– ಆರ್.ಅಶೋಕ್, ಅಶ್ವತ್ ನಾರಾಯಣ್ ಸಾಥ್
ಮಂಡ್ಯ: ಇಲ್ಲಿನ ವಿವಿ ವಿಲೀನಗೊಳಿಸುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಬಿಜೆಪಿ (BJP) ಹಾಗೂ ಜೆಡಿಎಸ್ (JDS) ಪಕ್ಷಗಳು ಜಂಟಿಯಾಗಿ ಮಂಡ್ಯ ಡಿಸಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿತು.
Advertisement
ಮೈಸೂರು ವಿವಿಯೊಂದಿಗೆ ವಿಲೀನಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ. ಸರ್ಕಾರದ ನಿರ್ಧಾರ ಮಂಡ್ಯ ಅಸ್ಮಿತೆಗೆ ಧಕ್ಕೆ ತಂದಿದೆ. ಬಿಜೆಪಿ ಸರ್ಕಾರದ ಕೊಠಡಿ ಕಿತ್ತುಕೊಳ್ಳಲು ಕಾಂಗ್ರೆಸ್ ಸಂಚು ನಡೆಸಿದೆ. ಸಾವಿರಾರು ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡುತ್ತಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು. ಅಲ್ಲದೇ ವಿವಿ ವಿಲೀನಗೊಳಿಸುವ ನಿರ್ಧಾರ ಕೈಬಿಡುವಂತೆ ಆಗ್ರಹಿಸಿದರು. ಇದನ್ನೂ ಓದಿ: ಚಾಮರಾಜನಗರದಲ್ಲಿ ಭೀಕರ ಅಪಘಾತ – ಐವರು ಮಾದಪ್ಪ ಭಕ್ತರ ದುರ್ಮರಣ
Advertisement
Advertisement
ಪ್ರತಿಭಟನೆಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಡಿಸಿಎಂ ಅಶ್ವತ್ ನಾರಾಯಣ್, ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣ ಸೇರಿ ಭಾಗಿಯಾಗಿದ್ದರು. ಇದನ್ನೂ ಓದಿ: ಬದರಿನಾಥದಲ್ಲಿ ಹಿಮಪಾತ, 47 ಕಾರ್ಮಿಕರ ರಕ್ಷಣೆ – ಮೂವರ ಸ್ಥಿತಿ ಗಂಭೀರ, ಮೋದಿಯಿಂದ ಅಗತ್ಯ ನೆರವಿನ ಭರವಸೆ