Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಧರ್ಮಸ್ಥಳ ಪರ ಬಿಜೆಪಿ `ಧರ್ಮ’ ಸಮರ – ಎನ್‌ಐಎ ತನಿಖೆಗೆ ವಹಿಸುವಂತೆ ಆಗ್ರಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಧರ್ಮಸ್ಥಳ ಪರ ಬಿಜೆಪಿ `ಧರ್ಮ’ ಸಮರ – ಎನ್‌ಐಎ ತನಿಖೆಗೆ ವಹಿಸುವಂತೆ ಆಗ್ರಹ

Dakshina Kannada

ಧರ್ಮಸ್ಥಳ ಪರ ಬಿಜೆಪಿ `ಧರ್ಮ’ ಸಮರ – ಎನ್‌ಐಎ ತನಿಖೆಗೆ ವಹಿಸುವಂತೆ ಆಗ್ರಹ

Public TV
Last updated: September 1, 2025 8:31 pm
Public TV
Share
2 Min Read
BJP 2
SHARE

– ಬಿಜೆಪಿ-ಜೆಡಿಎಸ್ `ಧರ್ಮ’ ಯುದ್ಧಕ್ಕೆ `ಕೈ’ ಕೌಂಟರ್ ಯಾತ್ರೆ..?

ಮಂಗಳೂರು: ಧರ್ಮಸ್ಥಳ (Dharmasthala) ವಿರುದ್ಧ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಬಿಜೆಪಿ ನಾಯಕರು ಸಿಡಿದೆದ್ದಿದ್ದಾರೆ. ಪ್ರಕರಣವನ್ನ ಎನ್‌ಐಎ ತನಿಖೆಗೆ (NIA Investigation) ವಹಿಸಬೇಕೆಂದು ಆಗ್ರಹಿಸಿ ಇಂದು ಬಿಜೆಪಿ ನಾಯಕರು ಧರ್ಮಸ್ಥಳ ಚಲೋ ನಡೆಸಿದ್ರು. ಸಾವಿರಾರು ಕಾರ್ಯಕರ್ತರು ಕಾರು, ಟಿಟಿ, ಬಸ್‌ಗಳಲ್ಲಿ ಧರ್ಮಸ್ಥಳಕ್ಕೆ ಭೇಟಿ ಕೊಟ್ರು. ಧರ್ಮಸ್ಥಳ ವಿರುದ್ಧ ಷಡ್ಯಂತ್ರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ರು. ಬಳಿಕ ದೇವಸ್ಥಾನಕ್ಕೆ ಭೇಟಿ ಕೊಟ್ಟು ಮಂಜುನಾಥನ ದರ್ಶನ ಪಡೆದ್ರು. ಷಡ್ಯಂತ್ರ ಮಾಡುವವರಿಗೆ ತಕ್ಕ ಶಿಕ್ಷೆ ಆಗ್ಬೇಕು ಅಂತ ಸಂಕಲ್ಪ ಮಾಡಿದ್ರು.

BJP 2

`ಕೈ’ ವಿರುದ್ಧ ವಿಜಯೇಂದ್ರ, ಅಶೋಕ್ ವಾಗ್ದಾಳಿ..!
ಧರ್ಮಸ್ಥಳ ಪರ ಬಿಜೆಪಿ ಧರ್ಮ ಸಂಗ್ರಾಮ ಜೋರಾಗಿದೆ. ಶ್ರೀಮಂಜುನಾಥನ ದರ್ಶನ ಪಡೆದ ಬಿಜೆಪಿ ನಾಯಕರು ರಾಜ್ಯ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ್ರು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra) ಮಾತನಾಡಿ, ದುಷ್ಟಶಕ್ತಿಗಳು ಅಟ್ಟಹಾಸ ಮೆರೆಯುತ್ತಿವೆ. ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಪಪ್ರಚಾರ ನಡೆಯುತ್ತಿದೆ. ಕೋಟ್ಯಂತರ ಭಕ್ತರು ಅಪಪ್ರಚಾರದಿಂದ ಕಣ್ಣೀರು ಹಾಕ್ತಿದ್ದಾರೆ. ಅಪಪ್ರಚಾರದ ಮೂಲಕ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮುಂದಾಗಿದ್ದಾರೆ ಅಂತ ವಾಗ್ದಾಳಿ ನಡೆಸಿದ್ರು.

