Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸುಖವನ್ನ ಎಲ್ಲೋ ಆಚರಿಸಿ, ದುಃಖದಲ್ಲಿ ಜನರ ಮುಂದೆ ಕಣ್ಣೀರು ಹಾಕೋದಲ್ಲ: ಎಚ್‍ಡಿಕೆಗೆ ಬಿಜೆಪಿ ನಾಯಕ ಟಾಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸುಖವನ್ನ ಎಲ್ಲೋ ಆಚರಿಸಿ, ದುಃಖದಲ್ಲಿ ಜನರ ಮುಂದೆ ಕಣ್ಣೀರು ಹಾಕೋದಲ್ಲ: ಎಚ್‍ಡಿಕೆಗೆ ಬಿಜೆಪಿ ನಾಯಕ ಟಾಂಗ್

Districts

ಸುಖವನ್ನ ಎಲ್ಲೋ ಆಚರಿಸಿ, ದುಃಖದಲ್ಲಿ ಜನರ ಮುಂದೆ ಕಣ್ಣೀರು ಹಾಕೋದಲ್ಲ: ಎಚ್‍ಡಿಕೆಗೆ ಬಿಜೆಪಿ ನಾಯಕ ಟಾಂಗ್

Public TV
Last updated: December 16, 2019 11:40 am
Public TV
Share
3 Min Read
RMG M RUDRESH
SHARE

ರಾಮನಗರ: ಸುಖವನ್ನ ಎಲ್ಲೋ ಆಚರಿಸಿ, ದುಃಖದಲ್ಲಿ ಜನರ ಮುಂದೆ ಕಣ್ಣೀರು ಹಾಕಿ ಅನುಕಂಪ ಗಿಟ್ಟಿಸಿಕೊಳ್ಳುವುದಲ್ಲ. ಗೋವಾದಲ್ಲೋ, ಮಾರಿಷಷ್‍ನಲ್ಲೋ ಕುಳಿತು ಟ್ವೀಟ್ ಮಾಡೋದಲ್ಲ. ಹುಟ್ಟುಹಬ್ಬವನ್ನ ಜನರ ಮಧ್ಯೆಯೇ ಆಚರಿಸಿಕೊಳ್ಳಿ ಎಂದು ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿಗೆ ಬಿಜೆಪಿಯ ರಾಮನಗರ ಜಿಲ್ಲಾಧ್ಯಕ್ಷ ಎಂ. ರುದ್ರೇಶ್ ಟಾಂಗ್ ನೀಡಿದ್ದಾರೆ.

ರಾಮನಗರ ಜಿಲ್ಲೆಯಿಂದ ಶಾಸಕರಾಗಿ ಆಯ್ಕೆಯಾಗಿದ್ದೀರಿ. ಅಲ್ಲದೇ ಮುಖ್ಯಮಂತ್ರಿಯೂ ಕೂಡಾ ಆಗಿ ಅಧಿಕಾರವನ್ನ ಸ್ವೀಕರಿಸಿ ಆಡಳಿತ ನಡೆಸಿದ್ದೀರಿ. ಆದರೆ ಇದೀಗ ನೀವು ಗೋವಾದಲ್ಲೋ, ಮಾರಿಷಷ್‍ನಲ್ಲೋ ಕುಳಿತು ಜಿಲ್ಲೆಯ ಅಭಿವೃದ್ಧಿಯ ಯೋಜನೆಗಳ ಬಗ್ಗೆ ಟ್ವೀಟ್ ಮಾಡೋದಲ್ಲ. ನೀವು ಹುಟ್ಟುಹಬ್ಬವನ್ನ ಆಚರಿಸಿಕೊಳ್ಳುವುದಾದರೆ ಅದನ್ನ ಜನರ ಮಧ್ಯೆಯೇ ಆಚರಿಸಿಕೊಳ್ಳಿ. ಆ ಮೂಲಕ ಕಷ್ಟ-ಸುಖವನ್ನ ಜನನಾಯಕನಾಗಿ ಜನರ ಮಧ್ಯೆಯೇ ಕಳೆಯಿರಿ. ಅದನ್ನ ಬಿಟ್ಟು ಗೋವಾದಲ್ಲಿ ಕುಳಿತು ಟ್ವೀಟ್ ಮಾಡುವ ಮೂಲಕ ಜನರಿಗೆ ತಪ್ಪು ಸಂದೇಶ ನೀಡಿ ಘರ್ಷಣೆಗೆ ಅವಕಾಶ ಮಾಡಿಕೊಡಬೇಡಿ ಎಂದು ರುದ್ರೇಶ್ ಅವರು ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

