Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಕ್ಫ್ ಆಸ್ತಿ ಅಕ್ರಮ ವರದಿ ಮಂಡನೆಗೆ ವಿಧಾನ ಪರಿಷತ್‌ನಲ್ಲಿ ಬಿಜೆಪಿ ಸದಸ್ಯರ ಆಗ್ರಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಕ್ಫ್ ಆಸ್ತಿ ಅಕ್ರಮ ವರದಿ ಮಂಡನೆಗೆ ವಿಧಾನ ಪರಿಷತ್‌ನಲ್ಲಿ ಬಿಜೆಪಿ ಸದಸ್ಯರ ಆಗ್ರಹ

Bengaluru City

ವಕ್ಫ್ ಆಸ್ತಿ ಅಕ್ರಮ ವರದಿ ಮಂಡನೆಗೆ ವಿಧಾನ ಪರಿಷತ್‌ನಲ್ಲಿ ಬಿಜೆಪಿ ಸದಸ್ಯರ ಆಗ್ರಹ

Public TV
Last updated: September 21, 2022 5:01 pm
Public TV
Share
3 Min Read
vidhana parishad
SHARE

ಬೆಂಗಳೂರು: ವಕ್ಫ್ ಆಸ್ತಿ (Waqf Board) ಕಬಳಿಕೆ ಪ್ರಕರಣ ಕುರಿತು ಅನ್ವರ್ ಮಾಣಿಪ್ಪಾಡಿ ನೀಡಿರುವ ವರದಿಯನ್ನು ಸದನದಲ್ಲಿ ಮಂಡಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಒತ್ತಾಯಿಸಿ ಆಡಳಿತ ಪಕ್ಷದ ಸದಸ್ಯರೇ ಸದನದಲ್ಲಿ ಆಗ್ರಹಿಸಿ ಗದ್ದಲವೆಬ್ಬಿಸಿದ ಘಟನೆ ಇಂದು ವಿಧಾನ ಪರಿಷತ್ (Legislative Council) ಕಲಾಪದಲ್ಲಿ ನಡೆಯಿತು.

ವಿಧಾನ ಪರಿಷತ್ ಕಲಾಪ ಆರಂಭಗೊಳ್ಳುತ್ತಿದ್ದಂತೆ ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ (Raghupati rao Malkapure) ಪ್ರಶ್ನೋತ್ತರ ಕಲಾಪ ಕೈಗೆತ್ತಿಕೊಂಡರು. ಈ ವೇಳೆ ಸದನದಲ್ಲಿ ದಿಢೀರ್ ಎದ್ದು ನಿಂತ ಬಿಜೆಪಿಯ ಸದಸ್ಯ ಸಚೇತಕ ನಾರಾಯಣಸ್ವಾಮಿ, ವಕ್ಫ್ ಆಸ್ತಿ ಕಬಳಿಕೆ ಕುರಿತ ಅನ್ವರ್ ಮಾಣಿಪ್ಪಾಡಿ ವರದಿಯನ್ನು ಸದನದಲ್ಲಿ ಮಂಡಿಸುವಂತೆ ಸರ್ಕಾರಕ್ಕೆ ಸೂಚಿಸಿ ಎಂದು ಆಗ್ರಹಿಸಿದರು. ಇದನ್ನೂ ಓದಿ: ಸಬರ್ಬನ್ ರೈಲ್ವೇ ಯೋಜನೆಗೆ ದಿ.ಅನಂತ್ ಕುಮಾರ್ ಹೆಸರು: ಸೋಮಣ್ಣ

