Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರದ ವಿರುದ್ಧ ಶುಕ್ರವಾರ ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ಕರೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸರ್ಕಾರದ ವಿರುದ್ಧ ಶುಕ್ರವಾರ ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ಕರೆ!

Bengaluru City

ಸರ್ಕಾರದ ವಿರುದ್ಧ ಶುಕ್ರವಾರ ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ಕರೆ!

Public TV
Last updated: February 22, 2024 10:41 pm
Public TV
Share
3 Min Read
BJP MEET
SHARE

– ಸ್ಪೀಕರ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲು ದೋಸ್ತಿಗಳು ಸಜ್ಜು

ಬೆಂಗಳೂರು: ಸದನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ನಿರ್ಣಯ ಮಂಡಿಸಿದ ಹಿನ್ನೆಲೆ ಸಿಡಿದೆದ್ದ ಬಿಜೆಪಿಗರು (BJP) ರಾಜ್ಯ ಸರ್ಕಾರದ ವಿರುದ್ಧ ಶುಕ್ರವಾರ (ಫೆ.23) ರಾಜ್ಯವ್ಯಾಪಿ ಪ್ರತಿಭಟನೆಗೆ (Protest) ಕರೆ ನೀಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ರಾಜ್ಯವ್ಯಾಪಿ ಪ್ರತಿಭಟನೆಗೆ ಕರೆ ನೀಡಿದ್ದಾರೆ.

ಸದನದಲ್ಲಿ ಸ್ಪೀಕರ್ (UT Khader) ನಡೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬಿಜೆಪಿ ಹಾಗೂ ಜೆಡಿಎಸ್ (JDS) ಪಕ್ಷದ ನಾಯಕರು ಶುಕ್ರವಾರ ರಾಜಭವನಕ್ಕೆ ತೆರಳಲು ನಿರ್ಧರಿಸಿದ್ದಾರೆ. ಅಲ್ಲದೇ ಸ್ಪೀಕರ್ ವಿರುದ್ಧ ದೋಸ್ತಿ ಪಕ್ಷಗಳು ರಾಜ್ಯಪಾಲರಿಗೆ ದೂರು ನೀಡಲಿದ್ದಾರೆ. ಈ ಕುರಿತು ಬಿಜೆಪಿ ನಾಯಕರು ಸುದ್ದಿಗೋಷ್ಠಿ ನಡೆಸಿದ್ದು, ಸರ್ಕಾರ ಮತ್ತು ಸ್ಪೀಕರ್ ವಿರುದ್ಧ ಆರ್.ಅಶೋಕ್ (R Ashok) ಹಾಗೂ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಭಿನ್ನಾಭಿಪ್ರಾಯಗಳನ್ನು ಮರೆತು ಗೆಲ್ಲಲೇಬೇಕು ಎಂಬ ಛಲದಿಂದ ಕೆಲಸ ಮಾಡಬೇಕು: ಕಾರ್ಯಕರ್ತರಿಗೆ ಸಿದ್ದರಾಮಯ್ಯ ಕರೆ

ಕೇಂದ್ರದ ವಿರುದ್ಧ ನಿರ್ಣಯ ಮಂಡಿಸಿದ ಕುರಿತು ಆರ್ ಅಶೋಕ್ ಪ್ರತಿಕ್ರಿಯಿಸಿದ್ದು, ಇಂದು ಕರಾಳ ದಿನ. ಬಿಎಸಿ ಸಭೆಯಲ್ಲಿ ಬಿಲ್ ಬಗ್ಗೆ ಮಾತ್ರ ಹೇಳಿದ್ದಾರೆ. ಇವತ್ತು ಏಕಾಏಕಿ ಕಳ್ಳನ ರೀತಿ ಕೇಂದ್ರ ಸರ್ಕಾರದ ವಿರುದ್ಧ ನಿರ್ಣಯ ಮಾಡಿದ್ದಾರೆ. ಮುನ್ಸೂಚನೆ ನೀಡದೇ ಈ ರೀತಿ ಮಾಡಿದ್ದಾರೆ. ಕಳ್ಳರ ರೀತಿ ಮಾಡಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ದೂರುವ ಹಳೇ ಚಾಳಿ ಮುಂದುವರಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ (Lok Sabha Election) ಸೋಲಿನ ಭೀತಿಯಿಂದ ಈ ರೀತಿ ಮಾಡಿದ್ದಾರೆ. ರಾಜಾರೋಷವಾಗಿ ತನ್ನಿ ಚರ್ಚೆ ಮಾಡುತ್ತೇವೆ. ಆದರೆ ಮೋಸದಿಂದ ಇವತ್ತು ನಿರ್ಣಯ ಮಂಡಿಸಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: 6,200 ಕೋಟಿಗೂ ಅಧಿಕ ಮೊತ್ತದ ಕಾಮಗಾರಿಗೆ ನಿತಿನ್‌ ಗಡ್ಕರಿ ಶಂಕುಸ್ಥಾಪನೆ

