Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 110 ಹಳ್ಳಿಗಳಿಗೆ ನೀರು ಕೊಡುವ ಯೋಜನೆಗೆ 80% ರಷ್ಟು ಕೆಲಸ ಮಾಡಿದ್ದು ಬಿಜೆಪಿ: ಆರ್.ಅಶೋಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 110 ಹಳ್ಳಿಗಳಿಗೆ ನೀರು ಕೊಡುವ ಯೋಜನೆಗೆ 80% ರಷ್ಟು ಕೆಲಸ ಮಾಡಿದ್ದು ಬಿಜೆಪಿ: ಆರ್.ಅಶೋಕ್

Bengaluru City

110 ಹಳ್ಳಿಗಳಿಗೆ ನೀರು ಕೊಡುವ ಯೋಜನೆಗೆ 80% ರಷ್ಟು ಕೆಲಸ ಮಾಡಿದ್ದು ಬಿಜೆಪಿ: ಆರ್.ಅಶೋಕ್

Public TV
Last updated: October 16, 2024 5:24 pm
Public TV
Share
2 Min Read
R Ashok
SHARE

– ಡಿಕೆಶಿ ತಾವು ಮಾಡಿದ್ದು ಅಂತ ಜಂಬ ಕೊಚ್ಚಿಕೊಳ್ತಿದ್ದಾರೆ

ಬೆಂಗಳೂರು: ಬೆಂಗಳೂರಿನ 110 ಹಳ್ಳಿಗಳಿಗೆ ನೀರು ಕೊಡುವ ಯೋಜನೆಯ ಕ್ರೆಡಿಟ್ ಬಿಜೆಪಿಗೆ (BJP) ಸಲ್ಲಬೇಕು ಎಂದು ರಾಜ್ಯ ವಿಪಕ್ಷ ನಾಯಕ ಆರ್.ಅಶೋಕ್ (R Ashok) ತಿಳಿಸಿದರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಟಿ.ಕೆ.ಹಳ್ಳಿಯಲ್ಲಿ ಇವತ್ತು ಮುಖ್ಯಮಂತ್ರಿ-ಉಪಮುಖ್ಯಮಂತ್ರಿಗಳು ಬೆಂಗಳೂರಿನ 110 ಹಳ್ಳಿಗಳಿಗೆ ನೀರು ಕೊಡುವ ಯೋಜನೆಯನ್ನು ಉದ್ಘಾಟಿಸಿದ್ದಾರೆ. ತಾವೇ ಮುತುವರ್ಜಿ ವಹಿಸಿ ಹಣ ಬಿಡುಗಡೆ ಮಾಡಿ, ಕ್ರಿಯಾ ಯೋಜನೆ ಮಾಡಿ ಕೆಲಸ ಅನುಷ್ಠಾನಕ್ಕೆ ತಂದಿರುವುದಾಗಿ ಜಂಬ ಕೊಚ್ಚಿಕೊಂಡಿದ್ದಾರೆ ಎಂದು ಆಕ್ಷೇಪಿಸಿದರು. ಇದನ್ನೂ ಓದಿ: ಅಮೆರಿಕದಲ್ಲಿ ಕಾರು ಅಪಘಾತ – ಆಂಧ್ರಪ್ರದೇಶದ ಮೂವರು ಸೇರಿ, ಐವರು ಭಾರತೀಯರು ಸಾವು

DK Shivakumar In Mandya

ಅವರೇನೇ ಹೇಳಿದರೂ ಸರ್ಕಾರಿ ದಾಖಲೆಗಳು ಮಾತನಾಡುತ್ತವೆ. 2018 ಜನವರಿ 24ರಂದು ಬಿಜೆಪಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಅಧಿಕಾರದಲ್ಲಿದ್ದಾಗ 5,500 ಕೋಟಿ ಮೊತ್ತದ ಸಾಲದ ಒಪ್ಪಂದಕ್ಕೆ ಸಹಿ ಹಾಕಿದ್ದರು. 90 ತಿಂಗಳೊಳಗೆ ಯೋಜನೆ ಪೂರ್ಣಗೊಳಿಸಲು ಷರತ್ತು ವಿಧಿಸಲಾಗಿತ್ತು. ಓರಿಯೆಂಟಲ್ ಕನ್ಸಲ್ಟೇಶನ್ ಮೊದಲಾದ ಕಂಪನಿಗಳಿಗೆ ಯೋಜನೆ ನಿರ್ವಹಿಸಲು ನೀಡಲಾಗಿತ್ತು ಎಂದರು. ಇದನ್ನೂ ಓದಿ: ಕೇಂದ್ರ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ – ಶೇ.3 ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ ಕ್ಯಾಬಿನೆಟ್‌ ಅನುಮೋದನೆ