shashikala jolle

ವರದಿ ಸಲ್ಲಿಸಿ ಎರಡು ವರ್ಷವಾಗಿದೆ. ಆ ವರದಿ ಸದನದಲ್ಲಿ ಮಂಡಿಸುವಂತೆ ಸರ್ಕಾರಕ್ಕೆ ಸೂಚಿಸಬೇಕು ಎಂದರು. ಇದಕ್ಕೆ ಬಿಜೆಪಿಯ ಸದಸ್ಯರಾದ ರವಿಕುಮಾರ್, ತೇಜಸ್ವಿನಿಗೌಡ ಸೇರಿದಂತೆ ಇತರ ಕೆಲ ಸದಸ್ಯರು ಸಾತ್ ನೀಡಿದರು. ಕೂಡಲೇ ವರದಿಯನ್ನು ಕಂದಾಯ ಸಚಿವರು ಮಂಡಿಸಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಮಾತನಾಡಿದ ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ, ವಿರೋಧ ಪಕ್ಷದ ಕೆಲಸ ನೀವೇ ಮಾಡಿದರೆ ಅವರೇನು ಮಾಡಬೇಕು? ಆಡಳಿತ ಪಕ್ಷದ ಸದಸ್ಯರಾಗಿ ನೀವೇ ಹೀಗೆ ಮಾಡಿದರೆ ಹೇಗೆ? ಒಬ್ಬೊಬ್ಬರಾಗಿ ಮಾತನಾಡಿ ಎಂದರು.

BJP FLAG

ಇದಕ್ಕೆ ಪ್ರತಿಯಾಗಿ ಪ್ರತಿಪಕ್ಷ ನಾಯಕ ಹರಿಪ್ರಸಾದ್ (Hariprasad) ಮಾತನಾಡಿ, ಸರ್ಕಾರ ಅವರದ್ದೇ. ಯಾರು ತನಿಖೆ ಮಾಡುವುದು ಬೇಡ ಎಂದಿದ್ದಾರೆ. ಆದರೆ ಮೊದಲು ಪ್ರಶ್ನೋತ್ತರ ತೆಗೆದುಕೊಳ್ಳಿ ನಂತರ ಅವರ ಮಾತು ಆಲಿಸಿ ಎಂದರು. ಆಡಳಿತ ಪಕ್ಷದ ಸದಸ್ಯರ ಮಾತಿಗೆ ಅವಕಾಶ ನೀಡುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಸರ್ಕಾರಿ ಜಮೀನು ಅಕ್ರಮವಾಗಿ ಒತ್ತುವರಿಯಾಗಿದೆ – ಒಪ್ಪಿಕೊಂಡ ಸರ್ಕಾರ

ಈ ವೇಳೆ ಮಧ್ಯಪ್ರವೇಶ ಮಾಡಿದ ಸಭಾಪತಿಗಳು, ನಮ್ಮ ಕಾರ್ಯ ಪದ್ದತಿ ಪ್ರಕಾರ ಪ್ರಶ್ನೋತ್ತರ ತೆಗೆದುಕೊಳ್ಳಲಿದ್ದೇವೆ. ನೀವು ಯಾವುದೇ ನೋಟಿಸ್ ಕೂಡ ನೀಡಿಲ್ಲ ಎಂದು ಬಿಜೆಪಿ ಸದಸ್ಯರಿಗೆ ಸೂಚಿಸಿ ಪ್ರಶ್ನೋತ್ತರ ಕಲಾಪ ಆರಂಭಿಸಲು ಮುಂದಾದರು. ಆದರೂ ಇದಕ್ಕೆ ಅವಕಾಶ ನೀಡದೆ ಬಿಜೆಪಿ ಸದಸ್ಯ ರವಿಕುಮಾರ್, ಪ್ರಾಣೇಶ, ನಾರಾಯಣಸ್ವಾಮಿ, ತೇಜಸ್ವಿನಿಗೌಡ ವರದಿ ಮಂಡಿಸಲು ಸರ್ಕಾರದಕ್ಕೆ ಆದೇಶ ಮಾಡಿ ಎಂದು ಆಗ್ರಹಿಸಿದರು.

