Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಫುಲ್ ಸೈಲೆಂಟ್ ಆದ ಬಿಜೆಪಿ ಚಾಣಕ್ಯ-ಮುಖ್ಯ ವಾಹಿನಿಯಲ್ಲಿಲ್ಲ ಗೃಹ ಸಚಿವ ಅಮಿತ್ ಶಾ

Public TV
Last updated: April 8, 2020 7:23 am
Public TV
Share
2 Min Read
amit shah
SHARE

ನವದೆಹಲಿ: ಇಡೀ ದೇಶ ಕೊರೊನಾ ಸೋಂಕಿಗೆ ತತ್ತರಿಸಿ ಹೋಗಿದೆ. ಈ ವೈರಸ್ ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಲವು ನಿಯಂತ್ರಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ದೇಶದ ಜನರನ್ನ ಉದ್ದೇಶಿಸಿ ಪ್ರಧಾನಿ ಮೋದಿ ಮೂರು ಬಾರಿ ಮಾತನಾಡಿದ್ದಾರೆ. ಆದರೆ ಗೃಹ ಸಚಿವ ಅಮಿತ್ ಶಾ ಮಾತ್ರ ಈ ನಡುವೆ ನಾಪತ್ತೆಯಾಗಿದ್ದಾರೆ.

modi amit shah

ಕೊರೊನಾ ಸೋಂಕು ದೇಶವನ್ನು ಕಿತ್ತು ತಿನ್ನುತ್ತಿದೆ. ಭಾರತ ಲಾಕ್‍ಡೌನ್ ಆದ್ರೂ ಸೋಂಕಿತರ ಪ್ರಮಾಣದಲ್ಲಿ ಇಳಿಕೆ ಕಂಡು ಬರ್ತಿಲ್ಲ. ಈ ನಡುವೆ ಲಾಕ್ ಡೌನ್ ಮುಂದುವರಿಯುತ್ತಾ ಇಲ್ವ ಅನ್ನೊ ಗೊಂದಲಗಳು ಸೃಷ್ಟಿಯಾಗಿದೆ. ಕೊರೊನಾ ವಿಚಾರದಲ್ಲಿ ಕೇಂದ್ರ ಸರ್ಕಾರ ಆಕ್ಟಿವ್ ಆಗಿ ಕೆಲಸ ಮಾಡ್ತಿದೆ. ಆದರೆ ಸದಾ ಸುದ್ದಿಯಲ್ಲಿ ಇರ್ತಿದ್ದ ಗೃಹ ಸಚಿವ ಅಮಿತ್ ಶಾ ಮಾತ್ರ ಕೊರೊನಾ ವಿಚಾರದಲ್ಲಿ ಫುಲ್ ಸೈಲೆಂಟ್ ಆಗಿದ್ದಾರೆ.

MODICABINETMEETING CORONA

ಕೊರೊನಾ ಸೋಂಕು ಬೆಳೆದುಕೊಳ್ಳುತ್ತಲೇ ಇದೆ. ದಿನ ಬೆಳಗಾದ್ರೆ ಪ್ರಧಾನಿ ಮೋದಿ ಹಲವು ಸಭೆಗಳನ್ನು ನಡೆಸುತ್ತಿದ್ದಾರೆ. ಇತ್ತ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಟೊಂಕ ಕಟ್ಟು ನಿಂತಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವ ಜೈ ಶಂಕರ್ ವಿದೇಶದಲ್ಲಿರುವ ಭಾರತೀಯರನ್ನು ಕರೆ ತರುವ ಪ್ರಯತ್ನ ಸೇರಿ ಹಲವು ಪ್ರಮುಖ ಕೆಲಸಗಳ ಮಾಡ್ತಿದ್ದಾರೆ. ಇತ್ತ ಹಣಕಾಸು ಸಚವೆ ನಿರ್ಮಲ ಸೀತರಾಮನ್ ಸೇರಿ ಹಲವು ಸಚಿವರು ತಮ್ಮ ಖಾತೆಗಳ ಅನುಗುಣವಾಗಿ ಕೆಲಸ ಮಾಡುತ್ತಲೇ ಇದ್ದಾರೆ. ಆದರೆ ಗೃಹ ಸಚಿವ ಅಮಿತ್ ಶಾ ಮಾತ್ರ ಮುಖ್ಯ ವಾಹಿನಿಯಿಂದ ದೂರ ಉಳಿದುಕೊಂಡಿದ್ದಾರೆ.

