ಪುರಸಭೆ ಅಧ್ಯಕ್ಷ ಗಾದಿಗಾಗಿ ಬಿಜೆಪಿ ಮುಖಂಡ ವಾಸು ಕೊಲೆ?

Public TV
1 Min Read
ane muredr

ಬೆಂಗಳೂರು: ಎರಡು ದಿನಗಳ ಹಿಂದೆ ನಡೆದಿದ್ದ ಬೊಮ್ಮಸಂದ್ರ ಪುರಸಭೆ ಸದಸ್ಯ ಮತ್ತು ಬಿಜೆಪಿ ಮುಖಂಡ ಶ್ರೀನಿವಾಸ್ ಪ್ರಸಾದ್ ಅಲಿಯಾಸ್ ವಾಸು ಹತ್ಯೆಗೆ ಹೊಸ ತಿರುವು ಸಿಕ್ಕಿದೆ.

vasu

ತನ್ನ ತಾಯಿ ಪುರಸಭೆ ಅಧ್ಯಕ್ಷರಾಗೋದಕ್ಕೆ ಶ್ರೀನಿವಾಸ್ ಪ್ರಸಾದ್ ಅಡ್ಡಿಯಾಗಿದ್ದಾರೆ ಅಂತಾ ಭಾವಿಸಿ ಬಾಡಿ ಬಿಲ್ಡರ್ ಮಂಜುನಾಥ್ ಅಲಿಯಾಸ್ ಬನಹಳ್ಳಿ ಮಂಜ ಕೊಲೆ ಮಾಡಿಸಿದ್ದಾನೆ ಅಂತಾ ಮೂಲಗಳು ತಿಳಿಸಿವೆ.

murder accused

ಅಧ್ಯಕ್ಷಗಾದಿಗಾಗಿ ಶ್ರೀನಿವಾಸ್ ಮತ್ತು ಮಂಜನ ತಾಯಿ ಸರೋಜಮ್ಮ ನಡುವೆ ತೀವ್ರ ಪೈಪೋಟಿಯಿತ್ತು. ವಾಸು ಅವರನ್ನ ಹತ್ಯೆಗೈದ್ರೆ ತನ್ನ ತಾಯಿಗೆ ಅಧಿಕಾರ ಸಲೀಸಾಗಿ ದಕ್ಕಲಿದೆ ಅಂತಾ ಭಾವಿಸಿ ಕೊಲೆ ಮಾಡಿಸಿದ್ದಾನೆ ಎನ್ನಲಾಗಿದೆ. ಪ್ರಕರಣ ಸಂಬಂಧ ಪುರಸಭೆ ಸದಸ್ಯೆ ಸರೋಜಮ್ಮ, ಮಧು, ನಾರಾಯಣಸ್ವಾಮಿ, ಮುರಳಿ, ಮಂಜುನಾಥ ಅನ್ನೋರನ್ನು ಅರೆಸ್ಟ್ ಮಾಡಲಾಗಿದೆ. ಬಾಡಿ ಬಿಲ್ಡರ್ ಮಂಜ ಸೇರಿದಂತೆ ಉಳಿದವರಿಗಾಗಿ ಹುಡುಕಾಟ ನಡೆದಿದೆ. ಕೊಲೆಯ ಹಿಂದೆ ಕಾಂಗ್ರೆಸ್ ಶಾಸಕ ಬಿ ಶಿವಣ್ಣ ಕೈವಾಡವಿದೆ ಅಂತಾ ಸ್ಥಳೀಯ ಬಿಜೆಪಿ ಮುಖಂಡರು ಆರೋಪಿಸಿದ್ದಾರೆ.

murder accused 2

ಮುಖಂಡನ ಹತ್ಯೆ ಖಂಡಿಸಿ ಬಿಜೆಪಿ ಇವತ್ತು ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆಗೆ ನಿರ್ಧರಿಸಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿದೆ ಅಂತಾ ಬಿಜೆಪಿ ಆರೋಪಿಸಿದೆ.

murder protest

ಮಾರ್ಚ್ 14ರಂದು ನಗರದ ಬಿಟಿಎಲ್ ಕಾಲೇಜು ಮುಂಭಾಗದಲ್ಲಿ ಬಿಜೆಪಿ ಮುಖಂಡ ವಾಸು ಅವರನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *