Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Election News

ಮಾ.22ರ ಬಳಿಕ ಬಿಜೆಪಿ ಅಂತಿಮ ಪಟ್ಟಿ; 5 ಕ್ಷೇತ್ರದಲ್ಲಿ ಎರಡು ಕಗ್ಗಂಟು – ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ಡೌಟು

Public TV
Last updated: March 20, 2024 4:18 pm
Public TV
Share
3 Min Read
Anantkumar Hegde
SHARE

ನವದೆಹಲಿ: ಬಿಜೆಪಿ-ಜೆಡಿಎಸ್ ಮೈತ್ರಿಯ ಭಾಗವಾಗಿ ಮಂಡ್ಯ, ಹಾಸನದ ಜೊತೆಗೆ ಕೋಲಾರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲು ಬಿಜೆಪಿ (BJP) ಹೈಕಮಾಂಡ್ ನಿರ್ಧರಿಸಿದೆ. ಮಂಗಳವಾರ ತಡರಾತ್ರಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ರಾಜ್ಯ ನಾಯಕರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ತಿಳಿಸಿದ್ದಾರೆ.

ಬಾಕಿ ಉಳಿದ ಐದು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಂಬಂಧ ಹೈಕಮಾಂಡ್ ನಾಯಕರು ರಾಜ್ಯ ನಾಯಕರ ಜೊತೆಗೆ ಸಭೆ ನಡೆಸಿದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ರಾಜ್ಯಧ್ಯಕ್ಷ ಬಿ.ವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್, ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಭಾಗಿಯಾಗಿದ್ದರು. ಇದನ್ನೂ ಓದಿ: ಟೈಂ ಪಾಸ್ ಮಾಡಲು ಕಷ್ಟ, ಅದಕ್ಕೆ ಲೋಕಸಭೆಗೆ ಸ್ಪರ್ಧೆ – ಡಾ.ಕೆ.ಸುಧಾಕರ್ ಸ್ಪರ್ಧೆ ಬಗ್ಗೆ ಎಸ್‌.ಅರ್.ವಿಶ್ವನಾಥ್ ಹೇಳಿದ್ದೇನು?

ಉತ್ತರ ಕನ್ನಡ, ಬೆಳಗಾವಿ, ಚಿತ್ರದುರ್ಗ, ಚಿಕ್ಕಬಳ್ಳಾಪುರ ಮತ್ತು ರಾಯಚೂರು ಕ್ಷೇತ್ರಗಳಿಗೆ ಟಿಕೆಟ್ ನೀಡುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಬೆಳಗಾವಿ ಕ್ಷೇತ್ರದಿಂದ ಜಗದೀಶ್ ಶೆಟ್ಟರ್‌ಗೆ (Jagdish Shettar) ಟಿಕೆಟ್ ನೀಡುವ ಬಗ್ಗೆ ಅಂತಿಮ ಚರ್ಚೆಯಾಗಿದೆ. ಚಿಕ್ಕಬಳ್ಳಾಪುರಕ್ಕೆ ಅಲೋಕ್ ವಿಶ್ವನಾಥ್ ಮತ್ತು ಡಾ.ಕೆ ಸುಧಾಕರ್ ಬಗ್ಗೆ ಚರ್ಚೆಯಾಗಿದೆ. ಉತ್ತರ ಕನ್ನಡಕ್ಕೆ ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆಯನ್ನು (Anantkumar Hegde) ಬದಲಿಸಿ ವಿಶ್ವೇಶ್ವರ ಹೆಗಡೆ ಕಾಗೇರಿ, ಚಕ್ರವರ್ತಿ ಸೂಲಿಬೆಲೆ ಸೇರಿ ಇತರೆ ಹೆಸರುಗಳ ಬಗ್ಗೆ ಚರ್ಚೆಯಾಗಿದೆ. ಇದನ್ನೂ ಓದಿ: ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗಕ್ಕೆ ಡಿಎಂಕೆ ದೂರು

