Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕಳೆದ ವರ್ಷ 3 ರೂ. ಈಗ 2 ರೂ. ಏರಿಕೆ – ರಾಜ್ಯ ಸರ್ಕಾರದ ವಿರುದ್ಧ ಕೇಸರಿ ಕಲಿಗಳು ಕೆಂಡಾಮಂಡಲ

Public TV
Last updated: June 25, 2024 3:24 pm
Public TV
Share
3 Min Read
Vijayendra
SHARE

– ಜನರ ಮನೆಯಲ್ಲಿ ಕ್ಷೀರ ಉಕ್ಕೋದನ್ನ ಕ್ಷೀಣಿಸಲು ಹಾಲು ದರ ಉಕ್ಕಿಸಿದೆ – ವಿಜಯೇಂದ್ರ

ಬೆಂಗಳೂರು: ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು (KMF) ನಂದಿನಿ ಹಾಲಿನ ದರ ಹೆಚ್ಚಿಸಿದ್ದು, ಗ್ರಾಹಕರಿಗೆ ಶಾಕ್ ನೀಡಿದೆ. ಪ್ರತಿ ಲೀಟರ್ ಪ್ಯಾಕೆಟ್ ಹಾಲಿನ ದರವನ್ನು 2.10 ರೂ. ನಷ್ಟು ಹೆಚ್ಚಿಸಿದೆ (Nandini Milk Price Hike). ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು (BJP Leaders) ಮುಗಿಬಿದ್ದಿದ್ದಾರೆ. ತುರ್ತು ಪರಿಸ್ಥಿತಿಯ ಸುವರ್ಣ ಮಹೋತ್ಸವದ ಸಂದರ್ಭದಲ್ಲಿ ಕಾಂಗ್ರೆಸ್‌ ಸರ್ಕಾರ ಜನರಿಗೆ ಬೆಲೆ ಏರಿಕೆ ಕೊಡುಗೆ ನೀಡಿದ್ದು, ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ ಎಂದು ತಮ್ಮ ಸೋಷಿಯಲ್‌ ಮೀಡಿಯಾ X ಖಾತೆಗಳಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ಬಿ.ವೈ ವಿಜಯೇಂದ್ರ (BY Vijayendra)
ಬೆಲೆ ಏರಿಸುವುದರಲ್ಲಿ ನಿಸ್ಸೀಮತನಕ್ಕೆ ಹೆಸರಾಗುತ್ತಿರುವ ಕರ್ನಾಟಕ ಕಾಂಗ್ರೆಸ್‌ ಸರ್ಕಾರ (Congress GovernMent) ಜನ ಸಾಮಾನ್ಯ ಮನೆಯಲ್ಲಿ ಕ್ಷೀರ ಉಕ್ಕುವುದನ್ನು ಕ್ಷೀಣಿಸಲು ಹಾಲು ದರವನ್ನು ಉಕ್ಕಿಸಲು ಮುಂದಾಗಿದೆ. ಇತ್ತ ಬಡವರಿಗೂ ಉಪಕಾರಿಯಾಗಲ್ಲಿಲ್ಲ, ಹೈನುಗಾರಿಕೆ ಹಾಗೂ ಪಶುಸಂಗೋಪನೆ ಅವಲಂಬಿಸಿರುವ ರೈತರ ಬದುಕೂ ಹಸನಾಗಿಸಲಿಲ್ಲ, ಇದೀಗ ನಂದಿನಿ ಹಾಲಿನ ದರ ಹೆಚ್ಚಿಸಿ ಸದ್ಯ ಲೀಟರ್ ಹಾಲಿಗೆ ಇರುವ 42 ರೂಪಾಯಿ ದರವನ್ನು 2 ರೂ 10 ಪೈಸೆ ಹೆಚ್ಚಳ ಮಾಡಲಾಗಿದೆ. ಈ ರಾಜ್ಯದ ಜನರ ಬದುಕಿನೊಂದಿಗೆ ಚೆಲ್ಲಾಟವಾಡಲು ಹೊರಟಿರುವ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಕಳೆದು ಕೊಂಡಿದೆ. ಈ ಜನವಿರೋಧಿ ಸರ್ಕಾರ ಕೆಳಗಿಳಿಸುವವರೆಗೂ ಬಿಜೆಪಿಯ ಜನಪರ ಹೋರಾಟ ನಿರಂತರ ಸಾಗಲಿದೆ.

