Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿಯವ್ರು ಲಜ್ಜೆಗೆಟ್ಟು, ಮಾನ ಮರ್ಯಾದೆ ಬಿಟ್ಟು ಸರ್ಕಾರ ರಚನೆಗೆ ಪ್ರಯತ್ನಿಸ್ತಿದ್ದಾರೆ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಜೆಪಿಯವ್ರು ಲಜ್ಜೆಗೆಟ್ಟು, ಮಾನ ಮರ್ಯಾದೆ ಬಿಟ್ಟು ಸರ್ಕಾರ ರಚನೆಗೆ ಪ್ರಯತ್ನಿಸ್ತಿದ್ದಾರೆ: ಸಿದ್ದರಾಮಯ್ಯ

Bengaluru City

ಬಿಜೆಪಿಯವ್ರು ಲಜ್ಜೆಗೆಟ್ಟು, ಮಾನ ಮರ್ಯಾದೆ ಬಿಟ್ಟು ಸರ್ಕಾರ ರಚನೆಗೆ ಪ್ರಯತ್ನಿಸ್ತಿದ್ದಾರೆ: ಸಿದ್ದರಾಮಯ್ಯ

Public TV
Last updated: September 18, 2018 4:36 pm
Public TV
Share
3 Min Read
SIDDU
SHARE

ಬೆಂಗಳೂರು: ಬಿಜೆಪಿಯವರು ಲಜ್ಜೆಗೆಟ್ಟು ತಮ್ಮ ಮಾನ ಮರ್ಯಾದೆ ಬಿಟ್ಟು ಸರ್ಕಾರ ರಚನೆ ಮಾಡಬೇಕು ಅಂತ ಪ್ರಯತ್ನ ಪಡುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ವಿದೇಶ ಪ್ರವಾಸ ಮುಗಿಸಿ ಇದೇ ಮೊದಲ ಬಾರಿಗೆ ವಿಧಾನಸೌಧಕ್ಕೆ ಆಗಮಿಸಿದ ಸಿದ್ದರಾಮಯ್ಯನವರಿಗೆ ಸಚಿವ ದೇಶಪಾಂಡೆ ಶಾಸಕರಾದ ಐವಾನ್ ಡಿಸೋಜಾ ಹಾಗೂ ಎಂ.ಬಿ.ಪಾಟೀಲ್ ಸಾಥ್ ನೀಡಿದ್ದರು.

vlcsnap 2018 09 18 16h29m28s026

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರ ಮಾಡುವುದಕ್ಕೆ ಬಿಜೆಪಿಯವರು ಶತಾಯಗತಾಯ ಪ್ರಯತ್ನ ಮಾಡುತ್ತಿರುವುದು ಸತ್ಯ. ಈಗಾಗಲೇ ಅನೇಕ ಶಾಸಕರು ಈ ಬಗ್ಗೆ ನನಗೆ ಮಾಹಿತಿ ನೀಡಿದ್ದಾರೆ. ಬಿಜೆಪಿಯವರು ಲಜ್ಜೆಗೆಟ್ಟು ತಮ್ಮ ಮಾನ ಮರ್ಯಾದೆ ಬಿಟ್ಟು ಸರ್ಕಾರ ರಚನೆ ಮಾಡಲೇಬೇಕೆಂದು ಪ್ರಯತ್ನ ಮಾಡುತ್ತಿದ್ದಾರೆ. ನಮ್ಮ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಯಾರೂ ಸಹ ಪಕ್ಷವನ್ನು ಬಿಟ್ಟು ಹೋಗಲ್ಲ ಎಂದರು.

ಕೇವಲ ಸಚಿವ ಸ್ಥಾನ ಹಾಗೂ ನಿಗಮ ಮಂಡಳಿಗಳ ಆಕಾಂಕ್ಷಿಗಳು ಇದ್ದಾರೆ ಅಷ್ಟೇ. ಆಗೆಂದ ಮಾತ್ರಕ್ಕೆ ಅವರ‍್ಯಾರು ಪಕ್ಷ ಬಿಡುವ ಪರಿಸ್ಥಿತಿಯಲ್ಲಿ ಇಲ್ಲ. ಹೈಕಮಾಂಡ್ ಯಾರನ್ನು ಕರೆದಿಲ್ಲ. ಜಾರಕಿಹೊಳಿ ಸಹೋದರರಿಗೆ ಕರೆ ಬಂದಿರುವುದು ನನಗೆ ಗೊತ್ತಿಲ್ಲ. ಸಚಿವ ಸಂಪುಟ ವಿಸ್ತರಣೆ ಹಾಗೂ ಪರಿಷತ್ ಸ್ಥಾನದ ಬಗ್ಗೆ ಚರ್ಚೆ ನಡೆಸಲು ದೆಹಲಿಗೆ ತೆರಳುತ್ತಿದ್ದೇವೆ ಎಂದು ಹೇಳಿದರು.

