ಮಂಡ್ಯ: ಜೆಡಿಎಸ್ ಕೋಟೆಯಾಗಿರುವ ಕೆ.ಆರ್ ಪೇಟೆಯಲ್ಲಿ ಹಾವು ಏಣಿ ಆಟ ಆರಂಭವಾಗಿದೆ.
ಆರಂಭದಲ್ಲಿ ಒಂದು ಗಂಟೆ ಜೆಡಿಎಸ್ ದೇವರಾಜ್ ಮುನ್ನಡೆ ಸಾಧಿಸಿದ್ದರೆ ನಂತರ ಬಿಜೆಪಿಯ ನಾರಾಯಣ ಗೌಡ ಮುನ್ನಡೆ ಸಾಧಿಸಿದ್ದಾರೆ.
ಐದನೇ ಸುತ್ತಿನಲ್ಲಿ ನಾರಾಯಣ ಗೌಡ 295 ಮತಗಳ ಮುನ್ನಡೆ ಸಾಧಿಸಿದ್ದರು. ದೇವರಾಜ್ 15,607 ಮತಗಳನ್ನು ಪಡೆದರೆ ಬಿಜೆಪಿಯ ನಾರಾಯಣ ಗೌಡ 15,902 ಮತಗಳನ್ನು ಪಡೆದರೆ ಕಾಂಗ್ರೆಸ್ಸಿನ ಚಂದ್ರಶೇಖರ್ 10,271 ಮತಗಳನ್ನು ಪಡೆದಿದ್ದರು.
ಏಳನೇ ಸುತ್ತಿನಲ್ಲಿ ನಾರಾಯಣ ಗೌಡ 1,403 ಮತಗಳ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ 23,352 ಮತಗಳನ್ನು ಪಡೆದರೆ ಜೆಡಿಎಸ್ 21,949 ಮತಗಳನ್ನು ಪಡೆದಿದೆ. ಕಾಂಗ್ರೆಸ್ 16,086 ಮತಗಳನ್ನು ಪಡೆದಿದೆ.
ಯಲ್ಲಾಪುರ, ಕಾಗವಾಡ, ಅಥಣಿ, ಗೋಕಾಕ್, ಕೆಆರ್ ಪುರಂ, ಚಿಕ್ಕಬಳ್ಳಾಪುರ, ಹಿರೇಕೆರೂರು, ಮಹಾಲಕ್ಷ್ಮಿ ಲೇಔಟ್, ರಾಣೇಬೆನ್ನೂರು, ಕೆಆರ್ ಪೇಟೆ, ವಿಜಯನಗರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.
ಶಿವಾಜಿನಗರ ಮತ್ತು ಹುಣಸೂರಿನಲ್ಲಿ ಕಾಂಗ್ರೆಸ್, ಯಶವಂತಪುರದಲ್ಲಿ ಜೆಡಿಎಸ್ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದರೆ, ಹೊಸಕೋಟೆಯಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಮುನ್ನಡೆ ಸಾಧಿಸಿದ್ದಾರೆ.