ಬೆಂಗಳೂರು: ಆಪರೇಷನ್ ಕಮಲದ ಕಂಪ್ಲೀಟ್ ಆಡಿಯೋ ಮಾಧ್ಯಮದಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ಮೇಲೆ ಸಿಟ್ಟಾಗಿದ್ದಾರೆ.
ಹುಡುಗರನ್ನು ಕಟ್ಟಿಕೊಂಡು ಹುಡುಗಾಟಿಕೆ ಆಡಿ ಬಿಟ್ರಿ ನೀವು. ಲೋಕಸಭಾ ಚುನಾವಣೆಯ ಹೊತ್ತಲ್ಲಿಯೇ ತಲೆತಗ್ಗಿಸುವಂತಾಯ್ತು. ಹೀಗಾಗಿ ಡ್ಯಾಮೇಜ್ ಕಂಟ್ರೋಲ್ ಗೆ ಪರ್ಯಾಯ ಮಾರ್ಗ ಹುಡುಕಿ ಎಂದು ಬಿಎಸ್ವೈ ವಿರುದ್ಧ ಶಾ ಕಿಡಿಕಾರಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅಲ್ಲದೇ ಗುರುವಾರ ಬಿಎಸ್ವೈ ಜೊತೆ ಅಮಿತ್ ಶಾ ಮಾತುಕತೆ ನಡೆಸಲಿದ್ದಾರೆ. ರಾಯಚೂರು, ಹೊಸಪೇಟೆ ಶಕ್ತಿಕೇಂದ್ರ ಸಮಾವೇಶದಲ್ಲಿ ಬಿಎಸ್ವೈ ಭಾಗವಹಿಸಲಿದ್ದಾರೆ. ಈ ವೇಳೆ ಆಡಿಯೋ ಪ್ರಕರಣದ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv