Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಕ್ಫ್ ಆಸ್ತಿ ಅಕ್ರಮ ವರದಿ ಮಂಡನೆಗೆ ವಿಧಾನ ಪರಿಷತ್‌ನಲ್ಲಿ ಬಿಜೆಪಿ ಸದಸ್ಯರ ಆಗ್ರಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಕ್ಫ್ ಆಸ್ತಿ ಅಕ್ರಮ ವರದಿ ಮಂಡನೆಗೆ ವಿಧಾನ ಪರಿಷತ್‌ನಲ್ಲಿ ಬಿಜೆಪಿ ಸದಸ್ಯರ ಆಗ್ರಹ

Bengaluru City

ವಕ್ಫ್ ಆಸ್ತಿ ಅಕ್ರಮ ವರದಿ ಮಂಡನೆಗೆ ವಿಧಾನ ಪರಿಷತ್‌ನಲ್ಲಿ ಬಿಜೆಪಿ ಸದಸ್ಯರ ಆಗ್ರಹ

Public TV
Last updated: September 21, 2022 5:01 pm
Public TV
Share
3 Min Read
vidhana parishad
SHARE

ಬೆಂಗಳೂರು: ವಕ್ಫ್ ಆಸ್ತಿ (Waqf Board) ಕಬಳಿಕೆ ಪ್ರಕರಣ ಕುರಿತು ಅನ್ವರ್ ಮಾಣಿಪ್ಪಾಡಿ ನೀಡಿರುವ ವರದಿಯನ್ನು ಸದನದಲ್ಲಿ ಮಂಡಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಒತ್ತಾಯಿಸಿ ಆಡಳಿತ ಪಕ್ಷದ ಸದಸ್ಯರೇ ಸದನದಲ್ಲಿ ಆಗ್ರಹಿಸಿ ಗದ್ದಲವೆಬ್ಬಿಸಿದ ಘಟನೆ ಇಂದು ವಿಧಾನ ಪರಿಷತ್ (Legislative Council) ಕಲಾಪದಲ್ಲಿ ನಡೆಯಿತು.

ವಿಧಾನ ಪರಿಷತ್ ಕಲಾಪ ಆರಂಭಗೊಳ್ಳುತ್ತಿದ್ದಂತೆ ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ (Raghupati rao Malkapure) ಪ್ರಶ್ನೋತ್ತರ ಕಲಾಪ ಕೈಗೆತ್ತಿಕೊಂಡರು. ಈ ವೇಳೆ ಸದನದಲ್ಲಿ ದಿಢೀರ್ ಎದ್ದು ನಿಂತ ಬಿಜೆಪಿಯ ಸದಸ್ಯ ಸಚೇತಕ ನಾರಾಯಣಸ್ವಾಮಿ, ವಕ್ಫ್ ಆಸ್ತಿ ಕಬಳಿಕೆ ಕುರಿತ ಅನ್ವರ್ ಮಾಣಿಪ್ಪಾಡಿ ವರದಿಯನ್ನು ಸದನದಲ್ಲಿ ಮಂಡಿಸುವಂತೆ ಸರ್ಕಾರಕ್ಕೆ ಸೂಚಿಸಿ ಎಂದು ಆಗ್ರಹಿಸಿದರು. ಇದನ್ನೂ ಓದಿ: ಸಬರ್ಬನ್ ರೈಲ್ವೇ ಯೋಜನೆಗೆ ದಿ.ಅನಂತ್ ಕುಮಾರ್ ಹೆಸರು: ಸೋಮಣ್ಣ

shashikala jolle

ವರದಿ ಸಲ್ಲಿಸಿ ಎರಡು ವರ್ಷವಾಗಿದೆ. ಆ ವರದಿ ಸದನದಲ್ಲಿ ಮಂಡಿಸುವಂತೆ ಸರ್ಕಾರಕ್ಕೆ ಸೂಚಿಸಬೇಕು ಎಂದರು. ಇದಕ್ಕೆ ಬಿಜೆಪಿಯ ಸದಸ್ಯರಾದ ರವಿಕುಮಾರ್, ತೇಜಸ್ವಿನಿಗೌಡ ಸೇರಿದಂತೆ ಇತರ ಕೆಲ ಸದಸ್ಯರು ಸಾತ್ ನೀಡಿದರು. ಕೂಡಲೇ ವರದಿಯನ್ನು ಕಂದಾಯ ಸಚಿವರು ಮಂಡಿಸಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಮಾತನಾಡಿದ ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ, ವಿರೋಧ ಪಕ್ಷದ ಕೆಲಸ ನೀವೇ ಮಾಡಿದರೆ ಅವರೇನು ಮಾಡಬೇಕು? ಆಡಳಿತ ಪಕ್ಷದ ಸದಸ್ಯರಾಗಿ ನೀವೇ ಹೀಗೆ ಮಾಡಿದರೆ ಹೇಗೆ? ಒಬ್ಬೊಬ್ಬರಾಗಿ ಮಾತನಾಡಿ ಎಂದರು.