ಇನ್ನು ಆರ್‌. ಅಶೋಕ್ ಮಾತನಾಡಿ, ಮಧ್ಯಂತರ ವರದಿ ಕೊಡಲು ಸರ್ಕಾರ ಹಿಂದೇಟು ಹಾಕಿದೆ. ಇದು ಸರ್ಕಾರದ ವಿಫಲತೆ, ಗುಪ್ತಚರ ಇಲಾಖೆ ವೈಫಲ್ಯ ಎಂದಿದ್ದಾರೆ. ಯಾರೋ ದಾರಿಲಿ ಹೋಗುವನು ಹೇಳಿದ ತಕ್ಷಣ ತನಿಖೆಗೆ ಕೊಟ್ರು ಕಾಂಗ್ರೆಸ್ ನವರಿಗೆ ಧರ್ಮದ ಪರ ಮಾತನಾಡುವ ನೈತಿಕತೆ ಇಲ್ಲ ಅಂತ ವಾಗ್ದಾಳಿ ನಡೆಸಿದ್ರು.

ವೀರೇಂದ್ರ ಹೆಗ್ಗಡೆ ಭೇಟಿಯಾಗಿ ಮಾತುಕತೆ
ಧರ್ಮಸ್ಥಳ ವಿರುದ್ಧದ ಅಪಪ್ರಚಾರದ ವಿರುದ್ಧ ಸಿಡಿದೆದ್ದ ಬಿಜೆಪಿ ನಾಯಕರು ಧರ್ಮಸ್ಥಳಕ್ಕೆ ತೆರಳಿ ಬಿಜೆಪಿ ಸಮಾವೇಶ ನಡೆಸ್ತು. ಅದಕ್ಕೂ ಮುನ್ನ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಭೇಟಿಯಾಗಿ ಕಾರ್ಯಕ್ರಮದ ಬಗ್ಗೆ ಮಾತುಕತೆ ನಡೆಸಿದ್ರು. ಬಳಿಕ ಧರ್ಮಸ್ಥಳದಲ್ಲಿ ಧರ್ಮ ಜಾಗೃತಿ ಸಮಾವೇಶ ನಡೀತು. ಧರ್ಮಸ್ಥಳ ದೇವಸ್ಥಾನದ ಹೊರವಲಯದಲ್ಲಿರುವ ಮೈದಾನದಲ್ಲಿ ಸಮಾವೇಶ ನಡೆದಿದ್ದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಶೋಭಾ ಕರಂದ್ಲಾಜೆ ಭಾಗಿಯಾಗಿದ್ರು. ಈ ವೇಳೆ ಅಪಪ್ರಾಚಾರಕರ ವಿರುದ್ಧ ವಾಗ್ದಾಳಿ ನಡೆಸಿದ್ರು.

