Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ ಈ ದೇಶದ ಬಗ್ಗೆ ಚಿಂತನೆ ಮಾಡುವ ಏಕೈಕ ಪಕ್ಷ: ಎ.ನಾರಾಯಣಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru Rural | ಬಿಜೆಪಿ ಈ ದೇಶದ ಬಗ್ಗೆ ಚಿಂತನೆ ಮಾಡುವ ಏಕೈಕ ಪಕ್ಷ: ಎ.ನಾರಾಯಣಸ್ವಾಮಿ

Bengaluru Rural

ಬಿಜೆಪಿ ಈ ದೇಶದ ಬಗ್ಗೆ ಚಿಂತನೆ ಮಾಡುವ ಏಕೈಕ ಪಕ್ಷ: ಎ.ನಾರಾಯಣಸ್ವಾಮಿ

Public TV
Last updated: September 6, 2021 10:23 am
Public TV
Share
3 Min Read
Narayanaswamy1
SHARE

ಆನೇಕಲ್: ಬಿಜೆಪಿ ಈ ದೇಶದ ಬಗ್ಗೆ ಚಿಂತನೆ ಮಾಡುವ ಏಕೈಕ ಪಕ್ಷ ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಹೇಳಿದ್ದಾರೆ.

Contents
  • ನನ್ನ ಸೋಲಿಗೆ ಕಾರಣರಾದವರನ್ನು ನಾನು ಕ್ಷಮಿಸುತ್ತೇನೆ!
  • ಬಿಜೆಪಿ ಭದ್ರಕೋಟೆ!

ಭಾನುವಾರ ಅತ್ತಿಬೆಲೆ ಮಂಡಲದ ವತಿಯಿಂದ ಆಯೋಜಿಸಿದ್ದ ಜನಾಶಿರ್ವಾದ ಯಾತ್ರೆಯ ಬಳಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಈ ದೇಶದಲ್ಲಿ ಯಾವ ರೀತಿ ಆಡಳಿತ ನಡೆಸಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. 60 ವರ್ಷ ಅವರ ಆಡಳಿತ ವೈಖರಿಯಿಂದಾಗಿ ಹಾಗೂ ಕೊರೊನಾ ಸಂಕಷ್ಟದಿಂದ ಬೆಲೆ ಏರಿಕೆ ಆಗಿದೆ ಹೊರತು ಬಿಜೆಪಿಯಾಗಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ ಆಗಲಿ ಜನರಿಗೆ ತೊಂದರೆಯಾಗುವ ನಿಟ್ಟಿನಲ್ಲಿ ಎಂದು ಕೂಡ ನಡೆದುಕೊಳ್ಳುವುದಿಲ್ಲ. ಬಿಜೆಪಿ ಈ ದೇಶದ ಬಗ್ಗೆ ಚಿಂತನೆ ಮಾಡುವ ಏಕೈಕ ಪಕ್ಷ ಎಂದರು.

Narayanaswamy

ಅಧಿಕಾರ ಸಿಕ್ಕಾಗ ನಾವು ಜನಪರ ಯೋಜನೆಗಳನ್ನು ಜಾರಿಗೆ ತರಬೇಕು. ಜನ ನಮಗೆ ಅಧಿಕಾರ ನೀಡುವುದು ಸ್ಥಳೀಯವಾಗಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಎನ್ನುವ ಕಾರಣಕ್ಕೆ ಆದರೆ ಕೆಲವರು ಅಧಿಕಾರ ಸಿಕ್ಕಾಗ ಅದರ ಅಮಲಿನಲ್ಲಿ ಇರುತ್ತಾರೆ. ಪಕ್ಷ ವಿರೋಧಿ ಚಟುವಟಿಕೆ ಮಾಡುವವರನ್ನು ನಾನು ಎಂದು ಕೂಡ ಸಹಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ:ಯಾದಗಿರಿಯಲ್ಲಿ ವರುಣಾರ್ಭಟ – ವೀರಾಂಜನೇಯ, ಕಂಗಳೇಶ್ವರ ದೇವಾಲಯ ಜಲಾವೃತ್ತ

Narayanaswamy1 1

ನನ್ನ ಸೋಲಿಗೆ ಕಾರಣರಾದವರನ್ನು ನಾನು ಕ್ಷಮಿಸುತ್ತೇನೆ!