RMG M RUDRESH 1

ರಾಮನಗರ ಅಲ್ಲದೇ ವಿವಿಧ ಜಿಲ್ಲೆಗಳಿಗೆ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ನೀಡಿದ್ದ ಯೋಜನೆಗಳ ಅನುದಾನವನ್ನ ತಡೆ ಹಿಡಿದು ಜನರಿಗೆ ಅನ್ಯಾಯ ಮಾಡಬೇಡಿ ಎಂಬ ಟ್ವೀಟ್ ವಿಚಾರವಾಗಿ ರುದ್ರೇಶ್ ಪತ್ರಿಕಾಗೋಷ್ಠಿ ನಡೆಸಿದರು. ಜಿಲ್ಲೆಯಲ್ಲಿ ಕನಕಪುರಕ್ಕೆ ನೀಡಿದ್ದ ಮೆಡಿಕಲ್ ಕಾಲೇಜನ್ನ ಚಿಕ್ಕಬಳ್ಳಾಪುರಕ್ಕೆ ಸ್ಥಳಾಂತರ ಮಾಡಿದ್ದು ಬಿಟ್ಟರೆ ಯಾವುದೇ ಯೋಜನೆಗಳನ್ನು ಸ್ಥಳಾಂತರಿಸಿಲ್ಲ. ಅಲ್ಲದೇ ಬೇರೆ ಯಾವುದೇ ಅಭಿವೃದ್ಧಿ ಕಾಮಗಾರಿಗಳ ಅನುದಾನವನ್ನೂ ಸಹ ಬಿಜೆಪಿ ಸರ್ಕಾರ ತಡೆಹಿಡಿದಿಲ್ಲ ಎಂದು ತಿಳಿಸಿದರು.

ಜಿಲ್ಲೆಯಿಂದ ತಾವು ಗೆದ್ದಿದ್ದೀರಿ, ನೀವು ಈ ಜಿಲ್ಲೆಯ ಋಣವನ್ನ ತೀರಿಸಬೇಕು. ಜಿಲ್ಲೆಯ ಜನರ ಜೊತೆ ಕಷ್ಟ-ಸುಖ ಎರಡಲ್ಲೂ ಭಾಗಿಯಾಗಬೇಕು. ಆದರೆ ಸುಖವನ್ನ ಎಲ್ಲೋ ಆಚರಿಸಿ, ದುಃಖದಲ್ಲಿ ಈ ಜಿಲ್ಲೆಯ ಜನರ ಮುಂದೆ ಕಣ್ಣೀರು ಹಾಕಿ ಅನುಕಂಪ ಗಿಟ್ಟಿಸಿಕೊಳ್ಳುವುದಲ್ಲ. ಕ್ಷೇತ್ರದಲ್ಲಿ ಶಾಸಕರಾಗಿ, ಸಿಎಂ ಆಗಿ ಅಧಿಕಾರ ನಡೆಸಿದ್ದೀರಿ ಅದರ ಋಣವನ್ನ ತೀರಿಸುವಂತಹ ಕೆಲಸವನ್ನ ನೀವು ಮಾಡಿ. ಅದನ್ನ ಬಿಟ್ಟು ನಿಮ್ಮ ಸಂತೋಷದ ಕ್ಷಣಗಳನ್ನು ಬೇರೆಡೆ ಕಳೆಯುವುದು, ದುಃಖದ ಕ್ಷಣಗಳನ್ನು ಕ್ಷೇತ್ರದ ಜನರ ಜೊತೆ ಕಳೆಯುವುದಲ್ಲ ಎಂದು ಹರಿಹಾಯ್ದರು.

HDK 1 1

ಬಿಜೆಪಿ-ಜೆಡಿಎಸ್ ಮೈತ್ರಿ ಸರಕಾರದಲ್ಲಿ ಜಿಲ್ಲೆಗೆ ಅತಿ ಹೆಚ್ಚು ಅನುದಾನ, ಯೋಜನೆಗಳು ಬಿಡುಗಡೆಯಾಗಿವೆ ಎಂಬುದನ್ನು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮರೆಯಬಾರದು. ಕಾಂಗ್ರೆಸ್ಸಿನೊಂದಿಗೆ ಮಾಡಿಕೊಂಡ ಮೈತ್ರಿ ವೇಳೆ ಕುಮಾರಸ್ವಾಮಿ ಅವರೇ ಸಿಎಂ ಆಗಿದ್ದರೂ ಪ್ರಮುಖ ಯೋಜನೆಗಳು ಜಾರಿಯಾಗಲೇ ಇಲ್ಲ, ಹೀಗಿದ್ದರು ಬಿಜೆಪಿ ಸರ್ಕಾರದ ವಿರುದ್ಧ ಆರೋಪ ಮಾಡುವುದು ತಪ್ಪು ಎಂದು ಕಿಡಿಕಾರಿದರು.

