Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Belgaum

SCSP-TSP ಹಣವನ್ನು ಗ್ಯಾರಂಟಿ ಯೋಜನೆಗೆ ಬಳಕೆ ಮಾಡಿದ್ದಕ್ಕೆ ಸರ್ಕಾರ ವಿರುದ್ಧ ಬಿಜೆಪಿ ವಾಗ್ದಾಳಿ

Public TV
Last updated: December 8, 2023 5:57 pm
Public TV
Share
3 Min Read
Legislative Council parishat 1
SHARE

– ವಿಧಾನ ಪರಿಷತ್‌ನಲ್ಲಿ ದೊಡ್ಡ ಗಲಾಟೆ

ಬೆಳಗಾವಿ: SC-ST ಸಮುದಾಯಕ್ಕೆ ಮೀಸಲಿದ್ದ SCSP-TSP ಹಣವನ್ನು ಗ್ಯಾರಂಟಿ ಯೋಜನೆಗೆ ಬಳಸಿಕೊಂಡ ವಿಚಾರವಾಗಿ ವಿಧಾನ ಪರಿಷತ್‌ನಲ್ಲಿ ದೊಡ್ಡ ಗಲಾಟೆ ನಡೆದಿದೆ. ಬಿಜೆಪಿ-ಕಾಂಗ್ರೆಸ್ ನಡುವೆ ಗದ್ದಲ ಗಲಾಟೆಗೆ ಸಾಕ್ಷಿ ಆಗಿದೆ.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ನಾರಾಯಣಸ್ವಾಮಿ ಪ್ರಶ್ನೆ ಕೇಳಿದ್ರು. ಸರ್ಕಾರ ಗ್ಯಾರಂಟಿ ಯೋಜನೆಗೆ SCSP-TSP ಹಣ ಬಳಕೆ ಮಾಡಿದೆ. ನಮ್ಮ ಹಣ ಬಳಕೆ ಮಾಡಿದ್ದು ತಪ್ಪು. ಕಾಂಗ್ರೆಸ್ ಸರ್ಕಾರ ಬಂದ ಮೇಲೆ 7D ತೆಗೆಯೋದಾಗಿ ಹೇಳಿದ್ರು. ಆದರೆ 7D ರದ್ದು ಮಾಡಿಲ್ಲ. 11,500 ಕೋಟಿ ರೂ. SCSP-TSP ಹಣವನ್ನು ಗ್ಯಾರಂಟಿಗೆ ಕೊಡಲಾಗಿದೆ. ದಲಿತರ ಹಣ ಯಾಕೆ ಎಲ್ಲರಿಗೂ ಕೊಡ್ತಿದ್ದೀರಾ? ಶಕ್ತಿ ಯೋಜನೆಯಲ್ಲಿ ಹೇಗೆ ದಲಿತರಿಗೆ ಹಣ ಬಿಡುಗಡೆ ಆಗುತ್ತೆ? ಜಾತಿ ನೋಡಿ ಶಕ್ತಿ ಯೋಜನೆ, ಅನ್ನಭಾಗ್ಯ ಯೋಜನೆ ಕೊಡ್ತೀರಾ.  SCSP-TSP ಹಣ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗೆ ಬಳಕೆ ಮಾಡಿಕೊಳ್ಳಬಾರದು ಅಂತ ಆಗ್ರಹಿಸಿದರು.