ಚುನಾವಣೆ ಸಂದರ್ಭದಲ್ಲಿ ಯಾರು ಬಿಜೆಪಿ ಪಕ್ಷದಲ್ಲೇ ಇದ್ದು, ಬೇರೆ ಪಕ್ಷದವರ ಜೊತೆ ಕೈಜೋಡಿಸಿ ಕೆಲಸ ಮಾಡುತ್ತಾರೋ ಅವರನ್ನು ನಾನು ಎಂದು ಕೂಡ ಸಹಿಸುವುದಿಲ್ಲ. ಈ ಹಿಂದೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ನನ್ನ ಸೋಲಿಗೆ ಕಾರಣರಾದವರನ್ನು ನಾನು ಕ್ಷಮಿಸುತ್ತೇನೆ. ಆದರೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸೋಲಿಗೆ ಯಾರು ಕೆಲಸ ಮಾಡುತ್ತಾರೆ ಅವರನ್ನು ಯಾರೂ ಕೂಡ ಕ್ಷಮಿಸುವ ಮಾತೇ ಇಲ್ಲ ಎಂದು ಹೇಳುವ ಮೂಲಕ ವೇದಿಕೆಯಲ್ಲಿ ಹಾಜರಿದ್ದ ಕೆಲವು ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮುಖಂಡರಿಗೆ ಕಿವಿಮಾತು ಹೇಳಿದರು.

BJP CONGRESS FLAG

ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ಮಾತ್ರ ಭ್ರಷ್ಟಾಚಾರ ಇಲ್ಲದೆ ಆಡಳಿತ ನಡೆಸಲಾಗುತ್ತಿದೆ. ಆದರೆ ಈ ಹಿಂದೆ ದೇಶವನ್ನು ಆಳಿದವರು ಎಷ್ಟು ಲೂಟಿ ಹೊಡೆದಿದ್ದಾರೆ ಎನ್ನುವ ಮಾಹಿತಿ ಜನರಿಗೂ ಕೂಡ ಇದೆ. ಈ ನಿಟ್ಟಿನಲ್ಲಿ ಇದೆಲ್ಲವನ್ನು ಅರಿತು ಸುಭದ್ರ ದೇಶ ಕಟ್ಟಬೇಕಾದರೆ ಬಿಜೆಪಿಯಿಂದ ಮಾತ್ರ ಸಾಧ್ಯ. ಬಿಜೆಪಿಯಿಂದ ಗೆದ್ದು ಬಂದವರು ಪಕ್ಷ ನಿಷ್ಠೆಯಿಂದ ಕೆಲಸ ಮಾಡಬೇಕು. ನಮಗೆ ಅಧಿಕಾರ ನೀಡಿದ ಪಕ್ಷ ತಾಯಿಗೆ ಸಮಾನ. ಈ ನಿಟ್ಟಿನಲ್ಲಿ ನಾವು ತಾಯಿಗೆ ದ್ರೋಹ ಮಾಡದಂತೆ ಕೆಲಸ ಮಾಡಬೇಕು ಎಂದು ಹೇಳಿದರು. ಇದನ್ನೂ ಓದಿ:ಬೆಲೆ ಏರಿಕೆ, ಜನ ಸಾಮಾನ್ಯರ ದುಸ್ಥಿಗೆ ಸರ್ಕಾರ ಹೊಣೆ: ನಾರಾಯಣಸ್ವಾಮಿ

ಆನೇಕಲ್ ತಾಲೂಕಿಗೆ ಶಿಂಶಾ ನದಿ ನೀರನ್ನು ತರುವ ಬಗ್ಗೆ ನಾನೇ ಹೇಳಿದ್ದೆ. ಇದಕ್ಕೆ ಕೆಲವು ಕಾಂಗ್ರೆಸ್ ಸದಸ್ಯರು ಮಾತನಾಡಿರುವುದು ನನ್ನ ಕಿವಿಗೆ ಬಿದ್ದಿದೆ. ನನ್ನ ಮನದಲ್ಲಿರುವ ಅನಿಸಿಕೆಯನ್ನು ಹೇಳಿಕೊಳ್ಳುವುದು, ಅಂತಹ ಕಾರ್ಯಕ್ರಮಗಳನ್ನು ರೂಪಿಸುವುದು ನನಗೆ ಬಿಟ್ಟ ವಿಚಾರವಾಗಿದೆ. ಇದಕ್ಕೆ ಮೂಗು ತೂರಿಸಲು ಅವರ್ಯಾರು ಎಂದು ಪ್ರಶ್ನಿಸುವ ಮೂಲಕ ಕಾಂಗ್ರೆಸ್ಸಿನ ಬೆಂಗಳೂರು ಗ್ರಾಮಾಂತರ ಲೋಕಸಭಾ ಸಂಸದ ಡಿ.ಕೆ ಸುರೇಶ್ ಅವರಿಗೆ ತಿರುಗೇಟು ನೀಡಿದರು.

