Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿಯವರು ರಾಜ್ಯಪಾಲರ ಮುಂದಿಟ್ಟುಕೊಂಡು ಸರ್ಕಾರವನ್ನು ಹೆದರಿಸುತ್ತಿದ್ದಾರೆ: ಜಿ.ಪರಮೇಶ್ವರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಜೆಪಿಯವರು ರಾಜ್ಯಪಾಲರ ಮುಂದಿಟ್ಟುಕೊಂಡು ಸರ್ಕಾರವನ್ನು ಹೆದರಿಸುತ್ತಿದ್ದಾರೆ: ಜಿ.ಪರಮೇಶ್ವರ್

Bengaluru City

ಬಿಜೆಪಿಯವರು ರಾಜ್ಯಪಾಲರ ಮುಂದಿಟ್ಟುಕೊಂಡು ಸರ್ಕಾರವನ್ನು ಹೆದರಿಸುತ್ತಿದ್ದಾರೆ: ಜಿ.ಪರಮೇಶ್ವರ್

Public TV
Last updated: August 2, 2024 8:44 pm
Public TV
Share
3 Min Read
g.parameshwar ramanagara
SHARE

ಬೆಂಗಳೂರು/ರಾಮನಗರ: ರಾಜ್ಯದ ಜನತೆ 136 ಸ್ಥಾನಗಳನ್ನು ಗೆಲ್ಲಿಸಿ ಆಶೀರ್ವಾದ ಮಾಡಿರುವ ಸರ್ಕಾರವನ್ನು ಬಿಜೆಪಿಯವರು ರಾಜ್ಯಪಾಲರನ್ನು ಇಟ್ಟುಕೊಂಡು ಹೆದರಿಸುತ್ತಿದ್ದಾರೆ ಎಂದು ಗೃಹ ಸಚಿವ ಡಾ.‌ಜಿ.ಪರಮೇಶ್ವರ್ ಹೇಳಿದರು.

ಬಿಡದಿಯಲ್ಲಿ ನಡೆದ ಕೇಂದ್ರ ಎನ್‌ಡಿಎ ಸರ್ಕಾರವು ಕರ್ನಾಟಕ್ಕೆ ಮಾಡುತ್ತಿರುವ ಅನ್ಯಾಯ ಹಾಗೂ ಬಿಜೆಪಿ ಮತ್ತು ಜೆಡಿಎಸ್ ಸರ್ಕಾರದ ಅವಧಿಯ ಭ್ರಷ್ಟಚಾರದ ವಿರುದ್ಧ ಜನಾಂದೋಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜನರನ್ನು ಉದ್ದೇಶಿಸಿ ಪರಮೇಶ್ವರ್ ಮಾತನಾಡಿದರು.

Siddaramaiah MUDA SCAM

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸಭಾ ಚುನಾವಣೆ ಎದುರಿಸಿದ್ದೆವು. ಜನರಿಗೆ ಭರವಸೆಗಳನ್ನು ಕೊಟ್ಟಿದ್ದೆವು‌. ಭ್ರಷ್ಟಚಾರದಿಂದ ಕೂಡಿದ್ದ ಬಿಜೆಪಿಯನ್ನು ಕಿತ್ತೊಗೆದು ನಮಗೆ ಅಧಿಕಾರ ಕೊಡಿ. ಸಾಮಾಜಿಕ ನ್ಯಾಯ ನೀಡುವ ಆಡಳಿತ ನೀಡುವುದಾಗಿ ಹೇಳಿದ್ದೆವು‌. ಬಡವರು, ಶೋಷಿತರು, ಅಲ್ಪಸಂಖ್ಯಾತರನ್ನು ಮೇಲೆತ್ತಲು ಐದು ಗ್ಯಾರಂಟಿ ಯೋಜನೆಗಳ ಭರವಸೆ ನೀಡಿದ್ದೆವು. ಕಾಂಗ್ರೆಸ್ ಪಕ್ಷ ಪೊಳ್ಳು ಭರವಸೆಗಳನ್ನು ನೀಡುತ್ತಿದೆ ಎಂದು ಬಿಜೆಪಿಯವರು ಟೀಕಿಸಿದ್ದರು. ಅಧಿಕಾರಕ್ಕೆ ಬಂದ ಕೂಡಲೇ ಭರವಸೆಗಳನ್ನು ಈಡೇರಿಸಿದ್ದೇವೆ. ನೀರಾವರಿ ಯೋಜನೆ, ರಸ್ತೆ ಅಭಿವೃದ್ಧಿ ಕಾರ್ಯಗಳೆಲ್ಲವು ಸುಸಜ್ಜಿತವಾಗಿ ನಡೆಯುತ್ತಿವೆ. ಇದೆಲ್ಲವನ್ನು ಸಹಿಸದ ಬಿಜೆಪಿ ಮತ್ತು ಜೆಡಿಎಸ್‌ನವರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಪರಮೇಶ್ವರ್ ಹರಿಹಾಯ್ದರು.

