ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಅಚ್ಚರಿಯಾಗಿ ಟಿಕೆಟ್ ಪಡೆದ ತೇಜಸ್ವಿ ಸೂರ್ಯ ಅವರ ಆಯ್ಕೆ ಬಗ್ಗೆ ಪಕ್ಷದಲ್ಲಿ ಅಸಮಾಧಾನ ಎದ್ದ ಬೆನ್ನಲ್ಲೇ ಬಿಜೆಪಿ ನಾಯಕ ವಿ ಸೋಮಣ್ಣ ಅವರ ಆಪ್ತ ಲಕ್ಷ್ಮೀನಾರಾಯಣ್ ಪಕ್ಷ ತೊರೆದು ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆ.
ನಗರದ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಲಕ್ಷ್ಮೀ ನಾರಾಯಣ ಅವರಿಗೆ ಕಾಂಗ್ರೆಸ್ ಶಾಲು ಹಾಕಿ ಸ್ವಾಗತ ಕೋರಿದರು. ವಿ ಸೋಮಣ್ಣ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಲಕ್ಷ್ಮೀ ನಾರಾಯಣ ಅವರು ಬಿಬಿಎಂಪಿ ಉಪಮಹಾಪೌರರು ಆಗಿದ್ದರು. ಅವರೊಂದಿಗೆ 100 ಕ್ಕೂ ಹೆಚ್ಚು ಸ್ಥಳೀಯ ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆಯಾದರು.
ಈ ವೇಳೆ ಮಾತನಾಡಿದ ದಿನೇಶ್ ಗುಂಡೂರಾವ್ ಅವರು, ಲಕ್ಷ್ಮೀ ನಾರಾಯಣ ಅವರು ವಿಜಯನಗರ, ಚಿಕ್ಕಪೇಟೆಯಲ್ಲಿ ತಮ್ಮ ಪ್ರಭಾವವನ್ನು ಹೊಂದಿದ್ದು, ಈ ಬಾರಿ ಅವರ ನಾಯಕತ್ವವು ನಮ್ಮ ಅಭ್ಯರ್ಥಿ ಬಿಕೆ ಹರಿಪ್ರಸಾದ್ ಅವರಿಗೆ ಹೆಚ್ಚಿನ ಬಲ ತುಂಬಲಿದೆ ಎಂದು ತಿಳಿಸಿದರು.
ಲಕ್ಷ್ಮೀನಾರಾಯಣ ಅವರು ವಿಜಯನಗರ ಹಾಗೂ ಚಿಕ್ಕ ಪೇಟೆಯಲ್ಲಿ ತಮ್ಮ ಪ್ರಭಾವವನ್ನು ಹೊಂದಿದ್ದು ಈ ಬಾರಿ ಇವರ ನಾಯಕತ್ವವು ಬಿ.ಕೆ.ಹರಿಪ್ರಸಾದ್ ಅವರಿಗೆ ಹೆಚ್ಚಿನ ಬಲ ತುಂಬಲಿದ್ದಾರೆ.@dineshgrao pic.twitter.com/bQrPLsLr8Q
— Karnataka Congress (@INCKarnataka) April 8, 2019