Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರ ಕೆಡವಲು 1,000 ಕೋಟಿ ರೆಡಿ ಮಾಡಿಕೊಂಡಿದ್ದಾರೆಂದು ಬಿಜೆಪಿ ನಾಯಕರೇ ಹೇಳಿದ್ದಾರೆ: ಶರಣ ಪ್ರಕಾಶ್ ಪಾಟೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸರ್ಕಾರ ಕೆಡವಲು 1,000 ಕೋಟಿ ರೆಡಿ ಮಾಡಿಕೊಂಡಿದ್ದಾರೆಂದು ಬಿಜೆಪಿ ನಾಯಕರೇ ಹೇಳಿದ್ದಾರೆ: ಶರಣ ಪ್ರಕಾಶ್ ಪಾಟೀಲ್

Districts

ಸರ್ಕಾರ ಕೆಡವಲು 1,000 ಕೋಟಿ ರೆಡಿ ಮಾಡಿಕೊಂಡಿದ್ದಾರೆಂದು ಬಿಜೆಪಿ ನಾಯಕರೇ ಹೇಳಿದ್ದಾರೆ: ಶರಣ ಪ್ರಕಾಶ್ ಪಾಟೀಲ್

Public TV
Last updated: October 6, 2024 3:54 pm
Public TV
Share
3 Min Read
SHARANA PRAKASH PATIL
SHARE

ವಿಜಯಪುರ: ಸರ್ಕಾರ ಕೆಡವಲು 1,000 ಕೋಟಿ ರೆಡಿ ಮಾಡಿಕೊಂಡಿದ್ದಾರೆಂದು ಬಿಜೆಪಿ (BJP) ನಾಯಕರೇ ಹೇಳಿದ್ದಾರೆ ಎಂದು ಸಚಿವ ಶರಣ ಪ್ರಕಾಶ ಪಾಟೀಲ್  (Sharan Prakash Patil), ವಿಜಯಪುರ ಶಾಸಕ ಬಸನಗೌಡ ಪಾಟೀಲ್ (Basanagouda Patil Yatnal) ಅವರ ಹೇಳಿಕೆಯನ್ನ ಪುನರುಚ್ಛರಿಸಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಯತ್ನಾಳ್ ಹೇಳಿಕೆ ವಿಚಾರವಾಗಿ ಮಾತನಾಡಿ, ಸರ್ಕಾರ ಕೆಡವಲು 1000 ಕೋಟಿ ರೂ. ತಯಾರಿ ಮಾಡಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಬಿಜೆಪಿಯಲ್ಲಿ ಅವರೊಬ್ಬ ಪ್ರಮುಖ ನಾಯಕರಿದ್ದಾರೆ. ಅವರಿಗೆ ಏನು ಮಾಹಿತಿ ಇದೆ, ನನಗೆ ಗೊತ್ತಿಲ್ಲ. ಆದ್ರೆ ಸರ್ಕಾರ ಬೀಳಿಸಲು ಬಹಳ ದೊಡ್ಡ ಹಣ ಉಪಯೋಗ ಆಗಿದೆ ಎಂದು ಎಲ್ಲರಿಗೂ ಗೊತ್ತಿದೆ. ಈ ಹಿಂದೆಯೂ 17 ಶಾಸಕರು ರಾಜೀನಾಮೆ ನೀಡಿದ್ದರು. ಇದೆಲ್ಲ ಹಣಬಲದ ಮೇಲೆ ಆಗಿದೆ. ಈಗಲೂ ಅದೇ ರೀತಿ ಪಿತೂರಿ ನಡೆಯುತ್ತಿರಬಹುದು ಎಂದು ಆಗ್ರಹಿಸಿದರು.ಇದನ್ನೂ ಓದಿ: ಭೋಪಾಲ್‌ನಲ್ಲಿ 1,814 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್‌ – ಇಬ್ಬರು ಅರೆಸ್ಟ್‌

