Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕದನದಲ್ಲಿಯೇ ಕಮರಿ ಹೋಯಿತು ಕಲಾಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಕದನದಲ್ಲಿಯೇ ಕಮರಿ ಹೋಯಿತು ಕಲಾಪ

Belgaum

ಕದನದಲ್ಲಿಯೇ ಕಮರಿ ಹೋಯಿತು ಕಲಾಪ

Public TV
Last updated: December 20, 2018 5:04 pm
Public TV
Share
3 Min Read
BLG Session 2
SHARE

– ಸಿಎಂ ಕ್ಷಮೆ ಕೇಳಬೇಕೆಂದು ಪಟ್ಟು ಹಿಡಿದ ಬಿಜೆಪಿ ನಾಯಕು
– ಮೂರು ಬಾರಿ ಅರ್ಧ ಗಂಟೆ ವಿರಾಮ ಕೊಟ್ರು ನಿಲ್ಲಲಿಲ್ಲ ಪ್ರತಿಭಟನೆ
– ಸರ್ಕಾರ ಬುರುಡೆ ಬುರುಡೆ ಎಂದು ಹೊರ ನಡೆದ ವಿಪಕ್ಷದ ಶಾಸಕರು

ಬೆಳಗಾವಿ: ಆಡಳಿತ ಪಕ್ಷದ ವಿರುದ್ಧದ ಘೋಷಣೆ, ಪ್ರತಿಪಕ್ಷದ ಪ್ರತಿಭಟನೆಯಿಂದಾಗಿ ಮಧ್ಯಹ್ನಾದವರೆಗೂ ಕಲಾಪವೇ ನಡೆಯದ ಪ್ರಸಂಗ ಇಂದು ನಡೆಯಿತು.

ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಅವರ ಬಗ್ಗೆ ಸಿಎಂ ಕುಮಾರಸ್ವಾಮಿ ಹಗುರವಾಗಿ ಮಾತನಾಡಿದ್ದಾರೆ. ಹೀಗಾಗಿ ಸಿಎಂ ಕುಮಾರಸ್ವಾಮಿ ಅವರು ಬಿ.ಎಸ್.ಯಡಿಯೂರಪ್ಪ ಅವರ ಕ್ಷಮೆ ಕೇಳಬೇಕು ಎಂದು ನಿನ್ನೆ ಬಿಜೆಪಿ ನಾಯಕರು ಪಟ್ಟು ಹಿಡಿದಿದ್ದರು. ಅದನ್ನು ಇಂದೂ ಕೂಡ ಮುಂದುವರಿಸಿ ಸದನದ ಬಾವಿಯಲ್ಲಿ ನಿಂತು ಧರಣಿ ಮುಂದುವರಿಸಿದ್ದಾರೆ.

BLG Session 1

ರೈತರ ಸಾಲಮನ್ನಾ ಮಾಡಲೇಬೇಕು. ಕುಮಾರಸ್ವಾಮಿ ಅವರು ಬಿ.ಎಸ್.ಯಡಿರೂರಪ್ಪ ಅವರ ಕ್ಷಮೆ ಕೇಳಲೇಬೇಕು ಎಂದು ಘೋಷನೆ ಕೂಗಿದರು. ಶಾಸಕರ ಪ್ರತಿಭಟನೆಯಿಂದಾಗಿ ವಿಧಾನಸಭಾ ಕಲಾಪ ಗೊಂದಲದ ಗೂಡಾಯಿತು. ಈ ವೇಳೆ ಆಡಳಿತ ಪಕ್ಷ ಹಾಗೂ ಪ್ರತಿ ಪಕ್ಷದ ನಾಯಕರು ಕಿತ್ತಾಡಿಕೊಂಡ ಪ್ರಸಂಗಗಳು ಕಂಡು ಬಂದವು.

ಬಿಜೆಪಿ ಶಾಸಕ ಮಧುಸ್ವಾಮಿ ಮಾತನಾಡುತ್ತಿದ್ದಾಗ ಕೆಲವು ಆಡಳಿತ ಪಕ್ಷದ ಶಾಸಕರು ಮಧ್ಯ ಪ್ರವೇಶ ಮಾಡಿದರು. ಈ ವೇಳೆ ಕೋಪಗೊಂಡ ಮುಧುಸ್ವಾಮಿ, ರೀ ಬಾಯಿ ಮುಚಗೊಂಡು ಕುಳಿತುಕೊಳ್ರೀ ಎಂದು ಕಿಡಿಕಾರಿ, ಸಿಎಂ ಕ್ಷಮೆ ಕೇಳಬೇಕು, ಸಾಲಮನ್ನಾ ಕುರಿತು ಸಮರ್ಪಕ ಉತ್ತರ ಕೊಟ್ಟ ಬಳಿಕ ಸದನ ನಡೆಸುವುದಕ್ಕೆ ಸಹಕಾರ ಕೊಡುತ್ತೇವೆ ಎಂದರು.