Legislative Council parishat 1

ಇದಕ್ಕೆ ಸಚಿವ ಮಹದೇವಪ್ಪ ಉತ್ತರ ನೀಡಿ, 2013-14 ರಲ್ಲಿ SCSP-TSP ಹಣ ಬಳಕೆ ಮಾಡಿಕೊಳ್ಳಬಾರದು ಅನ್ನೋ ನಿಯಮ ‌ಸಿದ್ದರಾಮಯ್ಯ ಅವರೇ ಜಾರಿ ಮಾಡಿದ್ರು. 7C, 7D, 7A, 7B ಅಂತ ನಿಯಮ ಆಗಿದೆ‌. ಇದರ ಅನ್ವಯ SC-ST ಜನರಿಗೆ ಹಣ ಹೋಗುತ್ತಿದೆ. 7C ನಿಯಮದ ಅನ್ವಯ ಗ್ಯಾರಂಟಿ ಯೋಜನೆಗೆ ಹಣ ಬಳಕೆ‌ ಮಾಡಲಾಗಿದೆ. 7D ನಿಯಮವನ್ನು ನಿನ್ನೆಯ ಕ್ಯಾಬಿನೆಟ್‌ನಲ್ಲಿ ರದ್ದು ಮಾಡಲಾಗಿದೆ. ಮೊದಲು 7D ನಿಯಮದಲ್ಲಿ ಹಣ ದುರ್ಬಳಕೆ ಆಗುತ್ತಿತ್ತು. ಹೀಗಾಗಿ 7D ರದ್ದು ಮಾಡಲಾಗಿದೆ. SCSP-TSP ಹಣ ಅನ್ಯ ಉದ್ದೇಶಕ್ಕೆ ಬಳಕೆ ಆಗೊಲ್ಲ. 7D ರದ್ದು ಮಾಡಲಾಗಿದೆ. ಈ ಅಧಿವೇಶನದಲ್ಲಿ ಕಾಯ್ದೆ ತರುತ್ತೇವೆ ಅಂತ ತಿಳಿಸಿದರು.

ಸಚಿವರ ಉತ್ತರಕ್ಕೆ ನಾರಾಯಣಸ್ವಾಮಿ ವಿರೋಧ ವ್ಯಕ್ತಪಡಿಸಿದರು. ಗ್ಯಾರಂಟಿ ಯೋಜನೆಗೆ ಹಣ ಬಳಕೆ ಸರಿಯಲ್ಲ. 11,500 ಕೋಟಿ ರೂ. ಹಣ SCSP-TSP ಖಾತೆಗೆ ವಾಪಸ್ ಹಾಕಬೇಕು. ನಮ್ಮ ಜನರಿಗೆ ಅನ್ಯಾಯ ಆಗಿದೆ. ನಮ್ಮ ಜನರ ಅಭಿವೃದ್ಧಿಗೆ ಮಾತ್ರ ಈ ಹಣ ಬಳಕೆ ಮಾಡಿಕೊಳ್ಳಬೇಕು. ಇಲ್ಲದೆ ಹೋದರೆ ನಾನು ಈ ಉತ್ತರ ಒಪ್ಪೊಲ್ಲ ಎಂದರು.

ಈ ವೇಳೆ ಸಚಿವ ಪ್ರಿಯಾಂಕ್ ಖರ್ಗೆ ಮಾತಾಡಿ,‌ SCSP-TSP ಹಣವನ್ನು ವಿವಿಧ ಇಲಾಖೆಯ ಕಾರ್ಯಕ್ರಮಕ್ಕೆ ಬಳಕೆ ಮಾಡಿ SC-ST ಜನರಿಗೆ ಕೊಡಬೇಕು. ಗ್ಯಾರಂಟಿ ಯೋಜನೆಯ ಹಣ SC-ST ಜನರಿಗೆ ನೀಡಲಾಗ್ತಿದೆ. ಶಕ್ತಿ ಯೋಜನೆಯಲ್ಲಿ SCSP-TSP ಹಣ ಕೊಡಬೇಕಾದ್ರೆ SC-ST ಫಲಾನುಭವಿಗಳ ಮಾಹಿತಿ ಇರಬೇಕು. ಫಲಾನುಭವಿಗಳ ಮಾಹಿತಿ ಇಲ್ಲದೆ ಹಣ ಕೊಡೋಕೆ ಆಗೊಲ್ಲ ಎಂದರು. ಇದನ್ನೂ ಓದಿ: ಕಾರು ಖರೀದಿಸುವಷ್ಟು ಹಣವಿಲ್ಲ ಎಂದು ಬೈಕ್‌ನಲ್ಲೇ ಸದನಕ್ಕೆ ಬಂದ ಶಾಸಕ