JARKIHOLI DEMANDS 1

ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಸಮಸ್ಯೆ ಇಲ್ಲ. ಸಮಸ್ಯೆಯೇ ಇಲ್ಲದ ಮೇಲೆ ತೀರ್ಮಾನ ಎಲ್ಲಿಂದ ತಗೋಬೇಕು. ಮಾಧ್ಯಮಗಳಲ್ಲಿ ಬರುತ್ತಿರುವುದರಲ್ಲಿ 1%ರಷ್ಟು ಸಹ ಸತ್ಯ ಇಲ್ಲ. ಸರ್ಕಾರಕ್ಕೆ ಧಕ್ಕೆ ತರುವ ಹಾಗೆ ಮಾಡುತ್ತಿದ್ದಾರೆ ಅಷ್ಟೆ. ಪಕ್ಷ ಬಿಡುತ್ತೇನೆ ಎಂದು ಯಾರು ಹೇಳಿಲ್ಲ. ಎಲ್ಲಾ ಹೇಳಿಕೆಗಳು ಆಧಾರ ರಹಿತವಾಗಿದೆ. ಮಾಧ್ಯಮಗಳು ಸುಳ್ಳು ಸುದ್ದಿ ಹರಡಿಸುತ್ತಿವೆ. ಕ್ಷೇತ್ರಗಳ ಸಮಸ್ಯೆ ಇದೆ ಅಂದ ಮಾತ್ರಕ್ಕೆ ಪಕ್ಷ ಬೀಡುತ್ತಾರೆ ಅನ್ನುವ ತೀರ್ಮಾನಕ್ಕೆ ಬರಬಾರದು. ಜಾರಕಿಹೊಳಿ ಸಹೋದರರು ಖಾಸಗಿ ಕಾರಲ್ಲಿ ಓಡಾಡಿದ್ರೆ ಏನು ತಪ್ಪು? ಖಾಸಗಿ ಕಾರಲ್ಲಿ ಓಡಾಡಿದ್ರೆ ತಪ್ಪಾ? ಮಾಧ್ಯಮಗಳಲ್ಲಿ ಬರುತ್ತಿರುವ ಎಲ್ಲಾ ಸುದ್ದಿಗಳು ಸುಳ್ಳು ಎಂದು ಆಕ್ರೋಶ ಹೊರಹಾಕಿದರು.

ಇಲ್ಲಿಯವರೆಗೂ ಜಾರಕಿಹೊಳಿ ಸಹೋದರರು ನನ್ನ ಮುಂದೆ ಯಾವುದೇ ಡಿಮ್ಯಾಂಡ್ ಇಟ್ಟಿಲ್ಲ. ಮಂತ್ರಿ ಸ್ಥಾನ ಕೇಳೋದು ತಪ್ಪಲ್ಲ. ಮಂತ್ರಿ ಸ್ಥಾನದ ಆಸೆ ಎಲ್ಲರಿಗೂ ಇರುತ್ತದೆ. ಎರಡು ಪಕ್ಷಗಳಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳು ಇದ್ದಾರೆ. ಅರ್ಹತೆ ಇದ್ದವರು ಮಂತ್ರಿ ಸ್ಥಾನ ಕೇಳಿದರೆ ತಪ್ಪಾ? ಹೀಗಾಗಿ ಶಾಸಕರು ಸಭೆ ನಡೆಸುತ್ತಿದ್ದಾರೆ. ಅವರು ಸಭೆ ನಡೆಸಿದರೆ ತಪ್ಪೇ ಹೇಳಿ ಎಂದು ಪ್ರಶ್ನಿಸಿದರು.