BLG Session

ಸಿಎಂ ವಿರುದ್ಧ ಬಿಎಸ್‍ವೈ ಕಿಡಿ:
ಈ ವೇಳೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಅವರು, ಆರು ತಿಂಗಳಲ್ಲಿ ನಿಮ್ಮ ಸಾಧನೆ ಏನು? ಸಾಲಮನ್ನಾ ಮಾಡಿಲ್ಲ. ರೈತರ ಆತ್ಮಹತ್ಯೆ ಪ್ರಮಾಣ ಹೆಚ್ಚುತ್ತಲಿದೆ. ಸಹಕಾರ ಕ್ಷೇತ್ರ ಏನಾಗಿದೆ ಅಂತಾ ನಿಮಗೆ ಗೊತ್ತಿದೆ. ಕುಮಾರಸ್ವಾಮಿ ಅವರು ಇದುವರೆಗೂ ಒಂದು ದಿನ ಬರಪೀಡಿತ ಪ್ರದೇಶಕ್ಕೆ ಭೇಟಿ ನೀಡಿಲ್ಲ. ಭತ್ತ ಉತ್ತಲು ಹೋದರು. ಆದರೆ ಬರ ಪ್ರದೇಶಕ್ಕೆ ಹೋಗಲಿಲ್ಲ. ಬೆಂಗಳೂರಿನಲ್ಲಿ ಅಧಿಕಾರಿಗಳ ಜೊತೆ ಸಭೆ ಮಾಡಿದ್ದು ಬಿಟ್ಟರೆ ಏನು ಮಾಡಿದ್ದಾರೆ ಎಂದು ಪ್ರಶ್ನಿಸಿ ಕುಟುಕಿದರು.

ತೊಗರಿ ಸೇರಿದಂತೆ ಇತರೆ ಬೆಳೆಗಳಿಗೆ ಬೆಂಬಲ ಬೆಲೆ ನೀಡುತ್ತಿಲ್ಲ. ಕುಮಾರಸ್ವಾಮಿ ಅವರು ನಿನ್ನೆ ಅರ್ಧಂಬರ್ಧ ಉತ್ತರ ಕೊಟ್ಟು ಮುಗಿತು ಅಂತ ಹೇಳಿಬಿಟ್ಟರು. ಹೀಗೆ ಮಾಡಿದರೆ ಹೇಗೆ? ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆ. ಕಲಾಪದಲ್ಲಿ ಸರ್ಕಾರವು ಯಾವುದೇ ಚರ್ಚೆಯ ಕುರಿತು ಸಮರ್ಥ ರೀತಿಯಲ್ಲಿ ಉತ್ತರ ಕೊಡುತ್ತಿಲ್ಲ ಎಂದು ಆರೋಪಿಸಿದರು.

drought HDK 1

ಬಿಜೆಪಿ ಶಾಸಕರ ಪ್ರತಿಭಟನೆಯಿಂದಾಗಿ ಅರ್ಧ ಗಂಟೆ ಸದನವನ್ನು ಸ್ಪೀಕರ್ ರಮೇಶ್ ಕುಮಾರ್ ಮುಂದೂಡಿದರು. ಬಳಿಕ ಆರಂಭವಾದ ಕಲಾಪದಲ್ಲಿಯೂ ಬಿಜೆಪಿ ನಾಯಕರು ಪ್ರತಿಭಟನೆ ಮುಂದುವರಿಸಿದ್ದರು. ಕಾಂಗ್ರೆಸ್ ಹಾಗೂ ಜೆಡಿಎಸ್ ವಿರುದ್ಧ ಘೋಷಣೆ ಜೋತಾಗಿತ್ತು. ಮಧ್ಯ ಪ್ರವೇಶ ಮಾಡಿದ ಸಚಿವ ಆರ್.ವಿ.ದೇಶಪಾಂಡೆ ಅವರು ಸದನ ನಡೆಸಲು ಅನುಮತಿ ಮಾಡಿಕೊಡುವಂತೆ ಕೈಮುಗಿದು ಮನವಿ ಮಾಡಿಕೊಂಡರು. ಇದಕ್ಕೆ ಬಿಜೆಪಿ ನಾಯಕರು ಒಪ್ಪಲಿಲ್ಲ. ಈ ವೇಳೆ ಏರು ಧ್ವನಿಯಲ್ಲಿ ಶಾಸಕರೊಬ್ಬರು, ನಿಮ್ಮ ಹಣೆಬರಹಕ್ಕಂತೂ ರೈತರ ಒಂದು ರೂಪಾಯಿ ಕೂಡ ಸಾಲಮನ್ನಾ ಮಾಡಲಿಲ್ಲ. ನಾವು ಮಾಡಿದರೂ ನೆಮ್ಮದಿ ಇಲ್ಲ ನಿಮಗೆ. ಸುಮ್ಮನೆ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತೀರಿ ಎಂದು ಹೇಳಿದರು.