ಇನ್ನೂ ರಾಜ್ಯ ಸರ್ಕಾರದ ನಿರ್ಣಯ ಕುರಿತು ಮಾತನಾಡಿದ ವಿಜಯೇಂದ್ರ, ಕೇಂದ್ರದ ಮೇಲೆ ಗೂಬೆ ಕೂರಿಸಿ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಇದನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಲಿದೆ. ಸರ್ಕಾರದ ನಡೆಯನ್ನು ಬಲವಾಗಿ ಖಂಡಿಸುತ್ತೇವೆ. ಶುಕ್ರವಾರ ರಾಜ್ಯಪಾಲರಿಗೂ ದೂರು ಕೊಡುತ್ತೇವೆ. ನಾವು ಇದನ್ನು ನೋಡಿಕೊಂಡು ಕಣ್ಮುಚ್ಚಿ ಕೂರಲ್ಲ. ಚುನಾವಣಾ ಸೋಲಿನ ಭಯದಿಂದ ಸದನದ ನೀತಿ, ಕಾನೂನು ಮೀರಿ ನಡೆದುಕೊಂಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ನಿಮ್ಮ ಹಣೆಬರಹ ಗೊತ್ತಾಗಲಿದೆ ಎಂದು ಹರಿಹಾಯ್ದರು. ಇದನ್ನೂ ಓದಿ: ಕರ್ನಾಟಕದಲ್ಲಿ ಕನ್ನಡ ಕಡ್ಡಾಯಕ್ಕೂ ಕ್ಯಾತೆ – ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಮಹಾರಾಷ್ಟ್ರ ಸರ್ಕಾರ ತೀರ್ಮಾನ

ಲೋಕಸಭೆ ಚುನಾವಣೆ ಸನಿಹದಲ್ಲಿರುವಾಗ ರಾಜ್ಯದಲ್ಲಿ ಧರ್ಮ ದಂಗಲ್ ತೀವ್ರಗೊಂಡಿದೆ. ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ವಿಧೇಯಕಕ್ಕೆ ನಿನ್ನೆಯಷ್ಟೇ ವಿಧಾನಸಭೆ ಅನುಮೋದನೆ ನೀಡಿತ್ತು. ಈ ಸಂದರ್ಭದಲ್ಲಿ ಸುಮ್ಮನೆ ಇದ್ದ ಬಿಜೆಪಿಗರು ಇವತ್ತು ಸರ್ಕಾರವನ್ನು ಟಾರ್ಗೆಟ್ ಮಾಡಿದ್ದಾರೆ. ಅಂದು ಘಜ್ನಿ ದೇವಸ್ಥಾನಗಳನ್ನು ನಿರಂತರವಾಗಿ ಲೂಟಿ ಮಾಡಿದ್ದ. ಇಂದು ಸಿದ್ದರಾಮಯ್ಯ ಸರ್ಕಾರ ದೇವಾಲಯಗಳ ಲೂಟಿಗಿಳಿದು ತಮ್ಮ ಕುರ್ಚಿಯನ್ನು ಭದ್ರ ಮಾಡಿಕೊಳ್ಳಲು ನೋಡುತ್ತಿದೆ. ಭಕ್ತರ ಕಾಣಿಕೆ ಹುಂಡಿಗೆ ಕನ್ನ ಹಾಕಿದ ಕಾಂಗ್ರೆಸ್ ಸರ್ಕಾರ ಶಾಪಗ್ರಸ್ಥವಾಗುವುದು ನಿಶ್ಚಿತ. ಹಿಂದೂಗಳಿಗೆ ದ್ರೋಹ ಬಗೆಯಲು ಸದಾ ಸಿದ್ದ ಸರ್ಕಾರ. ಉಂಡು ಹೋದ- ಹುಂಡಿ ಕೊಂಡು ಹೋದ ಎಂದು ಬಿಜೆಪಿ ಸರಣಿ ಟ್ವೀಟ್ ಮಾಡಿದ್ದು, #ಅವರ್‌ಟೆಂಪಲ್‌ಅವರ್‌ರೈಟ್ #ಹಿಂದುವಿರೋಧಿಕಾಂಗ್ರೆಸ್ ಎಂಬ ಹ್ಯಾಷ್ ಟ್ಯಾಗ್ ಹಾಕಿದೆ. ಇದನ್ನೂ ಓದಿ: ಕೇಂದ್ರದ ವಿರುದ್ಧ ನಿರ್ಣಯ ಅಂಗೀಕಾರ; ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕೆಂಡಾಮಂಡಲ – ಸದನ ಅಲ್ಲೋಲ ಕಲ್ಲೋಲ!