ಯೋಜನೆ ಪ್ರಾರಂಭವಾದ ದಿನ 2019ರಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿತ್ತು. ಗುತ್ತಿಗೆ ಪ್ಯಾಕೇಜ್ ಮಾಡಿದ್ದು, ಪ್ಯಾಕೇಜ್ 2ರಲ್ಲಿ ನಿತ್ಯ 77.5 ಕೋಟಿ ಲೀಟರ್ ನೀರು ಶುದ್ಧೀಕರಣ ಘಟಕ, ಪ್ಯಾಕೇಜ್ 3ರಲ್ಲಿ ಟಿ.ಕೆ ಹಳ್ಳಿ ಪಂಪಿಂಗ್ ಸ್ಟೇಶನ್, ಪ್ಯಾಕೇಜ್ 4ರಲ್ಲಿ ಹಾರೋಹಳ್ಳಿ ಮತ್ತು ತಾತಗುಣಿಯಲ್ಲಿ 2 ಪಂಪಿಂಗ್ ಸ್ಟೇಶನ್ ನಿರ್ಮಾಣಕ್ಕೆ, ಟಿಕೆಹಳ್ಳಿ, ಹಾರೋಹಳ್ಳಿವರೆಗೂ ಪೈಪ್‌ಲೈನ್, ಹಾರೋಹಳ್ಳಿಯಿಂದ ವಾಜರಹಳ್ಳಿವರೆಗೂ ಪೈಪ್‌ಲೈನ್, ನಗರದ ಪಶ್ಚಿಮ ಭಾಗದಲ್ಲಿ ಪೈಪ್‌ಲೈನ್, ನೆಲಮಟ್ಟದ ಜಲಾಗಾರ, 13ನೆಯದು ಪಶ್ಚಿಮ ಭಾಗದಲ್ಲಿ ನೆಲಮಟ್ಟದ ಜಲಾಗಾರ ನಿರ್ಮಿಸಲು ಉದ್ದೇಶಿಸಲಾಗಿತ್ತು. ಇಷ್ಟಕ್ಕೂ ಹಣ ಪಡೆದು, ಸಾಲ ಪಡೆದು ಜಪಾನ್‌ನ ಕಂಪನಿ, ಓರಿಯೆಂಟಲ್ ಮೊದಲಾದ ಕಂಪನಿಗಳ ಜೊತೆ ಒಪ್ಪಂದ ಮಾಡಿಕೊಂಡು ಯೋಜನೆಗಳನ್ನು ಕೂಡ ಪ್ರಾರಂಭ ಮಾಡಿದ್ದೆವು ಎಂದು ತಿಳಿಸಿದರು. ಇದನ್ನೂ ಓದಿ: ಶಾಸಕಾಂಗ ಪಕ್ಷದ ನಾಯಕನಾಗಿ ಸೈನಿ ಅವಿರೋಧ ಆಯ್ಕೆ – ಎರಡನೇ ಬಾರಿಗೆ ಸಿಎಂ ಆಗಿ ಗುರುವಾರ ಪ್ರಮಾಣವಚನ

ಬಳಿಕ ಬಸವರಾಜ ಬೊಮ್ಮಾಯಿಯವರ ಸರ್ಕಾರ ಬಂತು. ನಾನು ಅದರಲ್ಲಿ ಸಚಿವನಾಗಿದ್ದೆ. ಶೇ 80ರಷ್ಟು ಕೆಲಸವನ್ನು ನಾವೇ ಮಾಡಿದ್ದು. ಇವರು ಬಂದು ಒಂದು ವರ್ಷ ಆಗಿದೆ. ಅಲ್ಲಿ ನೆರೆ ಬಂದಾಗ ನಾನು, ಬೊಮ್ಮಾಯಿಯವರು ಭೇಟಿ ಕೊಟ್ಟಿದ್ದೆವು. ಪ್ಯಾಕೇಜ್‌ಗೆ ಡಿಪಿಆರ್ ಮಾಡಿದ್ದು ಯಾರು? ಹಣ ಹೊಂದಿಸಿ ಕೊಟ್ಟದ್ದು ಯಾರು? ಯಾರ ಸರ್ಕಾರದಲ್ಲಿ ಕೆಲಸ ಆರಂಭವಾಯಿತು ಎಂಬುದನ್ನೆಲ್ಲ ಮುಚ್ಚಿಟ್ಟಿದ್ದಾರೆ. ದೇವರನ್ನು ಕೂರಿಸಿದ್ದು ನಾವು. ಹೋಮ ಹವನ ಮಾಡಿದ್ದು ನಾವು. ಮಂಗಳಾರತಿ ಟೈಮಿನಲ್ಲಿ ಇವರು ಬಂದು ನಮ್ಮದು ಎಂದಿದ್ದಾರೆ ಎಂದು ಟೀಕಿಸಿದರು. ಇದನ್ನೂ ಓದಿ: ಚಿತ್ರದುರ್ಗ| ಬೀದಿನಾಯಿಗಳ ದಾಳಿಗೆ 11 ವರ್ಷದ ಬಾಲಕ ಬಲಿ