ಕಣ್ವ ಜಲಾಶಯದ ಬಳಿ ಮಕ್ಕಳ ಪ್ರಪಂಚ ಸ್ಥಾಪನೆಗೆ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರ್ಕಾರ 3 ಕೋಟಿ ರೂ. ಬಿಡುಗಡೆ ಮಾಡಿದೆ. ತಮಗಿರುವ ಮಾಹಿತಿ ಪ್ರಕಾರ ಮಂಜೂರಾಗಿರುವ 3 ಕೋಟಿ ರೂ. ಹಣ ಸಾಲುವುದಿಲ್ಲ ಎಂದು ಹೇಳಿದರು. ಅಲ್ಲದೇ ಸದ್ಯಕ್ಕೆ ಮಂಜೂರಾಗಿರುವ 3 ಕೋಟಿ ರೂ. ಹಣವನ್ನು ರಾಮನಗರದ ರಂಗರಾಯರದೊಡ್ಡಿ ಕೆರೆ ಅಭಿವೃದ್ಧಿಗೆ ಬಳಸಿಕೊಳ್ಳಲು ಸಹ ಸರ್ಕಾರ ಉದ್ದೇಶಿಸಿದೆ. ಇಲ್ಲಿ ಬಸವಣ್ಣ ಮತ್ತು ಕೆಂಗಲ್ ಹನುಮಂತಯ್ಯ ಅವರ ಪ್ರತಿಮೆಗಳನ್ನು ಸ್ಥಾಪನೆ ಮಾಡಿ ರಂಗರಾಯರ ದೊಡ್ಡಿ ಕೆರೆಯ ಪ್ರದೇಶವನ್ನು ಪ್ರೇಕ್ಷಣೀಯ ಸ್ಥಳವನ್ನಾಗಿ ಪರಿವರ್ತಿಸಲು ಸಹ ಉದ್ದೇಶಿಸಲಾಗಿದೆ. ಹೀಗಾಗಿ ಮಂಜೂರಾದ ಹಣವನ್ನು ರದ್ದು ಮಾಡುವುದಿಲ್ಲ ಎಂದರು.

BJP 2

ಮೇಕೆದಾಟು ಯೋಜನೆಗೆ ಡಿಪಿಆರ್ ನ್ನು(ಸಮಗ್ರ ಯೋಜನಾ ವರದಿ) ಸಮ್ಮಿಶ್ರ ಸರ್ಕಾರ ಸಲ್ಲಿಸದೇ ಕೇಂದ್ರದ ವಿರುದ್ಧ ದೂಷಿಸುತ್ತಿತ್ತು. ಫಿಲಂ ಸಿಟಿಗೆ ಜಾಗವನ್ನು ಗುರುತಿಸದೇ ಯೋಜನೆ ನೀಡಿ ನಂತರ ಅವರೇ ಬೇರೆಡೆ ಸ್ಥಳಾಂತರಿಸಿದರು. ಶ್ರೀ ಬಾಲಗಂಗಾಧರ ಸ್ವಾಮೀಜಿಗಳ ಹುಟ್ಟೂರು ಬಾನಂದೂರು, ಸಿದ್ದಗಂಗಾ ಮಠದ ಶಿವೈಕ್ಯ ಶಿವಕುಮಾರ್ ಸ್ವಾಮೀಜಿಗಳ ಹುಟ್ಟೂರು ವೀರಾಪುರವನ್ನ ಅಭಿವೃದ್ಧಿ ಮಾಡುವ ದೃಷ್ಟಿಯಲ್ಲಿ ಕುಮಾರಸ್ವಾಮಿಯವರದ್ದು ಕೇವಲ ಬಾಯಿ ಮಾತಾಗಿತ್ತು. ಆದರೆ ಬಿಜೆಪಿ ಸರ್ಕಾರ ಈಗಾಗಲೇ ಶಿವಕುಮಾರಸ್ವಾಮೀಜಿಗಳ 111 ಅಡಿ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದೆ. ಅದರ ಜೊತೆಗೆ ವೀರಾಪುರವನ್ನ ಪ್ರವಾಸಿತಾಣವನ್ನಾಗಿ ಮಾಡುವ ಬಗ್ಗೆ ಕ್ರಮ ಕೈಗೊಂಡಿದೆ. ಜೊತೆಗೆ ಬಾನಂದೂರು ಗ್ರಾಮವನ್ನು ಸಹ ಪ್ರವಾಸಿ ತಾಣವನ್ನಾಗಿ ಮಾಡಲು ಸಕಲ ಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದು ರುದ್ರೇಶ್ ಅವರು ತಿಳಿಸಿದರು.

