Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ರಾಜ್ಯದ 28 ಲೋಕಸಭಾ ಸ್ಥಾನದಲ್ಲೂ ಬಿಜೆಪಿ ಗೆಲುವು ಖಚಿತ: ಕಟೀಲ್ ವಿಶ್ವಾಸ

Public TV
Last updated: September 17, 2023 5:19 pm
Public TV
Share
3 Min Read
Nalin Kumar Kateel
SHARE

ಕೋಲಾರ: ರಾಜ್ಯದಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ (Lok Sabha Election) ಬಿಜೆಪಿ ಎಲ್ಲ 28 ಸ್ಥಾನಗಳನ್ನು ಗೆಲ್ಲಲಿದೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಅವರು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬ ಆಚರಣೆ ಹಾಗೂ ಕಾಂಗ್ರೆಸ್ ಸರ್ಕಾರದ ವೈಫಲ್ಯವನ್ನು ಖಂಡಿಸಿ ರೈತ ನಾಯಕ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ರಾಜ್ಯಾದ್ಯಂತ ಪ್ರವಾಸದ ಪ್ರಾರಂಭದ ಹಿನ್ನೆಲೆಯಲ್ಲಿ ಕೋಲಾರದ ಮುಳಬಾಗಿಲಿನ ಕುರುಡುಮಲೆ ಗಣಪತಿ ದೇವಸ್ಥಾನದಲ್ಲಿ ಮಹಾಪೂಜೆಯ ಬಳಿಕ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು.

ಯಡಿಯೂರಪ್ಪ ಅವರ ಸಂಕಲ್ಪದಂತೆ ಮೋದಿಜಿ ಅವರಿಗೆ ಬಲ ತುಂಬಲು ಕುರುಡುಮಲೆ ಗಣಪತಿಗೆ ಆರಾಧನೆ ಮಾಡಿ ಭ್ರಷ್ಟ ಸರ್ಕಾರದ ವಿರುದ್ಧ ಹೋರಾಟ ಆರಂಭ ಮಾಡುತ್ತಿದ್ದೇವೆ. ಒಂಬತ್ತೂವರೆ ವರ್ಷಗಳಲ್ಲಿ ಮೋದಿಜಿ ಅವರು ಭ್ರಷ್ಟಾಚಾರ ರಹಿತ ಆಡಳಿತವನ್ನು ನೀಡಿದ್ದಾರೆ. ಸಾಮಾನ್ಯ ಜನರಿಗೆ ಬಲ ತುಂಬುವ ಹಲವಾರು ಯೋಜನೆಗಳನ್ನು ನರೇಂದ್ರ ಮೋದಿಯವರ ಸರ್ಕಾರ ನೀಡಿದೆ ಎಂದು ವಿಶ್ಲೇಷಿಸಿದರು. ಸ್ವನಿಧಿ ಯೋಜನೆ, ವಿಶ್ವಕರ್ಮ ಯೋಜನೆಗಳನ್ನು ಇವತ್ತು ಅನುಷ್ಠಾನ ಮಾಡಲಾಗುತ್ತಿದೆ ಎಂದು ವಿವರಿಸಿದರು.

Nalin Kumar Kateel 1

ರಾಜ್ಯದ ಸಿದ್ದರಾಮಣ್ಣ ಸರ್ಕಾರವು ಯಡಿಯೂರಪ್ಪ-ಬಸವರಾಜ ಬೊಮ್ಮಾಯಿಯವರ ರೈತ ಪರ ಯೋಜನೆಗಳನ್ನು ವಾಪಸ್ ಪಡೆದಿದೆ. ಕಿಸಾನ್ ಸಮ್ಮಾನ್ ಯೋಜನೆಯಡಿ 6 ಸಾವಿರವನ್ನು ಕೇಂದ್ರ ಹಾಗೂ ಯಡಿಯೂರಪ್ಪರ ಸರ್ಕಾರ 4 ಸಾವಿರ ನೀಡುತ್ತಿತ್ತು. ಆ ಪೈಕಿ 4 ಸಾವಿರ ನೀಡುವುದನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ನಿಲ್ಲಿಸಿದ್ದು, ರೈತವಿರೋಧಿ ನೀತಿ ಪ್ರದರ್ಶಿಸಿದೆ ಎಂದು ಆಕ್ಷೇಪಿಸಿದರು.