coronavirus 1 1000x600 1

ಕೊರೊನಾ ಸೋಂಕು ವಿಚಾರ ಶುರುವಾದಗಿನಿಂದ ಬಹುತೇಕ ಎಲ್ಲ ಸಚಿವರು ಬೇರೆ ಬೇರೆ ಕಾರಣಗಳಿಂದ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ತಮ್ಮ ಇಲಾಖೆಯಿಂದ ಜನರಿಗೆ ಮಾಡುತ್ತಿರುವ ನೆರವುಗಳ ಬಗ್ಗೆ ವಿವರಣೆ ನೀಡಿದ್ದಾರೆ. ಆದರೆ ಅಮಿತ್ ಶಾ ಮಾತ್ರ ಈವರೆಗೂ ಗೃಹ ಇಲಾಖೆಯಿಂದ ನಡೆಯುತ್ತಿರುವ ಬೆಳವಣಿಗಳ ಬಗ್ಗೆ ಮಾಹಿತಿ ನೀಡಿಲ್ಲ. ಹೀಗಂತ ಕೇಂದ್ರ ಗೃಹ ಇಲಾಖೆ ಏನು ಸುಮ್ಮನೆ ಕೂತಿಲ್ಲ. ತನ್ನೆಲ್ಲ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಿದೆ. ಇದರ ಎಲ್ಲ ಮಾಹಿತಿಯನ್ನು ಕಾರ್ಯದರ್ಶಿ ಪಿ.ಎಸ್ ಶ್ರೀವಸ್ತ ಮಾಧ್ಯಮಗಳಿಗೆ ನೀಡುತ್ತಿದ್ದಾರೆ. ಆದರೆ ಅಮಿತ್ ಶಾ ಈ ವರೆಗೂ ಒಂದು ಮಾತು ಆಡಿಲ್ಲ. ಹೀಗಾಗೀ ಸಾಕಷ್ಟು ಕುತೂಹಲ ಮೂಡಿದ್ದು ಅಮಿತ್ ಶಾ ಯಾಕೆ ದೂರು ಉಳಿದುಕೊಂಡಿದ್ದಾರೆ ಎಂದು ಚರ್ಚೆ ಆಗುತ್ತಿದೆ.

MOdi 4

ಹಲವು ಅನುಮಾನ, ಚರ್ಚೆ:
* ಕೊರೊನಾ ಸಂಪೂರ್ಣ ಜವಬ್ದಾರಿಯನ್ನು ಪ್ರಧಾನಿ ಮೋದಿಗೆ ವಹಿಸಿದ್ರಾ ಅಮಿತ್ ಶಾ..?
* ಇದೊಂದು ರಾಷ್ಟ್ರೀಯ ದುರಂತ ಆಗಿರೋದ್ರರಿಂದ ಪ್ರಧಾನಿಯೇ ಮುಂದಾಳತ್ವದಲ್ಲಿ ನಡೆಯಲಿ ಎಂದು ಸುಮ್ಮನಾದ್ರ..?
* ಈ ವೇಳೆ ಎಲ್ಲ ವಿಪಕ್ಷಗಳು ಇಡೀ ದೇಶದ ಜನರನ್ನು ಒಗ್ಗೂಡಿಸಿಕೊಂಡು ಹೋಗಬೇಕು.
* ಆದರೆ ಅಮಿತ್ ಶಾ ವಿಪಕ್ಷಗಳ ನಾಯಕರ ಜೊತೆ ಉತ್ತಮ ಸಂಬಂಧ ಹೊಂದಿಲ್ಲ ಮತ್ತು ಎನ್.ಆರ್.ಸಿ, ಸಿಎಎ ವಿಚಾರದಲ್ಲಿ ಕೆಲವು ಸಮುದಾಯಗಳು ಅಮಿತ್ ಶಾ ವಿರುದ್ಧವಾಗಿರೊದ್ರರಿಂದ ವಿಪಕ್ಷ ಮತ್ತು ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಜವಾಬ್ದಾರಿ ಮೋದಿಗೆ ವಹಿಸರಬಹುದಾ.?
* ಜವಾಬ್ದಾರಿ ಹಂಚಿಕೆ ವಿಚಾರದಲ್ಲಿ ಭಿನ್ನಾಭಿಪ್ರಾಯ ಸೃಷ್ಟಿಯಾಗಿದೆಯಾ..?