ಸಚಿವ ಮಹಾದೇವಪ್ಪ ಮಾತಾಡಿ, ಈಗಾಗಲೇ ಕಾಯ್ದೆ ಇದೆ. ಹೀಗಾಗಿ SCSP-TSP ಹಣ ದುರುಪಯೋಗ ಆಗೊಲ್ಲ. ಗ್ಯಾರಂಟಿ ಯೋಜನೆಗೆ SC-ST ಅವರಿಗೆ ಬಿಟ್ಡು ಬೇರೆ ಅವರಿಗೆ ಹಣ ಬಿಡುಗಡೆ ಆಗೊಲ್ಲ. ನಿಯಮ ಪ್ರಕಾರವೇ ಹಣ ಖರ್ಚು ಮಾಡ್ತೀವಿ ಎಂದರು.

ಇದಕ್ಕೆ ಒಪ್ಪದ ನಾರಾಯಣಸ್ವಾಮಿ ಮತ್ತು ಬಿಜೆಪಿ ಸದಸ್ಯರು ಗ್ಯಾರಂಟಿ ಯೋಜನೆಗೆ ಹಣ ಬಿಡುಗಡೆ ವಿರೋಧಿಸಿ ಸದನದ ಬಾವಿಗಳಿದು ಪ್ರತಿಭಟನೆ ನಡೆಸಿದರು. ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದರು. ಗದ್ದಲ ಗಲಾಟೆ ಹಿನ್ನಲೆಯಲ್ಲಿ ಸಭಾಪತಿಗಳು ಕಲಾಪ 10 ನಿಮಿಷ ಕಾಲ ಮುಂದೂಡಿದರು.

ಬಳಿಕ ಕಲಾಪ ಪ್ರಾರಂಭ ಆದ ಮೇಲೂ ಸರ್ಕಾರ ಸರಿಯಾಗಿ ಉತ್ತರ ನೀಡಿಲ್ಲ ಅಂತ ಬಿಜೆಪಿ ‌ಪ್ರತಿಭಟನೆ ಮುಂದುವರಿಸಿತು. ಈ ವೇಳೆ ಬಿಜೆಪಿ-ಕಾಂಗ್ರೆಸ್ ಸದಸ್ಯರ ನಡುವೆ ಗಲಾಟೆ ನಡೀತು. ಗದ್ದಲ ಗಲಾಟೆ ಹಿನ್ನಲೆ ಮತ್ತೆ ಕಲಾಪವನ್ನು ಸಭಾಪತಿಗಳು 10 ನಿಮಿಷಗಳ ಕಾಲ ಮುಂದೂಡಿಕೆ ಮಾಡಿದರು. ಬಳಿಕ ಸದನ ಪ್ರಾರಂಭವಾದಾಗಲೂ ಬಿಜೆಪಿ, ಕಾಂಗ್ರೆಸ್ ಸದಸ್ಯರ ನಡುವೆ ಗಲಾಟೆ ನಡೀತು. ಪರಸ್ಪರ ಸದಸ್ಯರು ಘೋಷಣೆ ಮಾಡಿದ್ರು. ಮಧ್ಯೆ ಪ್ರವೇಶ ಮಾಡಿದ ಸಭಾಪತಿಗಳು ಸೋಮವಾರ ಈ ವಿಷಯ ಚರ್ಚೆ ಮಾಡಲು ಅರ್ಧ ಗಂಟೆ ಕಾಲ ಅವಕಾಶ ಕೊಡೋದಾಗಿ ತಿಳಿಸಿದರು. ಸಭಾಪತಿ ಭರವಸೆ ಹಿನ್ನಲೆಯಲ್ಲಿ ಬಿಜೆಪಿ ಸದಸ್ಯರು ಪ್ರತಿಭಟನೆ ವಾಪಸ್ ಪಡೆದರು. ಇದನ್ನೂ ಓದಿ: ಮೋಡ ಬಿತ್ತನೆಗೆ ಸರ್ಕಾರ ಹಣ ಕೊಡದಿದ್ರೆ ನಾನೇ ಮಾಡಿಸ್ತೀನಿ: ಪ್ರಕಾಶ್ ಕೋಳಿವಾಡ