ಬೊಮ್ಮಾಯಿಯವರ ಸರ್ಕಾರದ ರೈತ ವಿದ್ಯಾನಿಧಿಯನ್ನೂ ವಾಪಸ್ ಪಡೆಯುವ ಕೆಲಸ ನಡೆದಿದೆ. ಬರ-ನೀರಿನ ಸಮಸ್ಯೆಯಿಂದ ರೈತರು ಒದ್ದಾಡುವಂತಾಗಿದೆ. ಆದರೆ ನಿರಂತರ ವಿದ್ಯುತ್ ಕಡಿತದ ಕೊಡುಗೆಯನ್ನು ಈ ಸರ್ಕಾರ ನೀಡಿದೆ. ರಾತ್ರಿ 12 ಗಂಟೆಯವರೆಗೆ ಕಾದರೂ ಕರೆಂಟಿಲ್ಲ ಎಂಬ ದುಸ್ಥಿತಿ ಬಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಸಲಾಗುತ್ತಿದೆ. ರೈತರ ಹೊಟ್ಟೆಗೆ ಹೊಡೆಯುವ ಕೆಲಸ ಮಾಡುತ್ತಿದ್ದಾರೆ. ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುವ ಸಿದ್ದರಾಮಣ್ಣ ಕರ್ನಾಟಕದ ಮುಖ್ಯಮಂತ್ರಿಯೇ ಅಥವಾ ತಮಿಳುನಾಡಿನ ಮುಖ್ಯಮಂತ್ರಿಯೇ ಎಂದು ಉತ್ತರಿಸಲಿ ಎಂದು ಆಗ್ರಹಿಸಿದರು.

NALINKUMAR KATEEL

ರೈತರ ಹಿತ ಕಾಯದೆ ಕದ್ದುಮುಚ್ಚಿ ನೀರು ಹರಿಸುವ ಕೆಲಸ ಮಾಡಿದ್ದೀರಿ. ಹೀಗಾಗಿ ರೈತ ವಿರೋಧಿ ಸರ್ಕಾರ ಇದಾಗಿದೆ. ಇಬ್ಬರು ಸಚಿವರ ಮೇಲೆ ಕೇಸ್ ಆಗಿದೆ. ಚಲುವರಾಯಸ್ವಾಮಿ, ಸುಧಾಕರ್ ಅವರ ಮೇಲೆ ಕೇಸ್ ಆದರೂ ಅವರ ರಾಜೀನಾಮೆ ಪಡೆಯುವ ನೈತಿಕತೆ ಸಿದ್ದರಾಮಣ್ಣರಿಗೆ ಇಲ್ಲವಾಗಿದೆ. ಕೇಸ್ ಕೊಟ್ಟವರ ಮೇಲೆ ಪ್ರಕರಣ ದಾಖಲಿಸಲಾಗುತ್ತಿದೆ. ಗುತ್ತಿಗೆದಾರರ ಬಾಕಿ ಬಿಲ್ ವಿಚಾರದಲ್ಲೂ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಕೆಲವೇ ತಿಂಗಳಲ್ಲಿ ಸರ್ಕಾರದ ವಿರುದ್ಧ ಜನಾಕ್ರೋಶ ಹೆಚ್ಚಾಗಿದೆ. ರಿಕ್ಷಾ, ಕಾರು, ಟ್ಯಾಕ್ಸಿ ಚಾಲಕರಿಗೆ ಸಮಸ್ಯೆಯಾಗಿದೆ. ಉದ್ಯಮಿಗಳು ರಾಜ್ಯ ಬಿಟ್ಟು ಹೋಗುತ್ತಿದ್ದಾರೆ. ಈ ಸರ್ಕಾರ ಭ್ರಷ್ಟಚಾರ, ರೈತವಿರೋಧಿ ಸರ್ಕಾರ ಎಂದು ಟೀಕಿಸಿದರು. ಇದನ್ನೂ ಓದಿ: ಹಣ ತೆಗೆದುಕೊಂಡು ಟಿಕೆಟ್ ಕೊಟ್ಟಿದ್ದಾರೋ ಇಲ್ವೋ? ಇದಕ್ಕೆ ಬಿಜೆಪಿಯವರೇ ಉತ್ತರ ಕೊಡಬೇಕು: ಜಗದೀಶ್ ಶೆಟ್ಟರ್

ಎಸ್‌ಸಿ, ಎಸ್‌ಟಿಗಳಿಗೆ ಮೀಸಲಿಟ್ಟ 11,144 ಕೋಟಿ ರೂ. ಹಣವನ್ನು ಬೇರೆಡೆಗೆ ವರ್ಗಾಯಿಸಿದ ಸರ್ಕಾರ ಇದು. ಎಸ್‌ಸಿ, ಎಸ್‌ಟಿಗಳ ಹೊಟ್ಟೆಗೆ ಹೊಡೆದ ಸರ್ಕಾರ ಸಿದ್ದರಾಮಣ್ಣ ಸರ್ಕಾರ. ಅಹಿಂದ ಹೆಸರಿನಲ್ಲಿ ಅಧಿಕಾರ ಪಡೆದ ಸಿದ್ದರಾಮಣ್ಣ ಎಸ್‌ಸಿ, ಎಸ್‌ಟಿಗಳಿಗೆ ಅನ್ಯಾಯ ಮಾಡುತ್ತಿದ್ದಾರೆ. ಇವೆಲ್ಲವನ್ನೂ ಜನರ ಮುಂದಿಡಲಾಗುವುದು. ಮೋದಿಜಿ ಅವರ ಜನಪರ ಯೋಜನೆಗಳನ್ನು ತಿಳಿಸಿ ಕಾರ್ಯಕರ್ತರ ವಿಶ್ವಾಸ ಪಡೆಯಲು ಸಿದ್ಧರಾಗಿದ್ದೇವೆ. ಯಡಿಯೂರಪ್ಪ ಅವರ ನೇತೃತ್ವ, ಪ್ರೇರಣೆಯೊಂದಿಗೆ ಈ ಪ್ರವಾಸ ನಡೆಯಲಿದೆ ಎಂದು ತಿಳಿಸಿದರು.