181219kpn46 1

ಸಿಎಂ ಕುಮಾರಸ್ವಾಮಿ ಅಥವಾ ತಾವು ಅಸಂಸದೀಯ ಪದ ಬಳಕೆ ಮಾಡಿದರೆ ಸೂಚನೆ ಕೊಡುತ್ತೇವೆ. ನೀವು ಪ್ರತಿಭಟನೆ ಕೈಬಿಡಬೇಕು ಎಂದು ಯಡಿಯೂಪ್ಪ ಅವರಿಗೆ ಸ್ಪೀಕರ್ ರಮೇಶ್ ಕುಮಾರ್ ಮನವಿ ಮಾಡಿಕೊಂಡರು. ಆದರೆ ಇದಕ್ಕೆ ಒಪ್ಪದೆ ಬಿಜೆಪಿ ನಾಯಕರು ಪ್ರತಿಭಟನೆ ಮುಂದುವರಿಸಿದರು. ಗದ್ದಲ, ಧರಣಿ ಹಿನ್ನೆಲೆ ಮತ್ತೆ ಅರ್ಧಗಂಟೆ ಕಲಾಪವನ್ನು ಸ್ಪೀಕರ್ ರಮೇಶ್ ಕುಮಾರ್ ಮುಂದೂಡಿದರು. ಬಳಿಕವೂ ಪ್ರತಿಭಟನೆ ನಡೆಸಿದ್ದರಿಂದ ಮಧ್ಯಾಹ್ನ ಮೂರು ಗಂಟೆಗೆ ಕಲಾಪ ಮುಂದೂಡಿದರು. ಈ ವೇಳೆ ಸರ್ಕಾರ ಬುರುಡೆ ಬುರುಡೆ ಎಂದು ಬಿಜೆಪಿ ಶಾಸಕರು ಕೂಗುತ್ತ ಹೊರನಡೆದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:B.S.YeddyurappabjpCM KumaraswamycongressFarmer loanLegislative AssemblyPublic TVಕಲಾಪಕಾಂಗ್ರೆಸ್ಪಬ್ಲಿಕ್ ಟಿವಿಬಿ.ಎಸ್.ಯಡಿಯೂಪ್ಪಬಿಜೆಪಿವಿಧಾನಸಭೆಸಾಲಮನ್ನಾಸಿಎಂ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ಅಪಮಾನ – ಕೇಸ್ ರದ್ದಿಗೆ ರಣವೀರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾ.9ಕ್ಕೆ ಮುಂದೂಡಿಕೆ
Cinema Latest Top Stories
Rashmika Mandanna Vijay Deverakonda
ತೆಲಂಗಾಣದ ಹೊಸ ಮನೆಯಲ್ಲಿ ಸತ್ಯನಾರಾಯಣ ಪೂಜೆ ನೆರವೇರಿಸಿದ ವಿಜಯ್‌-ರಶ್ಮಿಕಾ
Cinema Latest South cinema Top Stories
Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood

You Might Also Like

Sabarimala Temple
Latest

ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೆ ಅವಕಾಶ ನೀಡಲ್ಲ: ತಿರುವಾಂಕೂರು ದೇವಸ್ವಂ ಮಂಡಳಿ ನಿರ್ಣಯ

Public TV
By Public TV
4 minutes ago
Khamenei Wife
Latest

ಖಮೇನಿ ಹತ್ಯೆಯಾದ ಎರಡು ದಿನಗಳ ಬಳಿಕ ಪತ್ನಿ ಮನ್ಸೌರೆ ಸಾವು

Public TV
By Public TV
28 minutes ago
gold price hike
Latest

Iran War| ಹೂಡಿಕೆದಾರರಿಗೆ 8 ಲಕ್ಷ ಕೋಟಿ ಲಾಸ್‌ – 2 ಲಕ್ಷ ದಾಟುತ್ತಾ ಚಿನ್ನದ ದರ?

Public TV
By Public TV
44 minutes ago
Narendra Modi Ayatollah Ali Khamenei
Latest

ಇರಾನ್‌ ಸರ್ವೋಚ್ಚ ನಾಯಕ ಖಮೇನಿ ಹತ್ಯೆಯನ್ನು ಭಾರತ ಖಂಡಿಸಿಲ್ಲ ಯಾಕೆ?

Public TV
By Public TV
1 hour ago
Aniruddh manjamma jogati
Bengaluru City

ಬೆಂಗಳೂರು ಶುಚಿತ್ವ ರಾಯಭಾರಿಗಳಾಗಿ ಮಂಜಮ್ಮ ಜೋಗತಿ, ನಟ ಅನಿರುಧ್, ಸಾಮಾಜಿಕ ಕಾರ್ಯಕರ್ತ ಅರುಣ್ ಪೈ ನೇಮಕ

Public TV
By Public TV
2 hours ago
KRS Leopard
Dakshina Kannada

ಮಂಗಳೂರು ನಗರಕ್ಕೆ ಚಿರತೆಗಳ ಎಂಟ್ರಿ; ಜನರಲ್ಲಿ ಹೆಚ್ಚಿದ ಆತಂಕ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?