Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂ ಕುರ್ಚಿ ಸ್ಪರ್ಧೆಗಾಗಿ ಕಾಂಗ್ರೆಸ್ ಪಾದಯಾತ್ರೆ: ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಟೀಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಸಿಎಂ ಕುರ್ಚಿ ಸ್ಪರ್ಧೆಗಾಗಿ ಕಾಂಗ್ರೆಸ್ ಪಾದಯಾತ್ರೆ: ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಟೀಕೆ

Karnataka

ಸಿಎಂ ಕುರ್ಚಿ ಸ್ಪರ್ಧೆಗಾಗಿ ಕಾಂಗ್ರೆಸ್ ಪಾದಯಾತ್ರೆ: ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಟೀಕೆ

Public TV
Last updated: January 13, 2022 11:29 pm
Public TV
Share
3 Min Read
N. Ravikumar
SHARE

ಬೆಂಗಳೂರು: ಮುಖ್ಯಮಂತ್ರಿ ಕುರ್ಚಿಯ ಸ್ಪರ್ಧೆಯಲ್ಲಿ ನಾ ಮುಂದೆ ತಾ ಮುಂದೆ ಎಂದು ಸ್ಪರ್ಧೆಗೆ ಇಳಿವಂತೆ ಕಾಂಗ್ರೆಸ್‍ನವರು ಭಂಡತನದ ಪಾದಯಾತ್ರೆ ಮಾಡುತ್ತಿದ್ದಾರೆ. ಕಾಂಗ್ರೆಸ್‍ನವರಿಗೆ ಸಾಮಾನ್ಯ ಜ್ಞಾನದ ಗುಲಗಂಜಿಯೂ ಇಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಆಕ್ಷೇಪ ವ್ಯಕ್ತಪಡಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ʻಜಗನ್ನಾಥ ಭವನʼದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಹೆಚ್ಚಳದ ನಡುವೆ ಪಾದಯಾತ್ರೆ ಬೇಡ ಎಂದು ಹೈಕೋರ್ಟ್ ಹೇಳಿದ ವಿಷಯವನ್ನು ಸರ್ಕಾರ ಮೊದಲೇ ತಿಳಿಸಿತ್ತು. ಮುಖ್ಯಮಂತ್ರಿಗಳು, ಸಚಿವರ ಮನವಿ, ಜನರ ಅಭಿಪ್ರಾಯವನ್ನು ಧಿಕ್ಕರಿಸಿ ಪತ್ರಿಕಾ ಸಂಪಾದಕೀಯದ ಸಲಹೆಯನ್ನೂ ಬದಿಗೊತ್ತಿ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಮೇಕೆದಾಟು ಪಾದಯಾತ್ರೆ ಆರಂಭಿಸಿದರು ಎಂದು ಟೀಕಿಸಿದರು. ಇದನ್ನೂ ಓದಿ: ಕೋವಿಡ್ ಪ್ರಕರಣ ಹೆಚ್ಚಲು ಕಾಂಗ್ರೆಸ್ ಪಾದಯಾತ್ರೆಯೂ ಕಾರಣ‌: ಸಚಿವ ಸುಧಾಕರ್

Mekedatu Padyatra DK Shivakumar Siddaramaiah

ಕೋವಿಡ್ ತೀವ್ರವಾಗುತ್ತಿರುವಾಗಲೇ ಈ ಪಾದಯಾತ್ರೆ ಬೇಕಿತ್ತೇ ಪ್ರಶ್ನಿಸಿರುವ ಹೈಕೋರ್ಟ್ ಪಾದಯಾತ್ರೆ ನಿಲ್ಲಿಸಿ ಎಂದು ಸೂಚಿಸಿದೆ. ಅದೇ ರೀತಿ ಪಾದಯಾತ್ರೆ ನಿಲ್ಲಿಸಬಾರದೇ ಎಂದು ರಾಜ್ಯ ಸರ್ಕಾರವನ್ನೂ ಪ್ರಶ್ನಿಸಿದೆ. ಮಾನವೀಯತೆಯ ಲವಲೇಶವಿಲ್ಲದೆ ಈ ಪಾದಯಾತ್ರೆ ಮಾಡಲಾಗುತ್ತಿದೆ. ಪಾದಯಾತ್ರೆಯಲ್ಲಿ ಭಾಗವಹಿಸಿದ ಮಲ್ಲಿಕಾರ್ಜುನ ಖರ್ಗೆ, ಮಾಜಿ ಶಾಸಕಿ ಮಲ್ಲಾಜಮ್ಮ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಮಂಜುಳಾ ಮಾನಸ, ವಿಧಾನ ಪರಿಷತ್ ಹಿರಿಯ ಸದಸ್ಯ ಸಿ.ಎಂ.ಇಬ್ರಾಹಿಂ, ಮಾಜಿ ಸಿಎಂ ವೀರಪ್ಪ ಮೊಯಿಲಿ, ಮಾಜಿ ಸಚಿವ ರೇವಣ್ಣ ಅವರಿಗೆ ಈಗಾಗಲೇ ಕೋವಿಡ್ ಬಂದಿದೆ. ಇದರಲ್ಲಿ ಪಾಲ್ಗೊಂಡ ಬಹಳಷ್ಟು ಜನರಿಗೆ ಕೋವಿಡ್ ಬಂದಿದೆ ಎಂದು ತಿಳಿಸಿದರು.

ನಿನ್ನೆ ರಾಮನಗರದಲ್ಲಿ ಪರೀಕ್ಷೆ ಮಾಡಿದ 100 ಜನರ ಪೈಕಿ 30 ಜನರಿಗೆ ಕೋವಿಡ್ ಇದೆ. ಇದು ಇನ್ನೂ ಹೆಚ್ಚಾಗುತ್ತಿದೆ. ಕಾಂಗ್ರೆಸ್‍ನದ್ದು ಪಾದಯಾತ್ರೆಯಲ್ಲ, ಕೋವಿಡ್ ಹೆಚ್ಚಳದ ಜಾತ್ರೆ. ಪಾದಯಾತ್ರೆ ವಿಚಾರ ಹೈಕಮಾಂಡ್‍ಗೆ ಗೊತ್ತಿತ್ತು. ಆದರೆ, ಉಸ್ತುವಾರಿ ಸುರ್ಜೇವಾಲಾ ಅವರು ಪರಿಸ್ಥಿತಿ ಕೈಮೀರಿದರೆ ಪಾದಯಾತ್ರೆ ನಿಲ್ಲಿಸಿ ಎಂದು ಇವತ್ತು ಸೂಚನೆ ಕೊಡುತ್ತಿದ್ದಾರೆ. ಇನ್ನೂ ಎಷ್ಟು ಕೈಮೀರಬೇಕು. ರಾಜ್ಯದಲ್ಲಿ ಕೋವಿಡ್ ಪ್ರಮಾಣ ಹೆಚ್ಚಳದಲ್ಲಿ ಕಾಂಗ್ರೆಸ್ ಮತ್ತು ಆ ಪಕ್ಷದ ಹೈಕಮಾಂಡ್ ಪಾತ್ರ ದೊಡ್ಡದಾಗಿದೆ ಎಂದು ಟೀಕಿಸಿದರು. ಇದನ್ನೂ ಓದಿ: ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್ ಬಗ್ಗೆ ನಮಗೆ ನಂಬಿಕೆ ಇಲ್ಲ: ಸುನಿಲ್ ಕುಮಾರ್

mekedatu padayatra 1

ಡಿ.ಕೆ.ಶಿವಕುಮಾರ್‌ರನ್ನು ಸಿಎಂ ಮಾಡಲು ಮತ್ತು ಅವರ ಬೇಳೆ ಬೇಯಿಸಲು ಹೈಕಮಾಂಡ್ ಕೂಡ ಕೋವಿಡ್ ಹೆಚ್ಚಿಸಲು ಸಹಾಯ ಮಾಡುತ್ತಿದೆ. ಪಾದಯಾತ್ರೆ ಮುಂದೂಡಿಕೆಗೆ ಹೈಕಮಾಂಡ್ ಯಾಕೆ ಮುಂದಾಗಲಿಲ್ಲ? ಡಿ.ಕೆ.ಶಿವಕುಮಾರ್ ಒಬ್ಬರಿಗೇ ಪಾದಯಾತ್ರೆಯ ಲಾಭ ಸಿಗಬಾರದೆಂದು ಸಿದ್ದರಾಮಯ್ಯರು ತಮಗೆ ಅನಾರೋಗ್ಯವಿದ್ದರೂ ಕಷ್ಟಪಟ್ಟು ಪಾದಯಾತ್ರೆಯಲ್ಲಿ ಭಾಗವಹಿಸಿದ್ದಾರೆ ಎಂದರು.

ರಾಜ್ಯ ಸರ್ಕಾರ ನೂರಾರು ಜನರ ವಿರುದ್ಧ ಪ್ರಕರಣ ದಾಖಲಿಸಿದೆ. ಮಾಜಿ ಸಿಎಂ ಸಿದ್ದರಾಮಯ್ಯ, ಶಾಸಕರೇ ನಿಯಮಗಳನ್ನು ಉಲ್ಲಂಘಿಸಿದ್ದು ಸರಿಯೇ? ಎಂದು ಕೇಳಿದರು. ಮೇಕೆದಾಟು ವಿಳಂಬಕ್ಕೆ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರೇ ಕಾರಣ. 2013ರಿಂದ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಯಾವುದೇ ತಡೆಯಾಜ್ಞೆ ಇರಲಿಲ್ಲ. ಇದರ ಬಗ್ಗೆ ಕಾಂಗ್ರೆಸ್ ವಲಯದಲ್ಲೇ ಚರ್ಚೆ ನಡೆದಿದೆ. ಶಿವಕುಮಾರ್ ಮತ್ತು ಎಂ.ಬಿ.ಪಾಟೀಲರಿಗೆ ಮಂಪರು ಪರೀಕ್ಷೆ ಮಾಡಲಿ ಎಂದು ಆಗ್ರಹಿಸಿದರು. ಇದನ್ನೂ ಓದಿ: ನೋಟಿಸ್‍ಗೆ ಹೆದರಲ್ಲ, ಜನರ ಹಿತದೃಷ್ಟಿಯಿಂದ ಪಾದಯಾತ್ರೆ ರದ್ದು: ಸಿದ್ದರಾಮಯ್ಯ

mekedatu padayatra dk shivakumar saleem ahmed

ರಾಜ್ಯ ವಕ್ತಾರರು ಹಾಗೂ ವಿಧಾನಪರಿಷತ್ ಸದಸ್ಯರಾದ ತೇಜಸ್ವಿನಿ ಗೌಡ ಮಾತನಾಡಿ, ಕಾಂಗ್ರೆಸ್ ಪಕ್ಷವು ಮೇಕೆದಾಟು ವಿಚಾರದಲ್ಲಿ ಸಲಹೆಗಳನ್ನು ಸರ್ವಪಕ್ಷ ಸಭೆಯಲ್ಲಿ ತಿಳಿಸಬೇಕಿತ್ತು. ಇವರು ಪರಮ ಸ್ವಾರ್ಥಕ್ಕಾಗಿ ಮತ್ತು ರಾಜಕೀಯ ಲಾಭಕ್ಕಾಗಿ ಈ ಪಾದಯಾತ್ರೆ ಮಾಡಿದ್ದಾರೆ ಎಂದು ಟೀಕಿಸಿದರು. ಮೊದಲು ಕೋವಿಡ್ ಲಸಿಕೆ ಹಾಕಿಸಿಕೊಳ್ಳದಿರಿ ಎಂದರು. ಈಗ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಸೇರಿ ಪಾದಯಾತ್ರೆಯಲ್ಲಿ ಪಾಲ್ಗೊಂಡ ಎಲ್ಲರಿಗೂ ಕೋವಿಡ್ ತಗುಲಿದಂತೆ ಕಾಣುತ್ತದೆ ಎಂದರು.

TAGGED:bjpcongress padayatremekedatu padayatreMLC n.ravikumarಎಂಎಲ್‌ಸಿ ಎನ್‌.ರವಿಕುಮಾರ್‌ಕಾಂಗ್ರೆಸ್‌ ಪಾದಯಾತ್ರೆಬಿಜೆಪಿಮೇಕೆದಾಟು ಪಾದಯಾತ್ರೆ
Share This Article
Facebook Whatsapp Whatsapp Telegram

Cinema news

sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories

You Might Also Like

g.parameshwara 2
Districts

ಸಿದ್ದರಾಮಯ್ಯನವ್ರೇ ಇನ್ನೆರೆಡು ವರ್ಷ ಸಿಎಂ, ಹೈಕಮಾಂಡ್ ಸ್ಪಷ್ಟನೆ ಅಗತ್ಯವಿಲ್ಲ: ಪರಮೇಶ್ವರ್

Public TV
By Public TV
49 seconds ago
G Parameshwar
Bengaluru City

ಕೇಂದ್ರ ಸರ್ಕಾರ ರಾಜ್ಯಕ್ಕೆ ಬರಬೇಕಾದ ಕನಿಷ್ಠ ಅನಿಲವನ್ನೂ ಪೂರೈಕೆ ಮಾಡಿಲ್ಲ: ಪರಮೇಶ್ವರ್‌ ಬೇಸರ

Public TV
By Public TV
18 minutes ago
woman suicide husband also dies in accident in belagavi bailhongal
Belgaum

ಪತ್ನಿ ಆತ್ಮಹತ್ಯೆ ಸುದ್ದಿ ತಿಳಿದು ಆಘಾತ – ಗಡಿಬಿಡಿಯಲ್ಲಿ ಬರುವಾಗ ಅಪಘಾತದಲ್ಲಿ ಪತಿಯೂ ಸಾವು

Public TV
By Public TV
32 minutes ago
Iran war
Latest

6 ಮಕ್ಕಳು ಸೇರಿ 34 ಮಂದಿ ಸಾವಿಗೆ ಇರಾನ್‌ ಪ್ರತೀಕಾರ – ಇಸ್ರೇಲ್‌ನ 15ಕ್ಕೂ ಹೆಚ್ಚು ಸ್ಥಳಗಳಲ್ಲಿ ಸ್ಫೋಟ

Public TV
By Public TV
56 minutes ago
Drums Sweets Support Meerut Father Celebrates Daughters Divorce
Court

ಡಿವೋರ್ಸ್‌ ಬಳಿಕ ಸಿಹಿ ಹಂಚಿ, ಬ್ಯಾಂಡ್‌ ಮೆರವಣಿಗೆಯಲ್ಲಿ ಮಗಳನ್ನು ಕರೆತಂದ ನಿವೃತ್ತ ಜಡ್ಜ್‌

Public TV
By Public TV
1 hour ago
325702249 1 6 1 e1566118011669
Latest

ಮಧ್ಯಪ್ರಾಚ್ಯದಲ್ಲಿ ಮುಗಿಯದ ಯುದ್ಧ – ಅಮೆರಿಕ ಕಚ್ಛಾ ತೈಲ ಬೆಲೆ ಬ್ಯಾರಲ್​ಗೆ 113 ಡಾಲರ್​ಗೆ ಏರಿಕೆ​

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?