Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ ಸ್ಪೇಸ್ ಸರ್ಜಿಕಲ್ ಸ್ಟ್ರೈಕ್ ಸಾಕ್ಷಿ ಕೇಳಲಿಲ್ಲ, ಇದು ನಮ್ಮ ಪುಣ್ಯ: ಸುರೇಶ್ ಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಂಗ್ರೆಸ್ ಸ್ಪೇಸ್ ಸರ್ಜಿಕಲ್ ಸ್ಟ್ರೈಕ್ ಸಾಕ್ಷಿ ಕೇಳಲಿಲ್ಲ, ಇದು ನಮ್ಮ ಪುಣ್ಯ: ಸುರೇಶ್ ಕುಮಾರ್

Bengaluru City

ಕಾಂಗ್ರೆಸ್ ಸ್ಪೇಸ್ ಸರ್ಜಿಕಲ್ ಸ್ಟ್ರೈಕ್ ಸಾಕ್ಷಿ ಕೇಳಲಿಲ್ಲ, ಇದು ನಮ್ಮ ಪುಣ್ಯ: ಸುರೇಶ್ ಕುಮಾರ್

Public TV
Last updated: March 27, 2019 3:10 pm
Public TV
Share
2 Min Read
Congress Suresh Kumar
SHARE

– ಬಿಜೆಪಿ ಯೋಗ್ಯರಿಗೆ ಟಿಕೆಟ್ ಕೊಟ್ಟಿದೆ, ಅಯೋಗ್ಯರಿಗಲ್ಲ: ಯತ್ನಾಳ್‍ಗೆ ತಿರುಗೇಟು
– ಸಮ್ಮಿಶ್ರ ಸರ್ಕಾರದಲ್ಲಿ ದುಷ್ಟ ಜೋಡೆತ್ತುಗಳಿವೆ: ತೇಜಸ್ವಿನಿ ಗೌಡ

ಬೆಂಗಳೂರು: ಕಾಂಗ್ರೆಸ್‍ನವರು ಸ್ಪೇಸ್ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಸಾಕ್ಷಿ ಕೇಳಿಲ್ಲ. ಇದು ನಮ್ಮ ಪುಣ್ಯ. ಕಾಂಗ್ರೆಸ್ ನಾಯಕರಿಗೆ ಪ್ರಬುದ್ಧತೆ ಬಂದಿರುವುದು ಸಂತೋಷ ತಂದಿದೆ ಎಂದು ಬಿಜೆಪಿ ಶಾಸಕ ಸುರೇಶ್ ಕುಮಾರ್ ಲೇವಡಿ ಮಾಡಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕರು, ಸ್ಪೇಸ್ ಸರ್ಜಿಕಲ್ ಸ್ಟ್ರೈಕ್‍ನಿಂದ ಬಿಜೆಪಿಗೆ ಲಾಭ ವಿಚಾರ ಎನ್ನುವ ಕಾಂಗ್ರೆಸ್ ನಾಯಕರ ಟೀಕೆಗೆ ತಿರುಗೇಟು ಕೊಟ್ಟರು. ಪ್ರಧಾನಿ ನರೇಂದ್ರ ಮೋದಿ ಭಾಷಣವನ್ನು ಕಾಂಗ್ರೆಸ್‍ನವರು ಪೂರ್ಣ ಕೇಳಲಿ. ಬಳಿಕ ಪ್ರತಿಕ್ರಿಯೆ ನೀಡಲಿ. ಸ್ಪೇಸ್ ಸರ್ಜಿಕಲ್ ಸ್ಟ್ರೈಕ್ ಶ್ರೇಯಸ್ಸು ಡಿಆರ್ ಡಿಒ ವಿಜ್ಞಾನಿಗಳಿಗೆ ಸಲ್ಲುತ್ತದೆ ಎಂದು ಪ್ರಧಾನಿ ಮೋದಿ ಸ್ಪಷ್ಟವಾಗಿ ಹೇಳಿದ್ದಾರೆ. ನಮ್ಮ ವಿಜ್ಞಾನಿಗಳ ಸಾಧನೆಯನ್ನು ದೇಶಕ್ಕೆ ತಿಳಿಯಲಿ ಎನ್ನುವ ಕಾರಣಕ್ಕೆ ಸುದ್ದಿಗೋಷ್ಠಿ ಮಾಡಿದರು ಎಂದು ತಿಳಿಸಿದರು.

ಅಂತರಿಕ್ಷದಲ್ಲಿಯೂ ಸರ್ಜಿಕಲ್ ಸ್ಟ್ರೈಕ್ ಯಶಸ್ವಿಯಾಗಿದ್ದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಸಾಕ್ಷಿ ಬೇಕಂತೆ!

— S.Suresh Kumar (@nimmasuresh) March 27, 2019

ಸಮ್ಮಿಶ್ರ ಸರ್ಕಾರದ ಅವಸ್ಥೆ ಹರಿದ ಬಟ್ಟೆಯಂತಾಗಿದೆ. ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್‍ಗೆ ಅಭ್ಯರ್ಥಿ ಸಿಕ್ಕಿಲ್ಲ. ಹೊಸ ರೀತಿಯಲ್ಲಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿಯ ಚುನಾವಣೆ ಹಾಸ್ಯಾಸ್ಪದವಾಗಿ ನಡೆಯುತ್ತಿದೆ ಎಂದು ವ್ಯಂಗ್ಯವಾಡಿದರು.

ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆಲುವು ಸಾಧಿಸಿದರೆ ಅಂಬರೀಶ್ ಆತ್ಮಕ್ಕೆ ಶಾಂತಿ ಸಿಗುತ್ತದೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಇದು ಮತದಾರರನ್ನು ಬ್ಲಾಕ್ ಮೇಲ್ ಮಾಡುವ ಹೇಳಿಕೆ. ಮಂಡ್ಯದಲ್ಲಿ ಮುಕ್ತ, ಶಾಂತಿಯುತ ಮತದಾನ ನಡೆಯಬೇಕು. ಈ ನಿಟ್ಟಿನಲ್ಲಿ ಮಂಡ್ಯವನ್ನು ಅತಿ ಸೂಕ್ಷ್ಮ ಕ್ಷೇತ್ರವೆಂದು ಚುನಾವಣಾ ಆಯೋಗ ಘೋಷಿಸಬೇಕು ಎಂದು ಆಗ್ರಹಿಸಿದರು.

(ಹೊಸ ಗಾದೆ)

ಒಲ್ಲದ ಕಾಂಗ್ರೆಸ್ ಭಾರತದ ಹೆಮ್ಮೆಯ ಅಂತರಿಕ್ಷದ ಸರ್ಜಿಕಲ್ ಸ್ಟ್ರೈಕ್ ನಲ್ಲೂ ಕಲ್ಲು ಹುಡುಕುವುದು!

— S.Suresh Kumar (@nimmasuresh) March 27, 2019

ತೇಜಸ್ವಿನಿ ಅನಂತ್‍ಕುಮಾರ್ ಅವರಿಗೆ ಟಿಕೆಟ್ ತಪ್ಪಿದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಶಾಸಕರು, ತೇಜಸ್ವಿನಿ ಅವರ ಹೆಸರನ್ನು ರಾಜ್ಯ ಕೋರ್ ಕಮಿಟಿ ಕಳಿಸಿತ್ತು ಹಾಗೂ ಟಿಕೆಟ್ ಸಿಗುವ ನಿರೀಕ್ಷೆ ಹೊಂದಿದ್ದೆವು. ಆದರೆ ಪಕ್ಷದ ತೀರ್ಮಾನದಂತೆ ಟಿಕೆಟ್ ಸಿಗಲಿಲ್ಲ. ಇದೇ ಕಾರಣಕ್ಕೆ ತೇಜಸ್ವಿನಿ ಅವರಿಗೆ ಟಿಕೆಟ್ ಕೈತಪ್ಪಿದೆ ಎಂದು ಹೇಳಲು ಸಾಧ್ಯವಿಲ್ಲ. ತುಮಕೂರು ಸಂಸದ ಮುದ್ದಹನುಮೇಗೌಡ ಅವರಂತೆ ತೇಜಸ್ವಿನಿ ಅನಂತ್‍ಕುಮಾರ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿಲ್ಲ. ಹೈಕಮಾಂಡ್ ನಿರ್ಧಾರವನ್ನು ಸ್ವಾಗತಿಸಿ, ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ಕಾಂಗ್ರೆಸ್‍ಗೆ ಟಾಂಗ್ ಕೊಟ್ಟರು.

Suresh Kumar

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಸುರೇಶ್ ಕುಮಾರ್ ಅವರು, ಬಿಜೆಪಿ ಹೈಕಮಾಂಡ್ ಯೋಗ್ಯರಿಗೆ ಟಿಕೆಟ್ ಕೊಟ್ಟಿದೆ. ಯಾವುದೇ ಅಯೋಗ್ಯರಿಗೆ ಟಿಕೆಟ್ ಕೊಟ್ಟಿಲ್ಲ. ಚುನಾವಣಾ ಕಣದಲ್ಲಿರುವ ಎಲ್ಲರೂ ಯೋಗ್ಯರೇ. ಎಲ್ಲರೂ ಗೆದ್ದು ಬರುತ್ತಾರೆ ಎಂದು ತಿರುಗೇಟು ಕೊಟ್ಟರು.

ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ಮಾತನಾಡಿ, ಸಮ್ಮಿಶ್ರ ಸರ್ಕಾರದಲ್ಲಿ ದುಷ್ಟ ಜೋಡೆತ್ತುಗಳಿವೆ. ಅವುಗಳು ಚುನಾವಣಾ ಸಂಸ್ಕೃತಿಯನ್ನು ಹಾಳು ಮಾಡುತ್ತಿವೆ ಎಂದು ಸಿಎಂ ಕುಮಾರಸ್ವಾಮಿ ಹಾಗೂ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ತಿರುಗೇಟು ಕೊಟ್ಟಿದ್ದಾರೆ.

