ಬೆಂಗಳೂರು: ಸಾಲು ಸಾಲು ಉಚ್ಛಾಟನೆಯಿಂದಾಗಿ ವಿಧಾನಸಭೆಯಲ್ಲಿ ತಾಂತ್ರಿಕವಾಗಿ ಬಿಜೆಪಿ (BJP) ಬಲಾಬಲ ಕುಸಿತವಾಗಿದೆ.
2023ರ ವಿಧಾನಸಭೆ ಚುನಾವಣೆಯಲ್ಲಿ (Karnataka Election) ಬಿಜೆಪಿ 66 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಲೋಕಸಭೆ ಚುನಾವಣೆಯಲ್ಲಿ ಹಾವೇರಿಯಿಂದ ಬಸವರಾಜ ಬೊಮ್ಮಾಯಿ (Basavaraj Bommai) ಸ್ಪರ್ಧಿಸಿ ಜಯಗಳಿಸಿದ್ದರಿಂದ ಶಿಗ್ಗಾಂವಿ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು.
ಉಪಚುನಾವಣೆಯಲ್ಲಿ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿಗೆ ಸೋಲಾಗಿದ್ದರಿಂದ ಬಿಜೆಪಿ 65 ಶಾಸಕರನ್ನು ಹೊಂದಿತ್ತು. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಉಚ್ಚಾಟನೆ ಬಳಿಕ ಬಿಜೆಪಿ ಬಲ 64ಕ್ಕೆ ಕುಸಿದಿತ್ತು. ಈಗ ಶಿವರಾಂ ಹೆಬ್ಬಾರ್ (Shivaram Hebbar), ಎಸ್.ಟಿ.ಸೋಮಶೇಖರ್ (ST Somashekar) ಉಚ್ಚಾಟನೆಯ ಬಳಿಕ ಬಿಜೆಪಿ ಬಲ 62ಕ್ಕೆ ಕುಸಿತವಾಗಿದೆ. ಇದನ್ನೂ ಓದಿ: ಬಿಜೆಪಿಯಿಂದ ಎಸ್ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್ ಉಚ್ಚಾಟನೆ
ರಾಜ್ಯ ಬಿಜೆಪಿಯಲ್ಲಿ ಅಶಿಸ್ತು, ಗುಂಪುಗಾರಿಕೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆ ಹಿನ್ನೆಡೆ ಆಗಿದ್ದಕ್ಕೆ ಹೈಕಮಾಂಡ್ ಗರಂ ಆಗಿತ್ತು. ಅಶಿಸ್ತು ತೋರಿದವರ ವಿರುದ್ಧ ಕ್ರಮ ಮೂಲಕ ಸಂಘಟನೆ, ಪಕ್ಷ ಬಲವರ್ಧನೆಗೆ ತಾಕೀತು ಮಾಡಿದೆ. ಸೋಮಶೇಖರ್, ಹೆಬ್ಬಾರ್ ಉಚ್ಛಾಟನೆ ಮೂಲಕವೇ ರಾಜ್ಯ ಬಿಜೆಪಿಗೆ ಇನ್ಮುಂದೆ ಪಕ್ಷವೇ ಮುಖ್ಯ, ಶಿಸ್ತೇ ಮುಖ್ಯ ಎಂದು ಹೈಕಮಾಂಡ್ ಖಡಕ್ ಸಂದೇಶ ರವಾನಿಸಿದೆ. ಇದನ್ನೂ ಓದಿ: ಚಂಚಲಗೂಡ ಜೈಲಿನಿಂದ ಪರಪ್ಪನ ಅಗ್ರಹಾರಕ್ಕೆ ರೆಡ್ಡಿ ಶಿಫ್ಟ್
ಇನ್ ಮುಂದೆ ಪಕ್ಷ ವಿರೋಧಿ ಚಟುವಟಿಕೆ ಸಹಿಸುವುದಿಲ್ಲ. ಹೊಂದಾಣಿಕೆ ರಾಜಕಾರಣ ಮಾಡುವಂತಿಲ್ಲ. ಬಿಜೆಪಿಯಲ್ಲಿ ಪಕ್ಷ ಸಂಘಟನೆ, ಶಿಸ್ತು ಪಾಲನೆ ಮಾಡುವರಿಗೆ ಅಷ್ಟೇ ಉಳಿಗಾಲ ಎಂಬ ಸಂದೇಶವನ್ನು ಹೈಕಮಾಂಡ್ ನಾಯಕರಿಗೆ ಕಳುಹಿಸಿದೆ.