ನವದೆಹಲಿ: ಮೋದಿ.. ಮೋದಿ (Narendra Modi) ಎನ್ನುವವರ ಕಾಪಾಳಕ್ಕೆ ಎಂದು ಹೇಳಿಕೆ ನೀಡಿದ್ದ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ವಿರುದ್ಧ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.
ತಂಗಡಗಿ ಹೇಳಿಕೆಗೆ ಅಸಮಾಧಾನ ಹೊರಹಾಕಿರುವ ಬಿಜೆಪಿ ನಾಯಕ ಶೆಹಜಾದ್ ಪೂನಾವಾಲಾ (Shehzad Poonawalla), ಕರ್ನಾಟಕ ಕಾಂಗ್ರೆಸ್ನ ಸಚಿವ ಶಿವರಾಜ್ ತಂಗಡಗಿ ಬಿಜೆಪಿಯನ್ನು ವಿರೋಧಿಸುತ್ತಲೇ ಬೆದರಿಕೆಯ ರಾಜಕಾರಣ ಆರಂಭಿಸಿದ್ದಾರೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಪಾಲಿಕೆ ಮೇಯರ್ ಚುನಾವಣೆಗೆ ಬಳ್ಳಾರಿಯಲ್ಲಿ ಚಿನ್ನ, ಬೆಳ್ಳಿ ಗಿಫ್ಟ್ ಪಾಲಿಟಿಕ್ಸ್
ಪ್ರಧಾನಿ ಮೋದಿಯನ್ನು ಬೆಂಬಲಿಸುವ ಯಾವುದೇ ಯುವಕರ ಕಪಾಳಕ್ಕೆ ಹೊಡೆಯಬೇಕು ಎಂದು ಸಚಿವರು ಹೇಳಿಕೆ ನೀಡಿದ್ದಾರೆ. ನಾನು ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ಮತ್ತು ಭಾರತೀಯ ಒಕ್ಕೂಟದ ಎಲ್ಲ ನಾಯಕರನ್ನು ಕೇಳಲು ಬಯಸುತ್ತೇನೆ. ಇದೇನಾ ಮೊಹಬ್ಬತ್ ಕಿ ದುಕಾನ್ (ಪ್ರೀತಿಯ ಅಂಗಡಿ) ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
ಇದು ಕಾಕತಾಳೀಯವಲ್ಲ, ಬೇಕಂತಲೇ ಈ ರೀತಿ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ನಾಯಕರು ಪಿಎಂ ಮೋದಿ ಮತ್ತು ಅವರ ಬಡ ಸಮುದಾಯದ ಮೇಲೆ 100 ಕ್ಕೂ ಹೆಚ್ಚು ನಿಂದನೀಯ ಮಾತುಗಳನ್ನು ಆಡಿದ್ದಾರೆ. ಕಾಂಗ್ರೆಸ್ ಮಂತ್ರಿಯೊಬ್ಬರು ದೇಶದ ಯುವಕರನ್ನು ಹೊಡೆಯುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧೆ – ಅಧಿಕೃತ ಘೋಷಣೆ ಮಾತ್ರ ಬಾಕಿ
ಇದರ ವಿರುದ್ಧ ಕಾಂಗ್ರೆಸ್ ಏನಾದರೂ ಕ್ರಮ ಕೈಗೊಳ್ಳಲಿದೆಯೇ ಎಂದು ಪ್ರಶ್ನಿಸಿರುವ ಶೆಹಜಾದ್, ಕರ್ನಾಟಕದ ಯುವಕರು ಇದಕ್ಕೆ ಚುನಾವಣೆಯಲ್ಲಿ ಉತ್ತರ ನೀಡಲಿದ್ದಾರೆ ಎಂದು ಕಾಂಗ್ರೆಸ್ಗೆ ಟಾಂಗ್ ಕೊಟ್ಟಿದ್ದಾರೆ.