ಬಿಜೆಪಿಯವರು ಆರಾಮವಾಗಿ ಇದ್ದಾರೆ, ಪ್ರತಿಭಟನೆ ಮಾಡಲಿ: ರಾಮಲಿಂಗಾ ರೆಡ್ಡಿ ಲೇವಡಿ

Public TV
1 Min Read
Ramalinga Reddy

ಬೆಂಗಳೂರು: ಬಿಜೆಪಿಯಲ್ಲಿ (BJP) ರಾಜ್ಯಾಧ್ಯಕ್ಷರಿಂದ ಹಿಡಿದು ಎಲ್ಲಾ ನಾಯಕರು ಆರಾಮವಾಗಿ ಇದ್ದಾರೆ. ಹೀಗಾಗಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಬಿಜೆಪಿ ನಾಯಕರನ್ನು ಲೇವಡಿ ಮಾಡಿದ್ದಾರೆ.

ವಕ್ಫ್ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರೆಲ್ಲಾ ತುಂಬಾ ಆರಾಮಾಗಿದ್ದಾರೆ. ಬಿಜೆಪಿ ಅಧ್ಯಕ್ಷರಿಂದ ಹಿಡಿದು ಎಲ್ಲರೂ ಬಿಡುವಾಗಿದ್ದಾರೆ. ಮುಂದಿನ ಐದು ವರ್ಷ ಕೂಡ ಅವರು ಬಿಡುವಾಗಿ ಇರುತ್ತಾರೆ. ವಿಪಕ್ಷದಲ್ಲೇ ಕೂರುತ್ತಾರೆ. ಹೀಗಾಗಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಇದನ್ನೂ ಓದಿ: ಬಿಜೆಪಿಯವರು ಬಡವರ ವಿರೋಧಿಗಳು – ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ: ರಾಮಲಿಂಗಾರೆಡ್ಡಿ

ಈಗಾಗಲೇ ವಕ್ಫ್ ವಿಚಾರವಾಗಿ ಸಿಎಂ ಸ್ಪಷ್ಟನೆ ನೀಡಿದ್ದಾರೆ. ನೋಟಿಸ್ ಕೊಡಲು ಕಾರಣ ಯಾರು ಅಂದರೆ ಅದು ಬಿಜೆಪಿ ಅವರೇ. ಮಗು ಚಿವುಟೋದು ಅವರೇ, ತೊಟ್ಟಿಲು ತೂಗೋದು ಅವರೇ. ಅವರಿಂದಲೇ ನೋಟಿಸ್ ಕೊಟ್ಟಿದ್ದು ಅಲ್ವಾ. ಅದನ್ನು ಈಗ ನಾವು ನಿಲ್ಲಿಸುತ್ತಿದ್ದೇವೆ. ನಾವು ರೈತರ ಪರವಾಗಿ ಇದ್ದೇವೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಅನುಮತಿ ಇಲ್ಲದೆ ನೌಟಂಕಿ ಕಾರ್ಯಕ್ರಮ ಆಯೋಜನೆ – ಗ್ರಾಮ ಮುಖ್ಯಸ್ಥನ ಪ್ರತಿನಿಧಿಗೆ ಎಂಜಲು ನೆಕ್ಕಿಸಿದ ಪೊಲೀಸರು

Share This Article