Vijayendra 1

ಆರ್‌. ಅಶೋಕ್‌ (R Ashoka)
ತುರ್ತು ಪರಿಸ್ಥಿತಿ ಹೇರಿಕೆಯ ವಾರ್ಷಿಕೋತ್ಸವ ಸಂಭ್ರಮಿಸಲು ಕರ್ನಾಟಕ ಕಾಂಗ್ರೆಸ್‌ ಸರ್ಕಾರ ನಂದಿನಿ ಹಾಲಿನ ದರವನ್ನ ಲೀಟರ್‌ಗೆ ಎರಡು ರೂಪಾಯಿ ಹೆಚ್ಚಳ ಮಾಡಿ ವಿಕೃತ ಸಂತೋಷ ಅನುಭವಿಸುತ್ತಿದೆ. ಸಿಎಂ ಸಿದ್ದರಾಮಯ್ಯನವರೇ, ತಾವು ಅಧಿಕಾರಕ್ಕೆ ಬಂದ ಮೇಲೆ ಕೇವಲ 13 ತಿಂಗಳಿನಲ್ಲಿ ಹಾಲಿನ ದರವನ್ನ ಎರಡು ಬಾರಿ ಹೆಚ್ಚಿಸಿದ್ದೀರಿ. ಕಳೆದ ವರ್ಷ ಆಗಸ್ಟ್ ನಲ್ಲಿ 3 ರೂ. ಹೆಚ್ಚಳವಾಗಿದ್ದ ಹಾಲಿನ ಬೆಲೆ ಈಗ ಮತ್ತೊಮ್ಮೆ 2 ರೂಪಾಯಿ ಹೆಚ್ಚಾಗಿದೆ.

R Ashoka 1

ರಾಜ್ಯದ ಬಡವರು, ಮಾಧ್ಯಮ ವರ್ಗದ ಜನ ಈಗಾಗಲೇ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ಗಗನಕ್ಕೇರಿರುವ ತರಕಾರಿ ಬೆಲೆಗಳಿಂದ ಕಂಗಾಲಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಹಾಲಿನ ದರ ಏರಿಸಿ ಮತ್ತೊಮ್ಮೆ ಬಡವರ ಗಾಯದ ಮೇಲೆ ಬರೆ ಎಳೆದಿದ್ದೀರಿ. ನಿಮಗೆ ಬಡವರು, ಮಧ್ಯಮ ವರ್ಗದ ಜನರ ಮೇಲೆ ಕಿಂಚಿತ್ತಾದರೂ ಕನಿಕರ ಇದ್ದರೆ, ಈ ಕೂಡಲೇ ಹಾಲಿನ ದರ ಏರಿಕೆ ಆದೇಶವನ್ನು ಹಿಂಪಡೆಯಿರಿ.

ಬಿಜೆಪಿ ಕರ್ನಾಟಕ (BJP Karnataka):
ಹಾಲು ಉತ್ಪಾದಕರಿಗೆ ಹಾಲಾಹಲ ನೀಡಿದ್ದ ಕರ್ನಾಟಕ ಕಾಂಗ್ರೆಸ್‌ ಸರ್ಕಾರ ಈಗ ಗ್ರಾಹಕರಿಗೆ ಅಕ್ಷರಶಃ ಬೆಲೆಯೇರಿಕೆಯ ವಿಷವುಣಿಸುತ್ತಿದೆ. ಹಾಲು ಉತ್ಪಾದಕರಿಗೆ ಸಬ್ಸಿಡಿ ನೀಡದೇ ಭಂಡತನ ತೋರಿದ ಕಾಂಗ್ರೆಸ್‌ ಸರ್ಕಾರ, ಇದೀಗ ಏಕಾಏಕಿ ಹಾಲಿನ ದರವನ್ನು ಪ್ರತಿ ಲೀ.ಗೆ 2.10 ಏರಿಸಿ ಗಾಯದ ಮೇಲೆ ಬರೆ ಎಳೆಯುತ್ತಿದೆ. ಬೆಲೆ ಏರಿಸುವುದರಲ್ಲಿ ನಿಸ್ಸೀಮತನಕ್ಕೆ ಹೆಸರಾಗುತ್ತಿರುವ ಸರ್ಕಾರ ಜನ ಸಾಮಾನ್ಯ ಮನೆಯಲ್ಲಿ ಕ್ಷೀರ ಉಕ್ಕುವುದನ್ನು ಕ್ಷೀಣಿಸಲು ಹಾಲು ದರವನ್ನು ಉಕ್ಕಿಸಲು ಮುಂದಾಗಿದೆ.