bjp flag

ಚಿತ್ರದುರ್ಗ ಮತ್ತು ರಾಯಚೂರು ಮೀಸಲು ಕ್ಷೇತ್ರಗಳಿಗೆ ಅಭ್ಯರ್ಥಿ ಆಯ್ಕೆ ಮತ್ತೆ ಮುಂದೂಡಿಕೆಯಾಗಿದೆ. ಚಿತ್ರದುರ್ಗದಲ್ಲಿ ಸಚಿವ ನಾರಯಣಸ್ವಾಮಿ ಸ್ಪರ್ಧೆಗೆ ನಿರಾಕರಿಸಿದರು. ಈಗ ಅವರು ಸ್ಪರ್ಧೆಗೆ ಬಯಸಿದ್ದು, ಸ್ಥಳೀಯ ಮಟ್ಟದಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ಇನ್ನು ರಾಯಚೂರಿನಲ್ಲೂ ಬಿ.ವಿ ನಾಯಕ್ ಮತ್ತು ಹಾಲಿ ಸಂಸದ ರಾಜ ಅಮರೇಷ್ ನಾಯಕ್ ನಡುವೆ ಪೈಪೋಟಿ ಏರ್ಪಟ್ಟಿದೆ. ಈ ಹಿನ್ನೆಲೆ ಮತ್ತೊಮ್ಮೆ ಎರಡು ಕ್ಷೇತ್ರಗಳಿಂದ ಸರ್ವೆ ವರದಿ ತರಿಸಿಕೊಳ್ಳಲು ನಿರ್ಧರಿಸಿದೆ. ಮಾರ್ಚ್ 22ರಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಅಂತಿಮ ತಿರ್ಮಾನವಾಗಲಿದೆ. ಇದನ್ನೂ ಓದಿ: ಯುರೋಪಿನಲ್ಲಿ ಐವರ ಸಾವಿಗೆ ಕಾರಣವಾಯ್ತು ಗಿಳಿ ಜ್ವರ- ಏನಿದು ಫೀವರ್‌, ಲಕ್ಷಣಗಳೇನು..?

ಸಭೆ ಬಳಿಕ ಮಾತನಾಡಿದ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra), ರಾಷ್ಟ್ರೀಯ ಅಧ್ಯಕ್ಷರ ನೇತೃತ್ವದಲ್ಲಿ ನಿನ್ನೆ ಸಭೆ ನಡೆದಿದೆ. 30 ನಿಮಿಷಗಳ ಕಾಲ ಬಾಕಿ ಉಳಿದಿರುವ ಕ್ಷೇತ್ರದ ಅಭ್ಯರ್ಥಿಗಳ ಬಗ್ಗೆ ಚರ್ಚೆ ಆಗಿದೆ. ಎಲ್ಲವೂ ಕೂಡ ಒಂದು ಹಂತಕ್ಕೆ ಬಂದಿದೆ. ಅಂತಿಮವಾಗಿ ಮಾ.22ಕ್ಕೆ ಮೋದಿ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಆ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಅಂತಿಮವಾಗಿ ಘೋಷಣೆಯಾಗಲಿದೆ ಎಂದರು. ಇದನ್ನೂ ಓದಿ: ಸಂಜೆ ನೆರೆ ಮನೆಗೆ ನುಗ್ಗಿ ಇಬ್ಬರು ಮಕ್ಕಳ ಹತ್ಯೆ – ರಾತ್ರಿ ಯುಪಿ ಪೊಲೀಸರ ಎನ್‌ಕೌಂಟರ್‌ಗೆ ಪಾತಕಿ ಬಲಿ

