Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂಘಟನಾತ್ಮಕ ವೀರ ಕೇರಳ, ಆಂಧ್ರದಲ್ಲಿ ಪಕ್ಷಕ್ಕೆ ಎಷ್ಟು ಸೀಟು ತಂದು ಕೊಟ್ಟರು: ಸಂತೋಷ್ ವಿರುದ್ಧ ಯತ್ನಾಳ್ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸಂಘಟನಾತ್ಮಕ ವೀರ ಕೇರಳ, ಆಂಧ್ರದಲ್ಲಿ ಪಕ್ಷಕ್ಕೆ ಎಷ್ಟು ಸೀಟು ತಂದು ಕೊಟ್ಟರು: ಸಂತೋಷ್ ವಿರುದ್ಧ ಯತ್ನಾಳ್ ಕಿಡಿ

Districts

ಸಂಘಟನಾತ್ಮಕ ವೀರ ಕೇರಳ, ಆಂಧ್ರದಲ್ಲಿ ಪಕ್ಷಕ್ಕೆ ಎಷ್ಟು ಸೀಟು ತಂದು ಕೊಟ್ಟರು: ಸಂತೋಷ್ ವಿರುದ್ಧ ಯತ್ನಾಳ್ ಕಿಡಿ

Public TV
Last updated: October 3, 2019 2:12 pm
Public TV
Share
3 Min Read
BL Santosh Yatnal
SHARE

– ಸೂಲಿಬೆಲೆ ಪರ ಬ್ಯಾಟಿಂಗ್, ಸದಾನಂದಗೌಡರಿಗೆ ಟಾಂಗ್
– ಇದೇ ಖಾತೆ ಬೇಕು ಅಂತ ಸರ್ಕಾರಿ ಕಾರು ಬಿಟ್ಟು ಓಡಿ ಹೋಗ್ಲಿಲ್ಲ
– ಸಿ.ಟಿ.ರವಿ ವಿರುದ್ಧ ಗುಡುಗಿದ ಯತ್ನಾಳ್

ವಿಜಯಪುರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮದೇ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಮಾತನಾಡಿದ ಶಾಸಕರು, ದಕ್ಷಿಣ ಭಾರತದಲ್ಲಿ ಸಂಘಟನಾತ್ಮಕ ಚತುರರು, ವೀರರು, ಧೀರರು ಎಂದು ಹೇಳಿಕೊಳ್ಳುವವರು ಕೇರಳ, ಆಂಧ್ರಪ್ರದೇಶದ ಉಸ್ತುವಾರಿ ಹೊಂದಿದ್ದಾಗ ಎಷ್ಟು ಸೀಟು ಗೆದ್ದು ತಂದರು. ಕೇರಳದಲ್ಲಿ ಐದು ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದು ಭಾಷಣ ಮಾಡಿದರು. ಕೊನೆಗೆ ಗೆದ್ದಿದ್ದು ಎಷ್ಟು? ಒಂದೇ ಒಂದು ಲೋಕಸಭಾ ಕ್ಷೇತ್ರದಲ್ಲಿ ಗೆದ್ದು ಬರಲಿಲ್ಲ. ಬರೀ ಕಥೆ ಹೇಳಿದರು ಎಂದು ಬಿ.ಎಸ್.ಸಂತೋಷ್ ವಿರುದ್ಧ ಕಿಡಿಕಾರಿದರು.

Basanagouda Patil Yatnal

ಕೇರಳದಲ್ಲಿ ಶಬರಿಮಲೆ ವಿವಾದ ಇದ್ದಾಗಲೂ ಲೋಕಸಭಾ ಚುನಾವಣೆಯಲ್ಲಿ ಒಂದು ಸೀಟು ಗೆಲ್ಲಿಸಲು ಅವರಿಂದ ಸಾಧ್ಯವಾಗಲಿಲ್ಲ. ಕೆಲ ಮಾಧ್ಯಮಗಳು ಜಾತಿ ಅಭಿಮಾನದಿಂದ ಅವರನ್ನೇ ಹೊಗಳಿದವು ಎಂದು ಮಾಧ್ಯಮಗಳ ಮೇಲೆ ಗೂಬೆ ಕೂಡಿಸಿದರು.

ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ದಿವಂಗತ ಅನಂತ್‍ಕುಮಾರ್ ಅವರು ರಾಜ್ಯದಲ್ಲಿ ವ್ಯವಸ್ಥಿತವಾಗಿ ಪಕ್ಷ ಕಟ್ಟಿದ್ದಾರೆ. ಈ ಇಬ್ಬರು ನಾಯಕರು ಮಕ್ಕಳು, ಮನೆ ಬಿಟ್ಟು ಪಕ್ಷವನ್ನು ಬೆಳೆಸಿದ್ದಾರೆ. ಅನಂತ್‍ಕುಮಾರ್ ಅವರು ಇದ್ದಿದ್ದರೆ ರಾಜ್ಯಕ್ಕೆ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಹೋಗಿ ರಾಜ್ಯದ ಸಮಸ್ಯೆ ಬಗ್ಗೆ ಮಾತನಾಡುವ ನಾಯಕರು ಇಂದು ರಾಜ್ಯದಲ್ಲಿ ಯಾರೂ ಇಲ್ಲ ಎಂದು ಪರೋಕ್ಷವಾಗಿ ರಾಜ್ಯ ಬಿಜೆಪಿ ಸಂಸದರ ವಿರುದ್ಧ ಕಿಡಿಕಾರಿದರು.

