Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chitradurga

ಹಿಂದೂ-ಮುಸ್ಲಿಂ ನಡುವೆ ವಿಷ ಹಾಕಿ ಬಿಜೆಪಿ ರಾಜಕೀಯ ಲಾಭ ಪಡೆಯಲೆತ್ನಿಸುತ್ತಿದೆ: ಸಿದ್ದರಾಮಯ್ಯ

Public TV
Last updated: April 5, 2022 7:51 pm
Public TV
Share
3 Min Read
Siddaramaiah
SHARE

ಚಿತ್ರದುರ್ಗ: ಹಿಂದೂ ಮುಸ್ಲಿಂ ನಡುವೆ ವಿಷ ಹಾಕಿ ರಾಜಕೀಯ ಲಾಭ ಪಡೆಯಲು ಬಿಜೆಪಿ ಯತ್ನಿಸುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದರು.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಪ್ರಧಾನಿ ಮೋದಿ ನಾ ಕಾವುಂಗಾ ನಾ ಖಾನೆದುಂಗಾ ಎನ್ನುತ್ತಾರೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಯ್ಯ ರಾಜ್ಯ ಸರ್ಕಾರದಲ್ಲಿ ಶೇ.40 ರಷ್ಟು ಕಮಿಷನ್ ಪಡೆಯಲಾಗುತ್ತಿದೆ ಎಂದು ಪತ್ರ ಬರೆದಿದ್ದಾರೆ. ಆದರೆ ಆ ಪತ್ರಕ್ಕೆ ಇಲ್ಲಿಯವರೆಗೂ ಒಬ್ಬರೂ ಉತ್ತರಿಸಿಲ್ಲ ಎಂದು ವ್ಯಂಗ್ಯವಾಡಿದರು.

ನಮ್ಮ ಕಾರ್ಯಕರ್ತರು ಮನೆ ಮನೆಗೆ ಹೋಗಿ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಹೇಳಬೇಕಿದೆ. ಬಿಜೆಪಿಯವರು, ಅವರ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳಲು ಹಿಜಬ್, ಜಟ್ಕಾ, ಹಲಾಲ್, ಅಜಾನ್ ವಿವಾದ ಸೃಷ್ಟಿಸಿದ್ದಾರೆ. ಈ ಹಿಜಬ್, ಅಜಾನ್ ನಿನ್ನೆ ಮೊನ್ನೆ ಬಂದಿದ್ದಾ? ನಮ್ಮ ಸಮಾಜ ಹುಟ್ಟಿದಾಗಿನಿಂದ ಇವೆಲ್ಲಾ ಇವೆ. ಹೀಗಾಗಿ ನಾವೆಲ್ಲಾ ಹಿಂದುಗಳಲ್ಲವೇ? ಇವರು ಮಾತ್ರ ಹಿಂದುಗಳಾ? ಎಂದು ಕಿಡಿಕಾರಿದರು. ಇದನ್ನೂ ಓದಿ: ಆಜಾನ್‌ನಿಂದ ವಿದ್ಯಾರ್ಥಿಗಳು, ವೃದ್ಧರು, ರೋಗಿಗಳಿಗೆ ತೊಂದರೆ ಆಗ್ತಿದೆ: ಈಶ್ವರಪ್ಪ

Siddaramaiah

ನಾನು ಕೂಡಾ ಹಿಂದೂ. ಹಿಂದೂ ಅಲ್ಲ ಎಂದಾಗಿದ್ದರೆ ನಮ್ಮ ಅಪ್ಪ ನನಗೆ ಸಿದ್ದರಾಮಯ್ಯ ಎಂದು ಹೆಸರಿಡುತ್ತಿದ್ದರೇ? ನಾವು ಹಿಂದೂಗಳೇ. ಧರ್ಮದ ಬಗ್ಗೆ ನಮಗೂ ಗೌರವವಿದೆ. ಧರ್ಮ ಪರಧರ್ಮ ಸಹಿಷ್ಣುತೆ ಸಾರಿದೆ. ಹಾಗಾದರೆ ಜವಾಹರಲಾಲ್ ನೆಹರು, ರಾಜೇಂದ್ರ ಪ್ರಸಾದ್ ಯಾರು ಎಂದು ಸಭಿಕರನ್ನು ಪ್ರಶ್ನಿಸಿದರು.