ಬಿಜೆಪಿಯವರು 4 ವರ್ಷ 2019 ರಿಂದ 2023ರ ವರೆಗೆ ರಾಜ್ಯವನ್ನ ವ್ಯವಸ್ಥಿತವಾಗಿ ಲೂಟಿ ಹೊಡೆದಿದ್ದಾರೆ. ಅವರು ಮಾಡಿದ ಕೆಲಸ ಕಾರ್ಯಗಳು, ನಡೆದುಕೊಂಡಂತಹ ರೀತಿ ಇದೆಲ್ಲವನ್ನು ನೋಡಿಯೇ ರಾಜ್ಯದ ಜನರು ನಮಗೆ ಬೆಂಬಲ ನೀಡಿದ್ದಾರೆ. 135 ಶಾಸಕರನ್ನ ಆಯ್ಕೆ ಮಾಡುವ ಮುಖಾಂತರ ಸ್ಥಿರ ಸರ್ಕಾರವನ್ನ ರಾಜ್ಯದ ಜನರು ನೀಡಿದ್ದಾರೆ. ಇದನ್ನ ಅಸ್ಥಿರಗೊಳಿಸುವ ಕೆಲಸ ಬಿಜೆಪಿ ಮಾಡುತ್ತಿದೆ. ಇದು ಸಂವಿಧಾನ ವಿರೋಧಿ ನೀತಿಯಾಗಿದೆ. ಇದರಿಂದ ರಾಜ್ಯದ ಜನರಿಗೆ ಹಾನಿಯಾಗುತ್ತಿದೆ. ರಾಜ್ಯದ ಜನರು ಇದನ್ನು ನೋಡುತ್ತಿದ್ದಾರೆ ಎಂದು ಕಿಡಿಕಾರಿದರು.

ವಿಪಕ್ಷದ ನಾಯಕ ಸ್ಥಾನಕ್ಕೆ ಆರ್.ಅಶೋಕ್ (R.Ashok) ರಾಜೀನಾಮೆ ವಿಚಾರವಾಗಿ ಮಾತನಾಡಿ, ನೋಡಿ ಅಧಿಕಾರದಲ್ಲಿದ್ದಾಗ ನೀವು ರಾಜೀನಾಮೆ ಕೊಟ್ಟು, ನಮಗೂ ಕೊಡಿ ಎಂದರೆ ಅದಕ್ಕೆ ಅರ್ಥ? ಆಗ ಅವರು ಕೊಟ್ಟಿಲ್ಲ. ಒಂದು ವೇಳೆ ಕೊಟ್ಟಿದ್ದರೆ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳಬಹುದಿತ್ತು. ಸಿದ್ದರಾಮಯ್ಯ (CM Siddaramaiah) ಓರ್ವ ನಿಷ್ಕಳಂಕ, ಜನಪರ ನಾಯಕ. ಒಳ್ಳೆಯ ಆಡಳಿತ ನೀಡಿರುವಂತಹ ಸಿಎಂ ಇವರು ಎಂದರು.

ಗ್ಯಾರಂಟಿಗಳ ಬಗ್ಗೆ ಬಿಜೆಪಿ ಸುಳ್ಳು ಪ್ರಚಾರ:
ಇವತ್ತು ಬಿಜೆಪಿ ಅವರಿಗೆ ತಕರಾರು ಏನು ಎಂದರೆ, ನಮ್ಮ ಸರಕಾರ ರಾಜ್ಯದ ಜನರಿಗೆ 5 ಗ್ಯಾರಂಟಿಗಳನ್ನ (Gurantee) ನೀಡಿದೆ. ಇದರಿಂದ ರಾಜ್ಯದ ಜನರ ಮನಸ್ಥಿತಿ ಬದಲಾಗುತ್ತಿದೆ ಎಂಬ ಭಯ ಬಿಜೆಪಿಯವರಿಗೆ ಕಾಡುತ್ತಿದೆ. ಅದಕ್ಕಾಗಿ ಗ್ಯಾರಂಟಿಗಳನ್ನು ನೀಡಲು ಆಗುವುದಿಲ್ಲ ಎಂದು ಬಿಜೆಪಿಯವರು ಸುಳ್ಳು ಪ್ರಚಾರ ಮಾಡಿದ್ದಾರೆ. ಆದರೆ ನಾವು ಯಶಸ್ವಿಯಾಗಿ ಗ್ಯಾರಂಟಿಗಳನ್ನ ಈಡೇರಿಸಿದ್ದೇವೆ. ಈ ಗ್ಯಾರಂಟಿಗಳು ಈಡೇರಲ್ಲ ಎಂದು ಮೋದಿಯವರು (PM Modi) ಕೂಡ ಹೇಳಿದ್ದರು. ಅವರಿಗೆ ಭಯ ಶುರುವಾಗಿದೆ. ಅದಕ್ಕೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.

