-ಕರ್ನಾಟಕದ ಓವೈಸಿಯಾಗಲು ಹೆಚ್ಡಿಕೆ ಪ್ರಯತ್ನ
-ಇಮ್ರಾನ್ ಖಾನ್ ಅಳಿಯ ಕುಮಾರಸ್ವಾಮಿ
-ಸಿಎಂ ಇಬ್ರಾಹಿಂ ಒರಿಜಿನಲ್ ಮುಸ್ಲಿಂ ಅಲ್ಲ
ವಿಜಯಪುರ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದು, ಸರ್ಕಾರದ ವತಿಯಿಂದಲೇ ಅವರಿಗೆ ಮಾನಸಿಕ ಚಿಕಿತ್ಸೆ ನೀಡಬೇಕಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯವಾಡಿದ್ದಾರೆ.
- Advertisement 2
ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೊದಲು ಮಾಧ್ಯಮಗಳ ಜೊತೆ ಮಾತನಾಡಿದ ಯತ್ನಾಳ್, ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಿಕ್ಕ ಬಾಂಬ್ ಅಣಕು ಪ್ರದರ್ಶನದಂತಿದೆ ಎಂದಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನಾಚಿಗೇಡಿತನ ಹಾಗೂ ಬೇಜವಾಬ್ದಾರಿ ಹೇಳಿಕೆಯಾಗಿದೆ. ಅವರು ಸಿಎಂ ಆಗಿದ್ದೇ ಅಣಕು ಪ್ರದರ್ಶನದಂತಿದೆ. ಕುಮಾರಸ್ವಾಮಿ ಅವರ ಜೀವನ ಹಾಗೂ ರಾಜಕೀಯ ಅಣುಕು ಪ್ರದರ್ಶನದಂತಿದೆ ಎಂದು ವ್ಯಂಗ್ಯವಾಡಿದರು. ಅವರಿಗೆ ದೇಶ, ಸೈನಿಕರು, ರಾಜ್ಯದ ಹಿತ ಯಾವುದೂ ಕಾಣಿಸಲ್ಲಾ. ಕುಮಾರಸ್ವಾಮಿ ಕರ್ನಾಟಕದ ಓವೈಸಿ ಆಗಲು ಈ ಮೂಲಕ ಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದರು.
- Advertisement 3
- Advertisement 4
ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಶಂಕಿತ ಆರೋಪಿ ಆದಿತ್ಯ ರಾವ್ ಓರ್ವ ಬ್ಲಾಕ್ ಮೇಲರ್. ಮಾನಸಿಕ ಸ್ಥಿಮಿತ ಕಳೆದುಕೊಂಡು ಮಾತನಾಡುತ್ತಿದ್ದಾನೆ. ಆತ ಓರ್ವ ಹಿಂದೂ, ಆತನ ಬಂಧನವಾಗಿದೆ. ಪೊಲೀಸ್ ಇಲಾಖೆ ಉತ್ತಮವಾಗಿ ಕೆಲಸ ಮಾಡುತ್ತಿದೆ ಎಂದು ಶ್ಲಾಘಿಸಿದರು. ಸರ್ಕಾರ ಮತ್ತು ಗೃಹ ಇಲಾಖೆ ಬಾಂಬ್ ಪತ್ತೆ ವಿಚಾರದಲ್ಲಿ ಗಂಭೀರವಾಗಿವೆ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆಂದು ತಿಳಿಸಿದರು.
ಕಲಬುರಗಿಯಲ್ಲಿ ನಡೆದ ಪೌರತ್ವ ಕಾಯ್ದೆ ವಿರೋಧಿ ಸಮಾವೇಶದಲ್ಲಿ ಕುಮಾರಸ್ವಾಮಿ, ಪಾಕಿಸ್ತಾನ ಲೀಡರ್ ಮಾತನಾಡಿದಂತೆ ಮಾತನಾಡಿದ್ದಾರೆ. ದಾವುದ್ ಇಬ್ರಾಹಿಂ ತಮ್ಮ ಇಮ್ರಾನ್ ಖಾನ್, ಇಮ್ರಾನ್ ಖಾನ್ ತಮ್ಮ ರಾಹುಲ್ ಗಾಂಧಿ, ಇಮ್ರಾನ್ ಖಾನ್ ಅಳಿಯ ಕುಮಾರಸ್ವಾಮಿ ಎಂಬಂತೆ ಅವರು ಮಾತನಾಡಿದ್ದಾರೆಂದು ಕಿಡಿಕಾರಿದರು.
ಕುಮಾರಸ್ವಾಮಿ ಈಗಾಗಲೇ ಅಸ್ತಿತ್ವ ಕಳೆದುಕೊಳ್ಳುತ್ತಿದ್ದಾರೆ. ನಾಳೆ ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾದರೆ ಹಳೆ ಮೈಸೂರು ಭಾಗದ ಅಸ್ತಿತ್ವ ಕಳೆದುಕೊಳ್ಳುತ್ತಾರೆ. ಇನ್ನು ನಮ್ಮ ದೇಶದ ಅನ್ನ ತಿನ್ನುವ ಅಧಿಕಾರಿಗಳು ರಾಜಕಾರಣಿಗಳು ಪಾಕಿಸ್ತಾನದ ಎಜೆಂಟರಾಗಿ ಕೆಲಸ ಮಾಡಿದ ಉದಾಹರಣೆಗಳಿವೆ. ಮೋದಿ ಸರ್ಕಾರ ಬಂದ ಬಳಿಕ ಇವೆಲ್ಲ ಬಹಿರಂಗವಾಗುತ್ತಿವೆ ಎಂದರು.
ಮೋದಿ ಅವರ ಕುಟುಂಬದ ಹಿನ್ನಲೆ ಮಾತನಾಡಿದ್ದ ಇಬ್ರಾಹಿಂ ಮುತ್ತಜ್ಜ ಯಾವ ಜಾತಿಯವನಿದ್ದ ಎಂದು ಇಬ್ರಾಹಿಂಗೆ ಕೇಳಿ. ಆತ ಪಕ್ಕಾ ಮುಸ್ಲಿಂ ಅಲ್ಲಾ. ಅರಬಸ್ಥಾನದಿಂದ ಬಂದ ಒರಿಜನಲ್ ಮುಸ್ಲಿಂ ಅಲ್ಲಾ. ಟಿಪ್ಪು ದಾಳಿಯ ಕಾಲದಲ್ಲಿ ಮತಾಂತರದಲ್ಲಿ ಮುಸ್ಲಿಂ ಆಗಿರುವ ಹೇಡಿಗಳು. ಅವರ ಬಗ್ಗೆ ಅವರಿಗೆ ಗೊತ್ತಿಲ್ಲ. ಇವರೇನು ಮೋದಿ ಅವರ ಬಗ್ಗೆ ಕೇಳೋದು ಎಂದು ಸಿಎಂ ಇಬ್ರಾಹಿಂ ವಿರುದ್ಧ ಆಕ್ರೋಶ ಹೊರಹಾಕಿದರು.