TAGGED:bjpjdsKumaraswamyM RudreshPublic TVramanagaratweetಎಂ ರುದ್ರೇಶ್ಕುಮಾರಸ್ವಾಮಿಜೆಡಿಎಸ್ಟ್ವೀಟ್ಪಬ್ಲಿಕ್ ಟಿವಿಬಿಜೆಪಿರಾಮನಗರ
Share This Article
Facebook Whatsapp Whatsapp Telegram

Cinema news

gilli ashwini gowda
ಕೈಗೊಂಬೆಗಳು ಅಂತ ಧ್ರುವಂತ್‌, ಅಶ್ವಿನಿ ಕೆಣಕಿದ ಗಿಲ್ಲಿ – ಬಾರೋ ಅಖಾಡಕ್ಕೆ ಅಂತ ತೊಡೆ ತಟ್ಟಿದ ಅಶ್ವಿನಿ
Cinema Latest Top Stories TV Shows
Salman Khan Battle of galwan
ಸಲ್ಮಾನ್‌ ಅಭಿನಯದ ಗಲ್ವಾನ್‌ ಟೀಸರ್‌ಗೆ ಚೀನಾ ವಿರೋಧ
Bollywood Cinema Latest National Top Stories
Actor Bhuvan
ಕಟೀಲು ದೇವಿ ಸನ್ನಿಧಿಯಲ್ಲಿ ಹುಟ್ಟು ಹಬ್ಬ ಆಚರಿಸಿಕೊಂಡ ಭುವನ್
Cinema Latest Sandalwood Top Stories
Vishnuvardhans 16th death anniversary Social work by fans 2
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯಸ್ಮರಣೆ – ಅಭಿಮಾನಿಗಳಿಂದ ಸಮಾಜಮುಖಿ ಕಾರ್ಯ
Cinema Latest South cinema

You Might Also Like

Tatiana Schlossberg John F Kennedy
Latest

ಅಮೆರಿಕ ಮಾಜಿ ಅಧ್ಯಕ್ಷ ಜಾನ್‌ ಎಫ್‌. ಕೆನಡಿ ಮೊಮ್ಮಗಳು ಕ್ಯಾನ್ಸರ್‌ನಿಂದ ಸಾವು

Public TV
By Public TV
45 minutes ago
Metro BMTC
Bengaluru City

ಹೊಸ ವರ್ಷಾಚರಣೆಗೆ ಕೌಂಟ್‌ಡೌನ್ – ಮೆಟ್ರೋ, ಬಿಎಂಟಿಸಿ ಸಮಯ ವಿಸ್ತರಣೆ

Public TV
By Public TV
48 minutes ago
New Year Celebration Bengaluru
Bengaluru City

ನ್ಯೂ ಇಯರ್ ವೆಲ್‌ಕಮ್‌ಗೆ ಬೆಂಗಳೂರು ಸಜ್ಜು – ಹಾಟ್ ಸ್ಪಾಟ್‌ಗಳಲ್ಲಿ ಪೊಲೀಸ್ ಕಣ್ಗಾವಲು

Public TV
By Public TV
2 hours ago
asim munir
Latest

ಸಹೋದರನ ಪುತ್ರನಿಗೆ ಮಗಳನ್ನು ಕೊಟ್ಟು ಮದುವೆ ಮಾಡಿದ ಪಾಕ್‌ ಸೇನಾ ಮುಖ್ಯಸ್ಥ

Public TV
By Public TV
2 hours ago
india growth gdp development e1650424798922
Latest

ವಿಶ್ವದ ನಾಲ್ಕನೇಯ ಅತಿ ದೊಡ್ಡ ಆರ್ಥಿಕತೆ – ಜಪಾನ್‌ ಹಿಂದಿಕ್ಕಿದ ಭಾರತ

Public TV
By Public TV
10 hours ago
Jaishankar Khaleda Zia
Latest

ಬಾಂಗ್ಲಾ ಮಾಜಿ ಪ್ರಧಾನಿ ಖಲೀದಾ ಜಿಯಾ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಿರೋ ಜೈಶಂಕರ್

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?