SULIBELE SADANANDA GOWDA 1

ಪ್ರವಾಹ ಸಂತ್ರಸ್ತರಿಗೆ ಕೇಂದ್ರದ ಪರಿಹಾರ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಶಾಸಕರು, ಚಿಂತಕ ಚಕ್ರವರ್ತಿ ಸೂಲಿಬೆಲೆ ಕೇಳುವುದರಲ್ಲಿ ತಪ್ಪೇನಿಲ್ಲ. ಅವರು ನರೇಂದ್ರ ಮೋದಿ ಪ್ರಧಾನಿಯಾಗಲಿ ಎಂದು ತಪಸ್ಸು ಮಾಡಿದವರು. ನಿಮ್ಮ ವೈಫಲ್ಯಗಳನ್ನು ಅವರ ಮೇಲೆ ಯಾಕೆ ಹಾಕುತ್ತೀರಿ. ಅವರ ವಿರುದ್ಧ ಟೀಕೆ ಮಾಡುವ ನೈತಿಕತೆ ನಿಮಗೆ ಇಲ್ಲ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರ ವಿರುದ್ಧ ವಾಗ್ದಾಳಿ ನಡೆಸಿದರು.

ಚಕ್ರವರ್ತಿ ಸೂಲಿಬೆಲೆ ಅವರನ್ನು ಬೈದು ನಿಮ್ಮ ಗೌರವ ಅಷ್ಟೇ ಅಲ್ಲ ಪ್ರಧಾನಿ ಮೋದಿ ಗೌರವವನ್ನು ಕಳೆಯಬೇಡಿ. ಅವರನ್ನ ಬೈದರೆ ಪಕ್ಷಕ್ಕೆ ಹಿನ್ನಡೆಯಾಗುತ್ತದೆ. ಸೂಲಿಬೆಲೆ ಅವರಿಗೆ ಏನು ಆಗಲ್ಲ, ಅವರೇನು ಚುನಾವಣೆಗೆ ನಿಲ್ಲುವುದಿಲ್ಲ, ರಾಜಕೀಯ ಬಯಸಿದವರಲ್ಲ. ನಿಮ್ಮ ಕೆಲಸ ನೀವು ಸರಿಯಾಗಿ ಮಾಡಿ ಎಂದು ಕೇಂದ್ರ ಸಚಿವರನ್ನು ಜಾಡಿಸಿದರು.

prahlad joshi 1 1

ಹೋಗ್ರಿ ಪ್ರಧಾನಿ ಬಳಿ ಪರಿಹಾರ ಹಣ ತನ್ನಿ. ಒಬ್ಬರು ಹುಬ್ಬಳ್ಳಿಯಲ್ಲಿ, ಇನ್ನೊಬ್ಬರು ಬೆಂಗಳೂರಿನಲ್ಲಿ ಕುಳಿತು ಏನ್ ಮಾಡುತ್ತಿದ್ದಿರೀ. ಕರ್ನಾಟಕಕ್ಕೆ 10 ಸಾವಿರ ಕೋಟಿ ರೂ. ಪರಿಹಾರ ತೆಗೆದುಕೊಂಡು ಬನ್ನಿ. ಇಲ್ಲೆ ಕುಳಿತು ಯಾರ್ಯಾರಿಗೋ ದೇಶದ್ರೋಹಿ ಎಂದು ಟೀಕೆ ಮಾಡುತ್ತೀರಿ ಎಂದು ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ ಹಾಗೂ ಡಿ.ವಿ.ಸದಾನಂದಗೌಡ ಅವರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟರು.