ಬಿಜೆಪಿ ಭದ್ರಕೋಟೆ!

ಆನೇಕಲ್ ತಾಲೂಕು ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ಎನ್.ಬಸವರಾಜು ಸಭೆಯನ್ನು ಉದ್ದೇಶಿಸಿ ಮಾತನಾಡಿ, ಆನೇಕಲ್ ತಾಲೂಕು ಎಂದಿಗೂ ಕೂಡ ಬಿಜೆಪಿ ಭದ್ರಕೋಟೆ, ತಾಲೂಕಿನಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದವರು ಸಾಕಷ್ಟು ಜನ ಇದ್ದು, ಅವರೆಲ್ಲರನ್ನೂ ಇಂತಹ ಸಂದರ್ಭದಲ್ಲಿ ಸ್ಮರಿಸಿಕೊಳ್ಳಬೇಕು. ನಾಲ್ಕು ಬಾರಿ ಆನೇಕಲ್ಲಿನಲ್ಲಿ ಶಾಸಕರಾಗಿ ಸೋತ ಬಳಿಕ ಚಿತ್ರದುರ್ಗ ಲೋಕಸಭಾ ಸಂಸದರಾಗಿ ಕೇಂದ್ರ ಸಚಿವರಾಗಿರುವ ನಾರಾಯಣಸ್ವಾಮಿ ಅವರು ರೂಢಿಸಿಕೊಂಡ ಸರಳತೆ ಪಕ್ಷದ ಸಿದ್ಧಾಂತದಿಂದಾಗಿ ಕೇಂದ್ರದಲ್ಲಿ ಉನ್ನತ ಸ್ಥಾನವನ್ನು ಕಲ್ಪಿಸಿಕೊಂಡಿದ್ದಾರೆ. ಇಂತಹ ಹುದ್ದೆಗಳನ್ನು ಪಡೆಯಲು ಬಿಜೆಪಿ ಪಕ್ಷದಲ್ಲಿ ಇರುವ ಕಾರ್ಯಕರ್ತರು ಹಾಗೂ ಮುಖಂಡರಿಗೆ ಮಾತ್ರ ಸಾಧ್ಯ ಎಂದು ಪ್ರಶಂಸಿದ್ದಾರೆ. ಇದನ್ನೂ ಓದಿ:ಮೂರನೇ ಅಲೆ ಮಕ್ಕಳಿಗೆ ಹೆಚ್ಚು ಎಫೆಕ್ಟ್ – ಹೊಸ ಸಂಶೋಧನೆ ವರದಿ ಆತಂಕ

narendra modi
narendra Modi

ಅತ್ತಿಬೆಲೆ ವೃತ್ತದಿಂದ ತೆರೆದ ವಾಹನದಲ್ಲಿ ಸಾವಿರಾರು ಕಾರ್ಯಕರ್ತರು ಹಾಗೂ ಮುಖಂಡರು ಬಿದರಗುಪ್ಪೆಯವರೆಗೆ ಮೆರವಣಿಗೆ ನಡೆಸಿ ನಂತರ ಅತ್ತಿಬೆಲೆಯ ಕಲ್ಯಾಣ ಮಂಟಪವೊಂದರಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ನಾರಾಯಣಸ್ವಾಮಿ ಅವರನ್ನು ಅದ್ದೂರಿಯಾಗಿ ಸನ್ಮಾನಿಸುವ ಮೂಲಕ ಗೌರವ ಸಲ್ಲಿಸಿದರು. ಇದನ್ನೂ ಓದಿ:ಕಾಂಗ್ರೆಸ್ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಸ್ವಸಹಾಯ ಸಂಘ ಸ್ಥಾಪನೆಗಳಿಗೆ ಸಹಕಾರ ನೀಡಿತು: ರಾಮಲಿಂಗಾರೆಡ್ಡಿ