B.K HARIPRASAD

ಈ ವೇಳೆ ಮಾತನಾಡಿದ ಹರಿಪ್ರಸಾದ್, ಸರ್ಕಾರವೇ ಅಲ್ಲಿ ಇಲ್ಲ ಅದಕ್ಕೆ ನೀವು ಹೇಳುತ್ತಿದ್ದೀರಿ. ನಿಮಗೆ ಧಮ್ಮು ತಾಕತ್ತು ಇಲ್ಲ. ಧಮ್ಮಿರುವುದು 40 ಪರ್ಸೆಂಟ್‌ಗೆ ಮಾತ್ರ. ವಕ್ಫ್ ಬೋರ್ಡ್‌ನಲ್ಲಿ ಇವರಿಗೆ 40 ಪರ್ಸೆಂಟ್ ಸಿಕ್ಕಿಲ್ಲ. ಅದಕ್ಕೆ ಈಗ ಈ ರೀತಿ ಮಾಡುತ್ತಿದ್ದಾರೆ ಎಂದರು.

ಇದಕ್ಕೆ ಟಾಂಗ್ ನೀಡಿದ ಸರ್ಕಾರಿ ಮುಖ್ಯ ಸಚೇತಕ ನಾರಾಯಣಸ್ವಾಮಿ, ನಿಮ್ಮದು 85 ಪರ್ಸೆಂಟ್ ಸರ್ಕಾರ. ರಾಜೀವ್ ಗಾಂಧಿಯೇ ಹೇಳಿದ್ದರು ಎನ್ನುವುದನ್ನು ಉಲ್ಲೇಖಿಸಿದರು.‌ ಈ ವೇಳೆ ಬಿಜೆಪಿ ಸದಸ್ಯರಾದ ತೇಜಸ್ವಿನಿ, ರವಿಕುಮಾರ್ ಯಾವಾಗ ವರದಿ ಮಂಡಿಸುತ್ತೀರಾ ಅಂತ ಸರ್ಕಾರದಿಂದ ಭರವಸೆ ಕೊಡಿಸಿ ಎಂದರು. ಇದನ್ನೂ ಓದಿ: ಕಾಂಗ್ರೆಸ್ ವಿರೋಧ ಪಕ್ಷ ಆಗಿರಲು ನಾಲಾಯಕ್: ನಳಿನ್ ಕುಮಾರ್ ಕಟೀಲ್

ಈ ವೇಳೆ ಪ್ರಶ್ನೋತ್ತರ ಕಲಾಪವನ್ನು ಆರಂಭಿಸಲಾಯಿತು. ಆದರೆ ಪ್ರಶ್ನೆಯೇ ಕೇಳಿಸದಂತೆ ಬಿಜೆಪಿ ಸದಸ್ಯರು ಗದ್ದಲ ಮಾಡಿದ್ದರಿಂದ ಕುಪಿತರಾದ ಕಾಂಗ್ರೆಸ್ ಸದಸ್ಯ ಸಲೀಂ ಅಹಮದ್ ಇದೇನು ಮಾರುಕಟ್ಟೆಯಾ? ಇವರನ್ನು ಕೂರಿಸಿ ಎಂದರು. ಗದ್ದಲ ಹೆಚ್ಚಾಗಿದ್ದರಿಂದ ಸದನದಕ್ಕೆ ಮಾಹಿತಿ ನೀಡಲು ಎದ್ದುನಿಂತ ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ (Shashikala jolle) ಮಾಣಿಪ್ಪಾಡಿ ವರದಿ ಕುರಿತು ಮಾತು ಆರಂಭಿಸಿದರು. ಆದರೆ ಇದಕ್ಕೆ ಸಚಿವ ಅಶ್ವತ್ಥ ನಾರಾಯಣ (Ashwath Narayan) ಬೇಡವೆಂದು ಸೂಚಿಸಿದ್ದರಿಂದ ಉತ್ತರ ಮೊಟಕುಗೊಳಿಸಿದರು. ನಂತರ ಸಭಾಪತಿ ಪ್ರಶ್ನೋತ್ತರ ಕಲಾಪ ಆರಂಭಿಸಿ ಗದ್ದಲಕ್ಕೆ ತೆರೆ ಎಳೆದರು.