ಜನ 136 ಸೀಟುಗಳನ್ನು ಕಾಂಗ್ರೆಸ್ ಪಕ್ಷಕ್ಕೆ ನೀಡಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನಪರ ಆಡಳಿತವನ್ನು ನೀಡುತ್ತಿದೆ. ಇದೆಲ್ಲವನ್ನು ತಡೆಯಲು ಆಗದೆ ಹೊಟ್ಟೆಕಿಚ್ಚು, ಹೊಟ್ಟೆ ಹುರಿಯಿಂದ ಬಿಜೆಪಿಯವರು ಆರೋಪಗಳನ್ನು ಮಾಡುತ್ತಿದ್ದಾರೆ. ನಮ್ಮ‌ ಪಕ್ಷ 136 ಸೀಟು ಗೆದ್ದಿದ್ದಕ್ಕೆ, ರಾಜ್ಯದಲ್ಲಿ ನಮಗೆ ಜಾಗ ಇಲ್ಲ ಎಂದು ಜೆಡಿಎಸ್ ಮತ್ತು ಬಿಜೆಪಿಯವರಿಗೆ ಎಂಬುದು ಗೊತ್ತಾಗಿದೆ. ಇದೇ ಕಾರಣದಿಂದ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಬಿಜೆಪಿಯೊಂದಿಗೆ ಕೈಜೋಡಿಸಿದ ಹೆಚ್‌.ಡಿ.ಕುಮಾರಸ್ವಾಮಿ ಅವರು ಲಾಟ್ರಿ ಹೊಡೆದು, ಕೇಂದ್ರ ಸಚಿವರಾಗಿದ್ದಾರೆ. ನಮ್ಮ ಜೊತೆ ಸೇರಿಕೊಂಡು 14 ತಿಂಗಳ ನಂತರ ಬಿಟ್ಟು ಹೋದರು‌. ಮುಂದೆ ಬಿಜೆಪಿಯವರಿಗೆ ಗೊತ್ತಾಗಲಿದೆ. ನಿನ್ನೆ ನಡೆದ ಘಟನೆಯೇ ಇದಕ್ಕೆ ಸಾಕ್ಷಿ. ದಾರಿಯಲ್ಲಿ ಎಲ್ಲೂ ಜನತಾದಳ ಬಾವುಟಗಳು ಇಲ್ಲ. ಹೆಚ್ಚು ದಿನ ಅವರ ಮೈತ್ರಿ ಉಳಿಯುವುದಿಲ್ಲ. ಶೀಘ್ರವಾಗಿ ಮುರಿದು ಬೀಳುತ್ತದೆ ಎಂದು ಟೀಕಿಸಿದರು.

1935ರಲ್ಲಿ ಖರೀದಿ ಮಾಡಿದಂಥ ಜಮೀನನ್ನು ಮುಡಾದವರು ನಿವೇಶನ ಮಾಡಿದ್ದನ್ನು ಈಗ ಆರೋಪ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ಒಂದೇ‌ ಒಂದು ಫೈಲ್‌ನಲ್ಲಿ ಸಹಿ ಮಾಡಿದ್ದರೆ, ಈ ಬಗ್ಗೆ ನಿರ್ದೇಶನ ನೀಡಿದ್ದರೆ ಬಿಜೆಪಿಯವರು ಸಾಬೀತುಪಡಿಸಲಿ. ಜನರಿಗೆ ಸತ್ಯವನ್ನು ತಿಳಿಸಬೇಕು ಎಂಬ ಉದ್ದೇಶದಿಂದ ಸಭೆ ನಡೆಸಿದ್ದೇವೆ. ಬಿಜೆಪಿಯವರ ಅಧಿಕಾರವಧಿಯಲ್ಲಿ ನಡೆದ ಹಗರಣಗಳ‌ ಪಟ್ಟಿಯನ್ನು ನೀಡುತ್ತೇವೆ‌. ಅವರಿಗೆ ಸಾಧ್ಯವಾದರೆ ಪಟ್ಟಿ ನೀಡಲಿ ಎಂದು ಪರಮೇಶ್ವರ್ ಸವಾಲು ಹಾಕಿದರು.