PM MODI SPEACH 2 IMP APP

ಹೀಗೆ ಹಲವು ಅನುಮಾನಗಳು ಈಗ ರಾಜಕೀಯ ವಲಯದಲ್ಲಿ ಚರ್ಚೆ ಆಗುತ್ತಿದೆ. ಅಲ್ಲದೇ ಕೇಂದ್ರ ಸಚಿವರ ಸಭೆಯಲ್ಲಿ ಕೂಡಾ ಅಮಿತ್ ಶಾ ಹೆಚ್ಚು ಭಾಗಿಯಾಗುತ್ತಿಲ್ಲ. ಒಂದೆರಡು ಸಭೆಗಳನ್ನು ಹೊರತುಪಡಿಸಿದ್ರೆ ಹೆಚ್ಚು ಆಸಕ್ತಿ ತೋರಿಲ್ಲ. ಹೆಚ್ಚು ಆಕ್ಟಿವ್ ಆಗಿದ್ದ ನಾಯಕ ಹೀಗೆ ಸುಮ್ಮನಾಗಿದ್ದು ಯಾಕೆ ಎನ್ನುವ ಪ್ರಶ್ನೆ ಪಕ್ಷದ ಕೆಲವು ನಾಯಕರಿಗೆ ಕಾಡುತ್ತಿದೆ. ವರ್ಷದ ಕೊನೆಯಲ್ಲಿ ನಡೆಯಲಿರುವ ಬಿಹಾರ್ ಚುನಾವಣೆಗೆ ಶಾ ಸಿದ್ಧವಾಗ್ತಿರಬಹುದು ಎಂದು ಇನ್ನು ಕೆಲವರು ಅಂದಾಜು ಮಾಡುತ್ತಿದ್ದಾರೆ.

TAGGED:Amit ShahbjpCorona VirusCovid19prime minister modiPublic TVಅಮಿತ್ ಶಾಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿಪ್ರಧಾನಿ ಮೋದಿಬಿಜೆಪಿ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
3 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
3 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
4 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
5 hours ago

You Might Also Like

Boeing 787 air india dreamliner
Latest

ಏರ್‌ ಇಂಡಿಯಾ ವಿಮಾನ ಪತನ – ಏನಿದು ಬ್ಲ್ಯಾಕ್‌ಬಾಕ್ಸ್‌,? ಬೆಂಕಿಯಲ್ಲಿ ಸುಟ್ಟು ಹೋಗಲ್ಲ ಯಾಕೆ?

Public TV
By Public TV
49 seconds ago
Air India Crash CM Siddaramaiah
Bengaluru City

ಏರ್‌ ಇಂಡಿಯಾ ವಿಮಾನ ದುರಂತ – ಸಂತಾಪ ಸೂಚಿಸಿದ ಸಿದ್ದರಾಮಯ್ಯ

Public TV
By Public TV
3 minutes ago
Ahmedabad Air India Air Crash
Latest

ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಪತನ – 110 ಪ್ರಯಾಣಿಕರು ಸಾವು

Public TV
By Public TV
18 minutes ago
Air India Flight Crash
Latest

ವಿಮಾನ ಪತನ | ಪ್ರಯಾಣಿಕರ ಕುಟುಂಬಸ್ಥರಿಗೆ ಧೈರ್ಯ ತುಂಬಿದ ವಿಮಾನಯಾನ ಸಚಿವ

Public TV
By Public TV
19 minutes ago
train
Latest

ರೈಲ್ವೆ ತತ್ಕಾಲ್ ಟಿಕೆಟ್ ಬುಕ್ಕಿಂಗ್‌ಗೆ ಆಧಾರ್‌ ಕಡ್ಡಾಯ – ಜುಲೈ 1ರಿಂದ ಹೊಸ ನಿಯಮ ಜಾರಿ

Public TV
By Public TV
38 minutes ago
Ahmedabad Plane Crash Capt Sumeet Sabharwal is a LTC with 8200 Hrs of experience
Latest

ಏರ್‌ ಇಂಡಿಯಾ ವಿಮಾನ ಪತನ – ಪೈಲಟ್‌ಗೆ ಇತ್ತು 8,200 ಗಂಟೆಗಳ ಹಾರಾಟದ ಅನುಭವ

Public TV
By Public TV
43 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?