ಇಂದು ಮನುವಾದ ಹುಟ್ಟು ಹಾಕಲು ಬಿಜೆಪಿ ಯತ್ನಿಸುತ್ತಿದೆ. ಇಷ್ಟೆಲ್ಲಾ ಹೇಳುವ ನಾವು, ಆಪರೇಷನ್ ಮಾಡಿಸಿಕೊಳ್ಳುವ ವೇಳೆ ಹಿಂದೂ ರಕ್ತವೇ ಬೇಕು ಎನ್ನುತ್ತೇವಾ? ಯಾರ ರಕ್ತವಾದರೂ ಆಗಲಿ ಎನ್ನುತ್ತೇವೆ ಅಲ್ವಾ? ದಲಿತ, ಮುಸಲ್ಮಾನ, ಮೇಲ್ಜಾತಿ ಎಂಬುದು ಅಮಾನವೀಯ ಎನಿಸಿದ್ದು. ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರನ್ನು ಬಿಜೆಪಿ ಹಾಳು ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕುಮಾರಸ್ವಾಮಿಗೆ ಟಾಂಗ್:
ಇದೇ ವೇಳೆ ಸಿದ್ದರಾಮಯ್ಯ ಜೆಡಿಎಎಸ್ ನಾಯಕ, ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧವೂ ಹರಿಹಾಯ್ದರು. ತಾಜ್ ವೆಸ್ಟೇಂಡ್ ಹೋಟೆಲ್‌ನಲ್ಲಿ ಉಳಿದುಕೊಂಡು ಹೆಚ್‌ಡಿಕೆ ಸರ್ಕಾರ ಕಳೆದುಕೊಂಡರು. ಆದರೆ ಸರ್ಕಾರ ಬೀಳಲು ಸಿದ್ಧರಾಮಯ್ಯ ಕಾರಣ ಎನ್ನುತ್ತಾರೆ. ಕೊಟ್ಟ ಕುದುರೆ ಏರದವನು ಎಂದು ನಮ್ಮ ಡಿಕೆಶಿ ಆಗಾಗ ಹೇಳುತ್ತಿರುತ್ತಾರೆ. ಹಾಗೆಯೇ ಕುಣಿಯಲಾರದವರು ನೆಲಡೊಂಕು ಎಂಬಂತೆ ಕುಮಾರಸ್ವಾಮಿ ಕಥೆಯಾಗಿದೆ ಎಂದರು. ಇದನ್ನೂ ಓದಿ: ಕುಮಾರಸ್ವಾಮಿ ಅವರೇ ತಾಕತ್ ಇದ್ರೆ ನೇರಾ ನೇರ ಚರ್ಚೆಗೆ ಬನ್ನಿ: ಮುತಾಲಿಕ್

Siddaramaiah

ಅಧಿಕಾರಕ್ಕಾಗಿ ಹವಣಿಸುತ್ತಾ ಬಿಜೆಪಿಯವರು ಮೊದಲೇ ಕಾದು ಕುಳಿತಿದ್ದರು. ಆಗ ಅನ್ನ ಹಳಸಿತ್ತು, ನಾಯಿ ಕಾದಿತ್ತು ಎಂಬಂತೆ ಆಯಿತು. ದುಡ್ಡು ಖರ್ಚು ಮಾಡಿ ಶಾಸಕರನ್ನು ಖರೀದಿಸಿ ಬಿಜೆಪಿ ಸರ್ಕಾರ ಮಾಡಿದರು. ಆದರೆ ಈಗ ಹೆಚ್‌ಡಿಕೆ ಮುಸ್ಲಿಂ ಪರವಾಗಿ ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಕುಮಾರಸ್ವಾಮಿ ಮುಸ್ಲಿಂ ಮತ ವಿಭಜನೆಗೆ ಉಪಚುನಾವಣೆಯಲ್ಲಿ ಅಭ್ಯರ್ಥಿ ಹಾಕಿದರು, ಇನ್ನು ಕೆಲವಡೆ ಅಭ್ಯರ್ಥಿಗಳನ್ನೇ ಬಿಜೆಪಿ ವಿರುದ್ಧ ಹಾಕಲಿಲ್ಲ. ಆದರೆ ಈಗ ಅಲ್ಪಸಂಖ್ಯಾತರ ಪರ ದ್ವನಿ ಎತ್ತುತಿದ್ದಾರೆ. ಆದರೂ ನಾವು ಎಷ್ಟೇ ತೊಂದರೆಯಾದರೂ ಅಲ್ಪಸಂಖ್ಯಾತರ ಪರವಾಗಿ ರಕ್ಷಣೆಗಾಗಿ ನಿಲ್ಲುತ್ತೇವೆ ಹಾಗೇನೆ ಹಿಂದೂ, ಕ್ರೈಸ್ತರ ಪರವಾಗಿ ಸಹ ನಿಲ್ಲುತ್ತೇವೆ ಎಂದರು.

ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಾದ ಜಯಂತಿ:
ಬಾಬು ಜಗಜೀವನ್ ರಾಮ್ ಜಯಂತಿ ಕಾ ಕಾರ್ಯಕ್ರಮ ಸಂಪೂರ್ಣ ಕಾಂಗ್ರೆಸ್ ಚುನಾವಣಾ ಪ್ರಚಾರದ ಸಮಾವೇಶವಾಯಿತು. ಭಾಷಣದ ಉದ್ದಕ್ಕೂ ಎಲ್ಲಾ ನಾಯಕರು ಬಿಜೆಪಿ ವಿರುದ್ಧ ಹರಿಹಾಯ್ದರು. ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಮತ ಯಾಚನೆ ನಡೆಸಿದರು. ಮುಂಬರುವ ಚುನಾವಣೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಆರಕ್ಕೆ ಆರು ವಿಧಾನಸಭೆ ಸ್ಥಾನಗಳನ್ನು ಗೆಲ್ಲಿಸುವಂತೆ ಸ್ವತಃ ಮಾಜಿ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು.

