ಉಡುಪಿ: ಬಿಜೆಪಿಯವರು (BJP) ಧರ್ಮದ ಕವಚದ ಒಳಗೆ ಅನ್ಯಾಯದ ಕೆಲಸ ಮಾಡುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಕಿಡಿಕಾರಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿ, ಕೋಮು ಪ್ರಚೋದನೆ ಮಾಡಿ ಮತ ಗಳಿಸುವುದೇ ಇವರ ಕಾಯಕ. ಜಾತಿ ಧರ್ಮ ಭಾಷೆ ಆಧಾರದಲ್ಲಿ ಸಮಾಜವನ್ನು ಕೆಡಿಸಿಬಿಟ್ಟಿದ್ದಾರೆ. ಅನೇಕ ಜನ ಜೈ ಶ್ರೀರಾಮ್ ಹೇಳಬಹುದು. ಜನರು ಎಷ್ಟರಮಟ್ಟಿಗೆ ಅದನ್ನು ಜೀವನದಲ್ಲಿ ಅಳವಡಿಸಿದ್ದಾರೆ ಎಂದು ನೋಡಬೇಕು. ಹೇಳೋದು ಸುಲಭ ಎಷ್ಟರ ಮಟ್ಟಿಗೆ ನೈತಿಕ ಜೀವನ ನಡೆಸುತ್ತಿದ್ದಾರೆ? ಎಂದು ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: ದೇಶಕ್ಕೆ ಒಂದೇ ಸಂವಿಧಾನ ಬೇಕೆಂಬ ಕನಸು ಸಾಕಾರಗೊಂಡಿದೆ – ಮೋದಿ ಬಣ್ಣನೆ
ಈಶ್ವರಪ್ಪ ಬಗ್ಗೆ ಮಾತನಾಡಿ, ಈಶ್ವರಪ್ಪ (Eshwarappa)ಸಮಾಜದ ವ್ಯವಸ್ಥೆಗೆ ಧಕ್ಕೆ. ಸದಾ ಕೊಲ್ಲುವ, ಕೊಚ್ಚುವ, ಮುಗಿಸುವ ಮಾತುಗಳನ್ನಾಡುತ್ತಾರೆ. ಬಿಜೆಪಿಯ ಪ್ರಮುಖ ನಾಯಕನಿಗೆ ಇದು ಶೋಭೆಯೇ? ಬಾಯಿಗೆ ಬಂದಂತೆ ಮಾತನಾಡುವ ಈಶ್ವರಪ್ಪ ಬಿಜೆಪಿಯ ನಾಯಕನೇ? ಸಮಾಜವನ್ನು ಸದಾ ಆತಂಕದಲ್ಲಿ ಇಡುವುದು ಈಶ್ವರಪ್ಪನ ಕೆಲಸ ಮತ್ತು ಅವರಿಗೆ ಅದೇ ಲಾಭ ಎಂದು ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ರಾಮಮಂದಿರ ಮುಂದಿನ ತಲೆಮಾರಿಗೆ ಹೆಮ್ಮೆಯ ಸಂಕೇತ: ಮೋದಿ
ಖರ್ಗೆ ಹೊಟ್ಟೆಯಲ್ಲಿ ಹುಳಹುಟ್ಟಿದೆ ಎಂದು ಈಶ್ವರಪ್ಪ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಈ ತರ ಹೇಳಿಕೆ ನೀಡುವ ಅನೇಕ ನಾಯಕರು ಬಿಜೆಪಿಯಲ್ಲಿದ್ದಾರೆ. ಸಿಟಿ ರವಿ, ಶೋಭಾ, ಸುನಿಲ್, ಸಿಂಹ, ಅನಂತಕುಮಾರ್ ಹೀಗೆ ದೊಡ್ಡ ಪಟ್ಟಿ ಇದೆ. ಪ್ರಚೋದನಕಾರಿ ವೈಷಮ್ಯ ಸೃಷ್ಟಿ ಮಾಡುವುದು ಮತ್ತು ಜನರ ನಡುವೆ ಘರ್ಷಣೆ ಸೃಷ್ಟಿಸುವುದೇ ಇವರ ಕೆಲಸ. ಆರ್ಥಿಕ ಪರಿಸ್ಥಿತಿ ತೆರಿಗೆ ಬಗ್ಗೆ ಚರ್ಚೆಯಾಗಲಿ ಆರೋಗ್ಯ ಶಿಕ್ಷಣದ ಬಗ್ಗೆ ಚರ್ಚೆ ನಡೆಸೋಣ. ಇಡಿ-ಐಟಿ ಸಿಬಿಐ ಸ್ವತಂತ್ರ ಸಂಸ್ಥೆಗಳಾಗಿ ಉಳಿದಿಲ್ಲ. ತನಿಖಾ ಸಂಸ್ಥೆಗಳೆಲ್ಲವೂ ಬಿಜೆಪಿಯ ಸಂಸ್ಥೆಗಳು. ಯಡಿಯೂರಪ್ಪನವರ ಬ್ಯಾಂಕ್ ಅಕೌಂಟ್ಗೆ ನೇರವಾಗಿ ದುಡ್ಡು ಹೋದರೂ ಚೆಕ್ ಮಾಡಿಲ್ಲ. ಚುನಾವಣೆ ಹತ್ತಿರ ಬರುವಾಗ ತೊಂದರೆ ಕೊಡುತ್ತಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಅಮೆರಿಕದ ರಸ್ತೆಯಲ್ಲಿ ಭಾರತೀಯ ಮೂಲದ ವ್ಯಕ್ತಿ ಮೇಲೆ ಹಲ್ಲೆ – 41 ವರ್ಷದ ವಿವೇಕ್ ಸಾವು