೀಸರಿಗೆ ಧಮ್ಕಿ ಹಾಕಿದ್ದಾನೆ.
ಅಂದ್ರಹಳ್ಳಿಯ ಮಧ್ಯರಾತ್ರಿ ನಡು ಬೀದಿಯಲ್ಲಿ ಮುರಳಿ ಬರ್ತ್ ಡೇ ಪಾರ್ಟಿ ಮಾಡುತ್ತಿದ್ದನು. ಆದರೆ ಪಾರ್ಟಿಯಲ್ಲಿ ಕೂಗಾಟ ಜೋರಾಗಿದ್ದರಿಂದ ಸ್ಥಳೀಯರಿಗೆ ತೊಂದರೆಯಾಗಿದೆ. ಆದ್ದರಿಂದ ಸ್ಥಳೀಯರು ಬ್ಯಾಡರಹಳ್ಳಿ ಪೆÇಲೀಸ್ ಠಾಣೆಗೆ ಕರೆ ಮಾಡಿ ದೂರು ನೀಡಿದ್ದಾರೆ. ನಂತರ ಸ್ಥಳಕ್ಕೆ ಬಂದ ಬೀಟ್ ಪಿಸಿಗಳು ಇದನ್ನು ಪ್ರಶ್ನಿಸಲು ಮುಂದಾಗಿದ್ದಾರೆ. ಆದರೆ ಮುರಳಿ, ನಾನು ಮನಸ್ಸು ಮಾಡಿದರೆ ನಿಮ್ಮ ಜಾಗವನ್ನು ಖಾಲಿ ಮಾಡಿಸುತ್ತೇನೆ. ನನ್ನ ಎದುರು ಹಾಕ್ಕೊಂಡ್ರೆ ಪರಿಣಾಮ ನೆಟ್ಟಗಿರಲ್ಲ ಅಂತ ಬೆದರಿಕೆ ಹಾಕಿ ಧಮ್ಕಿ ಹಾಕಿದ್ದಾನೆ.
ಮುರಳಿ ರಾದ್ಧಾಂತ ಜೋರಾಗಿದ್ದರೀಂದ ಸ್ಥಳಕ್ಕೆ ಇನ್ಸ್ ಪೆಕ್ಟರ್ ಸತ್ಯನಾರಾಯಣ್ ಮತ್ತು ಪಿಎಸ್ಐ ಮಂಜುನಾಥ್ ಭೇಟಿ ನೀಡಿ ಆರೋಪಿ ಮುರುಳಿ ಮತ್ತು ಜೊತೆಗಿದ್ದ ಅಭಿಷೇಕ್ ಮೇಲೆ ಎಫ್ಐಆರ್ ದಾಖಲು ಮಾಡಿದ್ದಾರೆ.