ಕಣ್ಣಿನ ಶಸ್ತ್ರಚಿಕಿತ್ಸೆ ಕಾರಣಕ್ಕಾಗಿ ಬೊಮ್ಮಾಯಿಯವರು ಇವತ್ತು ಬಂದಿಲ್ಲ. ಗಣೇಶ ಚೌತಿ ಬಳಿಕ ಪ್ರವಾಸ ನಡೆಯಲಿದೆ. ಇಂದು ವಿಶ್ವಕರ್ಮ ಜಯಂತಿ ಹಾಗೂ ವಿಶ್ವವನ್ನು ಜಿ 20 ಮೂಲಕ ವಿಶ್ವಮಟ್ಟಕ್ಕೇರಿಸಿದ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನ. ಇವತ್ತು ಸಿದ್ದರಾಮಣ್ಣ ಸರ್ಕಾರದ ಭ್ರಷ್ಟಾಚಾರ, ರೈತವಿರೋಧಿ ನೀತಿ ವಿರುದ್ಧ ಹೋರಾಟದ ಪ್ರಾರಂಭದ ದಿನ ಎಂದು ಅವರು ನುಡಿದರು.

ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಹಿರಿಯ ಮುಖಂಡರಾದ ಕೆಎಸ್ ಈಶ್ವರಪ್ಪ, ಗೋವಿಂದ ಕಾರಜೋಳ, ಸಂಸದ ಮುನಿಸ್ವಾಮಿ, ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದಗೌಡ, ಮಾಜಿ ಸಚಿವರಾದ ಡಾ. ಅಶ್ವಥ್ ನಾರಾಯಣ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್ ಮುಖಂಡ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಜಿಲ್ಲಾಧ್ಯಕ್ಷ ವೇಣುಗೋಪಾಲ್ ಮತ್ತಿತರ ಪ್ರಮುಖರು ಭಾಗವಹಿಸಿದ್ದರು. ಇದನ್ನೂ ಓದಿ: ಹರಿಪ್ರಸಾದ್ ಹೇಳಿಕೆಯಿಂದ ಪಕ್ಷಕ್ಕೆ ಇರಿಸು ಮುರಿಸು: ಟಿ.ಬಿ ಜಯಚಂದ್ರ

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್


follow icon

TAGGED:bjpcongressKolarNalin Kumar Kateelsiddaramaiahಕಾಂಗ್ರೆಸ್ಕೋಲಾರನಳಿನ್ ಕುಮಾರ್ ಕಟೀಲ್ಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

You Might Also Like

Dharwad KIADB
Crime

ಧಾರವಾಡ ಕೆಐಎಡಿಬಿ ಹಗರಣ – ನಕಲಿ ದಾಖಲೆ ಸೃಷ್ಟಿಸಿದ್ದ ಆರೋಪಿ ಇಡಿ ವಶಕ್ಕೆ

Public TV
By Public TV
2 minutes ago
School Girls
Crime

ಮಹಾರಾಷ್ಟ್ರ | ರಕ್ತದ ಕಲೆ ಕಂಡುಬಂದಿದ್ದಕ್ಕೆ ಬಲವಂತವಾಗಿ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ಪ್ರಿನ್ಸಿಪಾಲ್‌

Public TV
By Public TV
10 minutes ago
ED Raid On Bagepalli Congress MLA Subba Reddy Bengaluru House
Bengaluru City

ವಿದೇಶದಲ್ಲಿ ಹೂಡಿಕೆ – ಕೈ ಶಾಸಕ ಸುಬ್ಬಾರೆಡ್ಡಿ ನಿವಾಸದ ಮೇಲೆ ಇಡಿ ದಾಳಿ

Public TV
By Public TV
19 minutes ago
School Bus Hit by Train Crossing Gate in Cuddalore Tamil Nadu
Latest

ತಮಿಳುನಾಡು ಶಾಲಾ ವಾಹನ ದುರಂತ – ರೈಲ್ವೇ ಕ್ರಾಸಿಂಗ್ ಸುರಕ್ಷತೆ ಹೆಚ್ಚಿಸಲು ಮುಂದಾದ ಇಲಾಖೆ

Public TV
By Public TV
27 minutes ago
Hassan Double Murder
Crime

ಆಸ್ತಿ ವಿಚಾರಕ್ಕೆ ಕಲಹ – ಮಗನಿಂದಲೇ ತಂದೆ, ಸಹೋದರನ ಬರ್ಬರ ಹತ್ಯೆ

Public TV
By Public TV
58 minutes ago
Earthquake
Latest

ದೆಹಲಿಯಲ್ಲಿ 4.4 ತೀವ್ರತೆಯ ಭೂಕಂಪನ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?