ಹಿರಿಯ ಬಿಜೆಪಿ ಮುಖಂಡ ಯಂಗಾ ರೆಡ್ಡಿ, ಬಿ.ಜಿ.ಆಂಜಿನಪ್ಪ, ಅತ್ತಿಬೆಲೆ ಬಿಜೆಪಿ ಮಂಡಲ ಅಧ್ಯಕ್ಷ ಎಸ್.ಆರ್.ಟಿ. ಅಶೋಕ್, ಎನ್.ಶಂಕರ್, ಬಿದರಗುಪ್ಪೆ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜೇಶ್, ಅತ್ತಿಬೆಲೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮಂಜುನಾಥ್ ರೆಡ್ಡಿ ಈ ಕಾರ್ಯಕ್ರಮಕ್ಕೆ ಆಗಮಿಸಿದ್ದರು.

 

TAGGED:anekalbjpnarayanaswamypoliticsprime minister narendra modiPublic TVಆನೇಕಲ್ನಾರಾಯಣಸ್ವಾಮಿಪಬ್ಲಿಕ್ ಟಿವಿಪ್ರಧಾನಿ ನರೇಂದ್ರ ಮೋದಿಬಿಜೆಪಿರಾಜಕೀಯ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories
Pushpa Arunkumar
ಸೈಟ್‌ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್‌ ಕಟ್ಟಿಸಲು ಮುಂದಾದ ಯಶ್‌ ತಾಯಿ
Cinema Districts Hassan Karnataka Latest Sandalwood States Top Stories
Ram Charan
ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್‌ಚರಣ್ ಪತ್ನಿ ಉಪಾಸನಾ
Bollywood Cinema Latest Top Stories

You Might Also Like

gas leak fire accident in kanakapura three dies
Crime

ಗ್ಯಾಸ್ ಸೋರಿಕೆಯಾಗಿ ಅಗ್ನಿ ಅವಘಡ – ಒಂದೇ ಕುಟುಂಬದ ಮೂವರು ದುರ್ಮರಣ

Public TV
By Public TV
9 minutes ago
Nepali
Bengaluru City

18 ಕೋಟಿ ದರೋಡೆ ಕೇಸ್‌ | ಮನೆ ಕೆಲಸಕ್ಕೆ ಸೇರಿ ಸಂಚು – ಕೆಲಸ ಬಿಟ್ಟು ದರೋಡೆ ಮಾಡಿದ್ದ ನೇಪಾಳಿ ಗ್ಯಾಂಗ್‌!

Public TV
By Public TV
12 minutes ago
CJ Roy
Bengaluru City

ಪಿಸ್ತೂಲ್‌ನಿಂದ ಶೂಟ್ ಮಾಡಿದ್ರೂ ಯಾರಿಗೂ ಗೊತ್ತಾಗಿಲ್ಲ ಯಾಕೆ? – ಚರ್ಚೆಗೆ ಗ್ರಾಸವಾಗಿದ್ದ ಪ್ರಶ್ನೆಗೆ ಸಿಕ್ತು ಉತ್ತರ

Public TV
By Public TV
13 minutes ago
Pakistan Cricket Team
Cricket

ಭಾರತದ ವಿರುದ್ಧ ಪಂದ್ಯವಾಡದೇ ಇದ್ದರೆ ಪಾಕಿಗೆ 200 ಕೋಟಿ ನಷ್ಟ

Public TV
By Public TV
2 hours ago
CPI video of fighting for arrest of Davangere riot accused goes viral
Crime

ʻಕೈʼ ಮುಖಂಡನ ಮಕ್ಕಳಿಂದ ಪೊಲೀಸರ ಮೇಲೆ ಹಲ್ಲೆ ಕೇಸ್ -‌ ಬಂಧನಕ್ಕೆ ಹೋರಾಡಿದ್ದ ಲೇಡಿ ಸಿಪಿಐ ವಿಡಿಯೋ ವೈರಲ್‌

Public TV
By Public TV
3 hours ago
Groom stabbed in Kollegal Bride lover arrested murder plot
Chamarajanagar

ಕೊಳ್ಳೇಗಾಲದಲ್ಲಿ ವರನಿಗೆ ಚಾಕು ಇರಿತ – ಹತ್ಯೆಗೆ ಸುಪಾರಿ ಕೊಟ್ಟಿದ್ದೇ ವಧು!

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?