ಇದೇ ವೇಳೆ ಎಐಸಿಸಿ ಅಧ್ಯಕ್ಷ ಹಾಗೂ ಸಚಿವ ಸತೀಶ ಜಾರಕಿಹೋಳಿ ಭೇಟಿ ವಿಚಾರವಾಗಿ ಮಾತನಾಡಿ, ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಸಿಎಂ ಆಗುವ ಬಗ್ಗೆ ಚರ್ಚೆ ವದಂತಿಯಷ್ಟೇ. ಈ ಭೇಟಿ ಕುರಿತು ಈಗಾಗಲೇ ಸಿಎಂ ಸ್ಪಷ್ಟನೆ ನೀಡಿದ್ದಾರೆ. ದೆಹಲಿಗೆ ಹೋದ ಸಚಿವರು ಎಐಸಿಸಿ (AICC) ಆಧ್ಯಕ್ಷರನ್ನ ಭೇಟಿಯಾಗುತ್ತಾರೆ, ಇದು ಸಹಜ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಹೇಳಿದರು.

ದಲಿತ ಸಿಎಂ ಆಗುವ ಕುರಿತು ಚರ್ಚೆ ವಿಚಾರವಾಗಿ ಮಾತನಾಡಿ, ಆ ರೀತಿ ಯಾವುದೇ ಮಾಹಿತಿ ಇಲ್ಲ. ಆ ರೀತಿಯ ಚಲನ ವಲನ ನಮ್ಮ ಗಮನಕ್ಕೆ ಬಂದಿಲ್ಲ. ಇದೆಲ್ಲ ಮಾಧ್ಯಮಗಳ ಸೃಷ್ಟಿ ಅಷ್ಟೇ. ದಲಿತ ಸಿಎಂ ಆಗುವ ವಿಚಾರದ ಕುರಿತು ನನಗೆ ಗೊತ್ತಿಲ್ಲ ಎಂದು ತಿಳಿಸಿದರು.ಇದನ್ನೂ ಓದಿ: ಜಾತಿ ಗಣತಿ ಜಾರಿಯಿಂದ ಸರ್ಕಾರ ಹೋಗುತ್ತೆ ಅನ್ನೋದಾದ್ರೆ ಹೋಗಲಿ: ಹರಿಪ್ರಸಾದ್‌ ಸ್ಫೋಟಕ ಹೇಳಿಕೆ

TAGGED:bjpcm siddaramaiahcongresscongress guranteesharana prakash patilvijayapuraಕಾಂಗ್ರೆಸ್ಕಾಂಗ್ರೆಸ್‌ ಗ್ಯಾರಂಟಿಬಿಜೆಪಿವಿಜಯಪುರಶರಣ ಪ್ರಕಾಶ್ ಪಾಟೀಲ್ಸಿಎಂ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Indigo Flight
Latest

ದೆಹಲಿ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ಎಮರ್ಜೆನ್ಸಿ ಲ್ಯಾಂಡಿಂಗ್

Public TV
By Public TV
28 minutes ago
PES University
Bengaluru City

ವಿದ್ಯಾರ್ಥಿಗೆ ಭಯೋತ್ಪಾದಕ ಪಟ್ಟ ಕಟ್ಟಿದ ಆರೋಪ – ಪಿಇಎಸ್ ವಿವಿ ಉಪನ್ಯಾಸಕ ಅಮಾನತು

Public TV
By Public TV
47 minutes ago
VIjayapura
Districts

ಒಂದು ಬಾಟಲ್‌ ಕೊಟ್ಟರೆ ಕೆಳಗೆ ಬರ್ತಿನಿ  – ಟವರ್ ಹತ್ತಿ ಕುಡುಕನ ಹುಚ್ಚಾಟ 

Public TV
By Public TV
1 hour ago
MB Patil
Bengaluru City

ಮೋದಿ ಇಸ್ರೇಲ್‌ಗೆ ಹೋಗಿಬಂದ ಮರುದಿನವೇ ಯುದ್ಧ ಶುರುವಾಯ್ತು: ಎಂ.ಬಿ ಪಾಟೀಲ್‌

Public TV
By Public TV
1 hour ago
Balendra Shah Oath Taking As Nepal PM
Latest

ಬೆಂಗಳೂರಲ್ಲಿ ಓದಿದ್ದ ವ್ಯಕ್ತಿ ಈಗ ನೇಪಾಳದ ಪ್ರಧಾನಿ

Public TV
By Public TV
1 hour ago
Yemen Missile
Latest

ಇಸ್ರೇಲ್‌ – ಅಮೆರಿಕ Vs ಇರಾನ್‌ ಯುದ್ಧಕ್ಕೆ ಯೆಮನ್‌ ಎಂಟ್ರಿ – ಇಸ್ರೇಲ್‌ ಮೇಲೆ ಫಸ್ಟ್‌ ಟೈಂ ಮಿಸೈಲ್‌ ದಾಳಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?