Tejashwini Gowda

ಮಂಡ್ಯದಲ್ಲಿ ಅಧಿಕಾರ ದುರ್ಬಳಕೆ ಆಗುತ್ತಿದೆ. ಸಿಎಂ ತಮ್ಮ ಮಗ ನಿಖಿಲ್ ನಾಮಪತ್ರ ಸಲ್ಲಿಸುವ ದಿನದಂದು 3 ಗಂಟೆಗೂ ಹೆಚ್ಚು ಕಾಲ ಮೈಸೂರು-ಬೆಂಗಳೂರು ರಸ್ತೆ ಬಂದ್ ಮಾಡಿಸಿದ್ದರು. ನಟರಾದ ಯಶ್, ಹಾಗೂ ದರ್ಶನ್ ವಿರುದ್ಧ ಜೆಡಿಎಸ್ ನಾಯಕರು ಅವಮಾನಕರ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಪತಿ ನಿಧನರಾದ ಬಳಿಕ ಮಹಿಳೆಯರು ರಾಜಕೀಯಕ್ಕೆ ಬರಲೇಬಾರದೆಂಬ ಧೋರಣೆಯನ್ನು ಜೆಡಿಎಸ್‍ನವರು ತೋರುತ್ತಿದ್ದಾರೆ. ಮಂಡ್ಯ ರಾಜಕಾರಣದಲ್ಲಿ ಸುಮಲತಾ ಪರ ಅಲೆ ಇದೆ. ಅಷ್ಟೇ ಅಲ್ಲದೆ ಸುಮಲತಾರಿಗೆ ಬಿಜೆಪಿ ಹಾಗೂ ರೈತಸಂಘದ ಬೆಂಬಲವಿದೆ. ಹೀಗಾಗಿ ಸಿಎಂ ಕುಮಾರಸ್ವಾಮಿ ಹೆದರಿದ್ದು, ಅವರ ಮನಸಲ್ಲಿರುವ ಭಯ ನಮಗೆ ಅರ್ಥವಾಗುತ್ತಿದೆ ಎಂದರು.

TAGGED:bjpCoalition GovernmentLok Sabha electionmandyaPublic TVSpace Surgical Strikesuresh kumarTejashwini Gowdaತೇಜಸ್ವಿನಿ ಗೌಡಪಬ್ಲಿಕ್ ಟಿವಿಬಿಜೆಪಿಮಂಡ್ಯಲೊಕಸಭಾ ಚುನಾವಣೆಶಾಸಕ ಸುರೇಶ್ ಕುಮಾರ್ಸಮ್ಮಿಶ್ರ ಸರ್ಕಾರಸ್ಪೇಸ್ ಸರ್ಜಿಕಲ್ ಸ್ಟ್ರೈಕ್
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

Sudeep 2
Districts

ಡಿಕೆಶಿ ಲ್ಯಾಂಡ್‌ ಆಗಬೇಕಿದ್ದ ಸ್ಥಳದಲ್ಲಿ ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಗ್‌ – ಅಧಿಕಾರಿಗಳಲ್ಲಿ ಕೆಲಕಾಲ ಆತಂಕ

Public TV
By Public TV
4 minutes ago
BWSSB Bengaluru Water Board
Bengaluru City

ಜಲಮಂಡಳಿಯ ಒನ್ ಟೈಮ್ ಸೆಟಲ್ಮೆಂಟ್ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ

Public TV
By Public TV
5 minutes ago
Jeevaraj 3
Chikkamagaluru

ಶೃಂಗೇರಿ | ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಮೇಲುಗೈ – ಶಾರದಾಂಬೆ ದರ್ಶನ ಪಡೆದ ಅಭ್ಯರ್ಥಿ ಜೀವರಾಜ್

Public TV
By Public TV
27 minutes ago
Air Arabia flight
Latest

ಫ್ಲೈಟ್‌ನಲ್ಲಿ 2 ಬಾರಿ ವಾಂತಿ – ಚೆನ್ನೈನಲ್ಲಿ ಚಲಿಸುತ್ತಿದ್ದ ವಿಮಾನದಿಂದ ಹೊರಕ್ಕೆ ಜಿಗಿದ ಪ್ರಯಾಣಿಕ

Public TV
By Public TV
42 minutes ago
DK Shivakumar TB Dam
Bellary

ಟಿಬಿ ಡ್ಯಾಂ ಮುಂದಿನ 50 ವರ್ಷ ಸುಭದ್ರ, ಕ್ರಸ್ಟ್ ಗೇಟ್‌ಗಳ ಅಳವಡಿಕೆ ಪೂರ್ಣ- ಮೇ 15ಕ್ಕೆ ಲೋಕಾರ್ಪಣೆ: ಡಿಕೆಶಿ

Public TV
By Public TV
43 minutes ago
Preity Zinta Invites PBKS Fan Injured
Cricket

ಸಿಕ್ಸರ್‌ನಿಂದ ಗಾಯಗೊಂಡಿದ್ದ ಅಭಿಮಾನಿಗೆ ವಿವಿಐಪಿ ಟಿಕೆಟ್ ನೀಡಿದ ಪ್ರೀತಿ ಜಿಂಟಾ

Public TV
By Public TV
48 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?