ಆನಂದ್ ಸಿಂಗ್ ಸ್ಥಿತಿ ನೋಡಿ ಬಹಳ ಗಾಬರಿ ಆಯ್ತು, ಅದು ರಾಕ್ಷಸರು ಮಾಡೋ ಕೆಲಸ: ಶಾಸಕ ರಾಜೂಗೌಡ ಆಕ್ರೋಶ

Public TV
3 Min Read
ANANDSINGH BJP copy e1548927236745

– ಆನಂದ್ ಸಿಂಗ್ ಆರೋಗ್ಯ ವಿಚಾರಿಸಿದ ಶಾಸಕ ಸಿಟಿ ರವಿ, ಮಾಜಿ ಸಚಿವ ಜನಾರ್ದನ ರೆಡ್ಡಿ
– ಕಾಂಗ್ರೆಸ್ ಪಕ್ಷದಲ್ಲಿ ಡಿವೈಡ್ ಅಂಡ್ ರೂಲ್ ಪಾಲಿಸಿ: ಜರ್ನಾದನ ರೆಡ್ಡಿ

ಬೆಂಗಳೂರು: ಈಗಲ್ಟನ್ ರೆಸಾರ್ಟಿನಲ್ಲಿ ಕಂಪ್ಲಿ ಶಾಸಕ ಗಣೇಶ್ ಅವರಿಂದ ಹಲ್ಲೆಗೊಳಗಾಗಿ ಆಸ್ಪತ್ರೆಗೆ ಸೇರಿರುವ ಶಾಸಕ ಆನಂದ್ ಸಿಂಗ್ ಅವರನ್ನು ಬಿಜೆಪಿ ಶಾಸಕ ಸಿಟಿ ರವಿ, ರಾಜೂಗೌಡ ಹಾಗೂ ಮಾಜಿ ಸಚಿವ ಜನಾರ್ದನ ರೆಡ್ಡಿ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಆಸ್ಪತ್ರೆಗೆ ಭೇಟಿ ನೀಡಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ರಾಜೂಗೌಡ, ಮೊದಲ ದಿನ ಅವರ ಭೇಟಿಗೆ ಬಂದ ವೇಳೆ ಏಕೆ ಅವಕಾಶ ನೀಡಿಲ್ಲ ಎನ್ನುವುದು ಇಂದು ಆನಂದ್ ಸಿಂಗ್ ಅವರನ್ನು ನೋಡಿದ ಬಳಿಕ ತಿಳಿಯಿತು. ಅವರ ಸ್ಥಿತಿ ನೋಡಿ ಬಹಳ ಗಾಬರಿ ಆಯ್ತು. ಆ ಮಟ್ಟದಲ್ಲಿ ಅವರ ಮೇಲೆ ಹಲ್ಲೆ ಮಾಡಲಾಗಿದೆ. ಇಂತಹ ಕೃತ್ಯವನ್ನು ಮನುಷ್ಯರು ಮಾಡುವ ಕೆಲಸ ಅಲ್ಲ, ಇದು ರಾಕ್ಷಸರು ಮಾಡುವ ಕೆಲಸ. ನಮ್ಮ ಶತ್ರುಗಳಿಗೂ ಇಂತಹ ಪರಿಸ್ಥಿತಿ ಬರುವುದು ಬೇಡ. ಈಗಲೂ ಆನಂದ್ ಸಿಂಗ್ ಆತಂಕದಲ್ಲೇ ಇದ್ದಾರೆ ಎಂದು ಹಲ್ಲೆ ಮಾಡಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

MLA RAJU GOWDA

ಕಾಂಗ್ರೆಸ್ ಪಕ್ಷವರು ಅವರ ಶಾಸಕರನ್ನೇ ರಕ್ಷಣೆ ಮಾಡಲು ಸಾಧ್ಯವಾಗುತ್ತಿಲ್ಲ. ಇನ್ನು ಸಾಮಾನ್ಯ ಜನರಿಗೆ ರಕ್ಷಣೆ ಕೊಡುವುದು ಸರ್ಕಾರದಿಂದ ಸಾಧ್ಯವೇ? ಉದ್ದೇಶ ಪೂರ್ವಕವಾಗಿಯೇ ಶಾಸಕ ಗಣೇಶರನ್ನು ರಕ್ಷಣೆ ಮಾಡಲಾಗುತ್ತಿದ್ದು, ನಾವೇನಾದ್ರೂ ಈ ವಿಚಾರದಲ್ಲಿ ಒತ್ತಾಯ ಮಾಡಿದರೆ ಅದಕ್ಕೆ ರಾಜಕೀಯ ಬಣ್ಣ ಹಚ್ಚುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು. ಅಲ್ಲದೇ ಪೊಲೀಸರು ಶಾಸಕ ಗಣೇಶರನ್ನು ಬಂಧನ ಮಾಡೋದಕ್ಕೆ ಅಷ್ಟು ಆಸಕ್ತಿ ತೋರಿಸುತ್ತಿಲ್ಲ ಎಂದೆನಿಸುತ್ತದೆ. ಆದ್ದರಿಂದ ಆನಂದ್ ಸಿಂಗ್ ಅವರ ಸ್ನೇಹಿತನಾಗಿ ನಾನು ಸರ್ಕಾರಕ್ಕೆ ಒತ್ತಾಯ ಮಾಡುತ್ತಿದ್ದೇನೆ. ಇತರೇ ಶಾಸಕರು ಮಾನವೀಯ ದೃಷ್ಟಿಯಿಂದ ಆದ್ರು ಈ ಬಗ್ಗೆ ಸಾಕ್ಷಿ ಹೇಳಬೇಕು ಎಂದರು.