ಇತ್ತ ಬಡವರಿಗೂ ಉಪಕಾರಿಯಾಗಲ್ಲಿಲ್ಲ, ಹೈನುಗಾರಿಕೆ ಹಾಗೂ ಪಶುಸಂಗೋಪನೆ ಅವಲಂಬಿಸಿರುವ ರೈತರ ಬದುಕೂ ಹಸನಾಗಿಸಲಿಲ್ಲ, ಇದೀಗ ನಂದಿನಿ ಹಾಲಿನ ದರ ಹೆಚ್ಚಿಸಿ ಸದ್ಯ ಲೀಟರ್ ಹಾಲಿಗೆ ಇರುವ 42 ರೂಪಾಯಿ ದರವನ್ನು 2.10 ರೂ. ಪೈಸೆ ಹೆಚ್ಚಳ ಮಾಡಲಾಗಿದೆ. ಈ ರಾಜ್ಯದ ಜನರ ಬದುಕಿನೊಂದಿಗೆ ಚೆಲ್ಲಾಟವಾಡಲು ಹೊರಟಿರುವ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಕಳೆದು ಕೊಂಡಿದೆ. ಈ ಜನವಿರೋಧಿ ಸರ್ಕಾರ ಕೆಳಗಿಳಿಸುವವರೆಗೂ ಬಿಜೆಪಿಯ ಜನಪರ ಹೋರಾಟ ನಿರಂತರ ಸಾಗಲಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ದಿನಕ್ಕೊಂದು ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಕಳೆದ ವಾರವಷ್ಟೇ ಪೆಟ್ರೋಲ್, ಡೀಸೈಲ್ ಉತ್ಪನ್ನಗಳ ಸೆಸ್ ಹೆಚ್ಚಳ ಮಾಡಿದ್ದ ರಾಜ್ಯ ಸರ್ಕಾರ ಈಗ ಹಾಲಿನ ಬೆಲೆ ಏರಿಕೆ ಮಾಡಿದೆ. pic.twitter.com/hDsHMEA7xI

— Sunil Kumar Karkala (@karkalasunil) June 25, 2024

ಸುನಿಲ್‌ ಕುಮಾರ್‌ (Sunil Kumar):
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ದಿನಕ್ಕೊಂದು ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಕಳೆದ ವಾರವಷ್ಟೇ ಪೆಟ್ರೋಲ್, ಡೀಸೈಲ್ ಉತ್ಪನ್ನಗಳ ಸೆಸ್ ಹೆಚ್ಚಳ ಮಾಡಿದ್ದ ರಾಜ್ಯ ಸರ್ಕಾರ ಈಗ ಹಾಲಿನ ಬೆಲೆ ಏರಿಕೆ ಮಾಡಿದೆ.

ಜೆಡಿಎಸ್‌:
ತುರ್ತು ಪರಿಸ್ಥಿತಿಯ ಸುವರ್ಣ ಮಹೋತ್ಸವದ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಜನರಿಗೆ ಬಂಪರ್ ಕೊಡುಗೆ ಕೊಟ್ಟಿದೆ. ಈ ದರ ಏರಿಕೆ ಲಾಭ ಹಾಲು ಉತ್ಪಾದಕರಿಗೆ ಸಿಗಲಿದೆಯೋ ಅಥವಾ ಕೆಎಂಎಫ್ ಜೋಳಿಗೆ ಹೋಗಲಿದೆಯೋ? ಗ್ಯಾರಂಟಿಯೇ ಬೆಲೆ ಏರಿಕೆಗೆ ಮೂಲ.

