ಸಂಸತ್ತಿನೊಳಗೆ ಹೋಗಲು ಬಿಡದೆ ನನ್ನನ್ನೇ ತಳ್ಳಿದ್ರು, ಬೆದರಿಕೆ ಹಾಕಿದ್ರು – ರಾಗಾ ಪ್ರತ್ಯಾರೋಪ

Public TV
3 Min Read
Rahul Gandhi 3

– ಸಂವಿಧಾನದ ಮೇಲೆ ದಾಳಿ, ಅಂಬೇಡ್ಕರ್‌ಗೆ ಅಪಮಾನ ಆದ್ರೆ ಸಹಿಸಲ್ಲ ಎಂದ ಸಂಸದ

ನವದೆಹಲಿ: ಸಂಸತ್‌ ಭವನ ಆವರಣದಲ್ಲಿ (Parliament Premises) ನಡೆಯುತ್ತಿದ್ದ ಪ್ರತಿಭಟನೆ ವೇಳೆ ಬಿಜೆಪಿ ಸಂಸದ ಪ್ರತಾಪ್‌ ಸಾರಂಗಿ ಅವರನ್ನು ತಳ್ಳಿದ್ದಾರೆ ಎಂಬ ಆರೋಪಕ್ಕೆ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಸ್ಪಷ್ಟನೆ ನೀಡಿದ್ದಾರೆ.

ಸಂಸತ್‌ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಯಾರನ್ನು ತಳ್ಳಿಲ್ಲ. ಸಂಸತ್ತಿನ ಪ್ರವೇಶದ್ವಾರದ ಮೂಲಕ ಸಂಸತ್‌ ಭವನದ ಒಳಗೆ ಹೋಗಲು ಪ್ರಯತ್ನಿಸುತ್ತಿದ್ದೆ. ಈ ವೇಳೆ ಬಿಜೆಪಿ ಸಂಸದರೇ ನನ್ನನ್ನು ತಡೆದರು, ತಳ್ಳಿದ್ರು ಮತ್ತು ಬೆದರಿಕೆ ಹಾಕಲು ಪ್ರಯತ್ನಿಸುತ್ತಿದ್ದರು. ಹಾಗಾಗಿ ಈ ಘಟನೆ ಸಂಭವಿಸಿದೆ ಎಂದಿದ್ದಾರೆ. ಇದನ್ನೂ ಓದಿ: ಸಂಸತ್‌ ಭವನ ಆವರಣದಲ್ಲಿ ಹೈಡ್ರಾಮಾ – ರಾಹುಲ್‌ ತಳ್ಳಿದ್ರಿಂದ ನಾನು ಬಿದ್ದೆ ಎಂದ ಬಿಜೆಪಿ ಸಂಸದ

ಮುಂದುವರಿದು, ಸಂಸತ್‌ಗೆ ಭವನಕ್ಕೆ ಇದೊಂದೇ ಪ್ರವೇಶದ್ವಾರ, ಒಳಗೆ ಹೋಗುವುದು ನಮ್ಮ ಹಕ್ಕು. ನಮ್ಮನ್ನ ತಳ್ಳುವುದರಿಂದ ಸಮಸ್ಯೆಯಿಲ್ಲ, ಆದ್ರೆ ಸಂವಿಧಾನದ ಮೇಲೆ ದಾಳಿ ಮಾಡುತ್ತಿದ್ದಾರೆ ಹಾಗೂ ಅಂಬೇಡ್ಕರ್ ಅವರ ಸ್ಮರಣೆಗೆ ಅವಮಾನ ಮಾಡಿದ್ದಾರೆ. ಇದನ್ನು ನಾವು ಸಹಿಸಲ್ಲ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಅಮಿತ್‌ ಶಾ ವಿಡಿಯೋ ಅಪ್ಲೋಡ್‌ – ಕೈ ನಾಯಕರಿಗೆ ಎಕ್ಸ್‌ನಿಂದ ನೋಟಿಸ್‌

ಸಾರಂಗಿಗೆ ಆಗಿದ್ದೇನು?
ಉಭಯ ಪಕ್ಷಗಳು ಸಂಸತ್‌ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಬಿಜೆಪಿ ಸಂಸದ ಪ್ರತಾಪ್‌ ಸಾರಂಗಿ (Pratap Chandra Sarangi) ಕುಸಿದುಬಿದ್ದಿದ್ದರು. ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ನನ್ನನ್ನ ತಳ್ಳಿದ್ದಾರೆ ಎಂಬ ಆರೋಪ ಮಾಡಿದ್ದರು. ಸದ್ಯ ಅವರನ್ನು ದೆಹಲಿಯ ಆರ್‌ಎಂಎಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: PUBLiC TV Impact; 70 ಲಕ್ಷ ಕರೆಂಟ್ ಬಿಲ್ ಕಟ್ಟುವಂತೆ ಸಿದ್ದಗಂಗಾ ಮಠಕ್ಕೆ ನೀಡಿದ್ದ ನೋಟಿಸ್ ಹಿಂಪಡೆದ ಸರ್ಕಾರ

Rahul Gandhi 1

ಬಿಜೆಪಿ vs ಕಾಂಗ್ರೆಸ್‌ ಪ್ರೊಟೆಸ್ಟ್‌:
ಚಳಿಗಾಲದ ಅಧಿವೇಶನದಲ್ಲಿ ʻಸಂವಿಧಾನʼ ಕುರಿತ ಚರ್ಚೆ ವೇಳೆ ರಾಜ್ಯಸಭೆಯಲ್ಲಿ ಅಮಿತ್‌ ಶಾ ಅವರು ಮಾತನಾಡುತ್ತಾ, ʻಅಂಬೇಡ್ಕರ್‌ ಅಂಬೇಡ್ಕರ್‌ ಅಂಬೇಡ್ಕರ್‌ ಇದೊಂದು ಫ್ಯಾಷನ್‌ ಆಗಿಬಿಟ್ಟಿದೆ. ಇಷ್ಟು ಬಾರಿ ದೇವರ ಹೆಸರು ಹೇಳಿದ್ದರೆ ಅವರಿಗೆ ಸ್ವರ್ಗದಲ್ಲಿ ಸ್ಥಾನವಾದರೂ ಸಿಗುತ್ತಿತ್ತುʼ ಎಂದು ಹೇಳಿದ್ದರು. ಈ ಕುರಿತ ವೀಡಿಯೋಗಳನ್ನು ವಿಕ್ಷ ನಾಯಕರು ತಮ್ಮ ಸೋಷಿಯಲ್‌ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ ಕೇಂದ್ರ ಗೃಹ ಸಚಿವರು ರಾಜೀನಾಮೇ ನೀಡಬೇಕು, ಅಂಬೇಡ್ಕರ್‌ ವಿರುದ್ಧದ ಟೀಕೆಗೆ ಕ್ಷಮೆಯಾಚಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ. ಈ ನಡುವೆ ಕಾಂಗ್ರೆಸ್‌ ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.

ಮತ್ತೊಂದೆಡೆ ಕಾಂಗ್ರೆಸ್ ನಿಂದ ಅಂಬೇಡ್ಕರ್‌ಗೆ ಅನ್ಯಾಯವಾಗಿದೆ ಎನ್ನುವ ಪ್ಲೆ ಕಾರ್ಡ್ ಹಿಡಿದು ಬಿಜೆಪಿ ಸದಸ್ಯರು ಪ್ರತಿಭಟನೆಗಿಳಿದಿದ್ದಾರೆ. ಇತ್ತ ಬಿಜೆಪಿ ಸಂಸದರಿಂದಲೂ ಸಂಸತ್ ಆವರಣದಲ್ಲಿ ʻಕಾಂಗ್ರೆಸ್ ನಿಂದ ಅಂಬೇಡ್ಕರ್‌ಗೆ ಅನ್ಯಾಯವಾಗಿದೆʼ ಅನ್ನೋ ಪ್ಲೆ ಕಾರ್ಡ್ ಹಿಡಿದು ಪ್ರತಿಭಟನೆಗಿಳಿದಿದ್ದಾರೆ. ಪ್ರತಿಭಟನೆಯಲ್ಲಿ ಕರ್ನಾಟಕದ ಬಿಜೆಪಿ ಸಂಸದರಾದ ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ, ಜಗ್ಗೇಶ್ ಭಾಗಿಯಾಗಿದ್ದಾರೆ.


ಮೋದಿ ತಿರುಗೇಟು:
ಇನ್ನೂ ಅಮಿತ್‌ ಶಾ ಅವರ ಹೇಳಿಕೆಗೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ಕಾಂಗ್ರೆಸ್‌ ಅಂಬೇಡ್ಕರ್‌ ಏನೇನು ಕೊಟ್ಟಿದೆ ಚುನಾವಣೆಯಲ್ಲಿ ಸೋಲಿಸಿದ್ದು ಕಾಂಗ್ರೆಸ್‌ ಎಂದು ಹೇಳಿದ್ದರು. ಅಮಿತ್‌ ಶಾ ಅವರು ಸಂವಿಧಾನ ಶಿಲ್ಪಿ ಡಾ ಬಿ.ಆರ್‌ ಅಂಬೇಡ್ಕರ್‌ರನ್ನು ಕನಸಿನಲ್ಲಿಯೂ ಅವಮಾನಿಸಲು ಸಾಧ್ಯವಿಲ್ಲದ ಪಕ್ಷದಿಂದ ಬಂದವರು. ಕಾಂಗ್ರೆಸ್‌ ಅವರ ಹೇಳಿಕೆಯನ್ನು ತಿರುಚಿದೆ ಎಂದು ಹೇಳಿದ್ದಾರೆ.

ಇನ್ನೂ ಸಿಎಂ ಸಿದ್ದರಾಮಯ್ಯ ಕೂಡ ಪತ್ರದ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಅಂಬೇಡ್ಕರ್‌ರಂತಹ ಮಹಾನ್‌ ವ್ಯಕ್ತಿ ಈ ಭೂಮಿಯಲ್ಲಿ ಹುಟ್ಟದಿದ್ದರೆ ನಾನು ಊರಿನಲ್ಲಿ ಕುರಿ ಮೇಯಿಸಿಕೊಂಡು ಇರುತ್ತಿದ್ದೆ, ಅಮಿತ್‌ ಶಾ ಅವರು ಕೂಡ ಗುಜರಿ ವ್ಯಾಪಾರ ಮಾಡಿಕೊಂಡು ಇರಬೇಕಾಗಿತ್ತು ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ದಾವಣಗೆರೆ ಕಾಂಗ್ರೆಸ್‌ನಲ್ಲಿ ಅಸಮಾಧಾನ – ಉಸ್ತುವಾರಿ ಮಲ್ಲಿಕಾರ್ಜುನ್‌ ಬದಲಾಯಿಸುವಂತೆ ಶಿವಗಂಗಾ ಬಸವರಾಜ್ ಪತ್ರ

Share This Article