ಇನ್ನು, ರಾಜ್ಯ ಸರ್ಕಾರ ಆರ್ಥಿಕವಾಗಿ ಸಂಕಷ್ಟದಲ್ಲಿದ್ದು, ಶ್ರೀಮಂತ ದೇವಾಲಯಗಳಿಗೆ ಕನ್ನ ಹಾಕುವ ಕೆಲಸ ಮಾಡುತ್ತಿದೆ ಎಂದು ವಿಜಯೇಂದ್ರ ಕಿಡಿಕಾರಿದ್ದಾರೆ. ಹೀಗೆ ಕನ್ನ ಹಾಕುವ ಬದಲು ವಿಧಾನಸೌಧಧ ಮುಂದೆ ಒಂದು ಹುಂಡಿ ಇಟ್ಟುಬಿಡಲಿ. ದಾನಿಗಳು ಅಲ್ಲಿಗೆ ಬಂದು ದಾನ ಮಾಡುತ್ತಾರೆ ಎಂದು ಲೇವಡಿ ಮಾಡಿದ್ದಾರೆ. ಇನ್ನು, #ನೋಹುಂಡಿಕಾಣಿಕೆ ಎಂಬ ಹ್ಯಾಷ್‌ಟ್ಯಾಗ್ ಕೂಡ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗಿದೆ. ಮುಜರಾಯಿ ವ್ಯಾಪ್ತಿಯ ದೇಗುಲಗಳಿಗೆ ಹುಂಡಿ ದುಡ್ಡನ್ನು ಹಾಕಬೇಡಿ. ಇದರ ಬದಲು ಬಡವರಿಗೆ, ಗೋಶಾಲೆಗಳಿಗೆ ಹಣವನ್ನು ನೀಡಿ. ಹುಂಡಿಗೆ ದುಡ್ಡು ನೀಡಿದರೆ ಅದನ್ನು ಸರ್ಕಾರ ಬಳಸಿಕೊಳ್ಳುತ್ತದೆ ಎಂದು ಹಿಂದೂಪರ ಸಂಘಟನೆಗಳು ಆಕ್ರೋಶ ಹೊರಹಾಕಿವೆ. ಇದನ್ನೂ ಓದಿ: ಚುನಾವಣೆ ಸ್ಪರ್ಧೆ ಕಾರಣಕ್ಕೆ ಪಕ್ಷಾಂತರ ಮಾಡಿರೋದು ಬೇಸರವಾಗಿದೆ: ಮುದ್ದಹನುಮೇಗೌಡ

TAGGED:bengalurubjpBY VijayendracongressprotestResolutionಕಾಂಗ್ರೆಸ್ನಿರ್ಣಯಪ್ರತಿಭಟನೆಬಿಜೆಪಿಬಿವೈ ವಿಜಯೇಂದ್ರಬೆಂಗಳೂರು
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Rinku Singh Sunil Narine
Cricket

IPL: ಸೂಪರ್‌ ಓವರ್‌ನಲ್ಲಿ ಮಿಂಚಿದ ನರೈನ್‌, ರಿಂಕು – ಲಕ್ನೋ ವಿರುದ್ಧ ಕೋಲ್ಕತ್ತಾಗೆ ‘ಸೂಪರ್’ ಜಯ

Public TV
By Public TV
3 hours ago
Shots Heard During Press Dinner At White House Donald Tump Evacuated Correspondents Dinner
Latest

ಟ್ರಂಪ್, ಸರ್ಕಾರದ ಮುಖ್ಯ ಅಧಿಕಾರಿಗಳೇ ಹಂತಕನ ಟಾರ್ಗೆಟ್ – ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು‌

Public TV
By Public TV
4 hours ago
big shock to congress mla rajegowda karnataka high court orders re verification 279 postal votes of sringeri assembly constituency
Chikkamagaluru

ಶೃಂಗೇರಿ ವಿಧಾನಸಭಾ ಚುನಾವಣೆ – ಮೇ 2ಕ್ಕೆ ಅಂಚೆ ಮತಗಳ ಮರುಎಣಿಕೆ

Public TV
By Public TV
4 hours ago
RAIN SHIMOGA
Districts

ಶಿವಮೊಗ್ಗದಲ್ಲಿ ಮಳೆ ಅಬ್ಬರ – ತೆಂಗಿನ ಮರ ಬಿದ್ದು ಕಾರು ಜಖಂ, ಮುರಿದು ಬಿದ್ದ ಸಾವಿರಾರು ಅಡಿಕೆ ಮರಗಳು

Public TV
By Public TV
5 hours ago
farm pond tumakuru
Latest

ಕೃಷಿ ಹೊಂಡದಲ್ಲಿ ನೀರು ಕುಡಿಯಲು ಹೋಗಿ ಜಾರಿ ಬಿದ್ದು ಅಕ್ಕ-ತಮ್ಮ ಸಾವು

Public TV
By Public TV
5 hours ago
H.S Shivashankar
Davanagere

ಪ್ರಾಮಾಣಿಕರಾಗಿದ್ದರೆ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಿ – ಪಂಚಮಸಾಲಿ ಪೀಠದ ಟ್ರಸ್ಟಿಗಳಿಗೆ ಹೆಚ್.ಎಸ್ ಶಿವಶಂಕರ್ ಸವಾಲು

Public TV
By Public TV
6 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?