TAGGED:BY VijayendrakmfNandini Milk PriceR. Ashokaಆರ್. ಅಶೋಕ್‍ಕೆಎಂಎಫ್ನಂದಿನಿ ಹಾಲಿನ ದರಬಿ.ವೈ.ವಿಜಯೇಂದ್ರ
Share This Article
Facebook Whatsapp Whatsapp Telegram

Cinema News

Dhruva Sarja Manager
ಪರಭಾಷೆಯಲ್ಲಿ ಸಿನಿಮಾ ಮಾಡಲ್ಲ ಅಂದಿದ್ದಕ್ಕೆ ನೋಟಿಸ್ ಕಳುಹಿಸಿದ್ದಾರೆ – ಧ್ರುವ ಮ್ಯಾನೇಜರ್ ಸ್ಪಷ್ಟನೆ
Cinema Karnataka Latest Sandalwood Top Stories
Kantara Kona Appu
ಉಡುಪಿ | ಕಾಂತಾರ ಚಿತ್ರದ ಕಂಬಳದ ದೃಶ್ಯದಲ್ಲಿ ಕಾಣಿಸಿಕೊಂಡಿದ್ದ ಅಪ್ಪು ಕೋಣ ಇನ್ನಿಲ್ಲ
Cinema Districts Latest Top Stories Udupi
Dhruva Sarja 2
3.15 ಕೋಟಿ ವಂಚನೆ ಆರೋಪ; ನಟ ಧ್ರುವ ಸರ್ಜಾ ವಿರುದ್ಧ ಎಫ್‌ಐಆರ್
Cinema Crime Latest Sandalwood Top Stories
Abhiman Studio
ರಾತ್ರೋರಾತ್ರಿ ವಿಷ್ಣು ಸಮಾಧಿ ನೆಲಸಮ – ಅಭಿಮಾನಿಗಳಿಂದ ತೀವ್ರ ಆಕ್ರೋಶ
Bengaluru City Cinema Districts Karnataka Latest Main Post Sandalwood
Lankasura film team gave good news Vinod Prabhakar 1
ಮಾದೇವ ನಂತರ ಲಂಕಾಸುರನಾಗಿ ಮರಿ ಟೈಗರ್ ಅಬ್ಬರ
Cinema Latest

You Might Also Like

Public tv
Bengaluru City

ಪಬ್ಲಿಕ್ ಟಿವಿ `ವಿದ್ಯಾಮಂದಿರ’ – ಲಕ್ಕಿ ಡಿಪ್‌ನಲ್ಲಿ ಲ್ಯಾಪ್‌ಟಾಪ್‌, ಟ್ಯಾಬ್‌ ಗೆದ್ದ ಅದೃಷ್ಟವಂತರು ಇವರೇ…

Public TV
By Public TV
5 minutes ago
Accident
Bengaluru City

ವರಮಹಾಲಕ್ಷ್ಮಿ ಹಬ್ಬಕ್ಕೆ ಅರಿಶಿಣ ಕುಂಕುಮ ಪಡೆಯಲು ಹೋದಾಗ ಅಪಘಾತ – ನವವಿವಾಹಿತೆ ಸಾವು

Public TV
By Public TV
17 minutes ago
Arecanut Trees
Crime

ಫಸಲಿಗೆ ಬಂದಿದ್ದ 300ಕ್ಕೂ ಹೆಚ್ಚು ಅಡಿಕೆ ಗಿಡ ಕಡಿದ ದುಷ್ಕರ್ಮಿಗಳು – ಕಣ್ಣೀರಿಟ್ಟ ರೈತ

Public TV
By Public TV
40 minutes ago
5 Pak Fighter Jets Shot AP Singh
Latest

ಆಪರೇಷನ್‌ ಸಿಂಧೂರದಲ್ಲಿ ಭಾರತ ಪರಾಕ್ರಮ – ಪಾಕ್‌ನ 6 ಯುದ್ಧ ವಿಮಾನಗಳು ಉಡೀಸ್‌; ವಾಯುಪಡೆ ಮುಖ್ಯಸ್ಥ

Public TV
By Public TV
2 hours ago
C N Ashwath Narayan
Bengaluru City

ಸಮಾಜದ ಸಬಲೀಕರಣಕ್ಕೆ ಉತ್ತಮ ಶಿಕ್ಷಣ ಸಿಗ್ಬೇಕು: ಅಶ್ವಥ್ ನಾರಾಯಣ್

Public TV
By Public TV
2 hours ago
ICICI Bank
Latest

ಸೇವಿಂಗ್ಸ್ ಅಕೌಂಟ್ ಗ್ರಾಹಕರಿಗೆ ICICI ಬ್ಯಾಂಕ್ ಶಾಕ್ – ಮಿನಿಮಮ್ ಬ್ಯಾಲೆನ್ಸ್ ಮೊತ್ತದಲ್ಲಿ ಭಾರೀ ಏರಿಕೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?