ರಾಜ್ಯದಲ್ಲಿ ಹುಡುಗಾಟಿಕೆ ಹಚ್ಚಿದ್ದೀರಾ? ಸಂಸದರಾಗಿ ಕಥೆ ಹೇಳುದ್ದೀರಿ. ಹೇಳುವವರು ಕೇಳುವವರು ಇಲ್ವಾ ನಿಮಗೆ? ನಾನು ಪಕ್ಷ ಕಟ್ಟಿದ್ದೇನೆ, 10 ವರ್ಷ ಸಂಸದನಾಗಿ, ಕೇಂದ್ರ ಸಚಿವನಾಗಿ ಜವಾಬ್ದಾರಿ ನಿಭಾಯಿಸಿದ್ದೇನೆ. ನೀವು ಮಾತ್ರ ಜಿಲ್ಲೆಗೆ ಸೀಮಿತವಾಗಿ ಉಳಿದಿದ್ದಿರಾ, ಜಿಲ್ಲೆ ಬಿಟ್ಟು ಹೊರಗೆ ಬನ್ನಿ. ಹೋಗಿ ಹಠ ಹಿಡಿದು ನೆರೆ ಪರಿಹಾರ ಹಣ ತೆಗೆಕೊಂಡು ಬನ್ನಿ ಎಂದು ರಾಜ್ಯದ ಸಂಸದರನ್ನು ತರಾಟೆಗೆ ತೆಗೆದುಕೊಂಡರು.

c.t ravi

ಉದ್ದೇಶ ಇಟ್ಟುಕೊಂಡು ಯತ್ನಾಳ್ ಅವರು ಪಕ್ಷದ ವಿರುದ್ಧ ಮಾತನಾಡುತ್ತಿದ್ದಾರೆ ಎಂಬ ಸಚಿವ ಸಿ.ಟಿ.ರವಿ ಅವರ ಹೇಳಿ ವಿರುದ್ಧ ಕಿಡಿಕಾರಿದ ಶಾಸಕರು, ನಾನೇನು ಮಂತ್ರಿಯಾಗಬೇಕು ಅಂತ ಯಾರ ಕಾಲು ಹಿಡಿದಿಲ್ಲ. ಇದೇ ಖಾತೆ ಬೇಕು ಅಂತ ಸರ್ಕಾರಿ ಕಾರು ಬಿಟ್ಟು ಓಡಿ ಮನೆಗೆ ಹೋಗಿ ಮಲಗಲಿಲ್ಲ. ಅರ್ಹತೆ ಇದ್ದರೆ ಸಚಿವ ಸ್ಥಾನ ನೀಡುತ್ತಾರೆ. ಮಾಜಿ ಪ್ರಧಾನಿ ಅಟಲ್ ಬಿಹರಿ ವಾಜಪೇಯಿ ಅವರು ನನ್ನ ಅರ್ಹತೆ ಗುರುತಿಸಿಯೇ ಮಂತ್ರಿ ಮಾಡಿದ್ದರು ಎಂದು ಟಾಂಗ್ ಕೊಟ್ಟರು.

TAGGED:Basanagouda Patil YatnalBJP MLABL SantoshPublic TVvijayapuraಪಬ್ಲಿಕ್ ಟಿವಿಬಸನಗೌಡ ಪಾಟೀಲ್ ಯತ್ನಾಳ್ಬಿ.ಎಲ್ ಸಂತೋಷ್ಬಿಜೆಪಿಶಾಸಕಸಿ.ಟಿ ರವಿ
Share This Article
Facebook Whatsapp Whatsapp Telegram

Cinema news

Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories

You Might Also Like

big bulletin 23 February 2026 part 1
Big Bulletin

ಬಿಗ್‌ ಬುಲೆಟಿನ್‌ 23 February 2026 ಭಾಗ-1

Public TV
By Public TV
8 minutes ago
big bulletin 23 February 2026 part 2
Big Bulletin

ಬಿಗ್‌ ಬುಲೆಟಿನ್‌ 23 February 2026 ಭಾಗ-2

Public TV
By Public TV
11 minutes ago
big bulletin 23 February 2026 part 3
Big Bulletin

ಬಿಗ್‌ ಬುಲೆಟಿನ್‌ 23 February 2026 ಭಾಗ-3

Public TV
By Public TV
13 minutes ago
Double Decker Bus Overturns In Lucknow
Crime

ಲಕ್ನೋದಲ್ಲಿ ಡಬಲ್ ಡೆಕ್ಕರ್ ಬಸ್ ಪಲ್ಟಿ – ಐವರು ದುರ್ಮರಣ, 16 ಮಂದಿಗೆ ಗಾಯ

Public TV
By Public TV
24 minutes ago
ಸಾಂದರ್ಭಿಕ ಚಿತ್ರ
Bengaluru City

ಜಕ್ಕೂರಿನಲ್ಲಿ ಸಿಎಂ, ಡಿಸಿಎಂ ಜೊತೆ ಸುರ್ಜೇವಾಲಾ ಕ್ಲೋಸ್‌ ಡೋರ್‌ ಮೀಟಿಂಗ್‌

Public TV
By Public TV
36 minutes ago
Baldota Factory
Districts

ಬಲ್ಡೋಟಾ ಕಾರ್ಖಾನೆ ವಿಸ್ತರಣೆ ವಿರೋಧಿಸಿ ಕೊಪ್ಪಳ ಬಂದ್ – ಮಂಗಳವಾರ ಖಾಸಗಿ ಶಾಲೆಗಳಿಗೆ ರಜೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?