Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ ಮುಕ್ತ ಭಾರತ ಮಾಡುವಲ್ಲಿ ಬಿಜೆಪಿ ವಿಫಲ – ಆತ್ಮವಿಶ್ವಾಸದಲ್ಲಿ ಸೋಲು ಕಂಡ ಕಮಲ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಂಗ್ರೆಸ್ ಮುಕ್ತ ಭಾರತ ಮಾಡುವಲ್ಲಿ ಬಿಜೆಪಿ ವಿಫಲ – ಆತ್ಮವಿಶ್ವಾಸದಲ್ಲಿ ಸೋಲು ಕಂಡ ಕಮಲ

Bengaluru City

ಕಾಂಗ್ರೆಸ್ ಮುಕ್ತ ಭಾರತ ಮಾಡುವಲ್ಲಿ ಬಿಜೆಪಿ ವಿಫಲ – ಆತ್ಮವಿಶ್ವಾಸದಲ್ಲಿ ಸೋಲು ಕಂಡ ಕಮಲ

Public TV
Last updated: December 12, 2018 7:35 am
Public TV
Share
2 Min Read
MODI AMITH
SHARE

ಬೆಂಗಳೂರು: ಬಹಳ ನಿರೀಕ್ಷೆ ಹಾಗೂ ಹಲವಾರು ಕಾರಣಗಳಿಗೆ ಕುತೂಹಲ ಮೂಡಿಸಿದ್ದ ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಮೋದಿ ಸರ್ಕಾರಕ್ಕೆ ಮತದಾರ ಸ್ಪಷ್ಟ ಸಂದೇಶ ರವಾನಿಸಿದ್ದಾನೆ ಲೋಕಸಭಾ ಚುನಾವಣೆಯ ದಿಕ್ಸೂಚಿ ಎಂದೇ ಬಿಂಬಿತವಾಗಿ ರಾಷ್ಟ್ರೀಯ ಪಕ್ಷಗಳಿಗೆ ಪ್ರತಿಷ್ಠೆಯಾಗಿ ಮಾರ್ಪಟ್ಟಿದ್ದ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಕಾಂಗ್ರೆಸ್‍ಗೆ ಸಿಹಿ ನೀಡಿದ್ದರೆ ಬಿಜೆಪಿ ತೀವ್ರ ಮುಖಭಂಗ ಅನುಭವಿಸಿದೆ. ಬಿಜೆಪಿ ತಾನು ಅಧಿಕಾರದಲ್ಲಿದ್ದ ಪ್ರಮುಖ ಮೂರು ರಾಜ್ಯಗಳಾದ ರಾಜಸ್ಥಾನ, ಛತ್ತೀಸ್‍ಗಡ ಹಾಗೂ ಮಧ್ಯಪ್ರದೇಶವನ್ನು ಕೈ ಚೆಲ್ಲಿ ಸೋಲನುಭವಿಸಿದೆ.

ರಾಜಸ್ಥಾನ ಹಾಗೂ ಮಧ್ಯಪ್ರದೇಶ ರಾಜ್ಯಗಳಲ್ಲಿ ಬಿಜೆಪಿ ಸೋಲಲು ಮುಖ್ಯ ಕಾರಣ ಇಲ್ಲಿನ ಬಂಡಾಯ ಎಂದೇ ಹೇಳಲಾಗುತ್ತಿದೆ. ಯುವ ನಾಯಕ ಸಚಿನ್ ಪೈಲಟ್ ಮೇಲಿನ ಮತದಾರರ ಒಲವು ರಾಜಸ್ಥಾನದಲ್ಲಿ ಕಾಂಗ್ರೆಸ್‍ಗೆ ವರ್ಕೌಟ್ ಆಗಿದೆ. ಜೊತೆಗೆ ಈ ರಾಜ್ಯಗಳಲ್ಲಿ ಬಿಎಸ್ ಪಿ ಸಹ ಪ್ರಬಲವಾಗಿದ್ದು ಬಿಜೆಪಿಗೆ ಹೊಡೆತ ನೀಡಿದೆ. ಇನ್ನು ತೆಲಂಗಾಣ ಹಾಗೂ ಮಿಜೋರಾಂ ರಾಜ್ಯಗಳಲ್ಲಿ ಬಿಜೆಪಿ ಗೆಲುವಿನ ನಿರೀಕ್ಷೆ ಹೊಂದಿರದಿದ್ದರೂ ಒಂದಷ್ಟು ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ಹಾಕಿಕೊಳ್ಳುವ ಇರಾದೆ ಹೊಂದಿತ್ತು. ಆದರೆ ಆಯಾ ರಾಜ್ಯಗಳ ಪ್ರಾದೇಶಿಕ ಪಕ್ಷಗಳ ಪ್ರಬಲ ಪೈಪೋಟಿ ಬಿಜೆಪಿಯನ್ನು ಶೋಚನೀಯ ಸೋಲಿಗೆ ತಳ್ಳಿದೆ.