ಬಿಜೆಪಿ ಆಂತರಿಕ ಅಸಮಾಧಾನದ ಬಗ್ಗೆ ಮಾತನಾಡಿದ ಅವರು, ಯಾವುದೇ ಕ್ಷೇತ್ರದಲ್ಲಿ ಒಮ್ಮತದ ನಿರ್ಧಾರ ಆಗಲ್ಲ. ಆಕಾಂಕ್ಷಿಗಳ ಪಟ್ಟಿ ಬಹಳ ದೊಡ್ಡದಿದೆ. ನಿನ್ನೆ ಸಭೆಯಲ್ಲಿ ಆಗಿರುವ ಎಲ್ಲಾ ವಿಚಾರ ಬಹಿರಂಗಪಡಿಸೋಕೆ ಆಗಲ್ಲ. ಏನೇ ಚರ್ಚೆ ಆದರೂ ಸಹ ಪ್ರಧಾನಿ ನೇತೃತ್ವದ ಸಭೆಯಲ್ಲಿ ಎಲ್ಲವೂ ಫೈನಲ್ ಆಗುತ್ತದೆ. ಈಗಾಗಲೇ ಘೋಷಣೆ ಆಗಿರುವ ಅಭ್ಯರ್ಥಿಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಈಶ್ವರಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲ್ಲ. ಒಂದು ಅವಧಿಗೆ ನನ್ನನ್ನು ನೇಮಕ ಮಾಡಿದ್ದಾರೆ ಎಂದು ಭಾವಿಸುತ್ತೇನೆ. ಮಂಗಳವಾರ ಬಂಡಾಯದ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಏ.19, 26ರ ಚುನಾವಣಾ ದಿನಾಂಕ ಬದಲಾಯಿಸುವಂತೆ ಆಯೋಗಕ್ಕೆ ಮುಸ್ಲಿಂ ಸಂಘಟನೆಗಳಿಂದ ಮನವಿ

TAGGED:Amit ShahAnantkumar HegdebjpCandidate ListLok Sabha electionNew DelhiUttara Kannada
Share This Article
Facebook Whatsapp Whatsapp Telegram

You Might Also Like

ACP Chandan Aishwarya Gowda 2
Bengaluru City

ಡಿಕೆ ಬ್ರದರ್ಸ್ ಹೆಸ್ರಲ್ಲಿ ವಂಚನೆ ಕೇಸ್; ಸಿನಿಮಾ ನಿರ್ಮಾಣಕ್ಕೆ ಪ್ಲ್ಯಾನ್ ಮಾಡಿದ್ದ `ಬಂಗಾರಿ’ ಗೌಡ!

Public TV
By Public TV
4 minutes ago
Aunty Love
Crime

ಕಳ್ಳ ಸಂಬಂಧ ಆರೋಪ – ಯುವಕನನ್ನ ಥಳಿಸಿ ಚಿಕ್ಕಮ್ಮನೊಂದಿಗೆ ಮದುವೆ ಮಾಡಿಸಿದ ಗ್ಯಾಂಗ್‌

Public TV
By Public TV
14 minutes ago
Srinagar Kitty
Cinema

ವೇಷತೊಟ್ಟು ಜೋಗತಿಯಾದ ನಟ ಶ್ರೀನಗರ ಕಿಟ್ಟಿ

Public TV
By Public TV
1 hour ago
Nandagokula Serial
Cinema

ನಂದಗೋಕುಲ ಧಾರಾವಾಹಿಯಲ್ಲಿ ಹೈಡ್ರಾಮಾ..!

Public TV
By Public TV
1 hour ago
Bengaluru
Bengaluru City

ರೇಣುಕಾಸ್ವಾಮಿ ಮಾದರಿಯಲ್ಲಿ ಭಯಾನಕ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್‌ – ಪ್ರಮುಖ ಆರೋಪಿ ಅರೆಸ್ಟ್‌

Public TV
By Public TV
1 hour ago
Kolar Sathish gowda wife
Districts

ಎನ್‌ಐಎ ನೊಟೀಸ್ ನೀಡಿರುವುದು ನಿಜ, ವಿಚಾರಣೆಗೆ ಹಾಜರಾಗುತ್ತೇವೆ: ಸತೀಶ್ ಗೌಡ ಪತ್ನಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?