BJP FLAG

ಇದಕ್ಕೆ ಪ್ರತಿಯಾಗಿ ಪ್ರತಿಪಕ್ಷ ನಾಯಕ ಹರಿಪ್ರಸಾದ್ (Hariprasad) ಮಾತನಾಡಿ, ಸರ್ಕಾರ ಅವರದ್ದೇ. ಯಾರು ತನಿಖೆ ಮಾಡುವುದು ಬೇಡ ಎಂದಿದ್ದಾರೆ. ಆದರೆ ಮೊದಲು ಪ್ರಶ್ನೋತ್ತರ ತೆಗೆದುಕೊಳ್ಳಿ ನಂತರ ಅವರ ಮಾತು ಆಲಿಸಿ ಎಂದರು. ಆಡಳಿತ ಪಕ್ಷದ ಸದಸ್ಯರ ಮಾತಿಗೆ ಅವಕಾಶ ನೀಡುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಸರ್ಕಾರಿ ಜಮೀನು ಅಕ್ರಮವಾಗಿ ಒತ್ತುವರಿಯಾಗಿದೆ – ಒಪ್ಪಿಕೊಂಡ ಸರ್ಕಾರ

ಈ ವೇಳೆ ಮಧ್ಯಪ್ರವೇಶ ಮಾಡಿದ ಸಭಾಪತಿಗಳು, ನಮ್ಮ ಕಾರ್ಯ ಪದ್ದತಿ ಪ್ರಕಾರ ಪ್ರಶ್ನೋತ್ತರ ತೆಗೆದುಕೊಳ್ಳಲಿದ್ದೇವೆ. ನೀವು ಯಾವುದೇ ನೋಟಿಸ್ ಕೂಡ ನೀಡಿಲ್ಲ ಎಂದು ಬಿಜೆಪಿ ಸದಸ್ಯರಿಗೆ ಸೂಚಿಸಿ ಪ್ರಶ್ನೋತ್ತರ ಕಲಾಪ ಆರಂಭಿಸಲು ಮುಂದಾದರು. ಆದರೂ ಇದಕ್ಕೆ ಅವಕಾಶ ನೀಡದೆ ಬಿಜೆಪಿ ಸದಸ್ಯ ರವಿಕುಮಾರ್, ಪ್ರಾಣೇಶ, ನಾರಾಯಣಸ್ವಾಮಿ, ತೇಜಸ್ವಿನಿಗೌಡ ವರದಿ ಮಂಡಿಸಲು ಸರ್ಕಾರದಕ್ಕೆ ಆದೇಶ ಮಾಡಿ ಎಂದು ಆಗ್ರಹಿಸಿದರು.

B.K HARIPRASAD

ಈ ವೇಳೆ ಮಾತನಾಡಿದ ಹರಿಪ್ರಸಾದ್, ಸರ್ಕಾರವೇ ಅಲ್ಲಿ ಇಲ್ಲ ಅದಕ್ಕೆ ನೀವು ಹೇಳುತ್ತಿದ್ದೀರಿ. ನಿಮಗೆ ಧಮ್ಮು ತಾಕತ್ತು ಇಲ್ಲ. ಧಮ್ಮಿರುವುದು 40 ಪರ್ಸೆಂಟ್‌ಗೆ ಮಾತ್ರ. ವಕ್ಫ್ ಬೋರ್ಡ್‌ನಲ್ಲಿ ಇವರಿಗೆ 40 ಪರ್ಸೆಂಟ್ ಸಿಕ್ಕಿಲ್ಲ. ಅದಕ್ಕೆ ಈಗ ಈ ರೀತಿ ಮಾಡುತ್ತಿದ್ದಾರೆ ಎಂದರು.

ಇದಕ್ಕೆ ಟಾಂಗ್ ನೀಡಿದ ಸರ್ಕಾರಿ ಮುಖ್ಯ ಸಚೇತಕ ನಾರಾಯಣಸ್ವಾಮಿ, ನಿಮ್ಮದು 85 ಪರ್ಸೆಂಟ್ ಸರ್ಕಾರ. ರಾಜೀವ್ ಗಾಂಧಿಯೇ ಹೇಳಿದ್ದರು ಎನ್ನುವುದನ್ನು ಉಲ್ಲೇಖಿಸಿದರು.‌ ಈ ವೇಳೆ ಬಿಜೆಪಿ ಸದಸ್ಯರಾದ ತೇಜಸ್ವಿನಿ, ರವಿಕುಮಾರ್ ಯಾವಾಗ ವರದಿ ಮಂಡಿಸುತ್ತೀರಾ ಅಂತ ಸರ್ಕಾರದಿಂದ ಭರವಸೆ ಕೊಡಿಸಿ ಎಂದರು. ಇದನ್ನೂ ಓದಿ: ಕಾಂಗ್ರೆಸ್ ವಿರೋಧ ಪಕ್ಷ ಆಗಿರಲು ನಾಲಾಯಕ್: ನಳಿನ್ ಕುಮಾರ್ ಕಟೀಲ್