vlcsnap 2018 12 12 07h28m15s220 e1544580101205

ಬಿಜೆಪಿ ಅತಿಯಾದ ಆತ್ಮವಿಶ್ವಾಸವೂ ಈ ಸೋಲಿಗೆ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ. ನರೇಂದ್ರ ಮೋದಿ, ಅಮಿತ್ ಶಾ ಹಾಗೂ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಬೇರೆ ರಾಜ್ಯಗಳ ಮತದಾರರನ್ನು ಬಿಜೆಪಿಯತ್ತ ಸೆಳೆಯುವುದು ಫಲ ಕೊಟ್ಟಿಲ್ಲ.

ಬಿಜೆಪಿ ಸೋಲಿಗೆ ಕಾರಣ..?
* ರಫೇಲ್ ಡೀಲ್‍ನ ಕಾಂಗ್ರೆಸ್ ಆರೋಪಕ್ಕೆ ಸರಿಯಾದ ಉತ್ತರ ಕೊಡದಿರುವುದು
* ರಾಹುಲ್ ಆಕ್ರಮಣಕಾರಿ ಪ್ರಚಾರ ಶೈಲಿ ಎದುರಿಸಲು ಮೋದಿ ವಿಫಲ
* ಕಾಂಗ್ರೆಸ್‍ನ ಮೃದು ಹಿಂದುತ್ವಕ್ಕೆ ಪೆಟ್ಟು ಕೊಡಲು ಹೋಗಿ ಕೈ ಸುಟ್ಟುಕೊಂಡ್ರಾ..?
* ನೋಟ್ ಬ್ಯಾನ್ ವೈಫಲ್ಯ, ನಿರಂತರ ಏರಿಕೆಯಾದ ಪೆಟ್ರೋಲ್ ಡೀಸೆಲ್ ದರ
* ಸಿಬಿಐ-ಆರ್‍ಬಿಐ ವಿವಾದ, ರೂಪಾಯಿ ಮೌಲ್ಯದಲ್ಲಾದ ನಿರಂತರ ಇಳಿಕೆ
* ರಾಹುಲ್ ಗಾಂಧಿ ಅವರನ್ನ ನಿರ್ಲಕ್ಷ್ಯ ಮಾಡಿದ್ದು

vlcsnap 2018 12 12 07h27m40s132 e1544580131651

ರಫೇಲ್ ಡೀಲ್‍ನ ಕಾಂಗ್ರೆಸ್ ಆರೋಪಕ್ಕೆ ಸರಿಯಾದ ಉತ್ತರ ಕೊಡದಿರುವುದು. ರಾಹುಲ್ ಗಾಂಧಿ ಆಕ್ರಮಣಾಕಾರಿ ಪ್ರಚಾರ ಶೈಲಿಯನ್ನ ಎದುರಿಸಲು ಮೋದಿ ವಿಫಲರಾದ್ರಾ ಎನ್ನುವ ಚರ್ಚೆಗಳು ಸೃಷ್ಟಿಯಾಗಿವೆ. ಕಾಂಗ್ರೆಸ್‍ನ ಮೃದು ಹಿಂದುತ್ವಕ್ಕೆ ಪೆಟ್ಟು ಕೊಡಲು ಹೋಗಿ ಈ ರೀತಿ ಆಯ್ತಾ ಅನ್ನೋ ಅನುಮಾನಗಳು ಹುಟ್ಟಿಕೊಂಡಿವೆ. ಅತಿಯಾದ ಆತ್ಮವಿಶ್ವಾಸ, ನೋಟ್‍ಬ್ಯಾನ್ ವೈಫಲ್ಯ, ನಿರಂತರ ಏರಿಕೆಯಾದ ಪೆಟ್ರೋಲ್ ಡೀಸೆಲ್ ದರ, ಸಿಬಿಐ – ಆರ್ ಬಿಐ ವಿವಾದ, ರೂಪಾಯಿ ಮೌಲ್ಯದಲ್ಲಿ ಆದ ನಿರಂತರ ಇಳಿಕೆ ಇವೆಲ್ಲ ಕೇಂದ್ರ ಸರ್ಕಾರಕ್ಕೆ ಹೊಡೆತ ನೀಡಿರುವ ಸಾಧ್ಯತೆಗಳಿವೆ ಎಂದು ವಿಶ್ಲೇಷಿಸಲಾಗುತ್ತಿದೆ. ರಾಹುಲ್ ಗಾಂಧಿ ಅವರನ್ನ ಅಂಡರ್ ಎಸ್ಟಿಮೇಟ್ ಮಾಡಿದ್ದು, ಅವರ ಸವಾಲುಗಳಿಗೆ ಸರಿಯಾದ ಪ್ರತಿ ಸವಾಲು ಕೊಡದೇ ಇದ್ದದ್ದು, ದೇಶದಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆಗಳು ಬಿಜೆಪಿಗೆ ಮುಳುವಾದವು ಎಂಬ ಮಾತುಗಳು ಕೇಳಿ ಬರುತ್ತಿವೆ.