Siddaramaiah 1

ಡಿಕೆಶಿ ಹಾಗೂ ಸಿದ್ದರಾಮಯ್ಯ ಚುನಾವಣೆ ಪ್ರಚಾರದ ಭಾಷಣದಂತೆ ಬಿಜೆಪಿ ವಿರುದ್ಧ ವ್ಯಂಗ್ಯವಾಡುತ್ತಾ ನಗೆ ಚಟಾಕಿ ಹಾಗೂ ಆಕ್ರೋಶ ಭರಿತ ಮಾತುಗಳನ್ನಾಡಿದ್ದು, ಜಗಜೀವನ್ ರಾಮ್ ಜಯಂತಿ ಎನ್ನುವುದನ್ನು ಮರೆತು ಕಾಂಗ್ರೆಸ್ ನಾಯಕರು ಮತಯಾಚಿಸಿದರು.

TAGGED:bjpChitradurgacongresssiddaramaiahಕಾಂಗ್ರೆಸ್ಚಿತ್ರದುರ್ಗಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Sydney Sweeney
ಸ್ನಾನ ಮಾಡಿದ ನೀರನ್ನು ಸೋಪ್ ಮಾಡಿ 8 ಡಾಲರ್‌ಗೆ ಮಾರಾಟ ಮಾಡ್ತಿದ್ದಾಳೆ ಸಿಡ್ನಿ ಸ್ವೀನಿ!
2 hours ago
Darshan
ಕೊನೆಗೂ `ದಾಸ’ನಿಗೆ ವಿದೇಶಕ್ಕೆ ತೆರಳಲು ಅನುಮತಿ ಕೊಟ್ಟ ಕೋರ್ಟ್
4 hours ago
sanjana anand
ರಶ್ಮಿಕಾ, ಶ್ರೀಲೀಲಾ ಬಳಿಕ ತೆಲುಗಿನತ್ತ ಸಂಜನಾ ಆನಂದ್
5 hours ago
dhruva sarja sudeep
ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದಲ್ಲಿ ಸುದೀಪ್?
6 hours ago

You Might Also Like

rohit sharma 2
Cricket

ರೋ’ಹಿಟ್‌’ ಆಟಕ್ಕೆ ಗಿಲ್‌ ಪಡೆ ಡಲ್‌; ಮುಂಬೈಗೆ 20 ರನ್‌ಗಳ ಜಯ – ಫೈನಲ್‌ ಸ್ಥಾನಕ್ಕೆ ಪಂಜಾಬ್‌ ವಿರುದ್ಧ ಫೈಟ್‌

Public TV
By Public TV
16 minutes ago
KARAVE NARAYAN GOWDA
Bengaluru City

ಕಮಲ್ ಹಾಸನ್ ಚಿತ್ರ ರಿಲೀಸ್ ಆದ್ರೆ ಥಿಯೇಟರ್‌ಗಳಿಗೆ ಬೆಂಕಿ ಹಚ್ತೀವಿ: ನಾರಾಯಣಗೌಡ ಎಚ್ಚರಿಕೆ

Public TV
By Public TV
38 minutes ago
AI ಚಿತ್ರ
Dakshina Kannada

ದ.ಕ ಜಿಲ್ಲೆಯಾದ್ಯಂತ ಭಾರೀ ಮಳೆ – ಶನಿವಾರ ಶಾಲೆಗಳಿಗೆ ರಜೆ ಘೋಷಣೆ

Public TV
By Public TV
1 hour ago
Pramod Tiwari
Latest

ರಾಹುಲ್‌ ಗಾಂಧಿ ಪ್ರಧಾನಿಯಾದ ದಿನ ಪಿಒಕೆ ಭಾರತದ ಭಾಗವಾಗಲಿದೆ: ʻಕೈʼ ಸಂಸದ ಪ್ರಮೋದ್ ತಿವಾರಿ

Public TV
By Public TV
1 hour ago
Dinesh Gundu Rao 2
Latest

ಮಂಗಳೂರಲ್ಲಿ ‘ಮರಣ ಮಳೆ’ಗೆ 5 ಬಲಿ – ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ

Public TV
By Public TV
2 hours ago
rohit sharma 1
Cricket

ಐಪಿಎಲ್‌ನಲ್ಲಿ ಎರಡೆರಡು ದಾಖಲೆ ಬರೆದ ಹಿಟ್‌ಮ್ಯಾನ್‌

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?