ಈ ವೇಳೆ ಪ್ರಶ್ನೋತ್ತರ ಕಲಾಪವನ್ನು ಆರಂಭಿಸಲಾಯಿತು. ಆದರೆ ಪ್ರಶ್ನೆಯೇ ಕೇಳಿಸದಂತೆ ಬಿಜೆಪಿ ಸದಸ್ಯರು ಗದ್ದಲ ಮಾಡಿದ್ದರಿಂದ ಕುಪಿತರಾದ ಕಾಂಗ್ರೆಸ್ ಸದಸ್ಯ ಸಲೀಂ ಅಹಮದ್ ಇದೇನು ಮಾರುಕಟ್ಟೆಯಾ? ಇವರನ್ನು ಕೂರಿಸಿ ಎಂದರು. ಗದ್ದಲ ಹೆಚ್ಚಾಗಿದ್ದರಿಂದ ಸದನದಕ್ಕೆ ಮಾಹಿತಿ ನೀಡಲು ಎದ್ದುನಿಂತ ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ (Shashikala jolle) ಮಾಣಿಪ್ಪಾಡಿ ವರದಿ ಕುರಿತು ಮಾತು ಆರಂಭಿಸಿದರು. ಆದರೆ ಇದಕ್ಕೆ ಸಚಿವ ಅಶ್ವತ್ಥ ನಾರಾಯಣ (Ashwath Narayan) ಬೇಡವೆಂದು ಸೂಚಿಸಿದ್ದರಿಂದ ಉತ್ತರ ಮೊಟಕುಗೊಳಿಸಿದರು. ನಂತರ ಸಭಾಪತಿ ಪ್ರಶ್ನೋತ್ತರ ಕಲಾಪ ಆರಂಭಿಸಿ ಗದ್ದಲಕ್ಕೆ ತೆರೆ ಎಳೆದರು.

Live Tv
[brid partner=56869869 player=32851 video=960834 autoplay=true]

TAGGED:bengaluruBJP Leaderssessionwaqfಅಧಿವೇಶನಬಿಜೆಪಿ ನಾಯಕರುಬೆಂಗಳೂರುವಕ್ಫ್‌
Share This Article
Facebook Whatsapp Whatsapp Telegram

Cinema news

darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories

You Might Also Like

HC Balakrishna zameer
Bengaluru City

ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ – ಪರೋಕ್ಷವಾಗಿ ಜಮೀರ್ ವಿರುದ್ಧ ಕ್ರಮಕ್ಕೆ ಬಾಲಕೃಷ್ಣ ಒತ್ತಾಯ

Public TV
By Public TV
46 minutes ago
HC BALAKRISHNA
Bengaluru City

ನಾಯಕತ್ವ ಬದಲಾವಣೆ ಚರ್ಚೆ ಮುಗಿದ ಅಧ್ಯಾಯ ಅಲ್ಲ: ಹೆಚ್.ಸಿ.ಬಾಲಕೃಷ್ಣ

Public TV
By Public TV
1 hour ago
congress mlas randeep singh surjewala
Bengaluru City

ಕಾಂಗ್ರೆಸ್‌ನಲ್ಲಿ ಸಂಪುಟ ಪುನಾರಚನೆ ಸರ್ಕಸ್ – 12 ಶಾಸಕರಿಂದ ರಣದೀಪ್ ಸುರ್ಜೇವಾಲ ಭೇಟಿ

Public TV
By Public TV
1 hour ago
krishna river 200361 960 720
Latest

ಕೃಷ್ಣಾ ನದಿಯಲ್ಲಿ ಕುರಿಗಾಹಿ ಮೇಲೆ ಮೊಸಳೆ ದಾಳಿ – ಬಲಗೈ ಕಟ್‌

Public TV
By Public TV
2 hours ago
Vinay Kulkarni 1 1
Bengaluru City

ಸೆಲ್‌ ಒಳಗೆ ಹೋಗ್ತಿದ್ದಂತೆ ಕಣ್ಣೀರು – ಪರಪ್ಪನ ಅಗ್ರಹಾರ ಜೈಲಲ್ಲಿ ಇಡೀ ರಾತ್ರಿ ನಿದ್ದೆ ಮಾಡದ ಕುಲಕರ್ಣಿ

Public TV
By Public TV
3 hours ago
pm modi mann ki baat
Latest

ಮಹಿಳೆಯರನ್ನು ಗೌರವಿಸುವುದು ದೇಶವನ್ನೇ ಗೌರವಿಸಿದಂತೆ: ಮಹಿಳಾ ಮೀಸಲಾತಿ ಕಾನೂನು ಶ್ಲಾಘಿಸಿದ ಮೋದಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?