ಹುದ್ದೆಗೆ ತಕ್ಕುದಾದ ಮಾತನಾಡಿ, ಕರಾವಳಿಯನ್ನು ನೀವು ಉದ್ಧಾರ ಮಾಡಿಲ್ಲ- ಸಿಎಂ ವಿರುದ್ಧ ಕೋಟಾ ಕಿಡಿ

Public TV
1 Min Read
HDK KOTA

ಉಡುಪಿ: ಮುಖ್ಯಮಂತ್ರಿ ಹುದ್ದೆಗೆ ತಕ್ಕುದಾದ ಮಾತುಗಳನ್ನಾಡಿ. ಕರಾವಳಿಯನ್ನು ನೀವು ಉದ್ಧಾರ ಮಾಡಿಲ್ಲ. ನಿಮ್ಮ ಕುಟುಂಬ ರಾಜಕಾರಣಕ್ಕೆ ಕರಾವಳಿ ಜನ ಬೆಂಬಲ ನೀಡಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಗರಂ ಆಗಿದ್ದಾರೆ.

ಕರಾವಳಿ ಜನರಿಗೆ ತಿಳುವಳಿಕೆ ಇಲ್ಲ. ಅವರು ಮೋದಿಗೆ ವೋಟ್ ಹಾಕ್ತಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕರಾವಳಿಗೆ ನಿಮ್ಮ ಕೊಡುಗೆ ಏನು ಎಂದು ಮೊದಲು ಹೇಳಿ. ಉಡುಪಿ ಜನ ನಿಮ್ಮ ಮುಂದೆ ತಿರುಗಿ ಬಿದ್ದಿದ್ದಾರೆ. ನಿಮಗೆ ಮತ ಹಾಕಿಲ್ಲ ಅಂತ ಕರಾವಳಿ ಜನರ ಅವಹೇಳನ ಮಾಡ್ತೀರಾ. ಹೇಳಿಕೆ ವಾಪಸ್ ಪಡೆದು ಕ್ಷಮೆ ಕೇಳಿ ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಉಡುಪಿ, ಕಾಪು, ಕಾರ್ಕಳ ಜನಕ್ಕೆ ತಿಳುವಳಿಕೆ ಇಲ್ಲ- ಸಿಎಂ ಹೇಳಿಕೆ ವಿರುದ್ಧ ಕರಾವಳಿ ಗರಂ

KOTA

ಕುಟುಂಬ ರಾಜಕಾರಣ ಕರಾವಳಿಯಲ್ಲಿ ನಡೆಯಲ್ಲ. ನೀವೇನು ಕರಾವಳಿಯನ್ನು ಉದ್ಧಾರ ಮಾಡಿಲ್ಲ. ಮುಖ್ಯಮಂತ್ರಿ ಹುದ್ದೆಗೆ ತಕ್ಕುದಾದ ಮಾತನ್ನು ಆಡಿ. ಬಜೆಟ್ ನಲ್ಲಿ ಕರಾವಳಿ ಗೆ ಅನ್ಯಾಯ ಮಾಡಿದ್ದೀರಿ. ವಿಧಾನಸೌಧದ ಎದುರು ಕರಾವಳಿ ಶಾಸಕರು ಧರಣಿ ಕೂತಿದ್ದನ್ನು ಮರೆತು ಬಿಟ್ರಾ ಎಂದು ಪ್ರಶ್ನಿಸಿ, ಯಾವ ಸಿಎಂ ಕೂಡ ನಿಮ್ಮಷ್ಟು ಕರಾವಳಿಯನ್ನು ಅವಹೇಳನ ಮಾಡಿಲ್ಲ ಎಂದು ಸಿಎಂ ವಿರುದ್ಧ ಗರಂ ಆದ್ರು. ಇದನ್ನೂ ಓದಿ: ಲೋಕಾಯುಕ್ತ ಮುಗಿಸಿದಂತೆ ಲೋಕಪಾಲ್ ಮುಗಿಸ್ತೀರಾ: ಖರ್ಗೆಗೆ ಶ್ರೀನಿವಾಸ ಪೂಜಾರಿ ಪ್ರಶ್ನೆ

ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ದೇಶದಲ್ಲೇ ಉಡುಪಿ ಮುಂಚೂಣಿಯಲ್ಲಿದೆ. ಕರಾವಳಿಯ ಅಭಿವೃದ್ಧಿಗೆ ದೇವೇಗೌಡರ ಕುಟುಂಬ ಕಾರಣ ಅಲ್ಲ. ರೇವಣ್ಣ ಲೋಕೋಪಯೋಗಿ ಇಲಾಖೆಯಿಂದ ಕರಾವಳಿಗೆ ಏನು ಕೊಟ್ಟಿದ್ದೀರಿ. ಬಂದರು ಅಭಿವೃದ್ಧಿಗೆ ಸಿಎಂ ಏನು ಕೊಟ್ಟಿದ್ದೀರಿ. ನಿಮ್ಮ ಕುಟುಂಬ ರಾಜಕಾರಣಕ್ಕೆ ಕರಾವಳಿಗರು ಬೆಲೆ ನೀಡಲ್ಲ. ನಿಮ್ಮ ಪಕ್ಷಕ್ಕೆ ವಿದ್ಯಾವಂತ ಜನರು ವೋಟ್ ಹಾಕಲ್ಲ. ಮುಂದಿನ ಚುನಾವಣೆಯಲ್ಲಿ ಜಿಡಿಎಸ್ ಅಭ್ಯರ್ಥಿಗೆ ತಕ್ಕಪಾಠ ಕಲಿಸುತ್ತಾರೆ. ನಿಮ್ಮ ಮಾತಿನಿಂದ ಬಿಜೆಪಿಗೆ ಬಹುಮತ ಬರಲು ಅನುಕೂಲವಾಗಿದೆ ಅಂದ್ರು.

HDK 1

Share This Article
Leave a Comment

Leave a Reply

Your email address will not be published. Required fields are marked *