110 ಹಳ್ಳಿಗಳನ್ನು ಪಾಲಿಕೆಗೆ ನಾವೇ ಸೇರಿಸಿದ್ದು, ಕಾಂಗ್ರೆಸ್ಸಿಗರು ಸೇರಿಸಿಲ್ಲ. ನಾನು ಆಗ ಆರೋಗ್ಯ ಸಚಿವ ಮತ್ತು ಬೆಂಗಳೂರು ಇನ್ ಚಾರ್ಜ್ ಸಚಿವನಾಗಿದ್ದೆ. ಕನ್ನಡ ಉಳಿಯಲು ಬೆಂಗಳೂರಿನಲ್ಲಿ ಕನ್ನಡಿಗರ ಸಂಖ್ಯೆ ಹೆಚ್ಚಾಗಬೇಕೆಂಬ ಉದ್ದೇಶ ಅದರ ಹಿಂದಿತ್ತು ಎಂದು ನುಡಿದರು. ಇದನ್ನೂ ಓದಿ:  ಸೈಟ್ ಸಿದ್ದಪ್ಪನವರೇ, ಮೂಡಾಮರಿ ಈಗ ರಾಜೀನಾಮೆ ಕೊಟ್ಟಿದ್ದು ಯಾಕೆ? – ಜೆಡಿಎಸ್ ಟೀಕೆ

TAGGED:bengalurubjpCauvery Water ProjectcongressDK Shivakumarಆರ್ ಅಶೋಕ್ಕಾಂಗ್ರೆಸ್ಕಾವೇರಿ ನೀರು ಯೋಜನೆಡಿಕೆ ಶಿವಕುಮಾರ್ಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Nitish Kumar Bihar
Latest

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ – ನಾಳೆ ಹೊಸ ಸಿಎಂ ಪ್ರಮಾಣವಚನ ಸಾಧ್ಯತೆ

Public TV
By Public TV
3 minutes ago
Vijayanagara Rain Papaya Crop Destroyed
Bellary

ವಿಜಯನಗರ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ – ಪಪ್ಪಾಯ ಬೆಳೆ ಸಂಪೂರ್ಣ ನಾಶ

Public TV
By Public TV
7 minutes ago
Sanju Samson 1
Cricket

ಒಡೆದ ಡಿಸ್‌ಪ್ಲೇನಲ್ಲೇ ಸೆಲ್ಫಿ ಕ್ಲಿಕ್ಕಿಸಿದ ಅಭಿಮಾನಿ – 40,000 ಮೌಲ್ಯದ ಫೋನನ್ನೇ ಗಿಫ್ಟ್‌ ಕೊಟ್ಟ ಸಂಜು

Public TV
By Public TV
13 minutes ago
G Parameshwar
Districts

ಸಂಪುಟ ಪುನಾರಚನೆ ಸುಳಿವು ಇದೆ: ಪರಮೇಶ್ವರ್

Public TV
By Public TV
23 minutes ago
DK Shivakumar 5
Bengaluru City

ಪಕ್ಷಕ್ಕೆ ಶಿಸ್ತು ಬಹಳ ಮುಖ್ಯ, ಆದರೆ ಜಮೀರ್ ಅದನ್ನು ಪಾಲಿಸಿಲ್ಲ: ಡಿಕೆಶಿ

Public TV
By Public TV
31 minutes ago
congress rss workers
Latest

ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್‌ ಪದಾಧಿಕಾರಿ ಹುದ್ದೆಗೆ ಆರ್‌ಎಸ್‌ಎಸ್‌ ಕಾರ್ಯಕರ್ತರ ಆಯ್ಕೆ

Public TV
By Public TV
34 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?