ಬೆಂಗಳೂರು: ಹೋರಾಟಗಾರ್ತಿ, ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹತ್ಯೆಯಾಗಿರೋ ಹೊತ್ತಲ್ಲೇ ಬಿಜೆಪಿ ಶಾಸಕ ಸುರೇಶ್ಕುಮಾರ್ ಟ್ವೀಟ್ ಮಾಡಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.
ಆಧಾರವಿಲ್ಲದೆ ಯಾವುದನ್ನು ನಂಬದ ಇವರು ಯಾವುದೇ ಆಧಾರವಿಲ್ಲದಿದ್ದರೂ ತಮಗಾಗದವರನ್ನು ಅಪರಾಧಿ ಎಂದು ತೀರ್ಮಾನಿಸಿ ತೀರ್ಪು ಕೊಟ್ಟೇ ಬಿಡುತ್ತಾರೆ. ಏಕೆಂದರೆ ಇವರು ವಿಚಾರವಾದಿಗಳು ಅಂತ ವಿಚಾರವಾದಿಗಳ ಬಗ್ಗೆ ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ.
ಮಂಗಳವಾರ ರಾತ್ರಿ ಸುಮಾರು 7.30 ರ ಸುಮಾರಿ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿದ್ದರು. ಸದ್ಯ ಗೌರಿ ಲಂಕೇಶ್ ಅವರ ಮೃತದೇಹವನ್ನು ನಗರದ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಪೊಲೀಸರು ಗೌರಿ ಮನೆಯ ಸಿಸಿಟಿವಿ ಹಾಗೂ ಸ್ಥಳಿಯ ಸಿಸಿಟಿವಿಗಳನ್ನು ತಪಾಸಣೆ ನಡೆಸುತ್ತಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆಗಂತುಕರು ಈ ಕೃತ್ಯ ಎಸಗಿದ್ದಾರೆಂದು ತಿಳಿದುಬಂದಿದ್ದು, ಹಂತಕರ ಪತ್ತೆಗೆ ಪೊಲೀಸರು ಬಲೆಬೀಸಿದ್ದಾರೆ.
ಆಧಾರವಿಲ್ಲದೆ ಯಾವುದನ್ನೂ ನಂಬದ "ಇವರು" ಯಾವುದೇ ಆಧಾರವಿಲ್ಲದಿದ್ದರೂ ತಮಗಾಗದವರನ್ನು "ಅಪರಾಧಿ" ಎಂದು ತೀರ್ಪು ಕೊಟ್ಟೇ ಬಿಡುತ್ತಾರೆ. ಏಕೆಂದರೆ "ಇವರು" ವಿಚಾರವಾದಿಗಳು
— S.Suresh Kumar (@nimmasuresh) September 6, 2017
ಗೌರಿ ಲಂಕೇಶ್ ಹತ್ಯೆ ಹಿಂದೆ ನಕ್ಸಲರ ಕೈವಾಡ ಶಂಕೆ https://t.co/EmWh1EbouV #GauriLankeshMurder #Shootout #Naxalite pic.twitter.com/8VU0ozi9Lh
— PublicTV (@publictvnews) September 6, 2017
3 ದಿನದ ಹಿಂದೆಯೇ ಗೌರಿ ಲಂಕೇಶ್ ಹತ್ಯೆಗೆ ಯತ್ನ https://t.co/zzcaStsfWq #GauriLankesh #Shootout #Bengaluru pic.twitter.com/ICSRtCvdeO
— PublicTV (@publictvnews) September 6, 2017
ವಿಡಿಯೋ: ಗೌರಿ ಲಂಕೇಶ್ ಹತ್ಯೆ ಬಗ್ಗೆ ಪ್ರತ್ಯಕ್ಷದರ್ಶಿ ಹೇಳಿದ್ದೇನು? https://t.co/PTPD3mxs4z#GouriLankesh #Murder #Eyewitness #Video pic.twitter.com/xEdcULX95z
— PublicTV (@publictvnews) September 6, 2017