ಕೋವಿಡ್ ಸಂದರ್ಭದಲ್ಲಿ ಜನರಿಗೆ ನೀಡಿದ ಔಷಧಿಯಲ್ಲಿ ಸುಧಾಕರ್ ನಾಲ್ಕು ಸಾವಿರ ಕೋಟಿ ರೂ. ದುಡ್ಡು ಹೊಡೆದಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದರು. ಭೋವಿ ನಿಗಮದಲ್ಲಿ 47 ಕೋಟಿ ರೂ. ಹಗರಣ ಆಗಿದೆ ಎಂದು ಗೂಳಿಹಟ್ಟಿ ಶೇಖರ್ ಆರೋಪಿಸಿದ್ದಾರೆ. ದೇವರಾಜು ಅರಸ್ ಟ್ರಕ್ ಟರ್ಮಿನಲ್‌ನಲ್ಲಿ ಡಿ.ಎಸ್.ವೀರಯ್ಯ ಚೆಕ್ ಮೂಲಕ ದುಡ್ಡು ತೆಗೆದುಕೊಂಡು ಮನೆ ಕಟ್ಟಿಸಿಕೊಂಡಿದ್ದಾರೆ. ಸಾವಿರಾರು ಕೋಟಿ ರೂ. ಲೂಟಿ ಹೊಡೆದು ಸಿದ್ದರಾಮಯ್ಯ ಅವರ ಮೇಲೆ ಆರೋಪ‌ ಮಾಡುವುದಕ್ಕೆ ನಾಚಿಕೆ ಆಗುವುದಿಲ್ಲವೆ ಎಂದು ಹರಿಹಾಯ್ದರು.

ಟಿ.ಜೆ.ಅಬ್ರಹಾಂ ಜುಲೈ 26ರಂದು ಗವರ್ನರ್‌ಗೆ ದೂರು ಕೊಟ್ಟಿದ್ದ. ಈ ಕುರಿತು ಸರ್ಕಾರದ ಮುಖ್ಯ ಆಯುಕ್ತರು ರಾಜ್ಯಪಾಲರಿಗೆ ಸ್ಪಷ್ಟವಾಗಿ ಉತ್ತರಿಸಿದ್ದರು. ಆದರೂ ಕೂಡಲೇ ಹೆದರಿಸುತ್ತೀರ? ಇತಿಹಾಸದಲ್ಲಿ ಇಲ್ಲದ ಶೋಕಾಸ್ ನೋಟಿಸ್ ನೀಡುತ್ತೀರ? ನೀವು ಮಾಡುತ್ತಿರುವುದು ತಪ್ಪು, ನೋಟಿಸ್ ವಾಪಸ್ ಪಡೆಯುವಂತೆ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಸರ್ಕಾರದಲ್ಲಿ ಯಾರು ಸಹ ತಪ್ಪು ಮಾಡಿಲ್ಲ. ಮುಂದಿನ ನಾಲ್ಕು ವರ್ಷವೂ ಸ್ವಚ್ಛವಾದ ಆಡಳಿತವನ್ನು ನೀಡುತ್ತೇವೆ. ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇವೆ ಎಂದು ಇದೇ‌ ವೇಳೆ ಪರಮೇಶ್ವರ್ ಹೇಳಿದರು.

TAGGED:G Parameshwarramanagarasiddaramaiahಜಿ.ಪರಮೇಶ್ವರ್ರಾಮನಗರಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

West Bengala Election bjp manifesto Rs 3000 aid for women unemployed youth Uniform Civil Code in 6 months crackdown on infiltration Amit Shah Sankalp Patra 7th Pay Commission
Latest

ಮಹಿಳೆಯರಿಗೆ, ನಿರೋದ್ಯೋಗಿ ಯುವಕರಿಗೆ ತಿಂಗಳಿಗೆ 3 ಸಾವಿರ – ಬಂಗಾಳ ಗೆಲ್ಲಲು ಬಿಜೆಪಿಯಿಂದ 15 ಭರವಸೆ

Public TV
By Public TV
2 minutes ago
Srinanda
Chikkamagaluru

ದತ್ತಪೀಠದ ತಪ್ಪಲಿನಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶವವಾಗಿ ಪತ್ತೆ

Public TV
By Public TV
22 minutes ago
Red Corner Notice Mangaluru
Crime

ವಿದೇಶದಲ್ಲಿ ತಲೆಮರೆಸಿಕೊಂಡ ಇಬ್ಬರು ಆರೋಪಿಗಳ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ

Public TV
By Public TV
24 minutes ago
Siddaramaiah HD Kumaraswamy
Latest

ಹಣ ವಸೂಲಿಗಾಗಿ ಸಿದ್ದರಾಮಯ್ಯ ತಮ್ಮ ಮಗನನ್ನು ನೇಮಕ ಮಾಡಿಕೊಂಡಿದ್ದಾರೆ: ಹೆಚ್‌ಡಿಕೆ ವಾಗ್ದಾಳಿ

Public TV
By Public TV
51 minutes ago
seemanth kumar singh 2
Bengaluru City

ಯುವಕ ಝಾಂಬಿ ಡ್ರಗ್‌ ಸೇವನೆ ಮಾಡಿಲ್ಲ – ದುನಿಯಾ ವಿಜಯ್‌ ಸೇರಿದಂತೆ 25 ಮಂದಿಗೆ ಪೊಲೀಸರ ನೋಟಿಸ್‌

Public TV
By Public TV
1 hour ago
nitish kumar
Latest

ರಾಜ್ಯಸಭಾ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್‌ ಕುಮಾರ್‌ – ಶೀಘ್ರವೇ ಬಿಹಾರಕ್ಕೆ ನೂತನ ಸಿಎಂ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?