ಒಟ್ಟಿನಲ್ಲಿ ಲೋಕಸಭಾ ಚುನಾವಣೆಯ ಸಮಿಫೈನಲ್ ಎಂತಲೇ ಬಿಂಬಿತವಾಗಿದ್ದ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಧಾನಿ ಮೋದಿಗೆ ದೊಡ್ಡ ಆಘಾತ ನೀಡಿದೆ. ಯಾರೊಬ್ಬರನ್ನ ಕಡೆಗಣಿಸಬೇಕಾದರೆ ಯೋಚಿಸಬೇಕಾದ ಅನಿವಾರ್ಯತೆಯನ್ನ ಪಂಚ ರಾಜ್ಯಗಳ ಚುನಾವಣೆ ಕಲಿಸಿದೆ. ದೇಶಾದ್ಯಂತ ಹೆಚ್ಚುತ್ತಿರುವ ಜನರ ಅಸಹನೆಯನ್ನ ಮೋದಿ ಪರಿಗಣಿಸಬೇಕಿದೆ. ಚಾಣಕ್ಯನ ನೀತಿ ಕೈಕೊಡುತ್ತಿರುವುದು ಮೋದಿ ಅವರನ್ನ ಚಿಂತೆಗೆ ಹಚ್ಚಿದೆ.

vlcsnap 2018 12 12 07h28m10s171 e1544580178178

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:assembly election resultbjpChattisgarhmadhyapradeshamodiPublic TVRahul Gandhirajasthanಛತ್ತೀಸ್‍ಗಡಪಬ್ಲಿಕ್ ಟಿವಿಬಿಜೆಪಿಮಧ್ಯಪ್ರದೇಶಮೋದಿರಾಜಸ್ಥಾನರಾಹುಲ್ ಗಾಂಧಿವಿಧಾನಸಭಾ ಚುನಾವಣಾ ಫಲಿತಾಂಶ
Share This Article
Facebook Whatsapp Whatsapp Telegram

Cinema news

KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood

You Might Also Like

Parappana agrahara 1
Bengaluru City

ಜೈಲಿನಲ್ಲಿ ಮಹಿಳಾ ಖೈದಿಗಳ ಡ್ರಗ್ಸ್ ಟೆಸ್ಟ್ ಪಾಸಿಟಿವ್ ರಿಪೋರ್ಟ್ – ಅಧಿಕಾರಿಗಳೇ ಶಾಕ್

Public TV
By Public TV
7 minutes ago
Bagalkote by election CM Siddaramaiah meeting with HY Meti Family
Bagalkot

ಉಪಚುನಾವಣೆ| ಸಿಎಂ ಕಚೇರಿಯಲ್ಲಿ ಸಂಧಾನ ಸಭೆಗೆ ವ್ಯಾಪಕ ಟೀಕೆ

Public TV
By Public TV
18 minutes ago
Kalaburagi Dharwad Benches of the High Court
Districts

ಮಲ್ಲಿಕಾರ್ಜುನ ಮುತ್ಯಾ ವಿರುದ್ಧದ ಪೋಕ್ಸೋ ಕೇಸ್ – ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ

Public TV
By Public TV
23 minutes ago
HD Devegowda Mallikarjun Kharge
Bengaluru City

ಕಾಂಗ್ರೆಸ್‌ ಜೊತೆ ಬಲವಂತದ ಮದುವೆಯಲ್ಲಿದ್ದೆ, ನಮ್ಮನ್ನು ಬಿಟ್ಟು ಹೋಗಿದ್ದಕ್ಕೆ ವಿಚ್ಛೇದನ ನೀಡಿದ್ದೇನೆ: ಹೆಚ್‌ಡಿಡಿ ತಿರುಗೇಟು

Public TV
By Public TV
1 hour ago
ಸಾಂದರ್ಭಿಕ ಚಿತ್ರ
Bengaluru City

ಯುಗಾದಿಗೆ `ಗೃಹಲಕ್ಷ್ಮಿ’ಯರಿಗೆ ಗುಡ್‌ನ್ಯೂಸ್ – 27ನೇ ಕಂತಿನ ಹಣ ಬಿಡುಗಡೆ

Public TV
By Public TV
1 hour ago
Hailstones thunder and lightning heavy rain in Shivamogga 1
Districts

ಆಲಿಕಲ್ಲಿನ ರಾಶಿ, ಗುಡುಗು, ಸಿಡಿಲಿನ ನರ್ತನ – ಮಳೆ ಅಬ್ಬರಕ್ಕೆ ನಲುಗಿದ ಶಿವಮೊಗ್ಗ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?