ಗುಂಡಿಕ್ಕಿ ಬಿಜೆಪಿ ಉಪಾಧ್ಯಕ್ಷನ ಕೊಲೆ- ನಕ್ಸಲರ ಕೈವಾಡ ಶಂಕೆ

Public TV
1 Min Read
SAGAR SAHU

ರಾಯ್ಪುರ: ಬಿಜೆಪಿ (BJP) ಜಿಲ್ಲಾ ಉಪಾಧ್ಯಕ್ಷನನ್ನು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಛತ್ತೀಸ್‍ಗಢ (Chhattisgarh) ದಲ್ಲಿ ನಡೆದಿದೆ.

ಈ ಘಟನೆ ನಾರಾಯಣ್‍ಪುರ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ. ಮೃತನನ್ನು ಸಾಹು ಎಂದು ಗುರುತಿಸಲಾಗಿದೆ. ಕೊಲೆ ಕೃತ್ಯದ ಹಿಂದೆ ನಕ್ಸಲ (Naxal) ರ ಕೈವಾಡವಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

bjp flag

ಸಾಹು ಅವರು ಛೋಟೆಡೊಂಗರ್ ಗ್ರಾಮದಲ್ಲಿರುವ ತಮ್ಮ ಮನೆಯಲ್ಲಿದ್ದರು. ರಾತ್ರಿ 8 ಗಂಟೆ ಸುಮಾರಿಗೆ ಇಬ್ಬರು ಆಗಂತುಕರು ಏಕಾಏಕಿ ಮನೆ ಮೇಲೆ ದಾಳಿ ನಡೆಸಿದ್ದಾರೆ. ಅಲ್ಲದೆ ಕುಟುಂಬದವರ ಎದುರೇ ಸಾಹು ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಸಾಹು ಅವರನ್ನು ಕೂಡಲೇ ಕುಟುಂಬಸ್ಥರು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಅವರು ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಹತ್ಯೆ ಮಾಡಲು ಬಂದವನೇ ಭೀಕರವಾಗಿ ಕೊಲೆಯಾದ

SAGAR SAHU 1 1

ಈ ಸಂಬಂಧ ಅಲ್ಲಿನ ಪೊಲೀಸರು ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ಕೃತ್ಯದ ಹಿಂದೆ ನಕ್ಸಲರ ಕೈವಾಡವಿರುವುದು ಮೇಲ್ನೋಟಕ್ಕೆ ತಿಳಿದುಬರುತ್ತಿದೆ. ಎಲ್ಲಾ ಆಯಾಮಗಳಲ್ಲಿ ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಅವರು ವಿವರಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *