Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Belgaum

ಸಿಎಜಿ ವರದಿ ನೋಡಿ ನನಗೆ ಹಾರ್ಟ್ ಅಟ್ಯಾಕ್ ಆಗಿತ್ತು: ರವಿಕುಮಾರ್ ವ್ಯಂಗ್ಯ

Public TV
Last updated: December 19, 2018 6:53 pm
Public TV
Share
2 Min Read
MLC Ravikumar
SHARE

ಬೆಳಗಾವಿ: ಸಿಎಜಿ ವರದಿ ನೋಡಿ ನನಗೆ ಹಾರ್ಟ್ ಅಟ್ಯಾಕ್ ಆಗಿತ್ತು ಎಂದು ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಹೇಳಿದರು. ಈ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ಮಧ್ಯ ಮಾತಿನ ಚಕಮಕಿ ಉಂಟಾಯಿತು.

ಬೆಳಗಾವಿ ಅಧಿವೇಶನದ ಪರಿಷತ್ ಕಲಾಪದಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್‍ನಲ್ಲಿ 19% ಹಣದ ಖರ್ಚಿಗೆ ದಾಖಲೆ ಇಲ್ಲ. ಸುಮಾರು 35 ಸಾವಿರ ಕೋಟಿಗೆ ಲೆಕ್ಕ ಇಲ್ಲ. ಇದಕ್ಕೆ ಉತ್ತರ ಕೊಡುವವರು ಯಾರು? ಸಾಲದ ಮೇಲಿನ ಬಡ್ಡಿ 12 ಸಾವಿರ ಕೋಟಿ ರೂ. ಕಟ್ಟಲಾಗಿದೆ. ಇದರಲ್ಲಿ ಬಳಕೆಯಾಗದ ಹಣ ಸರ್ಕಾರವನ್ನು ವಾಪಾಸ್ ನೀಡಿಲ್ಲ. ಈ ಕುರಿತಾಗಿ ಮಾಜಿ ಸಿಎಂ ಯಾಕೆ ಮಾಹಿತಿ ನೀಡದೆ ಮುಚ್ಚಿಟ್ಟರು. ಆಡಳಿತಾತ್ಮಕ ಅನುಮೋದನೆ ಇಲ್ಲದ ಹಣವನ್ನು ಖರ್ಚು ಮಾಡಲಾಗಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

vidhan parishad 2

ರವಿಕುಮಾರ್ ಅವರ ಹೇಳಿಕೆ ವಿರುದ್ಧ ಕಿಡಿಕಾರಿದ ಐವಾನ್ ಡಿಸೋಜಾ, ಸಿಎಜಿ ವರದಿವನ್ನು ಇನ್ನೊಂದು ದಿನ ಪ್ರಸ್ತಾಪಿಸಿ ಚರ್ಚೆ ಮಾಡೋಣ ಎಂದರು. ಈ ವೇಳೆ ಸದನದಲ್ಲಿ ಗದ್ದಲದ ವಾತಾವರಣವೇ ನಿರ್ಮಾಣವಾಯಿತು. ವಿಪಕ್ಷ- ಆಡಳಿತ ಪಕ್ಷದ ನಡುವೆ ಮಾತಿನ ಚಕಮಕಿ ಜೋರಾಯಿತು. ಸದನದಲ್ಲಿ ಮಂಡಿಸಬೇಕಾದ ಬಿಲ್ ಬಗ್ಗೆ ಮಾತಾಡಿ ಎಂದು ಕಾಂಗ್ರೆಸ್ – ಜೆಡಿಎಸ್ ಸದಸ್ಯರ ಒತ್ತಾಯಿಸಿದರೂ ಗದ್ದಲ ಮಾತ್ರ ಕಡಿಮೆಯಾಗಲಿಲ್ಲ.

ಸರ್ಕಾರದ ಹಣ ತಿಂದು ಜೈಲಿಗೆ ಹೋಗಿದ್ದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಎಂದು ಐವಾನ್ ಡಿಸೋಜಾ ಗುಡುಗಿದರು. ಈ ಹೇಳಿಕೆಯಿಂದಾಗಿ ಬಿಜೆಪಿ ಸದಸ್ಯರು ಐವಾನ್ ಡಿಸೋಜಾ ವಿರುದ್ದ ತಿರುಗಿ ಬಿದ್ದು, ಇಂದಿರಾ ಗಾಂಧಿ ಕೂಡ ಜೈಲಿಗೆ ಹೋಗಿದ್ರು ಎಂದು ಆರೋಪಿಸಿದರು.

vidhan parishad 23

ಏನಿದು ಸಿಎಜಿ ವರದಿ?:
ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರದಿಂದ 35 ಸಾವಿರ ಕೋಟಿ ರೂ. ಅವ್ಯವಹಾರ ನಡೆದಿದೆ ಎನ್ನುವ ಪ್ರಧಾನ ಮಹಲೇಖಪಾಲರ (ಕಂಟ್ರೋಲರ್ ಆ್ಯಂಡ್ ಆಡಿಟರ್ ಜನರಲ್) ವರದಿ ಆಧರಿಸಿ ಬಿಜೆಪಿ ಕಿರು ಪುಸ್ತಕವನ್ನು ಬಿಡುಗಡೆ ಮಾಡಿದೆ. ವಿಧಾನಸೌಧದ ಬಿಜೆಪಿ ಶಾಸಕಾಂಗ ಪಕ್ಷದ ಕೊಠಡಿಯಲ್ಲಿ ಶಾಸಕ ಅಶ್ವಥ್ ನಾರಾಯಣ್ ಹಾಗೂ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಅವರು, ಭ್ರಷ್ಟ ಕಾಂಗ್ರೆಸ್ ಸರ್ಕಾರದ ಲೂಟಿ ಅವಧಿ 2016-17 ಎಂಬ ಶೀರ್ಷಿಕೆಯಡಿಯಲ್ಲಿ 36 ಪುಟಗಳ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಿದ್ದರು.

vidhan parishad 33

ಕಿರುಹೊತ್ತಿಗೆಯಲ್ಲಿರುವ ಪ್ರಮುಖ ಆರೋಪಗಳೇನು?:
* 788 ಕೆರೆಗಳಿಗೆ ನೀರು ತುಂಬಲಿಲ್ಲ. ಆದರೆ 1433.41 ಕೋಟಿ ರೂ. ಬಿಡುಗಡೆಯಾಗಿದೆ
* ಶಾಸಕಾಂಗದ ಅನುಮೋದನೆ ಇಲ್ಲದೆ ಸಾವಿರಾರು ಕೋಟಿ ಹಣ ಬಿಡುಗಡೆ.
* ಬಡ್ಡಿ ಹಣದಲ್ಲಿ ಅಧಿಕಾರಿಗಳ ಮೋಜು
* ಯೂನಿಫಾರಂ ಖರೀದಿಯಲ್ಲಿ 1.72 ಕೋಟಿ ರೂ. ಹಗರಣ
* 115.10 ಕೋಟಿ ರೂ. ಲ್ಯಾಪ್ ಟಾಪ್ ಹಗರಣ
* ಬಳಕೆಯಾಗದ 1199.81 ಕೋಟಿ ರೂ. ಸರ್ಕಾರಕ್ಕೆ ಮರು ಪಾವತಿ ಮಾಡಿಲ್ಲ
* 254.34 ಕೋಟಿ ರೂ. ಗಳಿಗೆ ಬಳಕೆ ಪ್ರಮಾಣ ಪತ್ರ ಕೊಟ್ಟಿಲ್ಲ
* 7378.34 ಕೋಟಿ ರೂ.ಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡದೆ ಕಾಮಗಾರಿಗೆ ಅವಕಾಶ

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:bjpCAG ReportCongress Ivan D'SouzaPublic TVravikumarಕಲಾಪಕಾಂಗ್ರೆಸ್ ಐವಾನ್ ಡಿಸೋಜಾಪಬ್ಲಿಕ್ ಟಿವಿಬಿಜೆಪಿರವಿಕುಮಾರ್ವಿಧಾನ ಪರಿಷತ್ಸಿಎಜಿ ವರದಿ
Share This Article
Facebook Whatsapp Whatsapp Telegram

You Might Also Like

11A Seat
Latest

ಮೃತ್ಯುಂಜಯ `ವಿಶ್ವಾಸ್ ಎಫೆಕ್ಟ್’ – 11A ಲಕ್ಕಿ ಸೀಟಿಗೆ ಫುಲ್ ಡಿಮ್ಯಾಂಡ್!

Public TV
By Public TV
18 minutes ago
Hubballi Reels
Dharwad

ರೀಲ್ಸ್‌ ರಾಜನಿಗೆ ಬಿಸಿ ಮುಟ್ಟಿಸಿದ ಹುಬ್ಬಳ್ಳಿ ಪೊಲೀಸ್‌ – ನಿಮಗೂ ಈ ಅನುಭವ ಆಗಿರಬೇಕಲ್ವಾ?

Public TV
By Public TV
28 minutes ago
CRIME
Crime

ಖಾಸಗಿ ಅಂಗದ ಮೇಲೆ ಕಾದ ಕಬ್ಬಿಣದಿಂದ ಬರೆ ಹಾಕಿ ಚಿತ್ರಹಿಂಸೆ – ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ

Public TV
By Public TV
41 minutes ago
Heavy Rain
Belgaum

ರಾಜ್ಯದ ಹಲವೆಡೆ ವರುಣಾರ್ಭಟ – ಭಾರೀ ಮಳೆಗೆ ರಸ್ತೆ ಮುಳುಗಡೆ, ಅವಾಂತರ ಸೃಷ್ಟಿ

Public TV
By Public TV
1 hour ago
Temba Bavuma 2
Cricket

ಆಸೀಸ್‌ ಲಕ್ಕಿ ಚಾರ್ಮ್‌ಗಳಿಗೆ ಸೋಲಿನ ರುಚಿ ತೋರಿಸಿದ ಹರಿಣರು – ಹೇಜಲ್ವುಡ್‌ ಗೆಲುವಿನ ನಾಗಾಲೋಟಕ್ಕೆ ಬ್ರೇಕ್‌

Public TV
By Public TV
1 hour ago
Koppal nava brindavana
Districts

ರಘುವರ್ಯ ತೀರ್ಥರ ಮಧ್ಯಾರಾಧನೆ ಮಹೋತ್ಸವ ಸಂಪನ್ನ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?