TAGGED:belagavibjpcongressGuaranteeLegislative Councilಕಾಂಗ್ರೆಸ್ಗ್ಯಾರಂಟಿಬಿಜೆಪಿಬೆಳಗಾವಿವಿಧಾನ ಪರಿಷತ್
Share This Article
Facebook Whatsapp Whatsapp Telegram

Cinema News

Ramya Prajwal Devaraj
ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್: ಪ್ರಜ್ವಲ್ ಕಿಡಿ
Cinema Latest Sandalwood Top Stories
Ramya Case 2 arrested by ccb police
ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ – ಸಿಸಿಬಿ ಪೊಲೀಸರಿಂದ ಇನ್ನಿಬ್ಬರು ಅರೆಸ್ಟ್
Cinema Latest Sandalwood Top Stories
Kantara 2 1
ಕಾಂತಾರದಲ್ಲಿ ಕಾಣಿಸಲಿದ್ದಾರೆ ಸೂಪರ್‌ಸ್ಟಾರ್!
Cinema Latest
Coolie 2
ಸೂಪರ್‌ಸ್ಟಾರ್ ರಜನಿಕಾಂತ್ ಕೂಲಿಗೆ ಭಾರಿ ಡಿಮ್ಯಾಂಡ್
Bollywood Cinema Latest South cinema Top Stories
dulquer salmaan dq41
ದುಲ್ಕರ್ ಸಲ್ಮಾನ್ ಹೊಸ ಚಿತ್ರಕ್ಕೆ ಚಾಲನೆ : ನಟ ನಾನಿ ಸಾಥ್
Cinema Latest Top Stories

You Might Also Like

team india
Cricket

1 ಜಯ, 12 ಅಂಕ ಪಡೆದು ಮೂರನೇ ಸ್ಥಾನಕ್ಕೆ ಭಾರತ ಹೈಜಂಪ್‌!

Public TV
By Public TV
7 hours ago
Narendra Modi Donald Trump
Latest

ನೀವು ರಷ್ಯಾದಿಂದ ಆಮದು ಮಾಡಬಹುದು, ನಾವು ಮಾಡಿದ್ರೆ ಯುದ್ಧಕ್ಕೆ ಫಂಡಿಂಗ್‌ ಹೇಗೆ: ಟ್ರಂಪ್‌ಗೆ ಭಾರತದ ಗುದ್ದು

Public TV
By Public TV
8 hours ago
Kolar Rain
Bidar

ಕೋಲಾರ ಜಿಲ್ಲೆಯಾದ್ಯಂತ ಉತ್ತಮ ಮಳೆ – ರೈತರ ಮೊಗದಲ್ಲಿ ಮಂದಹಾಸ

Public TV
By Public TV
8 hours ago
Yadagiri Arrest
Districts

11 ಲಕ್ಷದ ಚಿನ್ನ ಕದ್ದು ಪರಾರಿ – ನಾಲ್ಕು ಕೇಸ್‌ಲ್ಲಿ ಭಾಗಿಯಾಗಿದ್ದ ಕತರ್ನಾಕ್ ಕಳ್ಳ ಅರೆಸ್ಟ್

Public TV
By Public TV
8 hours ago
mahadevappa
Bengaluru City

ಟಿಪ್ಪು ಡ್ಯಾಂ ಕಟ್ಟಿದ್ದ ಅಂತ ನಾನು ಎಲ್ಲಿಯೂ ಕೂಡ ಹೇಳಿಲ್ಲ – ಮಹದೇವಪ್ಪ ಯೂಟರ್ನ್

Public TV
By Public TV
8 hours ago
Prahlad Joshi 1
Latest

ಮೈಸೂರು ಮಹಾರಾಜರ ಕೊಡುಗೆಗೆ ಕಾಂಗ್ರೆಸ್ ಅಪಸ್ವರ – ಮಹದೇವಪ್ಪ ಮೊದ್ಲು ಇತಿಹಾಸ ಅರಿಯಲಿ: ಜೋಶಿ ಕಿಡಿ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?