Live Tv
[brid partner=56869869 player=32851 video=960834 autoplay=true]

TAGGED:bengaluruBJP Leaderssessionwaqfಅಧಿವೇಶನಬಿಜೆಪಿ ನಾಯಕರುಬೆಂಗಳೂರುವಕ್ಫ್‌
Share This Article
Facebook Whatsapp Whatsapp Telegram

Cinema news

AMB Cinemas 2
ಬೆಂಗಳೂರಿನ ಕಪಾಲಿ ಥಿಯೇಟರ್ ಜಾಗದಲ್ಲಿ ಮಹೇಶ್ ಬಾಬು `ಎಎಂಬಿ ಸಿನಿಮಾಸ್’.. ಇದರ ಸ್ಪೆಷಾಲಿಟಿ ಏನು?
Bengaluru City Cinema Latest Main Post South cinema
Rajanikanth
ಸಂಕ್ರಾಂತಿ ದಿನವೇ ಅಭಿಮಾನಿಗಳಿಗೆ ಗುಡ್‌ನ್ಯೂಸ್ ಕೊಟ್ಟ ತಲೈವಾ.!
Cinema Latest South cinema Top Stories
Samruddhi Ram
ಗ್ಯಾಮ್ಲಿಂಗ್‌ನಲ್ಲಿ ಹಣ ಕಳೆದುಕೊಂಡೆ, 3 ವರ್ಷಗಳಿಂದ ಮನೆಯಿಂದಾಚೆಯಿದ್ದೀನಿ, ಇವರಿಂದ ಬದುಕೋಕೆ ಆಗ್ತಿಲ್ಲ: ಸಮೃದ್ಧಿ ರಾಮ್‌ ಕಣ್ಣೀರು
Bengaluru City Cinema Districts Karnataka Latest Main Post Sandalwood
Pratibha Shetty Samriddhi Ram Karunya Ram
ಮೋಸ ಮಾಡಿದವ್ರು ಉದ್ಧಾರ ಆಗಲ್ಲ – ಸಮೃದ್ಧಿ ರಾಮ್‌ ವಿರುದ್ಧ ಪ್ರತಿಭಾ ಶೆಟ್ಟಿ ಗರಂ
Bengaluru City Cinema Crime Karnataka Latest States Top Stories

You Might Also Like

02 14
Districts

Video | ಅಗ್ನಿ ಅವಘಡ – ಶೀಟ್‌ ಮನೆಯಲ್ಲಿದ್ದ 5 ಲಕ್ಷ ನಗದು ಭಸ್ಮ!

Public TV
By Public TV
5 hours ago
Delhi Weather 1
Latest

ಬೆಚ್ಚಿ ಬೀಳಿಸಿದ ವರದಿ – ದೆಹಲಿಯಲ್ಲಿ ಒಂದೇ ವರ್ಷ 9,000 ಕ್ಕೂ ಹೆಚ್ಚು ಸಾವು!

Public TV
By Public TV
6 hours ago
Mandya Sankranti Fire
Districts

ಸಂಕ್ರಾಂತಿ ವೇಳೆ ಕಿಚ್ಚು ಹಾಯಿಸುವಾಗ ಯಡವಟ್ಟು – ಜನರ ಮೇಲೆ ಎಗರಿದ ಎತ್ತುಗಳು, ಇಬ್ಬರಿಗೆ ಗಾಯ

Public TV
By Public TV
6 hours ago
Dinesh Gundu Rao 1
Bengaluru City

ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮದಲ್ಲಿ ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Public TV
By Public TV
6 hours ago
Harleen Deol
Cricket

ಡಿಯೋಲ್‌ ಡಿಚ್ಚಿ, ಮುಂಬೈ ಮೇಲೆ ವಾರಿಯರ್ಸ್‌ ಸವಾರಿ – ಹ್ಯಾಟ್ರಿಕ್‌ ಸೋಲಿನ ಬಳಿಕ ಗೆದ್ದ ಯುಪಿ

Public TV
By Public TV
6 hours ago
supreme Court 1
Court

`ಜನನಾಯಗನ್’ ಮಧ್ಯಂತರ ಪರಿಹಾರಕ್ಕೆ ಸುಪ್ರೀಂ ನಕಾರ – KVN ಪ್ರೊಡಕ್ಷನ್ ಅರ್ಜಿ ವಜಾ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?