ದಾವಣಗೆರೆ: 22 ಕೆರೆಗೆ ನೀರು ತುಂಬಿಸುವ ಕಾಮಗಾರಿ ವೀಕ್ಷಣೆ ವೇಳೆ ಮಾಯಕೊಂಡ ಕ್ಷೇತ್ರದ ಬಿಜೆಪಿ ಶಾಸಕ ಪ್ರೋ ಲಿಂಗಣ್ಣ ಕಾಲು ಜಾರಿ ಬಿದ್ದ ಘಟನೆ ದಾವಣಗೆರೆ ಜಿಲ್ಲೆಯ ಮಲ್ಲಶೆಟ್ಟಿಹಳ್ಳಿಯಲ್ಲಿ ನಡೆದಿದೆ.
ಪ್ರೋ ಲಿಂಗಣ್ಣ ಅವರು ಮಲ್ಲಶೆಟ್ಟಿಹಳ್ಳಿ ಬಳಿ 22 ಕೆರೆ ನೀರು ತುಂಬಿಸುವ ಯೋಜನೆಯ ಕಾಮಗಾರಿಯನ್ನು ವೀಕ್ಷಣೆ ಮಾಡಲು ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಶಾಸಕ ಲಿಂಗಣ್ಣ ಮಣ್ಣಿನ ಹೆಂಡೆ ಮೇಲೆ ಕಾಲಿಟ್ಟು ಆಯತಪ್ಪಿ ಕೆಳಗೆ ಬಿದ್ದಿದ್ದಾರೆ.
ಮಾಜಿ ಸಂಸದ ಜಿ.ಎಂ ಸಿದ್ದೇಶ್ವರ್ ಹಾಗೂ ಹತ್ತಾರೂ ಕಾರ್ಯಕರ್ತರು ಈ ಸಂದರ್ಭದಲ್ಲಿ ಇದ್ದರು. ಶಾಸಕ ಕಾಲು ಜಾರಿ ಬೀಳುತ್ತಿದ್ದಂತೆ ಅಲ್ಲಿದ್ದ ಕಾರ್ಯಕರ್ತರು ಅವರನ್ನು ಮೇಲೆಬ್ಬಿಸಿದ್ದಾರೆ.
ಸದ್ಯ ಶಾಸಕ ಲಿಂಗಣ್ಣ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಅಪಾಯವಾಗಿಲ್ಲ.