dks hdk congress jds 1

ಅಗತ್ಯ ಬಿದ್ದರೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯುತ್ತೇನೆ. ನಮ್ಮ ಎಲ್ಲಾ ಶಾಸಕರು ಶಿಸ್ತಿನ ಸಿಪಾಯಿಗಳು. ಯಾರೂ ಸಹ ಪಕ್ಷ ಬಿಟ್ಟು ಹೋಗುವುದಿಲ್ಲ. ಆಪರೇಷನ್ ಕಮಲದ ಪಿತಾಮಹಗಳೇ ಬಿಜೆಪಿಯವರು. 2008 ರಲ್ಲಿ ಹೀಗೆ ಮಾಡಿ ಅಧಿಕಾರಕ್ಕೆ ಬಂದಿದ್ದರು. ಈಗಲೂ ಸಹ ಇದನ್ನೇ ಮಾಡಿ ಅಧಿಕಾರಕ್ಕೆ ಬರಲು ಹಗಲುಗನಸು ಕಾಣುತ್ತಿದ್ದಾರೆ. ಆದರೆ ಈಗ ಇದೆಲ್ಲಾ ಆಗಲ್ಲ, ಸಮ್ಮಿಶ್ರ ಸರ್ಕಾರ 5 ವರ್ಷ ಪೂರೈಸುತ್ತದೆ ಎಂದು ತಿಳಿಸಿದರು.

ಸಿಎಂ ಕುಮಾರಸ್ವಾಮಿಯರ ಕಿಂಗ್‍ಪಿನ್ ಹೇಳಿಕೆಗೆ ಪ್ರತಿಕ್ರಿಯಿಸಿ, ಈ ಬೆಳವಣಿಗೆಯ ಬಗ್ಗೆ ಸಿಎಂ ನನ್ನ ಜೊತೆ ಮಾತನಾಡಿಲ್ಲ. ನಾನೂ ಸಹ ಕೇಳಿಲ್ಲ. ಕಿಂಗ್‍ಪಿನ್ ವಿಚಾರ ಏನೇ ಇದ್ದರೂ ಅದನ್ನು ಅವರ ಬಳಿಯೇ ಕೇಳಿ. ನನಗೆ ಅದರ ಬಗ್ಗೆ ಏನೂ ಗೊತ್ತಿಲ್ಲ. ಬಿಜೆಪಿ ಆಪರೇಷನ್ ಕಮಲಕ್ಕೆ ಹೆದರಿ ಕಾಂಗ್ರೆಸ್ಸಿನವರು ರೆಸಾರ್ಟ್ ರಾಜಕಾರಣ ಮುಂದಾಗಿದ್ದಾರೆ ಎನ್ನುವ ಹೇಳಿಕೆಗಳು ಶುದ್ಧ ಸುಳ್ಳು. ಇದು ಸಹ ಮಾಧ್ಯಮಗಳ ಸೃಷ್ಟಿ. ಎಲ್ಲಾ ಶಾಸಕರು ಸಮ್ಮಿಶ್ರ ಸರ್ಕಾರಕ್ಕೆ ಬೆಂಬಲ ಸೂಚಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:bengalurubjpCM Kumaraswamycongressjdsoperation kamalaPublic TVsiddaramaiahಆಪರೇಷನ್ ಕಮಲಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿಬಿಜೆಪಿಬೆಂಗಳೂರುಸಿಎಂ ಕುಮಾರಸ್ವಾಮಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema
Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post

You Might Also Like

Pinarayi Vijayan
Latest

ಶಬರಿಮಲೆ ವಿಚಾರದಲ್ಲಿ ಪಿಣರಾಯಿ ಯೂಟರ್ನ್ – ಮಹಿಳೆಯರ ಪ್ರವೇಶ ಹಿಂದಿನ ನಿಲುವು ಬದಲಾಯಿಸಿದ ಸರ್ಕಾರ

Public TV
By Public TV
4 hours ago
Iran warned UAE residents
Latest

ಯುಎಇ ಬಂದರು ಪ್ರದೇಶಗಳಿಂದ ಹೊರಗೆ ಹೋಗಿ: ಜನರಿಗೆ ಇರಾನ್‌ ಎಚ್ಚರಿಕೆ

Public TV
By Public TV
4 hours ago
Crime 3
Latest

ಮಂಗ ಓಡಿಸಲು ಹೋದವನ ದುರಂತ ಅಂತ್ಯ – ಕೈಯಲ್ಲಿದ್ದ ಎರ್‌ಗನ್‌ನಿಂದ ಹಾರಿದ ಗುಂಡಿಗೆ ಯುವಕ ಬಲಿ

Public TV
By Public TV
5 hours ago
01 8
Big Bulletin

ಬಿಗ್‌ ಬುಲೆಟಿನ್‌ 14 March 2026 ಭಾಗ-1

Public TV
By Public TV
5 hours ago
02 8
Big Bulletin

ಬಿಗ್‌ ಬುಲೆಟಿನ್‌ 14 March 2026 ಭಾಗ-2

Public TV
By Public TV
5 hours ago
03 8
Big Bulletin

ಬಿಗ್‌ ಬುಲೆಟಿನ್‌ 14 March 2026 ಭಾಗ-3

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?