Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Belgaum

ಕದನದಲ್ಲಿಯೇ ಕಮರಿ ಹೋಯಿತು ಕಲಾಪ

Public TV
Last updated: December 20, 2018 5:04 pm
Public TV
Share
3 Min Read
BLG Session 2
SHARE

– ಸಿಎಂ ಕ್ಷಮೆ ಕೇಳಬೇಕೆಂದು ಪಟ್ಟು ಹಿಡಿದ ಬಿಜೆಪಿ ನಾಯಕು
– ಮೂರು ಬಾರಿ ಅರ್ಧ ಗಂಟೆ ವಿರಾಮ ಕೊಟ್ರು ನಿಲ್ಲಲಿಲ್ಲ ಪ್ರತಿಭಟನೆ
– ಸರ್ಕಾರ ಬುರುಡೆ ಬುರುಡೆ ಎಂದು ಹೊರ ನಡೆದ ವಿಪಕ್ಷದ ಶಾಸಕರು

ಬೆಳಗಾವಿ: ಆಡಳಿತ ಪಕ್ಷದ ವಿರುದ್ಧದ ಘೋಷಣೆ, ಪ್ರತಿಪಕ್ಷದ ಪ್ರತಿಭಟನೆಯಿಂದಾಗಿ ಮಧ್ಯಹ್ನಾದವರೆಗೂ ಕಲಾಪವೇ ನಡೆಯದ ಪ್ರಸಂಗ ಇಂದು ನಡೆಯಿತು.

ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಅವರ ಬಗ್ಗೆ ಸಿಎಂ ಕುಮಾರಸ್ವಾಮಿ ಹಗುರವಾಗಿ ಮಾತನಾಡಿದ್ದಾರೆ. ಹೀಗಾಗಿ ಸಿಎಂ ಕುಮಾರಸ್ವಾಮಿ ಅವರು ಬಿ.ಎಸ್.ಯಡಿಯೂರಪ್ಪ ಅವರ ಕ್ಷಮೆ ಕೇಳಬೇಕು ಎಂದು ನಿನ್ನೆ ಬಿಜೆಪಿ ನಾಯಕರು ಪಟ್ಟು ಹಿಡಿದಿದ್ದರು. ಅದನ್ನು ಇಂದೂ ಕೂಡ ಮುಂದುವರಿಸಿ ಸದನದ ಬಾವಿಯಲ್ಲಿ ನಿಂತು ಧರಣಿ ಮುಂದುವರಿಸಿದ್ದಾರೆ.

BLG Session 1

ರೈತರ ಸಾಲಮನ್ನಾ ಮಾಡಲೇಬೇಕು. ಕುಮಾರಸ್ವಾಮಿ ಅವರು ಬಿ.ಎಸ್.ಯಡಿರೂರಪ್ಪ ಅವರ ಕ್ಷಮೆ ಕೇಳಲೇಬೇಕು ಎಂದು ಘೋಷನೆ ಕೂಗಿದರು. ಶಾಸಕರ ಪ್ರತಿಭಟನೆಯಿಂದಾಗಿ ವಿಧಾನಸಭಾ ಕಲಾಪ ಗೊಂದಲದ ಗೂಡಾಯಿತು. ಈ ವೇಳೆ ಆಡಳಿತ ಪಕ್ಷ ಹಾಗೂ ಪ್ರತಿ ಪಕ್ಷದ ನಾಯಕರು ಕಿತ್ತಾಡಿಕೊಂಡ ಪ್ರಸಂಗಗಳು ಕಂಡು ಬಂದವು.

ಬಿಜೆಪಿ ಶಾಸಕ ಮಧುಸ್ವಾಮಿ ಮಾತನಾಡುತ್ತಿದ್ದಾಗ ಕೆಲವು ಆಡಳಿತ ಪಕ್ಷದ ಶಾಸಕರು ಮಧ್ಯ ಪ್ರವೇಶ ಮಾಡಿದರು. ಈ ವೇಳೆ ಕೋಪಗೊಂಡ ಮುಧುಸ್ವಾಮಿ, ರೀ ಬಾಯಿ ಮುಚಗೊಂಡು ಕುಳಿತುಕೊಳ್ರೀ ಎಂದು ಕಿಡಿಕಾರಿ, ಸಿಎಂ ಕ್ಷಮೆ ಕೇಳಬೇಕು, ಸಾಲಮನ್ನಾ ಕುರಿತು ಸಮರ್ಪಕ ಉತ್ತರ ಕೊಟ್ಟ ಬಳಿಕ ಸದನ ನಡೆಸುವುದಕ್ಕೆ ಸಹಕಾರ ಕೊಡುತ್ತೇವೆ ಎಂದರು.

BLG Session

ಸಿಎಂ ವಿರುದ್ಧ ಬಿಎಸ್‍ವೈ ಕಿಡಿ:
ಈ ವೇಳೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಅವರು, ಆರು ತಿಂಗಳಲ್ಲಿ ನಿಮ್ಮ ಸಾಧನೆ ಏನು? ಸಾಲಮನ್ನಾ ಮಾಡಿಲ್ಲ. ರೈತರ ಆತ್ಮಹತ್ಯೆ ಪ್ರಮಾಣ ಹೆಚ್ಚುತ್ತಲಿದೆ. ಸಹಕಾರ ಕ್ಷೇತ್ರ ಏನಾಗಿದೆ ಅಂತಾ ನಿಮಗೆ ಗೊತ್ತಿದೆ. ಕುಮಾರಸ್ವಾಮಿ ಅವರು ಇದುವರೆಗೂ ಒಂದು ದಿನ ಬರಪೀಡಿತ ಪ್ರದೇಶಕ್ಕೆ ಭೇಟಿ ನೀಡಿಲ್ಲ. ಭತ್ತ ಉತ್ತಲು ಹೋದರು. ಆದರೆ ಬರ ಪ್ರದೇಶಕ್ಕೆ ಹೋಗಲಿಲ್ಲ. ಬೆಂಗಳೂರಿನಲ್ಲಿ ಅಧಿಕಾರಿಗಳ ಜೊತೆ ಸಭೆ ಮಾಡಿದ್ದು ಬಿಟ್ಟರೆ ಏನು ಮಾಡಿದ್ದಾರೆ ಎಂದು ಪ್ರಶ್ನಿಸಿ ಕುಟುಕಿದರು.

ತೊಗರಿ ಸೇರಿದಂತೆ ಇತರೆ ಬೆಳೆಗಳಿಗೆ ಬೆಂಬಲ ಬೆಲೆ ನೀಡುತ್ತಿಲ್ಲ. ಕುಮಾರಸ್ವಾಮಿ ಅವರು ನಿನ್ನೆ ಅರ್ಧಂಬರ್ಧ ಉತ್ತರ ಕೊಟ್ಟು ಮುಗಿತು ಅಂತ ಹೇಳಿಬಿಟ್ಟರು. ಹೀಗೆ ಮಾಡಿದರೆ ಹೇಗೆ? ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆ. ಕಲಾಪದಲ್ಲಿ ಸರ್ಕಾರವು ಯಾವುದೇ ಚರ್ಚೆಯ ಕುರಿತು ಸಮರ್ಥ ರೀತಿಯಲ್ಲಿ ಉತ್ತರ ಕೊಡುತ್ತಿಲ್ಲ ಎಂದು ಆರೋಪಿಸಿದರು.

drought HDK 1

ಬಿಜೆಪಿ ಶಾಸಕರ ಪ್ರತಿಭಟನೆಯಿಂದಾಗಿ ಅರ್ಧ ಗಂಟೆ ಸದನವನ್ನು ಸ್ಪೀಕರ್ ರಮೇಶ್ ಕುಮಾರ್ ಮುಂದೂಡಿದರು. ಬಳಿಕ ಆರಂಭವಾದ ಕಲಾಪದಲ್ಲಿಯೂ ಬಿಜೆಪಿ ನಾಯಕರು ಪ್ರತಿಭಟನೆ ಮುಂದುವರಿಸಿದ್ದರು. ಕಾಂಗ್ರೆಸ್ ಹಾಗೂ ಜೆಡಿಎಸ್ ವಿರುದ್ಧ ಘೋಷಣೆ ಜೋತಾಗಿತ್ತು. ಮಧ್ಯ ಪ್ರವೇಶ ಮಾಡಿದ ಸಚಿವ ಆರ್.ವಿ.ದೇಶಪಾಂಡೆ ಅವರು ಸದನ ನಡೆಸಲು ಅನುಮತಿ ಮಾಡಿಕೊಡುವಂತೆ ಕೈಮುಗಿದು ಮನವಿ ಮಾಡಿಕೊಂಡರು. ಇದಕ್ಕೆ ಬಿಜೆಪಿ ನಾಯಕರು ಒಪ್ಪಲಿಲ್ಲ. ಈ ವೇಳೆ ಏರು ಧ್ವನಿಯಲ್ಲಿ ಶಾಸಕರೊಬ್ಬರು, ನಿಮ್ಮ ಹಣೆಬರಹಕ್ಕಂತೂ ರೈತರ ಒಂದು ರೂಪಾಯಿ ಕೂಡ ಸಾಲಮನ್ನಾ ಮಾಡಲಿಲ್ಲ. ನಾವು ಮಾಡಿದರೂ ನೆಮ್ಮದಿ ಇಲ್ಲ ನಿಮಗೆ. ಸುಮ್ಮನೆ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತೀರಿ ಎಂದು ಹೇಳಿದರು.

181219kpn46 1

ಸಿಎಂ ಕುಮಾರಸ್ವಾಮಿ ಅಥವಾ ತಾವು ಅಸಂಸದೀಯ ಪದ ಬಳಕೆ ಮಾಡಿದರೆ ಸೂಚನೆ ಕೊಡುತ್ತೇವೆ. ನೀವು ಪ್ರತಿಭಟನೆ ಕೈಬಿಡಬೇಕು ಎಂದು ಯಡಿಯೂಪ್ಪ ಅವರಿಗೆ ಸ್ಪೀಕರ್ ರಮೇಶ್ ಕುಮಾರ್ ಮನವಿ ಮಾಡಿಕೊಂಡರು. ಆದರೆ ಇದಕ್ಕೆ ಒಪ್ಪದೆ ಬಿಜೆಪಿ ನಾಯಕರು ಪ್ರತಿಭಟನೆ ಮುಂದುವರಿಸಿದರು. ಗದ್ದಲ, ಧರಣಿ ಹಿನ್ನೆಲೆ ಮತ್ತೆ ಅರ್ಧಗಂಟೆ ಕಲಾಪವನ್ನು ಸ್ಪೀಕರ್ ರಮೇಶ್ ಕುಮಾರ್ ಮುಂದೂಡಿದರು. ಬಳಿಕವೂ ಪ್ರತಿಭಟನೆ ನಡೆಸಿದ್ದರಿಂದ ಮಧ್ಯಾಹ್ನ ಮೂರು ಗಂಟೆಗೆ ಕಲಾಪ ಮುಂದೂಡಿದರು. ಈ ವೇಳೆ ಸರ್ಕಾರ ಬುರುಡೆ ಬುರುಡೆ ಎಂದು ಬಿಜೆಪಿ ಶಾಸಕರು ಕೂಗುತ್ತ ಹೊರನಡೆದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:B.S.YeddyurappabjpCM KumaraswamycongressFarmer loanLegislative AssemblyPublic TVಕಲಾಪಕಾಂಗ್ರೆಸ್ಪಬ್ಲಿಕ್ ಟಿವಿಬಿ.ಎಸ್.ಯಡಿಯೂಪ್ಪಬಿಜೆಪಿವಿಧಾನಸಭೆಸಾಲಮನ್ನಾಸಿಎಂ ಕುಮಾರಸ್ವಾಮಿ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Abhiman Studio
ರಾತ್ರೋರಾತ್ರಿ ವಿಷ್ಣು ಸಮಾಧಿ ನೆಲಸಮ – ಅಭಿಮಾನಿಗಳಿಂದ ತೀವ್ರ ಆಕ್ರೋಶ
Bengaluru City Cinema Districts Karnataka Latest Main Post Sandalwood
Lankasura film team gave good news Vinod Prabhakar 1
ಮಾದೇವ ನಂತರ ಲಂಕಾಸುರನಾಗಿ ಮರಿ ಟೈಗರ್ ಅಬ್ಬರ
Cinema Latest
Manoranjan Ravichandran New Movie
ಮನೋರಂಜನ್ ರವಿಚಂದ್ರನ್ ಐದನೇ ಸಿನಿಮಾಗೆ ಮುಹೂರ್ತ
Cinema Latest Sandalwood Top Stories
Actor Milind
`ಅನ್‌ಲಾಕ್ ರಾಘವ’ ಖ್ಯಾತಿಯ ಮಿಲಿಂದ್‌ಗೆ ಲಾಟ್ರಿ; ನಾಲ್ಕು ಚಿತ್ರಗಳಿಗೆ ಸಹಿ ಮಾಡಿದ ನಟ
Cinema Latest Sandalwood Top Stories
Kantara Chapter 1 First look of Kanakavati Rukmini Vasanth unveiled on Varamahalakshmi
ಕಾಂತಾರ ಚಾಪ್ಟರ್ 1| ಕನಕವತಿಯ ಮೊದಲ ನೋಟ ವರಮಹಾಲಕ್ಷ್ಮಿಯಂದು ಅನಾವರಣ
Cinema Latest Top Stories

You Might Also Like

HD Kumaraswamy 7
Latest

PM E-DRIVE ಯೋಜನೆಯ ಅವಧಿ 2 ವರ್ಷ ವಿಸ್ತರಣೆ – ಕೇಂದ್ರ ಸಚಿವ ಹೆಚ್‌ಡಿಕೆ

Public TV
By Public TV
33 minutes ago
Krishna Byre Gowda
Districts

ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೃಷ್ಣಭೈರೇಗೌಡ ನೇಮಕ

Public TV
By Public TV
39 minutes ago
Dharmasthala Protest 2
Districts

ಶ್ರೀ ಕ್ಷೇತ್ರದ ಬಗ್ಗೆ ಯೂಟ್ಯೂಬರ್‌ಗಳಿಂದ ಅಪಪ್ರಚಾರ – ಕೊಡಗಿನಲ್ಲೂ ಸಿಡಿದ ಧರ್ಮಸ್ಥಳ ಭಕ್ತರು

Public TV
By Public TV
58 minutes ago
JAYARAM REDDY
Bengaluru City

ಮನೆ ನಂ.35ರಲ್ಲಿ 80 ಮಂದಿ ವಾಸ | 10*15 ಅಡಿಯಲ್ಲಿ ಎಷ್ಟು ಜನ ಇರೋಕಾಗುತ್ತೆ? – ರಾಹುಲ್ ಆರೋಪಕ್ಕೆ ಮಾಲೀಕನ ಪ್ರತಿಕ್ರಿಯೆ

Public TV
By Public TV
1 hour ago
KPCC Election Commission
Bengaluru City

ಮತಗಳ್ಳತನ ಆರೋಪ; ಚುನಾವಣಾ ಆಯೋಗಕ್ಕೆ ಕೆಪಿಸಿಸಿ ದೂರು – ಅಂತರ ಕಾಯ್ದುಕೊಂಡ ರಾಗಾ

Public TV
By Public TV
2 hours ago
narendra modi xi jinping
Latest

ಶಾಂಘೈ ಸಹಕಾರ ಸಂಘಟನೆ ಶೃಂಗಸಭೆಗೆ ಮೋದಿ ಸ್ವಾಗತಿಸಿದ ಚೀನಾ; ಗಲ್ವಾನ್‌ ಘರ್ಷಣೆ ಬಳಿಕ ಮೊದಲ ಭೇಟಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?