ರಾಯಚೂರಿನಲ್ಲಿ ಸಿಎಎ ಅಭಿನಂದನಾ ಸಭೆ- ಸಾವಿರಾರು ಜನರಿಂದ ಬೃಹತ್ ರ‍್ಯಾಲಿ

Public TV
1 Min Read
CAA Rally Raichur

ರಾಯಚೂರು: ಸಿಎಎ ವಿರುದ್ಧ ಹೋರಾಟ ನಡೆಸಿರುವ ಕಾಂಗ್ರೆಸ್ ಬೌದ್ಧಿಕವಾಗಿ ದಿವಾಳಿಯಾಗಿದೆ ಅಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಯಚೂರು ನಗರದ ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ಅಭಿನಂದನಾ ಸಭೆಯಲ್ಲಿ ಮಾತನಾಡಿದ ಜೋಶಿ, ದೇಶದಲ್ಲಿ ಮುಸ್ಲಿಮರಿಗೆ ತೊಂದರೆ ನೀಡಿಲ್ಲ. ದೇಶಾಭಿಮಾನಿಗಳನ್ನ ಬಿಜೆಪಿ ಗೌರವಿಸುತ್ತದೆ ಎಂದರು

ಪಾಕಿಸ್ತಾನದ ಪರ ಇದ್ರೆ ಅಂತಹವರನ್ನ ಬಿಜೆಪಿ ಎಂದಿಗೂ ಸಹಿಸುವುದಿಲ್ಲ. ಮುಸ್ಲಿಮರು ಬಡವರಾಗಿ ಬೀದಿ ಬದಿ ವ್ಯಾಪಾರ ಮಾಡುತ್ತಿದ್ದರೆ ಅದಕ್ಕೆ ಕಾಂಗ್ರೆಸ್ ಕಾರಣ. ರಾಹುಲ್ ಗಾಂಧಿಗೆ ಏನು ತಿಳಿಯುದಿಲ್ಲ, ಎನ್ ಆರ್ ಸಿ ಟ್ಯಾಕ್ಸ್ ಎಂದು ಹೇಳುತ್ತಾರೆ. ಬರೆದುಕೊಡುವವರನ್ನು ಕೂಡ ಅವರು ಸರಿಯಾಗಿ ಇಟ್ಟುಕೊಂಡಿಲ್ಲ ಎಂದರು. ಜೆಎನ್‍ಯು ದಲ್ಲಿ ಕಾಶ್ಮೀರ ಫ್ರೀ ಮಾಡಬೇಕು ಎಂದು ಹೇಳುತ್ತಾರೆ. ಕಾಂಗ್ರೆಸ್ ಭಾರತದ ಪರವೋ? ಪಾಕಿಸ್ತಾನದ ಪರವೂ ಸ್ಪಷ್ಟ ಪಡಿಸಬೇಕಿದೆ. ಪಾಕಿಸ್ತಾನಕ್ಕೆ ಜಗತ್ತಿನ ಮುಂದೆ ಭಿಕ್ಷಾ ಪಾತ್ರೆ ಹಿಡಿಯುವಂತೆ ಮಾಡಲಾಗಿದೆ ಅಂತ ಪ್ರಹ್ಲಾದ್ ಜೋಶಿ ಹೇಳಿದರು.

ಇದಕ್ಕೂ ಮೊದಲು ನಗರದ ಕರ್ನಾಟಕ ಸಂಘದಿಂದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದವರೆಗೂ ಬೃಹತ್ ರ‍್ಯಾಲಿ ನಡೆಸಲಾಯಿತು. ರ‍್ಯಾಲಿ ಹಾಗೂ ಬಹಿರಂಗ ಸಭೆಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ರಾಯಚೂರು ಸಂಸದ ಅಮರೇಶ್ವರ ನಾಯಕ್, ಶಾಸಕರಾದ ಡಾ.ಶಿವರಾಜ್ ಪಾಟೀಲ್, ಶಿವನಗೌಡ ನಾಯಕ್ ಸೇರಿದಂತೆ ಹಲವಾರು ಬಿಜೆಪಿ ಮುಖಂಡರು ಭಾಗಿಯಾಗಿದ್ದರು. ರ‍್ಯಾಲಿಯಲ್ಲಿ ನೂರಾರು ಅಡಿ ಉದ್ದದ ರಾಷ್ಟ್ರ ಧ್ವಜ ಮೆರವಣಿಗೆ ಮಾಡಲಾಯಿತು.

ರ‍್ಯಾಲಿ ಆರಂಭಕ್ಕೂ ಮುನ್ನ ಎಸ್‍ಡಿಪಿಐ ಸಂಘಟನೆ ಕಾರ್ಯಕರ್ತರು ರ್ಯಾಲಿ ವಿರೋಧಿಸಿ ನಗರದಲ್ಲಿ ಪ್ರತಿಭಟನೆ ನಡೆಸಿದ್ದರು. ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಅಭಿನಂದನಾ ರ‍್ಯಾಲಿ ವಿರೋಧಿಸಿ ಪ್ರತಿಭಟನೆ ನಡೆಸಿದ್ದ 20 ಕ್ಕೂ ಹೆಚ್ಚು ಕಾರ್ಯಕರ್ತರನ್ನ ಪೊಲೀಸರು ಬಂಧಿಸಿ ಕರೆದೊಯ್ದರು.

Share This Article
Leave a Comment

Leave a Reply

Your email address will not be published. Required fields are marked *