ಬಿಜೆಪಿ-ಜೆಡಿಎಸ್ `ಧರ್ಮ’ ಯುದ್ಧಕ್ಕೆ `ಕೈ’ ಕೌಂಟರ್ ಯಾತ್ರೆ..?
ಇನ್ನೂ ಧರ್ಮಸ್ಥಳ ವಿರುದ್ಧ ಬಿಜೆಪಿ-ಜೆಡಿಎಸ್ `ಧರ್ಮ’ ಯುದ್ಧಕ್ಕೆ ಕಾಂಗ್ರೆಸ್ ಕೌಂಟರ್ ಯಾತ್ರೆ ನಡೆಸೋಕೆ ಪ್ಲ್ಯಾನ್‌ ಮಾಡಿಕೊಂಡಿದೆ. ಧರ್ಮಸ್ಥಳದಲ್ಲಿನ ಬೆಳವಣಿಗೆಯನ್ನು ವಿಪಕ್ಷಗಳು ರಾಜಕೀಯವಾಗಿ ಅಸ್ತ್ರ ಮಾಡಿಕೊಂಡಿರುವ ಬಗ್ಗೆ ಚರ್ಚೆ ನಡೆಯುತ್ತಿದ್ದು ಬಿಜೆಪಿ-ಜೆಡಿಎಸ್‌ಗೆ ಕೌಂಟರ್ ಕೊಡಲು ಕಾಂಗ್ರೆಸ್ ಶಾಸಕರು ಡಿಮ್ಯಾಂಡ್ ಮಾಡ್ತಿದ್ದಾರೆ. ಹೀಗಾಗಿ ವಿಪಕ್ಷಗಳ ರಾಜಕೀಯ ಯುದ್ಧಕ್ಕೆ ಕಾಂಗ್ರೆಸ್ ಪ್ರತಿತಂತ್ರ ಹೂಡುತ್ತಾ? ಅನ್ನೋ ಮಾತುಗಳು ಕೇಳಿಬರುತ್ತಿವೆ. ಒಂದ್ವೇಳೆ ವಿಪಕ್ಷಗಳ ವಿರುದ್ಧ ಸಮರ ಸಾರಿದ್ದೇ ಆದ್ರೆ ಕೌಂಟರ್ ಯಾತ್ರೆಯೋ? ಧರ್ಮಸ್ಥಳಕ್ಕೆ ನಿಯೋಗ ಭೇಟಿಯೋ? ಅನ್ನೋದನ್ನು ಮುಂದಿನ ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

`ಕೈ’ ಶಾಸಕರು, ನಾಯಕರ ಒತ್ತಾಯ ಏನು?
* ಧರ್ಮಸ್ಥಳ ಕೇಸ್‌ನಲ್ಲಿ ಬಿಜೆಪಿ-ಜೆಡಿಎಸ್‌ನಿಂದ ಪೊಲಿಟಿಕಲ್ ಮೈಲೇಜ್
* ವಿಪಕ್ಷಗಳು ಕಾಂಗ್ರೆಸ್ ಪಕ್ಷವನ್ನು ವಿಲನ್ ರೀತಿ ಬಿಂಬಿಸುತ್ತಿವೆ
* ಹೀಗೆ ಆದ್ರೆ ಭಕ್ತರ ಕಣ್ಣಲ್ಲಿ ಕಾಂಗ್ರೆಸ್ ಮೇಲೆ ತಪ್ಪು ಭಾವನೆ ಮೂಡುತ್ತೆ
* ಬಿಜೆಪಿ-ಜೆಡಿಎಸ್ ಯಾತ್ರೆಗೆ ಕಾಂಗ್ರೆಸ್‌ನಿಂದಲೂ ಕೌಂಟರ್ ಯಾತ್ರೆ
* ಯಾತ್ರೆಗೂ ಮುನ್ನವೇ ಎಸ್‌ಐಟಿ ವರದಿ ಕೊಟ್ಟು ಕೇಸ್ ಅಂತ್ಯ ಮಾಡ್ಬೇಕು
* ಕಾಂಗ್ರೆಸ್‌ನಿಂದಲೂ ಧರ್ಮಸ್ಥಳ ಚಲೋ ಅಥವಾ ಕ್ಷೇತ್ರ ದರ್ಶನ ಆಗ್ಬೇಕು
* ಧರ್ಮಸ್ಥಳ ಕೇಸ್‌ನಲ್ಲಿ ವಿಪಕ್ಷಗಳ ಪ್ಲ್ಯಾನ್ ವಿಫಲ ಮಾಡುವುದು.