CT RAVI

ಇದಕ್ಕೂ ಮುನ್ನ ಆಸ್ಪತ್ರೆಗೆ ಭೇಟಿ ನೀಡಿ ಶಾಸಕ ಸಿ.ಟಿ ರವಿ, ಆನಂದ್ ಸಿಂಗ್ ಅವರ ಆರೋಗ್ಯ ವಿಚಾರಿಸಿದರು. ನಾನು ಆನಂದ್ ಸಿಂಗ್ ಹತ್ತು ವರ್ಷದಿಂದ ಸ್ನೇಹಿತರು. ಅವರ ಆರೋಗ್ಯ ವಿಚಾರಣೆ ಮಾಡಿದ ವೇಳೆ ಬೇಡಿಕೊಂಡರೂ ಬಿಡದೇ ಹಲ್ಲೆ ಮಾಡಿದ್ದಾಗಿ ಆನಂದ್ ಅವರು ಹೇಳಿದ್ದು. ಇಂತಹ ಘಟನೆಗಳು ಶಾಸಕಾಂಗಕ್ಕೆ ಆಗಿರುವ ಅವಮಾನ ಎಂದರು.

ಇದೇ ವೇಳೆ ಗಣೇಶ್ ಬಗ್ಗೆ ಬಿಜೆಪಿ ಸಾಫ್ಟ್ ಕರ್ನರ್ ವಿಚಾರ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಅಲ್ಲದೇ ಬಿಜೆಪಿ ಯಾರನ್ನು ರಕ್ಷಣೆ ಮಾಡುವ ಕೆಲಸ ಮಾಡಿಲ್ಲ. ಈ ಪ್ರಕರಣ ಯಾರು? ಮುಚ್ಚಿ ಹಾಕಲು ಯಾರು ಪ್ರಯತ್ನಿಸಿದ್ದರೋ ಅವರನ್ನು ಈ ಬಗ್ಗೆ ಪ್ರಶ್ನೆ ಮಾಡಿ ಎಂದು ಗರಂ ಆದರು. ಆನಂದ್ ಸಿಂಗ್ ಆರೋಗ್ಯ ವಿಚಾರಣೆಗೆ ಬಂದಿದ್ದು, ಇದು ಅದನ್ನೆಲ್ಲ ಮಾತನಾಡುವ ವೇದಿಕೆ ಅಲ್ಲ ಎಂದು ತೆರಳಿದರು.

janardan reddy

ಡಿವೈಡ್ ಅಂಡ್ ರೂಲ್ ಪಾಲಿಸಿ : ಬಳಿಕ ಬಿಜೆಪಿ ಮಾಜಿ ಸಚಿವ ಜನಾರ್ದನ ರೆಡ್ಡಿ ಹಾಗೂ ಮಾಜಿ ಸಚಿವ ತುಕಾರಾಂ ಅವರು ಭೇಟಿ ಮಾಡಿ ಆರೋಗ್ಯ ವಿಚಾರಣೆ ಮಾಡಿದರು. ಶಾಸಕ ಎಂಬುವುದನ್ನು ನೋಡದೇ ಹಲ್ಲೆ ಮಾಡಿದ್ದಾರೆ. ಆದರೆ ಹಲ್ಲೆ ಮಾಡಿದ ಶಾಸಕ ನಾಪತ್ತೆ ಎಂದು ಹೇಳುತ್ತಿರುವುದು ನಾಚಿಕೆ ವಿಚಾರ. ಶಾಸಕರನ್ನು ಬಂಧಿಸಿದರೆ ಸರ್ಕಾರ ತೊಂದರೆ ಎಂಬ ಕಾರಣದಿಂದ ಬಂಧನಕ್ಕೆ ಹಿಂದೇಟು ಹಾಕಲಾಗುತ್ತದೆ. ಘಟನೆಯಿಂದ ಇಡೀ ದೇಶದಲ್ಲೇ ರಾಜ್ಯದ ಮುಖ್ಯಮಂತ್ರಿಗಳು ತಲೆ ತಗ್ಗಿಸುವಂತೆ ಮಾಡಿದೆ. ಬಳ್ಳಾರಿ ಜಿಲ್ಲೆಯಲ್ಲಿ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ನಡುವೇ ಪೈಪೋಟಿ ನಡೆದಿದೆ. ಆದ್ದರಿಂದಲೇ ಬಳ್ಳಾರಿ ಶಾಸಕರಲ್ಲಿ ಭಿನ್ನಭಿಪ್ರಾಯ ಉಂಟಾಗಿದೆ. ಕಾಂಗ್ರೆಸ್ ನಾಯಕರು ಶಾಸಕರನ್ನು ವಿಭಜನೆ ಮಾಡಿ ಆಳ್ವಿಕೆ ಮಾಡಲು ತೆರಳಿದ್ದಾರೆ ಎಂದು ಆರೋಪಿಸಿದರು.

ganesh chitchat

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *