Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ಸಿಎಂ ಕುರ್ಚಿ ಸ್ಪರ್ಧೆಗಾಗಿ ಕಾಂಗ್ರೆಸ್ ಪಾದಯಾತ್ರೆ: ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಟೀಕೆ

Public TV
Last updated: January 13, 2022 11:29 pm
Public TV
Share
3 Min Read
N. Ravikumar
SHARE

ಬೆಂಗಳೂರು: ಮುಖ್ಯಮಂತ್ರಿ ಕುರ್ಚಿಯ ಸ್ಪರ್ಧೆಯಲ್ಲಿ ನಾ ಮುಂದೆ ತಾ ಮುಂದೆ ಎಂದು ಸ್ಪರ್ಧೆಗೆ ಇಳಿವಂತೆ ಕಾಂಗ್ರೆಸ್‍ನವರು ಭಂಡತನದ ಪಾದಯಾತ್ರೆ ಮಾಡುತ್ತಿದ್ದಾರೆ. ಕಾಂಗ್ರೆಸ್‍ನವರಿಗೆ ಸಾಮಾನ್ಯ ಜ್ಞಾನದ ಗುಲಗಂಜಿಯೂ ಇಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಆಕ್ಷೇಪ ವ್ಯಕ್ತಪಡಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ʻಜಗನ್ನಾಥ ಭವನʼದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಹೆಚ್ಚಳದ ನಡುವೆ ಪಾದಯಾತ್ರೆ ಬೇಡ ಎಂದು ಹೈಕೋರ್ಟ್ ಹೇಳಿದ ವಿಷಯವನ್ನು ಸರ್ಕಾರ ಮೊದಲೇ ತಿಳಿಸಿತ್ತು. ಮುಖ್ಯಮಂತ್ರಿಗಳು, ಸಚಿವರ ಮನವಿ, ಜನರ ಅಭಿಪ್ರಾಯವನ್ನು ಧಿಕ್ಕರಿಸಿ ಪತ್ರಿಕಾ ಸಂಪಾದಕೀಯದ ಸಲಹೆಯನ್ನೂ ಬದಿಗೊತ್ತಿ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಮೇಕೆದಾಟು ಪಾದಯಾತ್ರೆ ಆರಂಭಿಸಿದರು ಎಂದು ಟೀಕಿಸಿದರು. ಇದನ್ನೂ ಓದಿ: ಕೋವಿಡ್ ಪ್ರಕರಣ ಹೆಚ್ಚಲು ಕಾಂಗ್ರೆಸ್ ಪಾದಯಾತ್ರೆಯೂ ಕಾರಣ‌: ಸಚಿವ ಸುಧಾಕರ್

Mekedatu Padyatra DK Shivakumar Siddaramaiah

ಕೋವಿಡ್ ತೀವ್ರವಾಗುತ್ತಿರುವಾಗಲೇ ಈ ಪಾದಯಾತ್ರೆ ಬೇಕಿತ್ತೇ ಪ್ರಶ್ನಿಸಿರುವ ಹೈಕೋರ್ಟ್ ಪಾದಯಾತ್ರೆ ನಿಲ್ಲಿಸಿ ಎಂದು ಸೂಚಿಸಿದೆ. ಅದೇ ರೀತಿ ಪಾದಯಾತ್ರೆ ನಿಲ್ಲಿಸಬಾರದೇ ಎಂದು ರಾಜ್ಯ ಸರ್ಕಾರವನ್ನೂ ಪ್ರಶ್ನಿಸಿದೆ. ಮಾನವೀಯತೆಯ ಲವಲೇಶವಿಲ್ಲದೆ ಈ ಪಾದಯಾತ್ರೆ ಮಾಡಲಾಗುತ್ತಿದೆ. ಪಾದಯಾತ್ರೆಯಲ್ಲಿ ಭಾಗವಹಿಸಿದ ಮಲ್ಲಿಕಾರ್ಜುನ ಖರ್ಗೆ, ಮಾಜಿ ಶಾಸಕಿ ಮಲ್ಲಾಜಮ್ಮ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಮಂಜುಳಾ ಮಾನಸ, ವಿಧಾನ ಪರಿಷತ್ ಹಿರಿಯ ಸದಸ್ಯ ಸಿ.ಎಂ.ಇಬ್ರಾಹಿಂ, ಮಾಜಿ ಸಿಎಂ ವೀರಪ್ಪ ಮೊಯಿಲಿ, ಮಾಜಿ ಸಚಿವ ರೇವಣ್ಣ ಅವರಿಗೆ ಈಗಾಗಲೇ ಕೋವಿಡ್ ಬಂದಿದೆ. ಇದರಲ್ಲಿ ಪಾಲ್ಗೊಂಡ ಬಹಳಷ್ಟು ಜನರಿಗೆ ಕೋವಿಡ್ ಬಂದಿದೆ ಎಂದು ತಿಳಿಸಿದರು.

ನಿನ್ನೆ ರಾಮನಗರದಲ್ಲಿ ಪರೀಕ್ಷೆ ಮಾಡಿದ 100 ಜನರ ಪೈಕಿ 30 ಜನರಿಗೆ ಕೋವಿಡ್ ಇದೆ. ಇದು ಇನ್ನೂ ಹೆಚ್ಚಾಗುತ್ತಿದೆ. ಕಾಂಗ್ರೆಸ್‍ನದ್ದು ಪಾದಯಾತ್ರೆಯಲ್ಲ, ಕೋವಿಡ್ ಹೆಚ್ಚಳದ ಜಾತ್ರೆ. ಪಾದಯಾತ್ರೆ ವಿಚಾರ ಹೈಕಮಾಂಡ್‍ಗೆ ಗೊತ್ತಿತ್ತು. ಆದರೆ, ಉಸ್ತುವಾರಿ ಸುರ್ಜೇವಾಲಾ ಅವರು ಪರಿಸ್ಥಿತಿ ಕೈಮೀರಿದರೆ ಪಾದಯಾತ್ರೆ ನಿಲ್ಲಿಸಿ ಎಂದು ಇವತ್ತು ಸೂಚನೆ ಕೊಡುತ್ತಿದ್ದಾರೆ. ಇನ್ನೂ ಎಷ್ಟು ಕೈಮೀರಬೇಕು. ರಾಜ್ಯದಲ್ಲಿ ಕೋವಿಡ್ ಪ್ರಮಾಣ ಹೆಚ್ಚಳದಲ್ಲಿ ಕಾಂಗ್ರೆಸ್ ಮತ್ತು ಆ ಪಕ್ಷದ ಹೈಕಮಾಂಡ್ ಪಾತ್ರ ದೊಡ್ಡದಾಗಿದೆ ಎಂದು ಟೀಕಿಸಿದರು. ಇದನ್ನೂ ಓದಿ: ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್ ಬಗ್ಗೆ ನಮಗೆ ನಂಬಿಕೆ ಇಲ್ಲ: ಸುನಿಲ್ ಕುಮಾರ್

mekedatu padayatra 1

ಡಿ.ಕೆ.ಶಿವಕುಮಾರ್‌ರನ್ನು ಸಿಎಂ ಮಾಡಲು ಮತ್ತು ಅವರ ಬೇಳೆ ಬೇಯಿಸಲು ಹೈಕಮಾಂಡ್ ಕೂಡ ಕೋವಿಡ್ ಹೆಚ್ಚಿಸಲು ಸಹಾಯ ಮಾಡುತ್ತಿದೆ. ಪಾದಯಾತ್ರೆ ಮುಂದೂಡಿಕೆಗೆ ಹೈಕಮಾಂಡ್ ಯಾಕೆ ಮುಂದಾಗಲಿಲ್ಲ? ಡಿ.ಕೆ.ಶಿವಕುಮಾರ್ ಒಬ್ಬರಿಗೇ ಪಾದಯಾತ್ರೆಯ ಲಾಭ ಸಿಗಬಾರದೆಂದು ಸಿದ್ದರಾಮಯ್ಯರು ತಮಗೆ ಅನಾರೋಗ್ಯವಿದ್ದರೂ ಕಷ್ಟಪಟ್ಟು ಪಾದಯಾತ್ರೆಯಲ್ಲಿ ಭಾಗವಹಿಸಿದ್ದಾರೆ ಎಂದರು.

ರಾಜ್ಯ ಸರ್ಕಾರ ನೂರಾರು ಜನರ ವಿರುದ್ಧ ಪ್ರಕರಣ ದಾಖಲಿಸಿದೆ. ಮಾಜಿ ಸಿಎಂ ಸಿದ್ದರಾಮಯ್ಯ, ಶಾಸಕರೇ ನಿಯಮಗಳನ್ನು ಉಲ್ಲಂಘಿಸಿದ್ದು ಸರಿಯೇ? ಎಂದು ಕೇಳಿದರು. ಮೇಕೆದಾಟು ವಿಳಂಬಕ್ಕೆ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರೇ ಕಾರಣ. 2013ರಿಂದ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಯಾವುದೇ ತಡೆಯಾಜ್ಞೆ ಇರಲಿಲ್ಲ. ಇದರ ಬಗ್ಗೆ ಕಾಂಗ್ರೆಸ್ ವಲಯದಲ್ಲೇ ಚರ್ಚೆ ನಡೆದಿದೆ. ಶಿವಕುಮಾರ್ ಮತ್ತು ಎಂ.ಬಿ.ಪಾಟೀಲರಿಗೆ ಮಂಪರು ಪರೀಕ್ಷೆ ಮಾಡಲಿ ಎಂದು ಆಗ್ರಹಿಸಿದರು. ಇದನ್ನೂ ಓದಿ: ನೋಟಿಸ್‍ಗೆ ಹೆದರಲ್ಲ, ಜನರ ಹಿತದೃಷ್ಟಿಯಿಂದ ಪಾದಯಾತ್ರೆ ರದ್ದು: ಸಿದ್ದರಾಮಯ್ಯ

mekedatu padayatra dk shivakumar saleem ahmed

ರಾಜ್ಯ ವಕ್ತಾರರು ಹಾಗೂ ವಿಧಾನಪರಿಷತ್ ಸದಸ್ಯರಾದ ತೇಜಸ್ವಿನಿ ಗೌಡ ಮಾತನಾಡಿ, ಕಾಂಗ್ರೆಸ್ ಪಕ್ಷವು ಮೇಕೆದಾಟು ವಿಚಾರದಲ್ಲಿ ಸಲಹೆಗಳನ್ನು ಸರ್ವಪಕ್ಷ ಸಭೆಯಲ್ಲಿ ತಿಳಿಸಬೇಕಿತ್ತು. ಇವರು ಪರಮ ಸ್ವಾರ್ಥಕ್ಕಾಗಿ ಮತ್ತು ರಾಜಕೀಯ ಲಾಭಕ್ಕಾಗಿ ಈ ಪಾದಯಾತ್ರೆ ಮಾಡಿದ್ದಾರೆ ಎಂದು ಟೀಕಿಸಿದರು. ಮೊದಲು ಕೋವಿಡ್ ಲಸಿಕೆ ಹಾಕಿಸಿಕೊಳ್ಳದಿರಿ ಎಂದರು. ಈಗ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಸೇರಿ ಪಾದಯಾತ್ರೆಯಲ್ಲಿ ಪಾಲ್ಗೊಂಡ ಎಲ್ಲರಿಗೂ ಕೋವಿಡ್ ತಗುಲಿದಂತೆ ಕಾಣುತ್ತದೆ ಎಂದರು.

TAGGED:bjpcongress padayatremekedatu padayatreMLC n.ravikumarಎಂಎಲ್‌ಸಿ ಎನ್‌.ರವಿಕುಮಾರ್‌ಕಾಂಗ್ರೆಸ್‌ ಪಾದಯಾತ್ರೆಬಿಜೆಪಿಮೇಕೆದಾಟು ಪಾದಯಾತ್ರೆ
Share This Article
Facebook Whatsapp Whatsapp Telegram

Cinema Updates

shivarajkumar
ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳಲ್ಲ: ಕೊನೆಗೂ ಮೌನ ಮುರಿದ ಶಿವಣ್ಣ
11 hours ago
smriti Irani e1500383222701
ಮತ್ತೆ ಬಣ್ಣ ಹಚ್ಚಿದ ಸ್ಮೃತಿ ಇರಾನಿ – 12 ವರ್ಷಗಳ ನಂತರ ಸೀರಿಯಲ್‌ಗೆ ರೀ ಎಂಟ್ರಿ
12 hours ago
darshan 1
‘ಅಂಬಿ’ ಕನ್ವರ್ ಲಾಲ್ ಲುಕ್‌ನಲ್ಲಿ ಬಂದ ದರ್ಶನ್- ‘ದ ಡೆವಿಲ್’ ಪೋಸ್ಟರ್ ಔಟ್
12 hours ago
disha patani 3
ಹಾಲಿವುಡ್‌ನತ್ತ ಹೊರಟ ಬಾಲಿವುಡ್ ಬೋಲ್ಡ್ ಬ್ಯೂಟಿ ದಿಶಾ ಪಟಾನಿ!
14 hours ago

You Might Also Like

Train
Bengaluru City

ಮಳೆ ಅಬ್ಬರ; 5 ತಿಂಗಳು ಬೆಂಗಳೂರು, ಮಂಗಳೂರು ರೈಲು ಸಂಚಾರ ಸ್ಥಗಿತ

Public TV
By Public TV
7 hours ago
D.K Shivakumar 2
Bengaluru City

ದ್ವೇಷ ಭಾಷಣ ಯಾರೇ ಮಾಡಿದ್ರೂ ಕಠಿಣ ಕ್ರಮ – ಸಿಎಂ ಸಿದ್ದರಾಮಯ್ಯ

Public TV
By Public TV
7 hours ago
mahesh joshi
Bengaluru City

ಮಹೇಶ್ ಜೋಶಿಗೆ ರಾಜ್ಯ ಸಚಿವ ಸ್ಥಾನಮಾನ ಸವಲತ್ತು ಹಿಂಪಡೆದ ಸರ್ಕಾರ

Public TV
By Public TV
8 hours ago
CDS Anil Chauhan
Latest

ಪಾಕ್ ದಾಳಿಯಿಂದ ನಮ್ಮ ಫೈಟರ್ ಜೆಟ್‌ಗಳಿಗೂ ಹಾನಿ? – ಮೊದಲ ಬಾರಿಗೆ ಸಿಡಿಎಸ್ ಪ್ರತಿಕ್ರಿಯೆ ಏನು?

Public TV
By Public TV
8 hours ago
MeghaPramod 2
Bengaluru City

ಅಖಂಡ ರಾಷ್ಟ್ರ ತಪಸ್ವಿನಿ ಅಹಲ್ಯಾಬಾಯಿ ಹೋಳ್ಕರ್: ಮೇಘಾ ಪ್ರಮೋದ್

Public TV
By Public TV
8 hours ago
Saleem DGP KARNATAKA
Bengaluru City

ಮಂಡ್ಯ ಮಗು ಸಾವಿನ ಬಳಿಕ ಎಚ್ಚೆತ್ತ ಪೊಲೀಸ್‌ ಇಲಾಖೆ – ಕದ್ದು ಮುಚ್ಚಿ ಗಾಡಿ ಹಿಡಿಯದಂತೆ ಡಿಜಿ & ಐಜಿಪಿ ಆದೇಶ

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?