TAGGED:bjpBY VijayendraDharmasthala Caser ashoksiddaramaiahಆರ್. ಅಶೋಕ್‍ಧರ್ಮಸ್ಥಳ ಪ್ರಕರಣಬಿ.ವೈ.ವಿಜಯೇಂದ್ರಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Dharmendra Mammootty Alka Yagnik
ಧರ್ಮೇಂದ್ರಗೆ ಪದ್ಮವಿಭೂಷಣ; ಮಮ್ಮುಟ್ಟಿ, ಅಲ್ಕಾ ಯಾಗ್ನಿಕ್‌ಗೆ ಪದ್ಮಭೂಷಣ ಪ್ರಶಸ್ತಿ
Cinema Latest Main Post National
Shivaraj Kumar
ಶಿವಣ್ಣನ ಮನ ಗೆದ್ದ ʻಲವ್ ಯೂ ಮುದ್ದುʼ ಜೋಡಿ – ಹ್ಯಾಟ್ರಿಕ್‌ ಹೀರೋ ಹೇಳಿದ್ದೇನು?
Cinema Latest Sandalwood Top Stories
Ghaarga Film
`ಘಾರ್ಗಾ’ ಚಿತ್ರದ ಟ್ರೈಲರ್ ರಿಲೀಸ್‌ – ಹಾರರ್, ಸಸ್ಪೆನ್ಸ್, ಥ್ರಿಲ್ಲರ್ ಕಂಡು ಸಿನಿಪ್ರಿಯರು ಫುಲ್‌ ಖುಷ್‌
Cinema Latest Sandalwood
Darshan 7
ದರ್ಶನ್ ಹೆಚ್ಚುವರಿ ಬ್ಲಾಂಕೆಟ್‌ ಸೌಲಭ್ಯಕ್ಕೆ ಕುತ್ತು – ಕಾರಾಗೃಹ ಡಿಜಿಪಿ ಹೊಸ ಆದೇಶ
Bengaluru City Cinema Latest Sandalwood

You Might Also Like

gangavali bridge
Latest

ಗಂಗಾವಳಿ ಸೇತುವೆ ಮೇಲಿಲ್ಲ ಸರ್ಕಾರಿ ಬಸ್ ಸಂಚಾರದ ಭಾಗ್ಯ!

Public TV
By Public TV
6 hours ago
udupi accident
Latest

ಉಡುಪಿ| ಟ್ರಕ್ ಟಯರ್ ಅಡಿಗೆ ಸಿಲುಕಿ ಯುವಕ ಸಾವು

Public TV
By Public TV
7 hours ago
Droupadi Murmu
Latest

ಆಪರೇಷನ್‌ ಸಿಂಧೂರ ಯಶಸ್ಸಿಗೆ ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬನೆಯೇ ಕಾರಣ: ದ್ರೌಪದಿ ಮುರ್ಮು

Public TV
By Public TV
7 hours ago
Crime 3
Crime

ಪಿರಿಯಾಪಟ್ಟಣ | ಇಬ್ಬರು ಮಕ್ಕಳೊಂದಿಗೆ ನೇಣಿಗೆ ಶರಣಾದ ತಾಯಿ

Public TV
By Public TV
8 hours ago
Abhishek Sharma Suryakumar
Cricket

IND vs NZ 3rd T20I: ಅಭಿಷೇಕ್‌, ಸೂರ್ಯ ಬ್ಯಾಟಿಂಗ್ ಅಬ್ಬರಕ್ಕೆ ಕಿವೀಸ್‌ ಕಂಗಾಲು; ಸರಣಿ ಗೆದ್ದ ಭಾರತ

Public TV
By Public TV
8 hours ago
Stray Dogs
Districts

ಆಟವಾಡುತ್ತಿದ್ದ ಮಕ್ಕಳ ಮೇಲೆ ಹುಚ್ಚು ನಾಯಿ ದಾಳಿ – 10 ಮಂದಿಗೆ ಗಂಭೀರ ಗಾಯ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?